Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ಸಿಗಬಾರದು

by admin November 26, 2024
written by admin November 26, 2024 0 comments 2 minutes read
0FacebookTwitterPinterestEmail
393

ಬೆಂಗಳೂರು:ಜಾತಿ ವ್ಯವಸ್ಥೆಯಿಂದ ಅಸಮಾನತೆ, ಮನುಷ್ಯರ ನಡುವೆ ತಾರತಮ್ಯ ಸೃಷ್ಟಿಯಾಗಿದೆ, ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಕುರಿತು ಎಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಕರೆ ನೀಡಿದ್ದಾರೆ.

ಸಂವಿಧಾನ ಅಂಗೀಕರಣದ 75ನೇ ವರ್ಷದ ದಿನೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದೇ ಸಂವಿಧಾನ ಬಲದಿಂದ, ವಿಶ್ವದ ದೀರ್ಘಕಾಲದ ಸಂವಿಧಾನ ನಮ್ಮದಾಗಿದೆ, ಸಂವಿಧಾನ ಜಾರಿ ಸಭೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಎಚ್ಚರಿಕೆಯನ್ನು ನಾವ್ಯಾರೂ ಮರೆಯಬಾರದು ಎಂದರು.

ಎಷ್ಟೇ ಒಳ್ಳೆ ಸಂವಿಧಾನ ನಮ್ಮದಾಗಿದ್ದರೂ, ಕೆಟ್ಟವರ ಕೈಗೆ ಹೋದರೆ ಪರಿಣಾಮವೂ ಕೆಟ್ಟದಾಗಿರುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ, ಸಂವಿಧಾನ ಮೌಲ್ಯಗಳನ್ನು ಪಾಲಿಸುವವರ ಕೈಯಲ್ಲಿ ಇದ್ದಾಗ ಮಾತ್ರ ಸಾರ್ಥಕತೆ ಬರುತ್ತದೆ ಎಂಬುದು ಡಾ.ಬಾಬಾ ಸಾಹೇಬರ ನಂಬಿಕೆಯಾಗಿತ್ತು, ಸಂವಿಧಾನದ ಮೌಲ್ಯಗಳನ್ನು ವಿರೋಧಿಸುವವರ ಕೈಗೆ ಅಧಿಕಾರ ಹೋಗದಂತೆ ಎಚ್ಚರಿಕೆ ವಹಿಸಬೇಕು.

ಸಾಮಾಜಿಕ ನ್ಯಾಯ

ಆರ್ಥಿಕ, ಸಾಮಾಜಿಕ ಅಸಮಾನತೆ ಸಮಾಜಕ್ಕೆ ಕಾಲಿಡುತ್ತಿದ್ದೇವೆ, ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಳ್ಳಬೇಕಿದೆ, ಸಂವಿಧಾನ ಅರ್ಥ ಮಾಡಿಕೊಳ್ಳುವುದು, ಪಾಲಿಸುವುದು ಎಂದರೆ ಸಾಮಾಜಿಕ ನ್ಯಾಯ, ಸಮಾನತೆ, ಭ್ರಾತೃತ್ವ ಪಾಲಿಸಬೇಕು.

ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ ಎಂಬ ಎಚ್ಚರಿಕೆ ಇರಬೇಕು, ಸಂವಿಧಾನ ಜಾರಿಗೆ ಹಿಂದೂ ಮಹಾಸಭಾದ ಸಾವರ್ಕರ್, ಗೋಳ್ವಾಳ್ಕರ್ ವಿರೋಧಿಸಿದ್ದರು, ಬಿಜೆಪಿಯ ಮಾತೃಪಕ್ಷ ಆರ್‌ಎಸ್‌ಎಸ್ ಸಹಾ ಸಂವಿಧಾನ ಜಾರಿಯನ್ನು ವಿರೋಧಿಸಿತ್ತು.

ಡಾ. ಬಾಬಾ ಸಾಹೇಬರ ಸಂವಿಧಾನ ಜಾರಿಗೆ ಮುನ್ನ ಮನುಷ್ಯ-ಮನುಷ್ಯರನ್ನು ತಾರತಮ್ಯದಿಂದ ಶೋಷಿಸುವ, ಅಸಮಾನತೆ ಆಚರಿಸುವ, ಅನಾಗರಿಕ ವ್ಯವಸ್ಥೆ ಮತ್ತು ಶೂದ್ರರು, ದಲಿತರು, ಮಹಿಳೆಯರಿಗೆ ಶಿಕ್ಷಣ ವಿರೋಧಿಸುವ ಅಲಿಖಿತ ಮನುಸ್ಮೃತಿ ಪದ್ಧತಿಗಳು ಭಾರತದಲ್ಲಿ ಜಾರಿಯಲ್ಲಿತ್ತು, ಸಂವಿಧಾನ ವಿರೋಧಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಸಂವಿಧಾನ ದುರುಪಯೋಗ ಪಡಿಸಿಕೊಂಡಿದೆ
ಭಾರತ ಸಂವಿಧಾನ ಅತ್ಯುನ್ನತ

ಚರಿತ್ರೆ, ಇತಿಹಾಸ, ಮರೆಯಬಾರದು, ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ನಮಗೆ ದೊರೆತಿರುವ ಸ್ವಾತಂತ್ರ್ಯ ಸಫಲವಾಗಲು ಸಾಧ್ಯ ಎಂಬುದಾಗಿ ಡಾ.ಅಂಬೇಡ್ಕರ್ ಹೇಳಿದ್ದರು, ವಿಶ್ವದ ಎಲ್ಲಾ ಸಂವಿಧಾನಗಳ ಅಧ್ಯಯನ ನಡೆಸಿ ಅತ್ಯುನ್ನತವಾದ ಭಾರತ ಸಂವಿಧಾನ ರಚಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಮಂತ್ರಿಮಂಡಲದಲ್ಲಿದ್ದ ಅನಂತ ಕುಮಾರ ಹೆಗ್ಡೆ, “ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಿಸಲು” ಎಂಬುದಾಗಿ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದರು.

ಆದರೆ, ಮೋದಿ ಅವರಾಗಲಿ, ಬಿಜೆಪಿಯವರಾಗಲಿ ಇದನ್ನು ವಿರೋಧಿಸಲಿಲ್ಲ, ಅವರನ್ನು ಮಂತ್ರಿ ಸ್ಥಾನದಿಂದ ಇಳಿಸಲಿಲ್ಲ, ಆದ್ದರಿಂದ ಅನಂತ ಕುಮಾರ ಹೆಗ್ಡೆ ಅವರ ಮಾತಿಗೆ ಅವರೆಲ್ಲರ ಸಮ್ಮತಿ ಇತ್ತು ಅಂತಲೇ ಅರ್ಥ, ಇದನ್ನು ದೇಶದ ಜನತೆ ಸರಿಯಾಗಿ ಅರ್ಥಮಾಡಿಕೊಳ್ಳಬೇಕು ಎಂದರು.

ಹಲವು ಭಾಗ್ಯ ಜಾರಿ

ಸಂವಿಧಾನದ ಧ್ಯೇಯೋದ್ದೇಶಗಳನ್ನು ನಾವು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು, ಯಾವುದೇ ಸರ್ಕಾರ, ಯಾವುದೇ ಪಕ್ಷ ಅಧಿಕಾರಕ್ಕೆ ಬಂದಾಗ ಸಂವಿಧಾನದ ಪ್ರಕಾರವೇ ನಡೆದುಕೊಳ್ಳಬೇಕು, ನಮ್ಮ ಸರ್ಕಾರ ಸಹಾ ಸಂವಿಧಾನದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ, ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವ ಕಾರ್ಯಕ್ರಮಗಳನ್ನು ರೂಪಿಸಿ, ಜಾರಿ ಮಾಡಿದ್ದೇವೆ.

ಜಗದ್ಗುರು ಬಸವಣ್ಣ 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ವಿರುದ್ಧ ಕರೆ ನೀಡಿದ್ದರು, ಆದರೆ, ಇವತ್ತಿಗೂ ಜಾತಿ ವ್ಯವಸ್ಥೆ ಹೋಗಿಲ್ಲ, ಆದ್ದರಿಂದ ಮಕ್ಕಳನ್ನು ಜಾತ್ಯತೀತರಾಗಿ ಬೆಳೆಸುವುದೇ ಸಂವಿಧಾನಕ್ಕೆ ನಾವು ಸಲ್ಲಿಸುವ ಅತ್ಯುನ್ನತ ಗೌರವ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cmsiddaramaiahcongresconstitution day
0 FacebookTwitterPinterestEmail
admin

previous post
ಜೆಡಿಎಸ್ ಒಡೆಯಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ !
next post
ಕಾಂಗ್ರೆಸ್‌ ಸಂವಿಧಾನ ದುರುಪಯೋಗ ಪಡಿಸಿಕೊಂಡಿದೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ