Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪಕ್ಷದ ಶಿಸ್ತು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಿ

by admin November 26, 2024
written by admin November 26, 2024 0 comments 1 minutes read
0FacebookTwitterPinterestEmail
305
ಬಿಜೆಪಿ ವರಿಷ್ಠರಿಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ

ಬೆಂಗಳೂರು:ಪಕ್ಷದ ತೀರ್ಮಾನ ವಿರೋಧಿಸಿ ಹೋರಾಟ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಂಡದ ವಿರುದ್ಧ ಕ್ರಮ ಜರುಗಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವರಿಷ್ಠರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಉಸ್ತುವಾರಿ ಹೊಣೆ ಹೊತ್ತ ರಾಧಾಮೋಹನ್ ದಾಸ್ ಅವರಿಗೆ ಈ ನಾಯಕರ ನಡವಳಿಕೆ, ವರ್ತನೆ, ಹೇಳಿಕೆಗಳು ಹಾಗೂ ವಕ್ಫ್ ವಿಚಾರದಲ್ಲಿ ಪ್ರತ್ಯೇಕ ಪಾದಯಾತ್ರೆ ಕೈಗೊಂಡಿರುವುದರ ವಿರುದ್ಧ ಕಿಡಿ ಕಾರಿ ಪಕ್ಷದ ಶಿಸ್ತು ಉಳಿಸುವಂತೆ ಕೋರಿದ್ದಾರೆ.

ಎಲ್ಲೆ ಮೀರದ ವ್ಯವಸ್ಥೆ

ಇದೇ ವೇಳೆ ಕಾರ್ಯಕರ್ತರಿಗೆ ಎರಡು ಪುಟಗಳ ಪತ್ರ ಬರೆದು, ಪಕ್ಷದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ಅವಕಾಶವಿದೆ, ಅದೇ ರೀತಿ ಶಿಸ್ತು, ಸಂಯಮಗಳು ಎಲ್ಲೆ ಮೀರದಂತೆ ನೋಡಿಕೊಳ್ಳುವ ವ್ಯವಸ್ಥೆಯೂ ನಮ್ಮಲ್ಲಿದೆ ಎಂದಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ತಂಡದ ಬಗ್ಗೆ ಹೆಸರು ಪ್ರಸ್ತಾಪಿಸದೆ, ಪಕ್ಷದ ಸಂಘಟನೆಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ, ಒಗ್ಗಟ್ಟಿನಿಂದ ಹೊರಗೆ ಕೆಲಸ ಮಾಡುವವರಿಗೆ ಸಹಕಾರ ಬೇಡ.

ಉಪಚುನಾವಣೆ ಫಲಿತಾಂಶಗಳು ಪಕ್ಷ ಸಂಘಟನೆ, ಸಾಮರ್ಥ್ಯ ಹಾಗೂ ಪ್ರಭಾವ ಬಿಂಬಿಸುವ ಅಳತೆಗೋಲಾಗಿರುವುದಿಲ್ಲ.

ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ಸಿಗಬಾರದು
ಚುನಾವಣಾ ಫಲಿತಾಂಶ

ಸ್ಥಳೀಯ ಸಮಸ್ಯೆಗಳು ಹಾಗೂ ಸರ್ಕಾರದ ಪ್ರಭಾವವನ್ನು ಆಧರಿಸಿ ಚುನಾವಣಾ ಫಲಿತಾಂಶಗಳು ಹೊರಹೊಮ್ಮುತ್ತವೆ.

ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಪರಾಜಯಗೊಂಡ ಕಾರಣದಿಂದ ನಾವ್ಯಾರೂ ಎದೆಗುಂದಬೇಕಿಲ್ಲ.

ನಿರೀಕ್ಷೆಯಂತೆ ಆಡಳಿತ ಪಕ್ಷ ಕಾಂಗ್ರೆಸ್ ಅಧಿಕಾರ ದುರುಪಯೋಗ, ಆಮಿಷಗಳು ಮತದಾರರ ದಿಕ್ಕು ತಪ್ಪಿಸುವಲ್ಲಿ ಪರಿಣಾಮ ಬೀರಿವೆ ಎಂಬುದು ನಿಸ್ಸಂಶಯ.

ಸಕಾರಾತ್ಮಕವಾಗಿ ಸ್ವೀಕರಿಸೋಣ

ಉಪಚುನಾವಣೆ ಸೋಲನ್ನು ನಾವು ಸಕಾರಾತ್ಮಕವಾಗಿ ಸ್ವೀಕರಿಸೋಣ, ಈ ಫಲಿತಾಂಶ ಭವಿಷ್ಯತ್ತಿನಲ್ಲಿ ನಮ್ಮ ಮುಂದಿರುವ ಸವಾಲುಗಳನ್ನು ಎಚ್ಚರಿಸುವ ಸಂಕೇತವೇ ಆಗಿದೆ ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ಹಿಂದೆ ಸಿದ್ದರಾಮಯ್ಯ ಆಡಳಿತದಲ್ಲಿ ನಂಜನಗೂಡು ಹಾಗೂ ಗುಂಡ್ಲುಪೇಟೆಗೆ ನಡೆದ ಉಪಚುನಾಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿತ್ತು, ಆ ನಂತರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದನ್ನು ನೋಡಿದ್ದೇವೆ.

ಅಧಿಕಾರಕ್ಕಾಗಿ ಬೆನ್ನತ್ತಿ ರಾಜಕಾರಣ ಮಾಡುವ ಪಕ್ಷ ನಮ್ಮದಲ್ಲ, ಉದಾತ್ತ ಉದ್ದೇಶ ಹಾಗೂ ಗುರಿ ಇಟ್ಟುಕೊಂಡು, ಯೋಜಿತವಾಗಿ ಬೆಳೆದು, ಕೋಟ್ಯಂತರ ಸಮರ್ಪಣಾ ಕಾರ್ಯಕರ್ತರನ್ನು ರಾಷ್ಟ್ರ ಬದ್ಧತೆಗಾಗಿ ಸಜ್ಜುಗೊಳಿಸಿದ ಪಕ್ಷ.

ಸಿದ್ದರಾಮಯ್ಯ ಸರ್ಕಾರ ಹಲವು ಭ್ರಷ್ಟಾಚಾರದಲ್ಲಿ ಮುಳುಗಿ ಆಡಳಿತ ನಡೆಸುತ್ತಿದೆ, ಮಠ, ಮಂದಿರ ಹಾಗೂ ರೈತರ ಜಮೀನನ್ನು ವಕ್ಫ್ ಹೆಸರಿನಲ್ಲಿ ಕಬಳಿಸುವ ಕೆಲಸ ನಡೆದಿದೆ, ಇದೆಲ್ಲದರ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ನಡೆಸಲು ಹೆಜ್ಜೆ ಹಾಕೋಣ ಎಂದಿದ್ದಾರೆ.

ಕಾಂಗ್ರೆಸ್‌ ಸಂವಿಧಾನ ದುರುಪಯೋಗ ಪಡಿಸಿಕೊಂಡಿದೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
appeal to party high commandb y vijayendra letter to party workersbjp state president
0 FacebookTwitterPinterestEmail
admin

previous post
ಕಾಂಗ್ರೆಸ್‌ ಸಂವಿಧಾನ ದುರುಪಯೋಗ ಪಡಿಸಿಕೊಂಡಿದೆ
next post
ಉಪಚುನಾವಣೆ ಗೆಲುವಿನಲ್ಲೂ ಕಾಂಗ್ರೆಸ್ ವಿಕೃತಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ