Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಉಪಚುನಾವಣೆ: ಕುಟುಂಬಗಳ ಪ್ರತಿಷ್ಠೆ ಇವಿಎಂನಲ್ಲಿ

by admin November 13, 2024
written by admin November 13, 2024 0 comments 2 minutes read
0FacebookTwitterPinterestEmail
217

ನವೆಂಬರ್ 23ರಂದು ಮತ ಎಣಿಕೆ, ಫಲಿತಾಂಶ

ಬೆಂಗಳೂರು:ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೆ ಬಿರುಸಿನ ಶಾಂತಿಯುತ ಮತದಾನವಾಗಿದೆ.

ಚನ್ನಪಟ್ಟಣ ( ಶೇ. 88.80) ಶಿಗ್ಗಾಂವಿ (ಶೇ.80.48 ) ಹಾಗೂ ಸಂಡೂರು (ಶೇ.76.24 ) ವಿಧಾನಸಭಾ ಕ್ಷೇತ್ರಗಳಲ್ಲಿ ಶೇಕಡ .., ಮತದಾನವಾಗಿದೆ.

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಎರಡು ಕ್ಷೇತ್ರಗಳಲ್ಲಿ, ಜೆಡಿಎಸ್ ಒಂದರಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

45 ಅಭ್ಯರ್ಥಿಗಳು ಕಣದಲ್ಲಿ

ಒಟ್ಟಾರೆ ಮೂರೂ ಕ್ಷೇತ್ರಗಳಿಂದ 45 ಅಭ್ಯರ್ಥಿಗಳು ಕಣದಲ್ಲಿದ್ದು, ಫಲಿತಾಂಶಕ್ಕಾಗಿ 10 ದಿನ ಕಾಯಬೇಕಾಗಿದೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗಳಿಗೆ ನವೆಂಬರ್ 20ಕ್ಕೆ ಮತದಾನ ಪೂರ್ಣಗೊಳ್ಳಲಿದ್ದು, 23ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಮತ ಎಣಿಕೆಯೂ ನಿಗದಿಯಾಗಿದೆ.

ಕೇಂದ್ರ ಚುನಾವಣಾ ಆಯೋಗ ಅತ್ಯಂತ ಬಿಗಿ ಬಂದೋಬಸ್ತ್‌ನಲ್ಲಿ ಚುನಾವಣೆ ನಡೆಸಿದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ, ಅದರಲ್ಲೂ ಚನ್ನಪಟ್ಟಣ ತುಂಬಾ ಸೂಕ್ಷ್ಮ ಕ್ಷೇತ್ರವಾಗಿದ್ದರಿಂದ ರಾಜ್ಯ ಪೋಲಿಸ್ ಸಿಬ್ಬಂದಿ ಜೊತೆ ಕೇಂದ್ರ ಮೀಸಲು ಪಡೆಯನ್ನೂ ನಿಯೋಜಿಸಲಾಗಿತ್ತು.

ಹಣದ ಚೀಲ ತಂದು ಕಾಂಗ್ರೆಸ್ ಚುನಾವಣೆ ನಡೆಸಿದೆ
ಬೆಳಗ್ಗೆಯಿಂದಲೇ ಸಾಲು

ಬೆಳಗ್ಗೆಯಿಂದಲೇ ಮತದಾರರು ಮತಗಟ್ಟೆಗಳ ಮುಂದೆ ಸಾಲು ಸಾಲಾಗಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಮೂರೂ ಕ್ಷೇತ್ರಗಳಲ್ಲೂ ರಾಜಕೀಯ ಮುಖಂಡರುಗಳ ಕುಟುಂಬ ವರ್ಗದವರೇ ಕಣದಲ್ಲಿ ಇದ್ದಿದ್ದರಿಂದ ಭಾರೀ ಜಿದ್ದಾಜಿದ್ದಿ ಏರ್ಪಟ್ಟಿತ್ತು.

ಚನ್ನಪಟ್ಟಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದರೆ, ಶಿಗ್ಗಾಂವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಸಂಸದ ಇ.ತುಕಾರಾಂ ಪತ್ನಿ ಅನ್ನಪೂರ್ಣ ಕಣದಲ್ಲಿದ್ದರು.

ಮತಗಟ್ಟೆಗಳಿಗೆ ವಿಶೇಷಚೇತನರು

93 ವರ್ಷದ ವಯೋವೃದ್ಧರೂ ಸೇರಿದಂತೆ ಅನೇಕ ವಿಶೇಷಚೇತನರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಿದರು.

ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ಮೂರೂ ಕ್ಷೇತ್ರಗಳಲ್ಲಿ ಉತ್ಸಾಹದ ಮತದಾನ ಕಂಡುಬಂದಿತು.

ಶಿಗ್ಗಾವಿ ಕ್ಷೇತ್ರದ ಸವಣೂರಿನ ದಂಡಿನಪೇಟೆಯಲ್ಲಿ ಮತದಾನ ಬಹಿಷ್ಕಾರದ ಒಂದೆರಡು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ, ಕ್ಷೇತ್ರದ ಮತದಾನ ಬಹುತೇಕ ಶಾಂತಿಯುತವಾಗಿತ್ತು, ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

ಭ್ರಷ್ಟಾಚಾರ ನಡೆದಿರುವುದು ಬಿಜೆಪಿ ಆಡಳಿತದಲ್ಲಿ
ರಾಜ್ಯದ ಮಿನಿ ಮಹಾಸಮರ

ರಾಜ್ಯದ ಮಿನಿ ಮಹಾಸಮರ ಎಂದೇ ಪರಿಗಣಿಸಲಾಗಿರುವ ಈ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರತಿಷ್ಠೆಯ ಕಣಗಳಾಗಿವೆ.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರೇ ನಿರ್ವಹಿಸುವ 5 ಸಖಿ ಮತಗಟ್ಟೆ, ಒಂದು ಯುವ ಮತಗಟ್ಟೆ, 1 ದಿವ್ಯಾಂಗರು ನಿರ್ವಹಿಸುವ ಮತದಾನ ಕೇಂದ್ರ, ಒಂದು ವಿಷಯಾಧರಿತ ಮತದಾನ ಕೇಂದ್ರ ಸ್ಥಾಪಿಸಲಾಗಿತ್ತು.

ನವೆಂಬರ್ 23ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ರಾಮನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ, ಶಿಗ್ಗಾವಿ ಕ್ಷೇತ್ರದ ಮತ ಎಣಿಕೆ ಹಾವೇರಿ ಜಿಲ್ಲೆ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ, ಸಂಡೂರು ಕ್ಷೇತ್ರದ ಮತ ಎಣಿಕೆ ಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpchannapattanacongresjdskarnataka by-electionnovember 23rd countingsanduruShiggavithree assembly constituency
0 FacebookTwitterPinterestEmail
admin

previous post
ಹಣದ ಚೀಲ ತಂದು ಕಾಂಗ್ರೆಸ್ ಚುನಾವಣೆ ನಡೆಸಿದೆ
next post
ಶಾಸಕರ ಖರೀದಿ: ಸಿದ್ದರಾಮಯ್ಯ ಹತಾಶ ಹೇಳಿಕೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ