Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ ಬಣ ಬಡಿದಾಟ: ವಿಜಯೇಂದ್ರಗೆ ಮೋದಿ ಸಲಹೆ

by admin December 19, 2024
written by admin December 19, 2024 0 comments 2 minutes read
0FacebookTwitterPinterestEmail
205

ನವದೆಹಲಿ:ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ವರಿಷ್ಠರು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚಿಸಿದ್ದಾರೆ.

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗಿದ್ದ ವಿಜಯೇಂದ್ರ ವರಿಷ್ಠರ ಕರೆಯ ಮೇರೆಗೆ ಬೆಳಗಾವಿಯಿಂದಲೇ ದೆಹಲಿಗೆ ತೆರಳಿ, ಪ್ರಧಾನಿ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿದ್ದಾರೆ.

ರಾಜಕೀಯ ಸಂಚಲನ

ಬಣ ರಾಜಕೀಯ ಜೊತೆಗೆ ವಿಧಾನಸಭಾ ಅಧಿವೇಶನ ಮುಗಿಯುತ್ತಿದ್ದಂತೆ ಕರ್ನಾಟಕದಲ್ಲಿ ರಾಜಕೀಯ ವಿದ್ಯಮಾನಗಳು ಗರಿಗೆದರಲಿವೆ.

ಇದಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಅವರಿಗೆ ಪ್ರಧಾನಿ ಅವರು ಕೆಲವು ಸಲಹೆಗಳನ್ನು ನೀಡಲು ದೆಹಲಿಗೆ ಕರೆಸಿಕೊಂಡರೆಂದು ಉನ್ನತ ಮೂಲಗಳು ತಿಳಿಸಿವೆ.

ಕಾನೂನಿನ ಕುಣಿಕೆ

ಈ ಮಧ್ಯೆ, ರಾಜ್ಯ ವಿಧಾನಮಂಡಲದ ಅಧಿವೇಶನ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿಗೊಳ್ಳಲಿದ್ದು, ಬಿಡಿ ನಿವೇಶನ ಹಂಚಿಕೆ ಹಾಗೂ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಈಗಾಗಲೇ ಶೇಕಡ 70ರಷ್ಟು ತನಿಖೆ ಪೂರ್ಣಗೊಳಿಸಿದೆ.

ಮುಖ್ಯಮಂತ್ರಿ ಅವರ ಕುಟುಂಬ ಹಾಗೂ ನಗರಾಭಿವೃದ್ಧಿ ಸಚಿವರನ್ನು ಹೊರತುಪಡಿಸಿ ಅಧಿಕಾರಿಗಳು ಹಾಗೂ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳ ವಿಚಾರಣೆಯನ್ನು ಇ.ಡಿ. ಮುಗಿಸಿದೆ.

ಅಂತಿಮ ಘಟ್ಟದಲ್ಲಿ ಪ್ರಮುಖರಿಗೆ ಇ.ಡಿ. ನೋಟಿಸ್ ನೀಡುತ್ತಿದ್ದಂತೆ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಆಂತರಿಕ ಸಮಸ್ಯೆಗಳು ಉಲ್ಬಣಗೊಳ್ಳುವ ಸಾಧ್ಯತೆ ಇದೆ.

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ಇಲ್ಲ
ಸತೀಶ್ ಜಾರಕಿಹೊಳಿ ಗುಂಪು

ಈಗಾಗಲೇ ಸಿದ್ದರಾಮಯ್ಯ ಆಪ್ತರಾಗಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದೂರ ಸರಿದು ತಮ್ಮದೇ ಗುಂಪು ಕಟ್ಟುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೂ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಕ್ರಮ ಕುರಿತು ಅವರು ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ.

ಎಐಸಿಸಿ ವರಿಷ್ಠರು ಬೆಳಗಾವಿ ಕಾರ್ಯಕ್ರಮ ಕುರಿತು ಪರಿಶೀಲಿಸಿಲು ಭೇಟಿ ನೀಡಿದ ಸಂದರ್ಭದಲ್ಲೂ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.

ವರಿಷ್ಠರಿಂದ ಸೂಕ್ಷ್ಮ ಅವಲೋಕನ

ಇಂತಹ ಬೆಳವಣಿಗೆ ಮತ್ತು ಇ.ಡಿ. ಕಾನೂನು ಕುಣಿಕೆ ಬಲಗೊಳ್ಳುತ್ತಿರುವುದು ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ್ದು, ಈ ಎಲ್ಲಾ ಬೆಳವಣಿಗೆಗಳನ್ನು ಬಿಜೆಪಿ ವರಿಷ್ಠರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಪ್ರಧಾನಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಕರ್ನಾಟಕದಲ್ಲಿ ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ ಮಾಡಿ ಆಶೀರ್ವಾದ ಪಡೆದುದಾಗಿ ತಿಳಿಸಿದ್ದಾರೆ.

ವಿಕಸಿತ ಭಾರತ ನಿರ್ಮಾಣದ ಮಹಾಸಂಕಲ್ಪ ತೊಟ್ಟ ಪ್ರಧಾನಿ ಮೋದಿ ಅವರ ಕಾರ್ಯಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ.

ಯುವಜನರ ಸಹಭಾಗಿತ್ವ

ಸಂಘಟನೆ ಬಲವೃದ್ಧಿ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿದೆ.

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದು, ಕರ್ನಾಟಕದ ಕೊಡುಗೆ ಮುಂಚೂಣಿಯಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು, ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಪ್ರಧಾನಿ ಸೂಚಿಸಿದರು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp fractions fightnewdelhipm narendra modi and b y vijayendra meet
0 FacebookTwitterPinterestEmail
admin

previous post
ಶಸ್ತ್ರಚಿಕಿತ್ಸೆ ಬೇಡ: ದರ್ಶನ್‌ಗೆ ವೈದ್ಯರ ಸಲಹೆ
next post
ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ಇಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ