Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಡಾ ತೀರ್ಪು ಆತಂಕದಲ್ಲಿ ಸಿದ್ದರಾಮಯ್ಯ ಬಜೆಟ್ !

by admin February 4, 2025
written by admin February 4, 2025 0 comments 1 minutes read
0FacebookTwitterPinterestEmail
280

ಬೆಂಗಳೂರು:ಸ್ನಾನಗೃಹದಲ್ಲಿ ಆಯತಪ್ಪಿ ಬಿದ್ದು ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರದಿಂದ ಎಂದಿನಂತೆ ತಮ್ಮ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಮೈಸೂರು ಪ್ರವಾಸ ವೇಳೆ ಈ ಘಟನೆಗೆ ಒಳಗಾಗಿದ್ದ ಮುಖ್ಯಮಂತ್ರಿ ಅವರು, ವೈದ್ಯರ ಸಲಹೆ ಮೇರೆಗೆ ಐದು ದಿನಗಳ ಕಾಲ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ಪೂರ್ಣ ವಿಶ್ರಾಂತಿಯಲ್ಲಿದ್ದಾರೆ.

10 ದಿನ ಪೂರ್ವಭಾವಿ ಸಭೆ

ಕಳೆದ ಸೋಮವಾರದಿಂದ ಸತತವಾಗಿ 10 ದಿನಗಳ ಕಾಲ 2025-26ನೇ ಸಾಲಿನ ಮುಂಗಡಪತ್ರ ಸಿದ್ಧತೆಯ ಪೂರ್ವಭಾವಿ ಸಭೆಗಳನ್ನು ಕರೆದಿದ್ದರು.

ಆದರೆ, ಈ ಘಟನೆಯಿಂದ ಪೂರ್ವಭಾವಿ ಸಭೆ ಸೇರಿದಂತೆ ಪ್ರಮುಖ ಕಾರ್ಯಕ್ರಮಗಳಿಂದಲೂ ದೂರ ಉಳಿದಿದ್ದರು.

ಇದೀಗ ಫೆಬ್ರವರಿ 6ರಿಂದ ಶನಿವಾರ, ಭಾನುವಾರ ಹೊರತುಪಡಿಸಿ 8 ದಿನಗಳ ಕಾಲ ಮುಂಗಡಪತ್ರದ ಇಲಾಖಾ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ತಿಳಿಸಿದೆ.

ದಿನವಿಡೀ ಸಭೆಗಳು

ಅಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 7 ರವರೆಗೆ 12 ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಫೆಬ್ರವರಿ 14ರಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖಾ ಅಧಿಕಾರಿಗಳೊಂದಿಗಿನ ಸಮಾಲೋಚನೆ ಮೂಲಕ ಬಜೆಟ್ ಪೂರ್ವ ಸಭೆಗಳು ಮುಕ್ತಾಯಗೊಳ್ಳಲಿವೆ.

ಹಣಕಾಸು ಇಲಾಖೆ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಅವರು, ಮಾರ್ಚ್ ಎರಡನೇ ವಾರದಲ್ಲಿ ವಿಧಾನಸಭೆಯಲ್ಲಿ ಮುಂಗಡಪತ್ರ ಮಂಡಿಸಲಿದ್ದಾರೆ.

ರಾಜ್ಯದ ಪ್ರತಿ ಪ್ರಜೆಯ ಮೇಲೆ ಒಂದು ಲಕ್ಷ ರೂ. ಹೊರೆ
ಜಂಟಿ ಅಧಿವೇಶನ

ಈ ಉದ್ದೇಶದಿಂದ ಮಾರ್ಚ್ ಮೊದಲ ವಾರದಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನ ಕರೆಯಲು ಸರ್ಕಾರ ತೀರ್ಮಾನಿಸಿದೆಯಾದರೂ, ಅಧಿಕೃತ ಘೋಷಣೆ ಆಗಿಲ್ಲ.

ಮುಡಾ ಬಿಡಿ ನಿವೇಶನಗಳ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ (ಇ.ಡಿ.) ಏಕಕಾಲದಲ್ಲಿ ತನಿಖೆ ಕೈಗೊಂಡಿರುವುದು ಮುಖ್ಯಮಂತ್ರಿ ಅವರಿಗೆ ಬಜೆಟ್ ತಯಾರಿ ವೇಳೆಯಲ್ಲೂ ಗೊಂದಲದ ಸ್ಥಿತಿ ಎದುರಿಸುವಂತಾಗಿದೆ.

ಇದರ ನಡುವೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಪಡೆದಿರುವ 14 ಬಿಡಿ ನಿವೇಶನಗಳ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಕೋರಿದ್ದಾರೆ.

ಕಾಯ್ದಿರಿಸಿದ ತೀರ್ಪು

ರಿಟ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ, ತೀರ್ಪು ಕಾಯ್ದಿರಿಸಿದೆ.

ತೀರ್ಪು ಏನಾಗಬಹುದೆಂಬ ಆತಂಕವೂ ಮುಖ್ಯಮಂತ್ರಿ ಅವರ ಮನಸ್ಸಿನಲ್ಲಿ ಮನೆ ಮಾಡಿರುವುದಂತೂ ಸಹಜ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiah budget preparationhigh court reserved judgementmuda scam
0 FacebookTwitterPinterestEmail
admin

previous post
ರಾಜ್ಯದ ಪ್ರತಿ ಪ್ರಜೆಯ ಮೇಲೆ ಒಂದು ಲಕ್ಷ ರೂ. ಹೊರೆ
next post
ಸರ್ಕಾರಿ ಕಚೇರಿಗಳಲ್ಲಿ ಪ್ಲ್ಯಾಸ್ಟಿಕ್ ಬಾಟಲ್ ನಿಷೇಧ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ