Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕರ್ನಾಟಕದಲ್ಲಿ 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ

by admin December 14, 2024
written by admin December 14, 2024 0 comments 2 minutes read
0FacebookTwitterPinterestEmail
114

ಬೆಳಗಾವಿ:ರಾಜ್ಯದಲ್ಲಿ ನಡೆಯಲಿರುವ 2028 ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ’ಗಾಂಧಿ ಭಾರತ’ ಕಾರ್ಯಕ್ರಮ ಮುನ್ನುಡಿಯಾಗಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಡಿಸೆಂಬರ್ 26, 27ರಂದು ನಡೆಯಲಿರುವ ’ಗಾಂಧಿ ಭಾರತ’ ರಾಷ್ಟ್ರಮಟ್ಟದ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, 26ರ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು, 40 ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, 150 ಸಂಸದರು, ಶಾಸಕರು ಹಾಗೂ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

ಬೆಳಗಾವಿ ಇತಿಹಾಸ ಪುಟ

ಮಹಾತ್ಮ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ ಶತಮಾನ ತುಂಬಿದೆ, ನೂರು ವರ್ಷಗಳ ಬಳಿಕ ಮತ್ತೆ ಬೆಳಗಾವಿಯಲ್ಲಿ ನಾವು ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದೇವೆ. ’ಗಾಂಧಿ ಭಾರತ’ ಮೂಲಕ ಬೆಳಗಾವಿ ಇತಿಹಾಸದ ಪುಟ ಸೇರಲಿದೆ ಎಂದರು.

ಅಂದು ಗಾಂಧಿ ಸ್ವೀಕರಿಸಿದ್ದ ಹುದ್ದೆಯಲ್ಲಿ ಪ್ರಸ್ತುತ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಇದ್ದು, ಈ ಸಂದರ್ಭದಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ಮತ್ತೊಂದು ವಿಶೇಷ.

ಕಾರ್ಯಕ್ರಮಕ್ಕೆ ಖರ್ಗೆ ಸೇರಿದಂತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲಾ ರಾಷ್ಟ್ರೀಯ ನಾಯಕರು ಆಗಮಿಸಲಿದ್ದಾರೆ.

ಬಿಜೆಪಿ ಹೋರಾಟಕ್ಕೆ ಪ್ರತಿಯಾಗಿ ಕಾಂಗ್ರೆಸ್ ಅಸ್ತ್ರ
ಗ್ಯಾರಂಟಿ ದೇಶಕ್ಕೆ ಮಾದರಿ

ಬೆಳಗಾವಿಯ ಗಾಂಧಿ ಬಾವಿಯಲ್ಲಿ ನೀರು ತೆಗೆದು ಇಲ್ಲಿನ ಜಾಗ ಸ್ವಚ್ಛ ಮಾಡಿ, ನಮ್ಮ ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ, ಈ ಜಾಗದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ಇದೇ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ, ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ, ಇದು ಕಾಂಗ್ರೆಸ್ ಪಕ್ಷದ ಶಕ್ತಿ.

27ರ ಬೆಳಗ್ಗೆ 11 ಗಂಟೆಗೆ ಪಕ್ಷದ ಕಾರ್ಯಕರ್ತರ ಬೃಹತ್ ಸಭೆ ನಡೆಯಲಿದ್ದು, ರಾಜ್ಯಾದ್ಯಂತ ಕಾರ್ಯಕರ್ತರು ಆಗಮಿಸಲಿದ್ದಾರೆ, ಪಂಚಾಯತ್ ಮಟ್ಟದಿಂದ ಎಲ್ಲಾ ಹಂತದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆದ್ದವರು, ಪರಾಜಿತರು, ಕಾಂಗ್ರೆಸ್ ಪಕ್ಷದ ಸದಸ್ಯರು ಸೇರಿ ಎಲ್ಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ.

ನಿಮ್ಮ ಜವಾಬ್ದಾರಿ ಶಕ್ತಿ ಪ್ರದರ್ಶನ ಮಾಡುವುದು, ಕಾರ್ಯಕ್ರಮಕ್ಕೆ ಹಣ ಕೊಟ್ಟು ಜನರನ್ನು ಕರೆತರಬಾರದು, ಸ್ವಇಚ್ಛೆಯಿಂದ ಕಾರ್ಯಕರ್ತರನ್ನು ಕರೆತರಬೇಕು, ಪ್ರತಿ ಕ್ಷೇತ್ರದಿಂದ ಕನಿಷ್ಠ 5 ಸಾವಿರ ಜನರನ್ನು ಕರೆತರಬೇಕು, ಸುತ್ತಮುತ್ತಲ ಜಿಲ್ಲೆಯಿಂದ ಹೆಚ್ಚು ಜನರನ್ನು ಕರೆತನ್ನಿ, ಬೆಂಗಳೂರು ಹಾಗೂ ಇತರೆ ಭಾಗಗಳಿಂದ ಜನರ ಕರೆತರುವ ಜವಾಬ್ದಾರಿ ನನ್ನದು.

ಬೆಳಗಾವಿ ದೀಪಾಲಂಕಾರ

ಕಾರ್ಯಕ್ರಮ ಮತ್ತೊಂದು ಇತಿಹಾಸಕ್ಕೆ ಮುನ್ನುಡಿ ಬರೆಯಬೇಕು, 7 ರಿಂದ 8 ಕೋಟಿ ರೂ. ಖರ್ಚು ಮಾಡಿ ಬೆಳಗಾವಿಯಲ್ಲಿ ಮೈಸೂರು ದಸರಾ ಮಾದರಿ ದೀಪಾಲಂಕಾರ, 1 ರಿಂದ 2 ಕೋಟಿ ರೂ. ವೆಚ್ಚದಲ್ಲಿ ಫ್ಲೆಕ್ಸ್ ಹಾಕಿಸಲಾಗುತ್ತಿದೆ, ಇದನ್ನು ನೋಡಿ ಜನ ಕಣ್ತುಂಬಿಕೊಳ್ಳಬೇಕು.

ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವನ್ನು ಗುಜರಾತ್, ದೆಹಲಿ ಹಾಗೂ ಬೇರೆ ರಾಜ್ಯಗಳಲ್ಲಿ ಮಾಡಬೇಡಿ, ಕಾರ್ಯಕ್ರಮದ ಜವಾಬ್ದಾರಿ ನಾನು ವಹಿಸಿಕೊಳ್ಳುತ್ತೇನೆ ಎಂದು ದೆಹಲಿ ನಾಯಕರನ್ನು ಒಪ್ಪಿಸಿದ್ದೇನೆ.

ಮಹಾತ್ಮ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡು ದೇಶದ ಸ್ವಾತಂತ್ರ್ಯಕ್ಕೆ ನೀಡಿದ ಸ್ಪೂರ್ತಿಯನ್ನು ನಾವೆಲ್ಲರೂ ಮತ್ತೆ ಈ ಭೂಮಿಯಿಂದ ಪಡೆಯಬೇಕು ಎಂದರು.

ಗಾಂಧಿ ಪ್ರೇರಣೆ

ಇದು ಕಾಂಗ್ರೆಸ್ ಭವಿಷ್ಯ, ದೇಶದ ಹಬ್ಬ, ಸ್ವಾತಂತ್ರ್ಯ ಬಂದ ನಂತರ ಪ್ರಜಾಪ್ರಭುತ್ವ ಸಂವಿಧಾನ ಜಾರಿಯಾಗಿದೆ, ಇದನ್ನು ಉಳಿಸಲು ಮತ್ತೊಮ್ಮೆ ಗಾಂಧಿ ಪ್ರೇರಣೆ ತೆಗೆದುಕೊಳ್ಳಲು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದೆ.

’ಒಂದು ದೇಶ, ಒಂದು ಚುನಾವಣೆ’ ಹುನ್ನಾರ ಬಿಜೆಪಿ ಮಾಡುತ್ತಿದೆ, ಕಾಂಗ್ರೆಸ್ ಶಕ್ತಿ, ಇತಿಹಾಸದ ಮುಂದೆ ಬೇರೆಯವರು ಏನು ಇಲ್ಲ.

ಕಾರ್ಯಕ್ರಮದ ನಂತರ ಗಾಂಧೀಜಿ ಭೇಟಿ ನೀಡಿದ ಸ್ಥಳಗಳಿಗೆ ಹಾಗೂ ಸುವರ್ಣಸೌಧಕ್ಕೆ ಪ್ರವಾಸ ಮಾಡಬಹುದು.

ರಾಜ್ಯದಾದ್ಯಂತ 100 ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲಾಗುವುದು, ಇದರ ಜವಾಬ್ದಾರಿ ಶಾಸಕರದ್ದು, ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸಹಕಾರ ನೀಡದ ಸಚಿವರು ಹಾಗೂ ಶಾಸಕರ ಕುರಿತು ನನಗೆ ಪತ್ರ ಬರೆಯಿರಿ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Belagavidcm d k shivakumargandhi bharat
0 FacebookTwitterPinterestEmail
admin

previous post
ಕೊಲೆ ಪ್ರಕರಣ: ದರ್ಶನ್, ಪವಿತ್ರಾಗೆ ಷರತ್ತಿನ ಜಾಮೀನು
next post
ಬಿಜೆಪಿ ಹೋರಾಟಕ್ಕೆ ಪ್ರತಿಯಾಗಿ ಕಾಂಗ್ರೆಸ್ ಅಸ್ತ್ರ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ