Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

‘ಆಲ್ ಈಸ್ ವೆಲ್’ ಆದರೆ, ಗ್ಯಾರಂಟಿಗಳಿಗೇ ಹಣವಿಲ್ಲ

by admin December 25, 2024
written by admin December 25, 2024 0 comments 1 minutes read
0FacebookTwitterPinterestEmail
180

ಆಡಳಿತ ಪಕ್ಷದ ಶಾಸಕರಿಂದಲೇ ಸರ್ಕಾರಕ್ಕೆ ಛೀಮಾರಿ

ಬೆಂಗಳೂರು:‘ಆಲ್ ಈಸ್ ವೆಲ್’ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಬಿಗಿಯುತ್ತಾರೆ, ಸತ್ಯ ಸಂಗತಿಯೆಂದರೆ ಗ್ಯಾರಂಟಿಗಳ ಅನುಷ್ಠಾನಕ್ಕೂ ಹಣಕಾಸಿನ ಕೊರತೆ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ನೌಕರರಿಗೆ ಸಂಬಳ ಕೊಡಲೂ ಆಗುತ್ತಿಲ್ಲ, ಆಡಳಿತ ಪಕ್ಷದ ಶಾಸಕ ರಾಜು ಕಾಗೆ ತಮ್ಮದೇ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ.

ಪರಿಹಾರಕ್ಕೂ ಹಣ ಇಲ್ಲ

ಬೆಳಗಾವಿ ಘಟನೆ ನೋಡಿದ್ದೀರಿ, ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಸಂಭವಿಸುತ್ತಿದೆ, ತೊಗರಿ ಬೆಳೆದ ರೈತರು ಕಂಗಾಲಾಗಿದ್ದಾರೆ, ಸರ್ಕಾರ ಬೆಳೆ ಹಾನಿ ಪರಿಶೀಲನೆಗೆ ಸಿದ್ಧವಿಲ್ಲ, ಪರಿಹಾರ ಕೊಡಲೂ ಹಣ ಇಲ್ಲ.

ರಾಜ್ಯದ ಹಣಕಾಸಿನ ದುಸ್ಥಿತಿ ಒಂದೆಡೆಯಾದರೆ, ನೆರೆಯ ತೆಲಂಗಾಣ ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರದ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ, ಅಲ್ಲಿನ ಮುಖ್ಯಮಂತ್ರಿ, ಗ್ಯಾರಂಟಿ ಈಡೇರಿಸಲು ಅಸಾಧ್ಯ ಎಂಬ ಹೇಳಿಕೆ ಕೊಟ್ಟಿದ್ದಾರೆ ಎಂದರು.

ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನ ಹಾಗೂ ಸುಶಾಸನ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸುಭದ್ರವಾಗಿ ಬೆಳೆದು ನಿಲ್ಲಲು ಲಕ್ಷಾಂತರ ಕಾರ್ಯಕರ್ತರ ಹಾಗೂ ನಾಯಕರ ಅವಿರತ ಶ್ರಮ ಕಾರಣ ಎಂದರು.

ಕುಂದಾನಗರಿಯಲ್ಲಿ ಕಾಂಗ್ರೆಸ್ ಐತಿಹಾಸಿಕ ಸಮಾವೇಶ
ಬಿಜೆಪಿ ಬೆಳೆದು ನಿಂತಿದೆ

ಬಿಜೆಪಿ ಕಾರ್ಯಾಲಯ ಕಟ್ಟಡ ಕಾಣುತ್ತಿದೆ, ಪಕ್ಷ ಬೆಳೆದು ನಿಂತಿರುವುದು ಗೋಚರಿಸುತ್ತಿದೆ, ಆದರೆ, ಅದಕ್ಕೆ ಹಾಕಿದ ಅಡಿಪಾಯದ ಶ್ರಮ ಕಣ್ಣಿಗೆ ಕಾಣಿಸದು.

ಅಟಲ್, ಅಡ್ವಾಣಿ, ಮೋದಿ, ಅಮಿತ್ ಷಾ, ನಡ್ಡಾ ಅವರ ಶ್ರಮವನ್ನು ನೆನಪಿಸಿಕೊಳ್ಳಬೇಕು, ಬೂತ್‌ಮಟ್ಟದ ಕಾರ್ಯಕರ್ತರೂ ದೇಶ ಮುನ್ನಡೆಸುವ ಪ್ರಧಾನಿ ಸ್ಥಾನಕ್ಕೆ ಬೆಳೆದು ನಿಲ್ಲುವ ಅವಕಾಶ ಬಿಜೆಪಿಯಲ್ಲಿ ಮಾತ್ರ ಸಾಧ್ಯ.

ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನವನ್ನು ಸುಶಾಸನ ದಿನವನ್ನಾಗಿ ದೇಶ ಮತ್ತು ರಾಜ್ಯದ ಎಲ್ಲ ಬೂತ್‌ಮಟ್ಟದಲ್ಲೂ ಆಚರಿಸಲಾಗುತ್ತಿದೆ.

ವಾಜಪೇಯಿ ಮಾರ್ಗದರ್ಶನ

ಜೆ.ಎಚ್.ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ವಿರೋಧಪಕ್ಷದ ನಾಯಕರಾಗಿದ್ದರು, ಆಗ ಅವರ ನಿವಾಸಕ್ಕೆ ವಾಜಪೇಯಿ ಹಲವು ಬಾರಿ ಆಗಮಿಸಿದ್ದರು, ಶಾಸಕರಿಗೆ ಮಾರ್ಗದರ್ಶನ ನೀಡುತ್ತಿದ್ದರು, ಶಿಕಾರಿಪುರಕ್ಕೂ ಭೇಟಿ ನೀಡಿದ್ದರು ಎಂದು ಸ್ಮರಿಸಿದರು.

ಜೆ.ಎಚ್.ಪಟೇಲ್ ಸರ್ಕಾರದ ವಿರುದ್ಧ 1999 ರಲ್ಲಿ ಯಡಿಯೂರಪ್ಪ, ಅನಂತಕುಮಾರ್, ರಾಮಚಂದ್ರಗೌಡ, ಶಂಕರಮೂರ್ತಿ ಮೊದಲಾದವರ ನೇತೃತ್ವದಲ್ಲಿ ಜನಾಂದೋಲನ ನಡೆದಿತ್ತು, ಹುಬ್ಬಳ್ಳಿ ಸಮಾವೇಶದಲ್ಲಿ ಒಂದೂವರೆ ಲಕ್ಷದಿಂದ 2 ಲಕ್ಷದಷ್ಟು ಜನಸ್ತೋಮ ಸೇರಿತ್ತು.

ದೊಡ್ಡ ಸಮಾವೇಶ ಉದ್ದೇಶಿಸಿ ವಾಜಪೇಯಿ ಭಾಷಣ ಮುಗಿಸಿ ಹೆಲಿಕಾಪ್ಟರ್ ಏರುವ ಮುನ್ನ ಯಡಿಯೂರಪ್ಪ ಅವರನ್ನು ಬಾಚಿ ಅಪ್ಪಿಕೊಂಡಿದ್ದರು, ವಾಜಪೇಯಿ ಅವರೆಂದರೆ ಒಂದು ರೀತಿ ರೋಮಾಂಚನ.

ಶ್ರೇಷ್ಠ ನಾಯಕ

ವಾಜಪೇಯಿ ಅವರ ಜೊತೆಗಿದ್ದು ಪಕ್ಷ ಸಂಘಟನೆ ಮಾಡಿದ ಅನೇಕ ಹಿರಿಯರು ಇಂದು ವೇದಿಕೆ ಮೇಲಿದ್ದಾರೆ, ವಾಜಪೇಯಿ ಒಬ್ಬ ಶ್ರೇಷ್ಠ ನಾಯಕ ಎಂದು ಗುಣಗಾನ ಮಾಡಿದರು.

ನಮ್ಮ ವೈಯಕ್ತಿಕ ಸಮಸ್ಯೆ, ವ್ಯತ್ಯಾಸಗಳನ್ನು ಬದಿಗಿಟ್ಟು ರಾಜ್ಯ, ಪಕ್ಷ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಾಗಿ ಪಕ್ಷ ಸಂಘಟನೆಯ ಸನ್ಮಾರ್ಗದಲ್ಲಿ ಸಾಗಬೇಕಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Amit Shahatal bihari vajapeyib s yadiyurappab y vijayendrabjpj p naddapm narendra modi
0 FacebookTwitterPinterestEmail
admin

previous post
ರಸ್ತೆ ಸಾರಿಗೆ ನಿಗಮಕ್ಕೆ 9,000 ವಿವಿಧ ಹುದ್ದೆಗಳ ಭರ್ತಿ
next post
ಕುಂದಾನಗರಿಯಲ್ಲಿ ಕಾಂಗ್ರೆಸ್ ಐತಿಹಾಸಿಕ ಸಮಾವೇಶ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ