Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೊಲೆ ಪ್ರಕರಣ: ದರ್ಶನ್, ಪವಿತ್ರಾಗೆ ಷರತ್ತಿನ ಜಾಮೀನು

by admin December 13, 2024
written by admin December 13, 2024 0 comments 1 minutes read
0FacebookTwitterPinterestEmail
180

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್, ಪವಿತ್ರಗೌಡ ಸೇರಿದಂತೆ ಏಳು ಮಂದಿಗೆ ರಾಜ್ಯ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಹಸಿರು ನಿಶಾನೆ ತೋರಿದೆ.

ದರ್ಶನ್ ಹಾಗೂ ಇತರರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ಪವಿತ್ರಗೌಡ ಅಲ್ಲದೆ, ಪ್ರದೂಷ್, ಜಗದೀಶ್, ನಾಗರಾಜು, ಲಕ್ಷ್ಮಣ್ ಅವರಿಗೂ ಜಾಮೀನು ಮಂಜೂರು ಮಾಡಿದ್ದಾರೆ.

ಎಲ್ಲಾ ಆರೋಪಿಗಳಿಗೂ ಜಾಮೀನು

ಈಗಾಗಲೇ ನಾಲ್ಕು ಮಂದಿಗೆ ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ ಪ್ರಕರಣದ ಎಲ್ಲಾ 11 ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಾದ-ಪ್ರತಿವಾದ ಆಲಿಸಿ, ಇದೇ ೯ರಂದು ಕಾಯ್ದಿರಿಸಿದ ತೀರ್ಪನ್ನು ಏಕಸದಸ್ಯ ಪೀಠ ಇಂದು ಮಧ್ಯಾನ್ಹ ಪ್ರಕಟಿಸಿತು.

ಎಲ್ಲಾ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗಿದೆ, ಅವರುಗಳು ತಲಾ ಇಬ್ಬರ ಜಾಮೀನು ನೀಡಿ, ಪೀಠ ನೀಡುವ ವಿಸ್ತಾರವಾದ ಆದೇಶದಲ್ಲಿ ತಿಳಿಸುವಂತೆ ಕೆಳಹಂತದ ನ್ಯಾಯಾಲಯದ ಷರತ್ತುಗಳನ್ನು ಪೂರೈಸಬೇಕು ಎಂದಿದೆ.

ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲು ಸಾಧ್ಯವಿಲ್ಲ
ಕೊಲೆಯಲ್ಲಿ ಪಾತ್ರ ಇಲ್ಲ

ದರ್ಶನ್ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ್, ಈ ಕೊಲೆಯಲ್ಲಿ ನಮ್ಮ ಕಕ್ಷಿದಾರ ದರ್ಶನ್ ಪಾತ್ರ ಇಲ್ಲ, ಪೋಲಿಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ಮಾಡಿದ್ದಾರೆ ಎಂದು ವಾದ ಮಂಡಿಸಿ, ಜಾಮೀನು ನೀಡುವಂತೆ ಪೀಠಕ್ಕೆ ಮನವಿ ಮಾಡಿದ್ದರು.

ಪವಿತ್ರಗೌಡ ಪರ ವಾದ ಮಂಡಿಸಿದ್ದ ಸಬಾಸ್ಟಿಯನ್ ಹಾಗೂ ಶಿಲ್ಪ, ಆಕೆ ಒಬ್ಬ ಮಹಿಳೆ ಎಂಬುದರ ಜೊತೆಗೆ ಪ್ರಕರಣದಲ್ಲಿ ಅವರ ಪಾತ್ರ ಇಲ್ಲ, ಅಪಹರಣದಲ್ಲಾಗಲಿ, ಕೊಲೆಗಾಗಲಿ ಅವರ ಕುಮ್ಮಕ್ಕು ಇರಲಿಲ್ಲ ಎಂದು ವಾದಿಸಿದ್ದರು.

ಎಲ್ಲಾ ಆರೋಪಿಗಳನ್ನು ನಗರದ ಪರಪ್ಪನ ಅಗ್ರಹಾರದಲ್ಲಿ ಸೆರೆಯಲ್ಲಿ ಇಡಲಾಗಿತ್ತು. ದರ್ಶನ್‌ಗೆ ಸೆರಮನೆಯಲ್ಲಿ ಮೋಜು, ಮಸ್ತಿ ಮಾಡಲು ಅವಕಾಶ ನಿಡಲಾಗಿದೆ ಎಂಬ ಆರೋಪದ ಮೇಲೆ ಕೆಲವು ಆರೋಪಿಗಳನ್ನು ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿತ್ತು.

ಬಿಜಿಎಸ್ ಆಸ್ಪತ್ರೆಗೆ ದಾಖಲು

ದರ್ಶನ್ ಬಳ್ಳಾರಿ ಜೈಲಿನಲ್ಲಿರುವಗಲೇ ಆರೋಗ್ಯ ಹದಗೆಟ್ಟು ಬೆನ್ನು ನೋವಿಗೆ ಶಸ್ತ್ರ ಚಿಕಿತ್ಸೆ ಪಡೆಯಲು ಮಧ್ಯಂತರ ಜಾಮೀನು ಪಡೆದು ನಗರದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರಿಗೆ ಇದುವರೆಗೂ ಶಸ್ತ್ರ ಚಿಕಿತ್ಸೆ ನಡೆದಿಲ್ಲ, ಹೈಕೋರ್ಟ್ ಜಾಮೀನು ನೀಡಿದರೂ ಅವರು ಸದಸ್ಯಕ್ಕೆ ಹೊರಬರುವ ಸಾಧ್ಯತೆ ಇಲ್ಲ.

ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತಿರುವುದರಿಂದ ಅವರು ಆಸ್ಪತ್ರೆಯಲ್ಲೇ ಮುಂದುವರೆಯಲಿದ್ದಾರೆ ಎನ್ನಲಾಗಿದೆ.

ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ದರ್ಶನ್ ಚಿಕಿತ್ಸೆ ನಿರ್ಧಾರವಾಗಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Darshangets bailPavitra Gowdarenukaswamy murder case
0 FacebookTwitterPinterestEmail
admin

previous post
ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲು ಸಾಧ್ಯವಿಲ್ಲ
next post
ಕರ್ನಾಟಕದಲ್ಲಿ 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ