Saturday, May 17, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, May 17, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಅಂಕಣ

ಕಾಂಗ್ರೆಸ್ ಹಡಗಿಗೆ ಕೃಷ್ಣ ಹತ್ತಿದ ಕತೆ

by admin December 10, 2024
written by admin December 10, 2024 0 comments 2 minutes read
Share 0FacebookTwitterPinterestEmail
100

ಅವತ್ತು ದಿಲ್ಲಿಯಲ್ಲಿ ಪ್ರಧಾನಿ ಇಂದಿರಾಗಾಂಧಿ ನೇತೃತ್ವದಲ್ಲಿ ಸಭೆಯೊಂದು ಏರ್ಪಾಡಾಗಿತ್ತು, ಸಭೆಯೇನೋ ಆರಂಭವಾಯಿತು, ಆದರೆ, ಸಭೆಯ ಕಾರ್ಯಸೂಚಿಯನ್ನು ಓದಬೇಕಿದ್ದ ಇಂದಿರಾಗಾಂಧಿ ಒಮ್ಮೆ ಗಂಟಲು ಸವರಿಕೊಂಡರು, ಅದೇಕೋ ಗಂಟಲು ಕೈ ಕೊಟ್ಟಿತ್ತು.

ಹೀಗಾಗಿ ತಮ್ಮೆದುರಿಗಿದ್ದ ಕಾರ್ಯಸೂಚಿಯನ್ನು ಓದಲಾಗದ ಇಂದಿರಾಗಾಂಧಿ ಮೌನವಾಗಿ ಸಭೆಯ ಸುತ್ತ ಕಣ್ಣಾಡಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಗಣ್ಯ ಅತಿಥಿಗಳು ತಮ್ಮತ್ತಲೇ ನೋಡುತ್ತಿದ್ದಾರೆ, ಹೀಗಾಗಿ ಮುಂದೇನು ಮಾಡಬೇಕು ಅಂತ ಇಂದಿರಾ ಯೋಚಿಸುತ್ತಿದ್ದಂತೆಯೇ ಸಭೆಯ ಕೊನೆಯಲ್ಲಿ ನಿಂತಿದ್ದ ಯುವ ಸಂಸದರೊಬ್ಬರು ಅವರ ಕಣ್ಣಿಗೆ ಕಾಣಿಸಿದ್ದಾರೆ, ಆ ಯುವ ಸಂಸದರ ಕತೆಯಾದರೂ ಅಷ್ಟೇ, ಅವರಿಗೆ ಸಭೆಯಲ್ಲಿ ಕೂರಲು ಖುರ್ಚಿ ಸಿಕ್ಕಿಲ್ಲ.

ಹೀಗಾಗಿ ಖುರ್ಚಿ ಹುಡುಕುತ್ತಿದ್ದ ಅವರಿಗೆ ಒಂದು ಖುರ್ಚಿ ಕಾಣಿಸಿದೆ, ಆದರೆ, ಖಾಲಿ ಇದ್ದ ಖುರ್ಚಿ ಸ್ವತಃ ಪ್ರಧಾನಿ ಇಂದಿರಾಗಾಂಧಿ ಅವರ ಪಕ್ಕದ್ದು.

ಹಾಗಂತಲೇ ಮುಂದೇನು ಮಾಡಬೇಕು ಎನ್ನುವಂತೆ ಅವರು ಇಂದಿರಾ ಕಡೆ ನೋಡಿದ್ದಾರೆ, ಆ ಕ್ಷಣದಲ್ಲಿ ಪ್ರಧಾನಿ ಇಂದಿರಾ ಮತ್ತು ಆ ಯುವ ಸಂಸದರ ಕಣ್ಣು ಪರಸ್ಪರ ಸಂಧಿಸಿದೆ.

ಹೀಗೆ ಪರಸ್ಪರ ಒಬ್ಬರನ್ನೊಬ್ಬರು ನೋಡುತ್ತಿದ್ದಂತೆಯೇ ಒಂದು ವಿಸ್ಮಯ ಸಂಭವಿಸಿದೆ.

ಅದೆಂದರೆ, ಇಂದಿರಾ ತಕ್ಷಣವೇ ಆ ಯುವ ಸಂಸದರನ್ನು ತಮ್ಮ ಬಳಿ ಬರುವಂತೆ ಸೂಚಿಸಿದ್ದಾರೆ, ಸ್ವತಃ ಪ್ರಧಾನಿಯೇ ತಮ್ಮ ಬಳಿ ಬರುವಂತೆ ಸೂಚಿಸಿದಾಗ ಸಂಸದ ಬೆರಗಾಗಿದ್ದಾರಾದರೂ ಅದೇ ಕಾಲಕ್ಕೆ ಪುಳಕಿತರಾಗಿದ್ದಾರೆ.

ಹೀಗಾಗಿ ಅದೇ ಭಾವದಲ್ಲಿ ಇಂದಿರಾ ಹತ್ತಿರ ಹೋದಾಗ ಅವರು ತಮ್ಮ ಪಕ್ಕದ ಖುರ್ಚಿಯಲ್ಲಿ ಕೂರುವಂತೆ ಸೂಚಿಸಿದ್ದಾರೆ.

ಹೀಗೆ ತಮ್ಮ ಪಕ್ಕ ಕುಳಿತ ಸಂಸದರ ಮುಂದೆ, ತಮ್ಮ ಮುಂದಿದ್ದ ಕಾರ್ಯಸೂಚಿಯನ್ನು ತಳ್ಳಿದ ಇಂದಿರಾ, ಸಭೆಯಲ್ಲಿ ಅದನ್ನು ಓದುವಂತೆ, ಸಭೆಯ ನಡಾವಳಿಗಳನ್ನು ನೋಡಿಕೊಳ್ಳಲು ಸೂಚಿಸಿದ್ದಾರೆ.

ದೇಶದ ಪ್ರಧಾನಿ ತಮಗೆ ನೀಡಿದ ಈ ಜವಾಬ್ದಾರಿಯನ್ನು ಆ ಸಂಸದರು ಎಷ್ಟು ಚೆನ್ನಾಗಿ ನಿರ್ವಹಿಸಿದ್ದಾರೆಂದರೆ ಅವರ ಅಸ್ಖಲಿತ ಭಾಷೆ ಇಂದಿರಾ ಸೇರಿದಂತೆ ಇಡೀ ಸಭೆಯನ್ನು ಮಂತ್ರಮುಗ್ಧಗೊಳಿಸಿದೆ.

ಹಾಗಂತಲೇ, ಸಭೆ ಮುಗಿದ ನಂತರ ಆ ಯುವ ಸಂಸದರನ್ನು ಮೆಚ್ಚುಗೆಯ ಕಣ್ಣುಗಳಿಂದ ನೋಡಿದ ಇಂದಿರಾ ತಮ್ಮ ಕೈಲಿದ್ದ ಒಂದು ಚೀಟಿಯನ್ನು ಕೊಟ್ಟಿದ್ದಾರೆ, ನೋಡಿದರೆ ಅದರಲ್ಲಿ ಕಮ್ ಅಂಡ್ ಮೀಟ್ ಮೀ ಅಂತ ಆಹ್ವಾನ.

ಹೀಗೆ ತಮ್ಮನ್ನು ಭೇಟಿ ಮಾಡಲು ಖುದ್ದು ಪ್ರಧಾನಿಯೇ ಆಹ್ವಾನ ನೀಡಿದ್ದಾರೆಂದರೆ ಸುಮ್ಮನಿರಲು ಸಾಧ್ಯವೇ, ಹೀಗಾಗಿ ಆ ಸಂಸದರು ನಿಗದಿತ ಸಮಯಕ್ಕೆ ಇಂದಿರಾ ಅವರ ಚೇಂಬರಿಗೆ ಹೋಗಿ ಭೇಟಿ ಮಾಡಿದ್ದಾರೆ, ಅಷ್ಟೊತ್ತಿಗಾಗಲೇ ಗಂಟಲು ಬೇನೆಯಿಂದ ಸ್ವಲ್ಪ ರಿಲೀಫ್ ಆಗಿದ್ದ ಇಂದಿರಾ ಯುವ ಸಂಸದರ ಪೂರ್ವಾಪರವನ್ನು ವಿಚಾರಿಸಿದ್ದಾರೆ.

ಆಗ ಆ ಸಂಸದರು, ಮೇಡಂ, ನನ್ನ ಹೆಸರು ಎಸ್.ಎಂ.ಕೃಷ್ಣ, ಕರ್ನಾಟಕದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪ್ರಜಾ ಸೋಷಲಿಸ್ಟ್ ಪಾರ್ಟಿಯ ಪ್ರತಿನಿಧಿಯಾಗಿ ಸಂಸತ್ತಿಗೆ ಆಯ್ಕೆಯಾಗಿದ್ದೇನೆ ಅಂತ ವಿವರಿಸಿದ್ದಾರೆ.

ಆಗೆಲ್ಲ, ತುಂಬಾ ವಿಶ್ವಾಸದಿಂದ ಮಾತನಾಡಿದ ಇಂದಿರಾ ಅವರು, ನೀವು ಪ್ರಜಾ ಸೋಷಲಿಸ್ಟ್ ಪಾರ್ಟಿಯವರು ಏಕೆ ಹೋರಾಡುತ್ತಿದ್ದೀರೋ, ಅದನ್ನು ಜಾರಿಗೊಳಿಸಲೆಂದೇ ನಮ್ಮ ಪಕ್ಷ, ಸರ್ಕಾರ ಹೋರಾಡುತ್ತಿದೆ, ಹೀಗಾಗಿ ನೀವೆಲ್ಲ ಪ್ರತ್ಯೇಕವಾಗಿರುವ ಬದಲು ಕಾಂಗ್ರೆಸ್ ಪಕ್ಷಕ್ಕೇ ಬನ್ನಿ ಅಂತ ಆಹ್ವಾನ ನೀಡಿದ್ದಾರೆ.

ಹೀಗೆ ಪ್ರಧಾನಿ ನೀಡಿದ ಆಹ್ವಾನದ ಬಗ್ಗೆ ಪ್ರಜಾ ಸೋಷಲಿಸ್ಟ್ ಪಾರ್ಟಿಯ ಸಭೆಯಲ್ಲಿ ವಿವರಿಸಿದ್ದಾರಾದರೂ ಸಭೆ ಅದನ್ನು ಒಪ್ಪಿಲ್ಲ.

ಹೀಗಾಗಿ, ತಮ್ಮ ಪಕ್ಷದ ನಿಲುವನ್ನು ಕೃಷ್ಣ ಅವರು ಇಂದಿರಾಗೆ ಹೇಳಿದರೆ, ಯಾರೂ ಬರದಿದ್ದರೆ ನೀವಾದರೂ ಬನ್ನಿ, ನೀವು ಬೆಳೆಯುವ ದಾರಿ ದೊಡ್ಡದಿದೆ ಎಂದರಂತೆ.

ಇಂದಿರಾಗಾಂಧಿ ಅವರ ಈ ವಿಶ್ವಾಸಪೂರ್ವಕ ಆಹ್ವಾನವನ್ನು ತಿರಸ್ಕರಿಸಲು ಕೃಷ್ಣ ಅವರಿಗೆ ಸಾಧ್ಯವಾಗಲೇ ಇಲ್ಲ, ಹೀಗಾಗಿ ಒಂದು ದಿನ ಅವರು ಕಾಂಗ್ರೆಸ್ ಹಡಗು ಹತ್ತಿದರು, ಇಂದಿರಾ ಹೇಳಿದಂತೆ ತಮ್ಮ ಬದುಕಿನಲ್ಲಿ ಬಹುದೊಡ್ಡ ಹಾದಿಯನ್ನು ಕ್ರಮಿಸಿದರು.

ಆರ್.ಟಿ.ವಿಠ್ಠಲಮೂರ್ತಿ

Share this:

  • WhatsApp
  • Post
  • Tweet
  • Print
  • Email
congresmeeting of congres mens m krishna and indira gandhi
Share 0 FacebookTwitterPinterestEmail
admin

previous post
ವಿಶ್ವಭೂಪಟದಲ್ಲಿ ಬೆಂಗಳೂರು ಮೂಡಿಸಿದ ಧೀಮಂತ
next post
ಸಂಕಷ್ಟಗಳಲ್ಲೂ ಸಾಧನೆ ಶಿಖರ ಏರಿದ ಮೇರು ವ್ಯಕ್ತಿ

You may also like

ಇತಿಹಾಸ ಮರೆಯದ ಕೌತುಕದ ಕ್ಷಣಗಳು..

April 21, 2025

ಕೇಂದ್ರ ಮಂತ್ರಿ ಕುಮಾರಣ್ಣನ ಲೇಟೆಸ್ಟು ಸಂಕಟ

February 17, 2025

ಅಮಿತ್ ಷಾ ಆಟ ಬಲ್ಲವರಾರು?

February 3, 2025

ಬಿಜೆಪಿ ಭಿನ್ನರಿಗೆ ಚುನಾವಣೆಯ ಕನಸು?

January 27, 2025

ನಿಖಿಲ್ ಇಲ್ಲಿಗೆ ಕುಮಾರಣ್ಣ ದಿಲ್ಲಿಗೆ

January 20, 2025

ಕೊತ ಕೊತ ಕುದಿಯುತ್ತಿದ್ದಾರೆ ಜಾರ್ಕಿಹೊಳಿ

January 6, 2025

ವಿಜಯೇಂದ್ರ ಸೇಫ್ಟಿಗೆ ನಡ್ಡಾ ಬರುತ್ತಿದ್ದಾರೆ

December 23, 2024

ಬಿಜೆಪಿ ಬೆಕ್ಕಿಗೆ ಗಂಟೆ ಕಟ್ಟುವುದು ಹೇಗೆ?

December 9, 2024

ಯಡಿಯೂರಪ್ಪ ನೋವು ಷಾ ಕಿವಿಗೆ ಬಿತ್ತು

December 2, 2024

ಜೆಡಿಎಸ್ ಸಾರಥಿಯಾಗಲು ನಿಖಿಲ್ ರೆಡಿ

November 18, 2024

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,581)
  • ರಾಜ್ಯ (1,870)
  • ರಾಷ್ಟ್ರ (1,842)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಇತಿಹಾಸ ಮರೆಯದ ಕೌತುಕದ ಕ್ಷಣಗಳು..

April 21, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ