Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ವಿರುದ್ಧದ ಸಿಬಿಐ ತನಿಖೆ ಅರ್ಜಿ ವಜಾ

by admin February 7, 2025
written by admin February 7, 2025 0 comments 2 minutes read
0FacebookTwitterPinterestEmail
408

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಮುಖ್ಯಮಂತ್ರಿ ಕುಟುಂಬ ಪಡೆದ 14 ಬಿಡಿ ನಿವೇಶನಗಳ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ ಹಾಗೂ ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎನ್ನುವ ಮೂಲಕ ಅರ್ಜಿಯನ್ನು ವಜಾ ಮಾಡಿದೆ.

ತೀರ್ಪಿನಿಂದ ನಿರಾಳತೆ

ಹೈಕೋರ್ಟ್ ತೀರ್ಪಿನಿಂದ ತೀವ್ರ ಗೊಂದಲದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿರಾಳತೆ ದೊರೆತಿದೆ.

ಲೋಕಾಯುಕ್ತ ಪೊಲೀಸರು ನಡೆಸಿದ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಲಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ತೀರ್ಪು ಕುರಿತು ಪ್ರತಿಕ್ರಿಯಿಸಿದ ದೂರುದಾರ ಸ್ನೇಹಮಯಿ ಕೃಷ್ಣ, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಮೂಲಕ ಕಾನೂನು ಹೋರಾಟ ಮುಂದುವರಿಸುತ್ತೇವೆ, ತೀರ್ಪಿನ ಹೈಕೋರ್ಟ್ ಆದೇಶ ಪ್ರತಿ ದೊರೆತ ನಂತರ ಮೇಲ್ಮನವಿ ಸಲ್ಲಿಸಲಾಗುವುದು, ಲೋಕಾಯುಕ್ತ ತನಿಖೆ ಬಗ್ಗೆ ನಂಬಿಕೆ ಇಲ್ಲ ಎಂದರು.

ಲೋಕಾಯುಕ್ತ ತನಿಖೆ

ಲೋಕಾಯುಕ್ತ ಪೋಲಿಸರಿಂದ ಮುಡಾ ಹಗರಣದ ಸಮರ್ಪಕ ತನಿಖೆ ಸಾಧ್ಯವಿಲ್ಲ, ನ್ಯಾಯ ಸಿಗುವುದಿಲ್ಲ ಎಂದಿದ್ದ ಸ್ನೇಹಮಯಿ ಕೃಷ್ಣ, ಸಿಬಿಐ ತನಿಖೆ ಆದೇಶ ಕೋರಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಮುಡಾ ಹಗರಣದಲ್ಲಿ 3 ಲಕ್ಷ 26 ಸಾವಿರ ಮೊತ್ತದ ಜಮೀನು ಸ್ವಾಧೀನಕ್ಕೆ ಬದಲಿಗೆ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ 14 ದುಬಾರಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ, ಅಸ್ತಿತ್ವದಲ್ಲೇ ಇಲ್ಲದ ಜಮೀನಿನ ಭೂಪರಿವರ್ತನೆ ಮಾಡಲಾಗಿದೆ.

ಸಚಿವ ಸಂಪುಟ ಟಿಪ್ಪಣಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಟಿಪ್ಪಣಿಯೂ ಸಿದ್ದರಾಮಯ್ಯ ಅವರ ಪತ್ನಿಗೆ ಅನುಕೂಲವಾಗುವಂತೆ ಇದೆ, ಅಲ್ಲದೆ, ನಿಯಮಗಳನ್ನು ಗಾಳಿಗೆ ತೂರಿ ತಮಗಿಷ್ಟ ಬಂದಂತೆ ತಿರುಚಲಾಗಿದೆ ಎಂದು ಆರೋಪಿಸಲಾಗಿತ್ತು.

ಪ್ರಭಾವಿಗಳು ಶಾಮೀಲು

ಪ್ರಭಾವಿ ವ್ಯಕ್ತಿಗಳು ಶಾಮೀಲಾಗಿರುವ ಈ ಮೊಕದ್ದಮೆಯಲ್ಲಿ ರಾಜ್ಯ ಸರ್ಕಾರದ ಅಧೀನದಲ್ಲಿರುವ ಲೋಕಾಯುಕ್ತ ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ, ಆರೋಪಿ ಮುಖ್ಯಮಂತ್ರಿ ಎಂಬ ಒಂದೇ ಕಾರಣಕ್ಕೆ ಸಿಬಿಐ ಅಥವಾ ಸ್ವತಂತ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿರುವ ಉದಾಹರಣೆಗಳಿವೆ ಎಂಬ ವಾದ ಮಂಡಿಸಿದ್ದರು.

ಮುಖ್ಯಮಂತ್ರಿಗಳ ರಕ್ಷಣೆಗೆ ಇಡೀ ಸಚಿವ ಸಂಪುಟವೇ ಒಂದಾಗಿರುವಾಗ ಸ್ಥಳೀಯ ಲೋಕಾಯುಕ್ತ ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲದ ಕಾರಣ ನ್ಯಾಯ ಎತ್ತಿಹಿಡಿಯಲು ಸ್ವತಂತ್ರ ಹಾಗೂ ನ್ಯಾಯಸಮ್ಮತ ಸಂಸ್ಥೆಯಿಂದ ತನಿಖೆ ಅನಿವಾರ್ಯ ಎಂಬುದಾಗಿ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು.

ರಾಜ್ಯ ಸರ್ಕಾರದ ಪರ ವಕೀಲರು ತಮ್ಮ ವಾದದಲ್ಲಿ, ಲೋಕಾಯುಕ್ತ ಪೋಲಿಸರು ರಾಜ್ಯ ಸರ್ಕಾರದ ಹಿಡಿತದಲ್ಲಿದ್ದಾರೆ, ಎನ್ನುವುದಾದರೆ, ಸಿಬಿಐ ಸಹಾ ಕೇಂದ್ರ ಸರ್ಕಾರದ ಅಧೀನದಲ್ಲಿದೆ, ಆದ್ದರಿಂದ ಸ್ವತಂತ್ರ ತನಿಖಾ ಸಂಸ್ಥೆ ಎನ್ನಲಾಗುವುದಿಲ್ಲ.

ಹೈಕೋರ್ಟ್ ಸಿದ್ದರಾಮಯ್ಯ ನಿರಪರಾಧಿ ಎಂದಿಲ್ಲ
ಪೊಲೀಸರ ಮೇಲೆ ನಿಗಾ

ಲೋಕಾಯುಕ್ತ ಕಳಂಕಿತ ಎಂಬದಾಗಿ ಹೇಳಲಾಗದು, ಲೋಕಾಯುಕ್ತ ಪೊಲೀಸರ ಮೇಲೆ ಲೋಕಾಯುಕ್ತ ಸಂಸ್ಥೆ ನಿಗಾ ಇರುತ್ತದೆ, ಆದ್ದರಿಂದ ಲೋಕಾಯುಕ್ತ ತನಿಖೆ ಸ್ವತಂತ್ರವಾಗಿರಲಿದೆ.

ಸಿಬಿಐ ಸ್ವತಂತ್ರ ಸಂಸ್ಥೆ ಎನ್ನವುದಾದರೆ ಲೋಕಾಯುಕ್ತ ಸಹಾ ಸ್ವತಂತ್ರ ಸಂಸ್ಥೆಯಾಗಿದೆ, ಪ್ರಸ್ತುತ ನಡೆಸುತ್ತಿರುವ ತನಿಖೆಯೂ ಸೂಕ್ತವಾಗೇ ಇದೆ, ತನಿಖೆ ತಾರತಮ್ಯವಾಗಿದ್ದಾಗ ಮಾತ್ರ ಬೇರೆ ಸಂಸ್ಥೆಯಿಂದ ತನಿಖೆಗೆ ಮನವಿ ಮಾಡಬಹುದು.

ಲೋಕಾಯುಕ್ತ ಪೊಲೀಸರ ಅಂತಿಮ ವರದಿ ನಂತರ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ, ಇದಕ್ಕೂ ಮುನ್ನವೇ ತೀರ್ಮಾನಿಸಲು ಅವಕಾಶವಿಲ್ಲ, ಅಂತಿಮ ವರದಿಯಲ್ಲಿ ಲೋಪವಿದ್ದರೆ ಮರು ತನಿಖೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು ವರದಿಯಲ್ಲಿ ಏನಿದೆಯೆಂದು ತಿಳಿಯದೇ, ವಾದ ಆಲಿಸದೇ ತೀರ್ಮಾನಿಸಬಾರದು.

ಅಪರೂಪ ಪ್ರಕರಣವಲ್ಲ

ಸಿಬಿಐ ತನಿಖೆಗೆ ಅರ್ಹವೆನ್ನಲು ಇದು ಅಪರೂಪ ಪ್ರಕರಣವಲ್ಲ, ಲೋಕಾಯುಕ್ತ ತನಿಖೆಯಲ್ಲಿ ಮಧ್ಯಪ್ರವೇಶಿಸುವುದು ಸರಿಯಲ್ಲ, ದೂರುದಾರರಿಗೆ ರಾಜ್ಯಪಾಲರ ಅನುಮತಿ ಬೇಕಿತ್ತು ಪಡೆದುಕೊಂಡರು.

ಅರ್ಜಿದಾರರು ಮೊದಲು ಲೋಕಾಯುಕ್ತ ಪೊಲೀಸರ ತನಿಖೆ ಕೋರಿ, ತನಿಖೆಗೆ ಮೊದಲೇ ಸಿಬಿಐಗೆ ನೀಡುವಂತೆ ಕೇಳುತ್ತಿದ್ದಾರೆ, ಆದರೆ, ಲೋಕಾಯುಕ್ತ ಪೊಲೀಸ್ ತನಿಖೆಯಲ್ಲಿನ ಲೋಪ ಏನೆಂದು ತಿಳಿಸಿಲ್ಲ, ಆರೋಪಿ ಸ್ಥಾನದಲ್ಲಿ ಮುಖ್ಯಮಂತ್ರಿ ಇದ್ದಾರೆ ಎಂಬ ಮಾತ್ರಕ್ಕೆ ಸಿಬಿಐ ತನಿಖೆ ಕೇಳುತ್ತಿದ್ದಾರೆ, ಇದು ತಪ್ಪು ಮೇಲ್ಪಂಕ್ತಿಗೆ ನಾಂದಿಯಾಗುತ್ತದೆ ಎಂದು ಸಿದ್ದರಾಮಯ್ಯ ಪರ ವಕೀಲ ವಾದ ಮಂಡಿಸಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahfor cbi investigation petitionhigh court judgementMuda case
0 FacebookTwitterPinterestEmail
admin

previous post
ಕೃಷ್ಣಯ್ಯ ಶೆಟ್ಟಿಗೆ ಮೂರು ವರ್ಷ ಜೈಲು ಶಿಕ್ಷೆ
next post
ಹೈಕೋರ್ಟ್ ಸಿದ್ದರಾಮಯ್ಯ ನಿರಪರಾಧಿ ಎಂದಿಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ