Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮುಡಾ ಪ್ರಕರಣ: ಹೈಕೋರ್ಟ್‌ಗೆ ಇ.ಡಿ. ತನಿಖಾ ವರದಿ ?

by admin January 30, 2025
written by admin January 30, 2025 0 comments 2 minutes read
1FacebookTwitterPinterestEmail
188

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ 14 ಬಿಡಿ ನಿವೇಶನಗಳನ್ನು ಪಡೆದುಕೊಳ್ಳುವ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆ ಯತ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ ಪಾತ್ರ ಇದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಹೈಕೋರ್ಟ್‌ಗೆ ನೀಡಿರುವ ತನಿಖಾ ವರದಿಯಲ್ಲಿ ಉಲ್ಲೇಖಿಸಿದೆ.

ಮುಡಾದ ಮಾಜಿ ಆಯುಕ್ತ ಡಿ.ಬಿ.ನಟೇಶ್ ಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಂದಿನ ಆಯುಕ್ತ ನಟೇಶ್ ಅವರು ಇದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದಿದೆ.

ಮುಡಾದಲ್ಲಿ ಬಿಡಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿರುವ ಕೋಟ್ಯಂತರ ರೂ. ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ದಾಖಲೆ ಪಡೆದುಕೊಳ್ಳುವಾಗ ೩೭ ಸಾಕ್ಷ್ಯಗಳನ್ನು ದಾಖಲಿಸಲಾಗಿದೆ.

ನಕಲಿ ಸಹಿ ವಿಚಾರ

ನಟೇಶ್ ನಮ್ಮ ತನಿಖೆಗೆ ಪ್ರಮುಖ ವ್ಯಕ್ತಿಯಾಗಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ನಕಲಿ ಸಹಿ ವಿಚಾರವನ್ನೂ ತಿಳಿಸಿದ್ದಾರೆ, ಹೀಗಾಗಿ ನಮಗೆ ಅವರ ವಿಚಾರಣೆಯ ಅಗತ್ಯವಿದೆ ಎಂದಿದೆ.

ಮುಖ್ಯಮಂತ್ರಿ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ, ಮುಡಾ ಅಧಿಕಾರಿಗಳ ಮೇಲೆ ತಮ್ಮ ಪ್ರಭಾವ ಬೆಳೆಸಿ ಈ ನಿವೇಶನಗಳನ್ನು ಪಡೆದುಕೊಂಡಿದ್ದಾರೆ.

ಇ.ಡಿ. ತನಿಖೆ ಆರಂಭವಾದ ನಂತರ ಪಾರ್ವತಿ ಅವರು 14 ನಿವೇಶನಗಳನ್ನು ಹಿಂತಿರುಗಿಸಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ನನ್ನ ಪಾತ್ರ ಇಲ್ಲ
ಸಾಕ್ಷ್ಯಗಳ ನಾಶ

ಆದರೆ, ನಿವೇಶನ ಪಡೆಯುವ ಸಂದರ್ಭದಲ್ಲಿ ದಾಖಲೆಗಳನ್ನು ತಿದ್ದಲಾಗಿದೆ, ಸಹಿಯನ್ನು ನಕಲು ಮಾಡಲಾಗಿದೆ, ಸಾಕ್ಷ್ಯಗಳನ್ನು ನಾಶ ಮಾಡಿರುವುದು ತನಿಖೆಯಿಂದ ಪತ್ತೆಯಾಗಿದೆ.

ಮುಖ್ಯಮಂತ್ರಿ ಅವರ ಕುಟುಂಬಕ್ಕೆ 14 ನಿವೇಶನಗಳ ಹಂಚಿಕೆಯಾದಾಗ ಅವರ ಪುತ್ರ ಡಾ.ಯತೀಂದ್ರ ವರುಣಾ ಕ್ಷೇತ್ರದ ಶಾಸಕರಾಗಿದ್ದರು, ಜೊತೆಗೆ ಮುಡಾ ಸದಸ್ಯರೂ ಆಗಿದ್ದರು.

ಅಕ್ರಮ ನಿವೇಶನ ಹಂಚಿಕೆಯಾದಾಗ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದರು, ಎಚ್.ಜಿ.ದಿನೇಶ್ ಕುಮಾರ್ ಅಲಿಯಾಸ್ ಸಿ.ಟಿ.ಕುಮಾರ್ ಆಪ್ತ ಸಹಾಯಕರಾಗಿದ್ದರು.

ಅನುಚಿತ ಪ್ರಭಾವ

ಸಿ.ಟಿ.ಕುಮಾರ್, ಮುಡಾ ಅಧಿಕಾರಿಗಳ ಮೇಲೆ ಅನುಚಿತ ಪ್ರಭಾವ ಬೀರಿದ್ದರು, ಸಹಿಯನ್ನೇ ನಕಲು ಮಾಡಿ ನಿವೇಶನಗಳು ಹಂಚಿಕೆ ಆಗುವಂತೆ ನೋಡಿಕೊಂಡಿದ್ದರು.

ಮುಡಾ ಜಮೀನನ್ನು 3,24,700 ರೂ. ಮೊತ್ತಕ್ಕೆ ಸ್ವಾಧೀನ ಪಡಿಸಿಕೊಂಡಿತ್ತು, ಈ ಜಮೀನನ್ನು ತಪ್ಪು ಮಾಹಿತಿ ಮತ್ತು ಪ್ರಭಾವ ಆಧರಿಸಿ, ಕಾನೂನುಬಾಹಿರವಾಗಿ ಡಿ-ನೋಟಿಫಿಕೇಷನ್ ಮಾಡಲಾಗಿದೆ.

ಬಿ.ಎಂ.ಮಲ್ಲಿಕಾರ್ಜುನಸ್ವಾಮಿ ಇದನ್ನು ಕೃಷಿ ಜಮೀನು ಎಂದು ಖರೀದಿಸಿದ್ದಾರೆ, ಅಷ್ಟರಲ್ಲಾಗಲೇ ಮುಡಾ ಇಲ್ಲಿ ಬಡಾವಣೆ ಅಭಿವೃದ್ಧಿಪಡಿಸಿ ನಿವೇಶನ ಹಂಚಿಕೆ ಮಾಡಿತ್ತು.

ಕುಮಾರಸ್ವಾಮಿಗೆ ವಿಶಾಖಪಟ್ಟಣದಲ್ಲಿ ಅದ್ದೂರಿ ಸ್ವಾಗತ
ತಕರಾರು ಎತ್ತಲಿಲ್ಲ

ಇದಕ್ಕೆ ಅಧಿಕಾರಿಗಳು ಯಾವುದೇ ತಕರಾರು ಎತ್ತಲಿಲ್ಲ, ತಪ್ಪು ಸ್ಥಳ ಪರಿಶೀಲನೆ ವರದಿ ಆಧರಿಸಿ ಭೂಮಿ ಪರಿವರ್ತನೆ ಮಾಡಲಾಗಿದೆ, ಆಗಲೂ ಮುಡಾ ಆಕ್ಷೇಪ ವ್ಯಕ್ತಪಡಿಸಿಲ್ಲ.

ರಾಜಕೀಯ ಪ್ರಭಾವ ಬಳಸಿ 56 ಕೋಟಿ ರೂ. ಮೌಲ್ಯದ ನಿವೇಶನಗಳನ್ನು ಪರಿಹಾರವಾಗಿ ಪಡೆದುಕೊಳ್ಳಲಾಗಿದೆ.

ಕಾನೂನುಬಾಹಿರವಾಗಿ ಪಡೆದ ನಿವೇಶನಗಳನ್ನು ಮುಡಾದಿಂದ ಪಡೆದ ಪರಿಹಾರವೆಂದು ಬಿಂಬಿಸಲಾಗಿದೆ.

ಅಂದು ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಶಾಮೀಲಾಗಿ ಈ ಕಾನೂನುಬಾಹಿರ ಪ್ರಕ್ರಿಯೆ ನಡೆಸಲಾಗಿದೆ.

14 ನಿವೇಶನ ವಾಪಾಸ್

ಇ.ಡಿ. ತನಿಖೆ ಆರಂಭ ನಂತರ ಪಾರ್ವತಿ ಅವರು ಅಕ್ಟೋಬರ್ 1ರಂದು 14 ನಿವೇಶನಗಳನ್ನು ಹಿಂತಿರುಗಿಸಿದ್ದಾರೆ.

ನಿವೇಶನ ಹಿಂತಿರುಗಿಸಿದ್ದರೂ ಇದರಲ್ಲಿ ಅಕ್ರಮ ಹಣ ವರ್ಗಾವಣೆ ಯತ್ನ ನಡೆದಿರುವುದು ಪತ್ತೆಯಾಗಿದೆ.

ಸಿದ್ದರಾಮಯ್ಯ, ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ಜೆ.ದೇವರಾಜು, ಮುಡಾ ಅಧಿಕಾರಿಗಳು, ರಿಯಲ್ ಎಸ್ಟೇಟ್ ವ್ಯವಹಾರಸ್ಥರು, ಪ್ರಭಾವಿ ವ್ಯಕ್ತಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತನ್ನ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಅಕ್ರಮ ಹಣ ವರ್ಗಾವಣೆ ಕೇವಲ ಬಿ.ಎಂ.ಪಾರ್ವತಿ ಅವರ ಪ್ರಕರಣದಲ್ಲಿ ಮಾತ್ರವಲ್ಲ, ಸುಮಾರು 1095 ಮುಡಾ ಬಿಡಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ED reportillegal transaction allegationmuda sacm
1 FacebookTwitterPinterestEmail
admin

previous post
ಕುಮಾರಸ್ವಾಮಿಗೆ ವಿಶಾಖಪಟ್ಟಣದಲ್ಲಿ ಅದ್ದೂರಿ ಸ್ವಾಗತ
next post
ಮೈಕ್ರೊ ಫೈನಾನ್ಸ್ ನಿಯಂತ್ರಣಕ್ಕೆ ಶೀಘ್ರ ಕಾನೂನು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ