Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಉಪಚುನಾವಣೆ: ಕಾಂಗ್ರೆಸ್ ಜಯ, ಎನ್‌ಡಿಎ ಮುಖಭಂಗ

by admin November 23, 2024
written by admin November 23, 2024 0 comments 1 minutes read
0FacebookTwitterPinterestEmail
347

ಬೆಂಗಳೂರು:ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಜಯಗಳಿಸಿದರೆ, ಎನ್‌ಡಿಎ ಕೂಟ ಭಾರಿ ಮುಖಭಂಗಕ್ಕೆ ಒಳಗಾಗಿದೆ.

ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಿ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಭಾರೀ ಅಂತರದಲ್ಲಿ ಸೋಲುಂಡಿದ್ದಾರೆ.

ನಿಖಿಲ್ ಪರಾಭವ

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣದಲ್ಲಿ ತಮ್ಮ ಪ್ರತಿಸ್ಪರ್ಧಿ ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ ಅವರನ್ನು 25,413 ಮತಗಳ ಅಂತರದಿಂದ ಪರಾಭವಗೊಳಿಸಿ ಆರನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.

ಯೋಗೇಶ್ವರ್ ಅವರಿಗೆ 1,12,642 ಮತಗಳು, ಪ್ರತಿಸ್ಪರ್ಧಿ ನಿಖಿಲ್ ಕುಮಾರಸ್ವಾಮಿಗೆ 87,229 ಮತ ಚಲಾವಣೆಯಾಗಿವೆ.

ಸಂಡೂರಿನಲ್ಲಿ ಕಾಂಗ್ರೆಸ್‌ನ ಇ.ಅನ್ನಪೂರ್ಣ 93,616 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಬಂಗಾರು ಹನುಮಂತು ಅವರನ್ನು 9,649 ಮತಗಳಿಂದ ಸೋಲಿಸಿದ್ದಾರೆ. ಹನುಮಂತು ಅವರಿಗೆ 83,967 ಮತಗಳು ಲಭಿಸಿವೆ.

ಪಠಾಣ್ ವಿಧಾನಸಭೆಗೆ

ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ನ ಯಾಸಿರ್ ಖಾನ್ ಪಠಾಣ್ 1,00756 ಮತ ಪಡೆದು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಭರತ್ ಬೊಮ್ಮಾಯಿ ಅವರನ್ನು 13,448 ಮತಗಳ ಅಂತರದಿಂದ ಸೋಲಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ. ಭರತ್ ಅವರಿಗೆ 87,308 ಮತ ಲಭ್ಯವಾಗಿವೆ.

ಉಪಚುನಾವಣೆ ಫಲಿತಾಂಶದಿಂದ ವಿಧಾನಸಭೆಯಲ್ಲಿ 136 ಸ್ಥಾನದಲ್ಲಿದ್ದ ಕಾಂಗ್ರೆಸ್ ತನ್ನ ಸಂಖ್ಯಾಬಲವನ್ನು 138ಕ್ಕೆ ಹೆಚ್ಚಿಸಿಕೊಂಡಿದೆ, ಬಿಜೆಪಿ-ಜೆಡಿಎಸ್ ತಲಾ ಒಂದೊಂದು ಸ್ಥಾನ ಕಳೆದುಕೊಂಡಿವೆ.

ಉಪಚುನಾವಣೆ ಸೋಲು: ತಪ್ಪು ಸರಿಪಡಿಸಿಕೊಳ್ಳುತ್ತೇವೆ
ಮಾಜಿ ಮುಖ್ಯಮಂತ್ರಿಗಳು ವಿಫಲ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮಿಂದ ತೆರವಾದ ಸ್ಥಾನಗಳಿಗೆ ಪುತ್ರರನ್ನು ಕಣಕ್ಕಿಳಿಸಿ, ವಿಧಾನಸಭೆಗೆ ಪ್ರವೇಶ ಮಾಡಿಸುವಲ್ಲಿ ವಿಫಲರಾಗಿದ್ದಾರೆ.

ಸಿ.ಪಿ.ಯೋಗೇಶ್ವರ್ ಆರನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರೆ, ಯಾಸಿರ್ ಹಾಗೂ ಅನ್ನಪೂರ್ಣ ಅವರು ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿಗೆ ಸತತ ಮೂರನೇ ಬಾರಿಗೆ ಸೋಲು ಕಂಡಿದ್ದು, ಈ ಮೊದಲು ಮಂಡ್ಯ ಲೋಕಸಭಾ ಕಣದಲ್ಲಿ, ನಂತರ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲನುಭಸಿದ್ದರು, ಇದೀಗ ಚನ್ನಪಟ್ಟಣದಲ್ಲೂ ಅವರು ಪರಾಭವಗೊಂಡಿದ್ದಾರೆ.

ಪ್ರತಿಷ್ಠೆ ಹೋರಾಟ

ಉಪಚುನಾವಣೆಯನ್ನು ಆಡಳಿತಾರೂಢ ಕಾಂಗ್ರೆಸ್ ಹಾಗೂ ಎನ್‌ಡಿಎ ಮೈತ್ರಿಕೂಟ ಭಾರೀ ಪ್ರತಿಷ್ಠೆಯಾಗಿ ತೆಗೆದುಕೊಂಡು ಹೋರಾಟ ನಡೆಸಿದ್ದವು.

ಉಪಚುನಾವಣಾ ಸಂದರ್ಭದಲ್ಲೇ ವಕ್ಫ್ ವಿವಾದ, ಬಿಪಿಎಲ್ ಕಾರ್ಡ್ ರದ್ದತಿ ಹಾಗೂ ಶಕ್ತಿ ಯೋಜನೆ ಹಿಂಪಡೆಯುವ ವಿಚಾರಗಳನ್ನು ಎನ್‌ಡಿಎ ಮೈತ್ರಿಕೂಟ ಮುಂದಿಟ್ಟಕೊಂಡು ಹೋರಾಟ ನಡೆಸಿದರೂ ಮತದಾರರು ಮೈತ್ರಿಕೂಟ ಅಭ್ಯರ್ಥಿಗಳ ಕೈಹಿಡಿಯಲಿಲ್ಲ.

ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಚುನಾವಣಾ ಪೂರ್ವ ಸಿದ್ಧತೆ ಹಾಗೂ ಕಾರ್ಯತಂತ್ರ ಕೈಹಿಡಿಯಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpby-electionchannapattanacm siddaramaiahcongrescongres victoryDCM DK Shivakumarjdsnda defeatsanduruShiggavi
0 FacebookTwitterPinterestEmail
admin

previous post
ಉಪಚುನಾವಣೆ ಸೋಲು: ತಪ್ಪು ಸರಿಪಡಿಸಿಕೊಳ್ಳುತ್ತೇವೆ
next post
ಮುಡಾ: ನಾಳೆ ಹೈಕೋರ್ಟ್‌ಗೆ ಸ್ಟೇಟಸ್ ರಿಪೋರ್ಟ್

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ