Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜೆಡಿಎಸ್ ಒಡೆಯಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ !

by KM Shivaraju November 25, 2024
written by KM Shivaraju November 25, 2024 0 comments 1 minutes read
0FacebookTwitterPinterestEmail
314

ಬೆಂಗಳೂರು:ವಿಧಾನಸಭಾ ಉಪಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಜೆಡಿಎಸ್ ಅನ್ನು ಒಡೆಯಲು ಕಾಂಗ್ರೆಸ್ ಮುಂದಾಗಿದೆ.

ಜೆಡಿಎಸ್‌ನ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಹಾಲಿ ಶಾಸಕ ಜಿ.ಟಿ.ದೇವೇಗೌಡರ ನಾಯಕತ್ವದಲ್ಲೇ ಪಕ್ಷ ಮತ್ತು ಶಾಸಕರನ್ನು ಒಡೆಯಲು ವೇದಿಕೆ ಸಿದ್ಧಗೊಂಡಿದೆ.

ಬೆಳಗಾವಿ ಅಧಿವೇಶನಕ್ಕೂ ಮುನ್ನವೇ ಪಕ್ಷದ ವಿರುದ್ಧ ತಿರುಗಿಬಿದ್ದು ಸಿದ್ದರಾಮಯ್ಯ ಪರ ನಿಲ್ಲುತ್ತಿರುವ ಈ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ, ಆದರೆ, ಪ್ರತ್ಯೇಕ ಬಣವಾಗಿ ಗುರುತಿಸಿಕೊಂಡು ತಮ್ಮದೇ ನೈಜ ಜೆಡಿಎಸ್ ಎಂದು ಬಿಂಬಿಸಿಕೊಳ್ಳಲಿದ್ದಾರೆ.

ಸಿದ್ದರಾಮಯ್ಯ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತೆರೆಮರೆಯಲ್ಲಿ ಜೆಡಿಎಸ್‌ನ ಕೆಲವು ಶಾಸಕರು ಮತ್ತು ಮುಖಂಡರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಜೆಡಿಎಸ್ ಕಾರ್ಯಕರ್ತರನ್ನು ಪಕ್ಷಕ್ಕೆ ಸೆಳೆದುಕೊಳ್ಳುವ ಉದ್ದೇಶದಿಂದಲೇ ಮುಖ್ಯಮಂತ್ರಿಗಳ ಅಭಿಮಾನಿಗಳ ಹೆಸರಿನಲ್ಲಿ ಡಿಸೆಂಬರ್ 5ರಂದು ಹಾಸನದಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದಾರೆ.

ಇದಕ್ಕೂ ಮುನ್ನ ತುಮಕೂರಿನಲ್ಲಿ ಸರ್ಕಾರದ ವತಿಯಿಂದ ಡಿಸೆಂಬರ್ 2ರಂದು ಸಾಧನಾ ಸಮಾವೇಶವನ್ನು ಮುಖ್ಯಮಂತ್ರಿಯವರೇ ಆಯೋಜಿಸಿದ್ದಾರೆ.

ಸಾಧನಾ ಸಮಾವೇಶ

ಗೃಹ ಇಲಾಖೆ ಹೊಣೆ ಹೊತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಸಾಧನಾ ಸಮಾವೇಶ ನಡೆಸಲು ಭಾರೀ ಸಿದ್ಧತೆ ಮಾಡಿಕೊಂಡಿದ್ದಾರೆ.

ಸರ್ಕಾರಿ ಸಮಾವೇಶದಲ್ಲೇ ಜಿ.ಟಿ.ದೇವೇಗೌಡ ಸೇರಿದಂತೆ ಕೆಲವು ಜೆಡಿಎಸ್ ಶಾಸಕರು ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ.

ಆ ನಂತರ, ಹಾಸನದಲ್ಲಿ ನಡೆಯುವ ಸಮಾವೇಶದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಸಿದ್ದರಾಮಯ್ಯ ಟೀಕಾಸ್ತ್ರಗಳನ್ನು ಸಿಡಿಸಿ, ಕೋಮುವಾದಿ ಪಕ್ಷದ ಜೊತೆ ಜೆಡಿಎಸ್ ಕೈಜೋಡಿಸಿದ್ದು ಇದನ್ನು ವಿರೋಧಿಸಿ ಆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹೊರಬನ್ನಿ ಎಂದು ಸಾರ್ವಜನಿಕವಾಗಿ ಕರೆ ನೀಡಲಿದ್ದಾರಂತೆ.

ಮುಡಾ: ನಾಳೆ ಹೈಕೋರ್ಟ್‌ಗೆ ಸ್ಟೇಟಸ್ ರಿಪೋರ್ಟ್
ದೇವೇಗೌಡರ ಟೀಕೆ

ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ಪ್ರಚಾರ ಸಂದರ್ಭದಲ್ಲಿ ದೇವೇಗೌಡರು ಸಿದ್ದರಾಮಯ್ಯ ವಿರುದ್ಧ ಮಾಡಿದ ಟೀಕೆ ಮತ್ತು ಈ ಸರ್ಕಾರವನ್ನು ಕಿತ್ತೊಗೆಯುವವರೆಗೂ ವಿಶ್ರಮಿಸುವುದಿಲ್ಲ ಎಂಬ ಹೇಳಿಕೆ ಮುಖ್ಯಮಂತ್ರಿ ಅವರ ನಿದ್ದೆಗೆಡಿಸಿದೆ.

ಅವರ ಹೇಳಿಕೆಯನ್ನೇ ಸವಾಲಾಗಿ ತೆಗೆದುಕೊಂಡಿರುವ ಸಿದ್ದರಾಮಯ್ಯ, ಗೌಡರ ನೆಲದಲ್ಲೇ ಅವರಿಗೆ ಉತ್ತರ ನೀಡುವುದಲ್ಲದೆ, ಆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ವೇದಿಕೆ ಸಿದ್ಧಪಡಿಸಲಿದ್ದಾರೆ.

ಹಾಸನ ಸಮಾವೇಶದ ನಂತರ, ಜೆಡಿಎಸ್ ಬಲಿಷ್ಠವಾಗಿರುವ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಇಂತಹ ಸಮಾವೇಶಗಳನ್ನು ನಡೆಸಲು ತೀರ್ಮಾನಿಸಿದ್ದಾರೆ.

ಜಯಭೇರಿ ಸಮಾವೇಶ

ಇದಕ್ಕೂ ಮೊದಲು ಚನ್ನಪಟ್ಟಣ ಸೇರಿದಂತೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸಮಾವೇಶಗಳು ನಡೆಯಲಿವೆ.

ಮುಡಾ ಹಾಗೂ ಮಹರ್ಷಿ ವಾಲ್ಮೀಕಿ ಹಗರಣವನ್ನು ಮುಂದಿಟ್ಟುಕೊಂಡು ತಮ್ಮ ಕುಟುಂಬದ ತೇಜೋವಧೆ ಮಾಡುತ್ತಿರುವುದಲ್ಲದೆ, ಸರ್ಕಾರ ಉರುಳಿಸಲು ಹೊರಟಿರುವ ಎನ್‌ಡಿಎ ಮೈತ್ರಿ ಪಕ್ಷಗಳಿಗೆ ಈ ಸಮಾವೇಶಗಳಲ್ಲಿ ಎಚ್ಚರಿಕೆ ನೀಡುವುದೂ ಸೇರಿದೆ.

ಉಪಚುನಾವಣೆಯಲ್ಲಿ ಸರ್ಕಾರಕ್ಕೆ ಜನರ ಬೆಂಬಲ ದೊರೆತಿರುವುದರಿಂದ ಮುಖ್ಯಮಂತ್ರಿ ಅವರು ಇದೀಗ ಸಾರ್ವಜನಿಕವಾಗಿ ಹೋರಾಟಕ್ಕಿಳಿಯುತ್ತಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres master planjdsjt devegowda
0 FacebookTwitterPinterestEmail
KM Shivaraju

previous post
ಮುಡಾ: ನಾಳೆ ಹೈಕೋರ್ಟ್‌ಗೆ ಸ್ಟೇಟಸ್ ರಿಪೋರ್ಟ್
next post
ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ಸಿಗಬಾರದು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ