Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳಕ್ಕೆ ಶಿಫಾರಸು

by admin December 28, 2024
written by admin December 28, 2024 0 comments 1 minutes read
0FacebookTwitterPinterestEmail
261

ಬೆಂಗಳೂರು:ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣ ದರವನ್ನು ಶೇಕಡ 15ರಷ್ಟು ಹೆಚ್ಚಳ ಮಾಡುವಂತೆ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.

ನಿಗಮಗಳು ಕಳೆದ 2020ರಿಂದ ಪ್ರಯಾಣ ದರ ಪರಿಷ್ಕರಣೆ ಮಾಡದೆ, ಭಾರೀ ನಷ್ಟಕ್ಕೆ ಗುರಿಯಾಗಿದೆ.

ವಾರ್ಷಿಕ 3,650 ಕೋಟಿ ರೂ. ನಿಗಮಕ್ಕೆ ಹೊರೆಯಾಗುತ್ತಿದ್ದು, ಪ್ರಯಾಣ ದರ ಪರಿಷ್ಕರಣೆ ನಂತರ ನಷ್ಟದ ಪ್ರಮಾಣ 1,800 ಕೋಟಿ ರೂ.ಗಳಿಗೆ ಇಳಿಯುತ್ತದೆ.

ಪಾರ್ಸೆಲ್ ಸೇವೆ ಅನುಷ್ಟಾನ

ನಿಮಗಕ್ಕೆ ಆಗುತ್ತಿರುವ ನಷ್ಟವನ್ನು ಪ್ರತಿ ಬಾರಿಯೂ ಭರಿಸಲಾಗದು, ಸಂಪನ್ಮೂಲ ಕ್ರೋಡೀಕರಣಕ್ಕೆ ದರ ಹೆಚ್ಚಳ ಜೊತೆಗೆ ಪಾರ್ಸೆಲ್ ಸೇವೆಯನ್ನೂ ಅನುಷ್ಟಾನಗೊಳಿಸಿ, ನಿಗಮದ ಸೇವೆಗಳನ್ನು ಸಾರ್ವಜನಿಕರಿಗೆ ಪರಿಣಾಮಕರಿಯಾಗಿ ತಿಳಿಸಿ, ಸಂಸ್ಥೆಯಲ್ಲಿರುವ 200 ಎಕರೆ ಭೂಮಿಯನ್ನು ಆದಾಯ ಕ್ರೋಡೀಕರಣಕ್ಕಾಗಿ ಕರ್ನಾಟಕ ಗೃಹ ಮಂಡಳಿ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಸಹಭಾಗಿತ್ವದಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದಿದ್ದಾರೆ.

ಶಕ್ತಿ ಯೋಜನೆ ಜಾರಿ ನಂತರ ಪ್ರತಿನಿತ್ಯ ಪ್ರಯಾಣಿಕರ ಸಂಖ್ಯೆ 80 ಲಕ್ಷದಿಂದ 1.05 ಕೋಟಿಗೆ ಏರಿಕೆಯಾಗಿದೆ.

ಅದರಲ್ಲಿ 26 ಲಕ್ಷ ಮಹಿಳೆಯರು ಸೇರಿದ್ದಾರೆ, ಸರ್ಕಾರ ನೀಡುವ ಸಬ್ಸಿಡಿ ಜೊತೆಗೆ ನಿಗಮಗಳು ಸಂಪನ್ಮೂಲ ಕ್ರೋಡೀಕರಣಕ್ಕೆ ಹೆಚ್ಚು ಒತ್ತು ನೀಡದಿದ್ದರೆ ಪ್ರಯಾಣಿಕರಿಗೆ ಮೂಲಸೌಕರ್ಯ ನೀಡಲು ಕಷ್ಟಕರವಾಗುತ್ತದೆ.

ವಿದ್ಯುತ್ ಚಾಲಿತ ಬಸ್

ಪರಿಸರ ಸಂರಕ್ಷಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ರಿಯಾಯಿತಿ ದರದಲ್ಲಿ ನೀಡುವ ವಿದ್ಯುತ್ ಚಾಲಿತ ಬಸ್‌ಗಳನ್ನು ಪಡೆಯಲು ಹೆಚ್ಚು ಆದ್ಯತೆ ಕೊಡಿ.

ವಾಹನಗಳಿಗೆ ಜಿಪಿಎಸ್ ಸಾಧನ ಅಳವಡಿಕೆ ಮತ್ತು ಇ-ಆಡಳಿತಕ್ಕೆ ಹೆಚ್ಚು ಒತ್ತು ಕೊಡುವಂತೆ ತಿಳಿಸಿರುವುದಲ್ಲದೆ, ನಿಗದಿತ ದಿನಗಳೊಳಗೆ ಕಾರ್ಯಕ್ರಮ ರೂಪಿಸಲು ಆದೇಶ ಮಾಡಿದೆ.

ಸಭೆಯಲ್ಲಿ ಮುಖ್ಯಕಾರ್ಯದರ್ಶಿ ಅವರಲ್ಲದೆ, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್, ವಿವಿಧ ಸಾರಿಗೆ ನಿಗಮಗಳ ವ್ಯವಸ್ಥಾಪಕರಾದ ವಿ.ಅನ್ಬುಕುಮಾರ್, ಆರ್.ರಾಮಚಂದ್ರನ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯ ಬಿಜೆಪಿ ಆಕ್ಷೇಪ

ಈ ಮಧ್ಯೆ, ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿ, ಸಾರಿಗೆ ಇಲಾಖೆಯನ್ನು ಸಮಾದಿ ಮಾಡುವ ಮಟ್ಟಕ್ಕೆ ಈ ಸರ್ಕಾರ ತಂದು ನಿಲ್ಲಿಸಿದೆ ಎಂದಿದೆ.

ಸಾರಿಗೆ ಇಲಾಖೆ ನೌಕರರು ಡಿಸೆಂಬರ್ 31 ರಿಂದ ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದು, ಅವರ ಬೆಂಬಲಕ್ಕೆ ಬಿಜೆಪಿ ನಿಲ್ಲಲಿದೆ.

ಪ್ರಾಮಾಣಿಕ ಅಧಿಕಾರಿಗಳು ಶೇಖರಿಸಿಟ್ಟ ನಿಗಮದ ಆಸ್ತಿಯನ್ನು ಮಾರಾಟ ಮಾಡಲು ಈ ಸರ್ಕಾರ ಹೊರಟಿದೆ ಎಂದು ಕಿಡಿಕಾರಿದೆ.

7,401 ಕೋಟಿ ರೂ. ಬಾಕಿ

ಅಧಿಕಾರಿ, ಸಿಬ್ಬಂದಿಗೆ ವೇತನ ನೀಡಲು ಆಸ್ತಿ ಮಾರಾಟಕ್ಕೆ ಮುಂದಾಗಿದೆ, ಶಕ್ತಿ ಯೋಜನೆ ಜಾರಿ ನಂತರ ಸರ್ಕಾರ ಇದುವರೆಗೆ 7,401 ಕೋಟಿ ರೂ. ಕೊಡಬೇಕಿದೆ, ನಿಗಮದ ಮೇಲೆ 5,614 ಕೋಟಿ ರೂ. ಸಾಲದ ಹೊರೆ ಇದೆ.

ಇಂತಹ ಸಂದಿಗ್ಧಸ್ಥಿತಿಯಲ್ಲಿ ಸರ್ಕಾರ ಮಧ್ಯೆ ಪ್ರವೇಶ ಮಾಡಿ ನಿಗಮ ಮತ್ತು ನೌಕರರನ್ನು ಉಳಿಸುವ ಬದಲು ದಿನನಿತ್ಯ ಬಡಾಯಿ ಕೊಚ್ಚಿಕೊಂಡು ತಿರುಗುತ್ತಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp supportbus fare to hike 15%ksrtc to go on strike from 31st december
0 FacebookTwitterPinterestEmail
admin

previous post
ಮನಮೋಹನ್ ಸಿಂಗ್ ನಿಧನಕ್ಕೆ ದೇವೇಗೌಡರ ಕಂಬನಿ
next post
ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ