Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಅನುದಾನಕ್ಕೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಮನವಿ

by admin November 29, 2024
written by admin November 29, 2024 0 comments 2 minutes read
0FacebookTwitterPinterestEmail
218

ಬೆಂಗಳೂರು:ಕೃಷ್ಣರಾಜ ಜಲಾಶಯಕ್ಕೆ ಸಮಾನಾಂತರವಾಗಿ ಮೇಕೆದಾಟು ಸಮೀಪ ಅಣೆಕಟ್ಟೆ ನಿರ್ಮಾಣ, ಮಹದಾಯಿ ಕಳಸಾ-ಬಂಡೂರಿ ಯೋಜನೆಗಳಿಗೆ ಅನುಮತಿ ದೊರೆಕಿಸಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಕರ್ನಾಟಕ ಅತ್ಯಂತ ವೇಗವಾಗಿ ನಗರೀಕರಣಗೊಳ್ಳುತ್ತಿರುವ ರಾಜ್ಯವಾಗಿದ್ದು, 13 ನಗರಪಾಲಿಕೆಗಳನ್ನು ಹೊರತುಪಡಿಸಿ 2ನೇ ಸ್ಥರದ ನಗರಗಳ ಅಭಿವೃದ್ಧಿಗೆ ಹೆಚ್ಚಿನ ಬಂಡವಾಳ ನೀಡಿ ಎಂದು ಕೋರಿದ್ದಾರೆ.

ಕೇಂದ್ರದಿಂದ ಬರಬೇಕಿರುವ ಅನುದಾನ ಸೇರಿದಂತೆ ರಾಜ್ಯದ ಅಭಿವೃದ್ಧಿ ಯೋಜನೆಗಳ ಪಟ್ಟಿಯನ್ನೇ ದೆಹಲಿಯಲ್ಲಿಂದು ಪ್ರಧಾನಿ ಅವರಿಗೆ ಉಭಯ ನಾಯಕರು ಸಲ್ಲಿಸಿ, ಕುಡಿಯುವ ನೀರಿನ ಯೋಜನೆಗೆ ಅಗತ್ಯವಿರುವ ಮೇಕೆದಾಟು ಹಾಗೂ ಕಳಸಾ-ಬಂಡೂರಿಗೆ ಜಲಸಂಪನ್ಮೂಲ ಮತ್ತು ಪರಿಸರ ಇಲಾಖೆಯಿಂದ ಅನುಮತಿ ಕೊಡಿಸಿ ಎಂದು ಮನವಿಯಲ್ಲಿ ಕೋರಿದ್ದಾರೆ.

ಅನುದಾನ ಸಾಕಾಗುವುದಿಲ್ಲ

ರಾಜ್ಯ ಸರ್ಕಾರ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಮುಂದಿನ ಮೂರು ವರ್ಷಗಳ ಅವಧಿಗೆ 2,000 ಕೋಟಿ ರೂ. ತೆಗೆದಿರಿಸಿದೆ, ಆದರೆ, ಈ ನಗರಗಳಿಗೆ ಸಮಗ್ರ ಮೂಲಸೌಕರ್ಯ ಕಲ್ಪಿಸಲು ಅನುದಾನ ಸಾಕಾಗುವುದಿಲ್ಲ.

ಆದ್ದರಿಂದ ಅಮೃತ್ ಅಥವಾ ಇನ್ನಾವುದೇ ಯೋಜನೆಯಡಿ ಕರ್ನಾಟಕಕ್ಕೆ 10,000 ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆಗೆ ತಾವು ನಿರ್ದೇಶನ ನೀಡಬೇಕು.

15ನೇ ಹಣಕಾಸು ಆಯೋಗ ಕರ್ನಾಟಕ ರಾಜ್ಯಕ್ಕೆ ಸರಿಯಾದ ನ್ಯಾಯ ಒದಗಿಸುತ್ತಿಲ್ಲ ಎಂಬುದಾಗಿ ನಾವು ನಿರಂತರವಾಗಿ ಪ್ರಸ್ತಾಪಿಸುತ್ತಾ ಬಂದಿದ್ದೇವೆ, ತೆರಿಗೆ ಹಂಚಿಕೆಯಲ್ಲಿ ರಾಜ್ಯದ ಪಾಲನ್ನು ಶೇ.೧ರಷ್ಟು ಕಡಿಮೆ ಮಾಡಿರುವ ಶಿಫಾರಸ್ಸನ್ನು ಹಣಕಾಸು ಇಲಾಖೆ ಸರಿಪಡಿಸಬೇಕಾಗಿದೆ.

ಯತ್ನಾಳ್ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಬಣ ಆಗ್ರಹ
6,000 ಕೋಟಿ ರೂ. ಶಿಫಾರಸು

ಹಣಕಾಸು ಆಯೋಗ ರಾಜ್ಯಕ್ಕೆ ಹಂಚಿಕೆ ಕಡಿಮೆಯಾಗಿರುವುದಕ್ಕೆ ಪರಿಹಾರವಾಗಿ 5,495 ಕೋಟಿ ರೂ. ಅನುದಾನ ಬಿಡುಗಡೆಗೆ ಮತ್ತು ಪೆರಿಫೆರಲ್ ರಿಂಗ್ ರಸ್ತೆ ಮತ್ತು ನೀರಿನ ಮೂಲಗಳ ಪುನರುಜ್ಜೀವಕ್ಕೆ 6,000 ಕೋಟಿ ರೂ. ವಿಶೇಷ ಅನುದಾನ ನೀಡುವ ಬಗ್ಗೆ ಶಿಫಾರಸು ಮಾಡಿದೆ, ಹಣಕಾಸು ಆಯೋಗ ಕನಿಷ್ಟ ಈ ಎರಡು ಶಿಫಾರಸ್ಸುಗಳನ್ನು ಒಪ್ಪಿಕೊಳ್ಳಬೇಕಾಗಿದೆ.

ನಾವು ಇನ್ನೂ 15ನೇ ಹಣಕಾಸು ಆಯೋಗದ ಅವಧಿಯಲ್ಲಿರುವುದರಿಂದ ರಾಜ್ಯಕ್ಕೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ನಿರ್ದೇಶನ ನೀಡುವಂತೆ ಪುನಃ ನಾನು ಮನವಿ ಮಾಡುತ್ತೇನೆ.

ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ ಒದಗಿಸಿರುವ ನಬಾರ್ಡ್ ನೆರವು ಕಡಿತಗೊಳಿಸಿರುವುದು ರೈತಾಪಿ ವರ್ಗ ಸಂಕಷ್ಟಕ್ಕೆ ಸಲುಕುವಂತೆ ಮಾಡಿದೆ, 2023-24ರ ಸಾಲಿಗೆ 5,600 ಕೋಟಿ ರೂ. ಮಂಜೂರು ಮಾಡಲಾಗಿತ್ತು, ಆದರೆ, 2024-25ರ ಸಾಲಿಗೆ 2,340 ಕೋಟಿ ರೂ. ಮಂಜೂರು ಮಾಡಲಾಗಿದೆ, ಇದರಿಂದಾಗಿ ನಬಾರ್ಡ್ ನೆರವು ಪ್ರಸಕ್ತ ಸಾಲಿಗೆ ಶೇ.58ರಷ್ಟು ಕಡಿತವಾದಂತಾಗಿದೆ.

ಸಚಿವ ಸಂಪುಟ ವಿಸ್ತರಣೆ ಸಮಯ ಬಂದಿಲ್ಲ
ಆರ್ಥಿಕ ಸ್ಥಿತಿ ಮೇಲೆ ಪರಿಣಾಮ

ರಾಜ್ಯ ಹೆಚ್ಚುವರಿ ಬಡ್ಡಿ ಸಹಾಯಧನ ನೀಡದಿದ್ದರೆ ರೈತಾಪಿ ವರ್ಗದ ಆರ್ಥಿಕ ವೆಚ್ಚದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ, ರಾಜ್ಯದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ, ಆದ್ದರಿಂದ ಈ ಕೂಡಲೇ ಇದನ್ನು ಪುನರ್ ಪರಿಶೀಲಿಸಿ ನಬಾರ್ಡ್ ನೆರವು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ.

ರಾಜ್ಯದ ರೈತರು ಅಲ್ಪಾವಧಿ ಬೆಳೆ ಸಾಲ ಪಡೆಯಲು ಯಾವುದೇ ತೊಂದರೆಯಾಗದಂತೆ ತಾವು ಹಣಕಾಸು ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡುತ್ತಿದ್ದೇನೆ.

ಈ ಮೊದಲೇ ಮನವಿ ಮಾಡಿರುವಂತೆ ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಬಜೆಟ್‌ನಲ್ಲಿ ಅನುಮೋದನೆಯಾಗಿರುವ 5,300 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಕೇಂದ್ರ ಹಣಕಾಸು ಸಚಿವರ ಭರವಸೆ ಇದುವರೆಗೆ ಈಡೇರಿಲ್ಲ, ತ್ವರಿತ ನೀರಾವರಿ ಲಾಭ ಕಾರ್ಯಕ್ರಮದಡಿ ನೆರವು ಒದಗಿಸಲು ಸಚಿವ ಸಂಪುಟದ ಟಿಪ್ಪಣಿ ಸಿದ್ಧ ಮಾಡಿರುವ ಬಗ್ಗೆ ತಿಳಿದುಬಂದಿದೆ.

ರಾಹುಲ್, ಪ್ರಿಯಾಂಕಾಗೆ ಸಿದ್ದರಾಮಯ್ಯ ಅಭಿನಂದನೆ
ಪ್ರಸ್ತಾವನೆಗೆ ಶೀಘ್ರ ಅನುಮೋದನೆ

ಪ್ರಸಕ್ತ ಯೋಜನೆ ಶೀಘ್ರ ಅನುಮೋದನೆಗೊಂಡಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಒಳಪಡುವ ಮಧ್ಯ ಕರ್ನಾಟಕದ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅನುಕೂಲವಾಗಲಿದೆ, ಆದ್ದರಿಂದ, ಈ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡಲು ತಮ್ಮಲ್ಲಿ ಮನವಿ ಮಾಡುತ್ತೇನೆ.

16ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರದ ತೆರಿಗೆ ಪಾಲಿಗೆ ಹೆಚ್ಚಿನ ದೇಣಿಗೆ ಒದಗಿಸುವ ರಾಜ್ಯಗಳಿಗೆ, ಕೇಂದ್ರದ ತೆರಿಗೆ ಪಾಲಿನಲ್ಲಿ ಭಾರೀ ಕಡಿತ ಮಾಡಿ ಶಿಕ್ಷಿಸದಂತೆ ಹಣಕಾಸು ಇಲಾಖೆ ಖಾತ್ರಿಪಡಿಸಬೇಕೆಂಬ ನಮ್ಮ ಮನವಿಗೆ ಸೂಕ್ತ ಪ್ರತಿಕ್ರಿಯೆ ದೊರಕುವ ನಿರೀಕ್ಷೆ ಇದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiah and dcm d k shivakumar meets pm narendra modinewdelhisubmitts memorandum
0 FacebookTwitterPinterestEmail
admin

previous post
ಯತ್ನಾಳ್ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಬಣ ಆಗ್ರಹ
next post
ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಹೋಗುವ ಸ್ಥಿತಿ ಇಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ