Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಡಾ: ಸಿದ್ದರಾಮಯ್ಯಗೆ ‘ಬಿ’ ರಿಪೋರ್ಟ್ ಕ್ಲೀನ್ ಚಿಟ್

by KM Shivaraju February 20, 2025
written by KM Shivaraju February 20, 2025 0 comments 2 minutes read
0FacebookTwitterPinterestEmail
195

ಬೆಂಗಳೂರು:ಮುಡಾ ಹಗರಣದಲ್ಲಿ ನ್ಯಾಯಾಲಯಕ್ಕೆ ಲೋಕಾಯುಕ್ತ ’ಬಿ’ ರಿಪೋರ್ಟ್ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾಲೀಕ ದೇವರಾಜು ಅವರಿಗೆ ಕ್ಲೀನ್ ಚಿಟ್ ನೀಡಿದೆ.

ಸಿದ್ದರಾಮಯ್ಯ ಕುಟುಂಬ 14 ಬಿಡಿ ನಿವೇಶನಗಳನ್ನು ಪಡೆದಿರುವುದಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್, 27 ಸಂಪುಟಗಳನ್ನು ಒಳಗೊಂಡ 11,000 ಪುಟಗಳ ತನಿಖಾ ವರದಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದರು.

ಎಂಟು ಸಾವಿರ ಪುಟಗಳ ವರದಿ, 3000 ಡಾಕ್ಯೂಮೆಂಟರಿಗಳನ್ನು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಸಲ್ಲಿಸಿದರು.

ಸಾಕ್ಷ್ಯಾಧಾರಾಗಳ ಕೊರತೆ

ಸಾಕ್ಷ್ಯಾಧಾರಾಗಳ ಕೊರತೆ ಹಿನ್ನೆಲೆಯಲ್ಲಿ ಪ್ರಮುಖ ನಾಲ್ವರು ಆರೋಪಿಗಳ ಪಾತ್ರವಿಲ್ಲ ಎಂಬುದು ಕಂಡುಬಂದಿದೆ, ಜೊತೆಗೆ ಇವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ವರದಿಯಲ್ಲಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 50 ಜನರ ಹೇಳಿಕೆಗಳನ್ನು ದಾಖಲಿಸಿದ್ದು, ತನಿಖಾ ಸಂದರ್ಭದಲ್ಲಿ ಪ್ರಮುಖ ಆರೋಪಿಗಳ ಪಾತ್ರ ಇಲ್ಲ ಹಾಗೂ ಸಾಕ್ಷಿಗಳೂ ಇಲ್ಲ, ಹಾಗಾಗಿ ಅವರನ್ನು ಬಿಟ್ಟು ತನಿಖೆ ಮುಂದುವರೆಸುವುದಾಗಿ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮಾಡಿರುವ ಆರೋಪಗಳೆಲ್ಲವೂ ಸುಳ್ಳು ಎಂದಿರುವ ಲೋಕಾಯುಕ್ತ, 14 ನಿವೇಶನಗಳ ಹಂಚಿಕೆ ವಿಷಯದಲ್ಲಿ ಮುಖ್ಯಮಂತ್ರಿ ಕುಟುಂಬ ಮುಡಾ ಮೇಲೆ ಯಾವುದೇ ಪ್ರಭಾವ ಬೀರಿಲ್ಲ.

ಗುತ್ತಿಗೆದಾರರ 64,000 ಕೋಟಿ ರೂ. ಬಿಲ್ ಬಾಕಿ
14 ನಿವೇಶನಗಳ ವಾಪಸ್

ಇವರ ಕುಟುಂಬಕ್ಕೆ ಪರ್ಯಾಯವಾಗಿ ಮುಡಾದಿಂದ ಸಿಗಬೇಕಾದದ್ದೂ ದೊರೆತಿಲ್ಲ, ಈಗಾಗಲೇ ಪಾರ್ವತಿ ಅವರು, ತಾವು ಪಡೆದಿದ್ದ 14 ನಿವೇಶನಗಳನ್ನೂ ಹಿಂತಿರುಗಿಸಿದ್ದಾರೆಂದು ಲೋಕಾಯುಕ್ತ ತನ್ನ ವರದಿಯಲ್ಲಿ ತಿಳಿಸಿದೆ.

ಮಲ್ಲಿಕಾರ್ಜುನ ಸ್ವಾಮಿ ಮತ್ತು ಪಾರ್ವತಿ ಮಧ್ಯೆ ಜಮೀನು ವರ್ಗಾವಣೆ ಕಾನೂನಾತ್ಮಕವಾಗಿ ನಡೆದಿದೆ, ಆದರೆ, ದೇವರಾಜುಗೆ ಸಂಬಂಧಿಸಿದಂತಹ ಡಿ-ನೋಟಿಫೈ ಪ್ರಕ್ರಿಯೆಯಲ್ಲಿ ಮುಡಾ ಲೋಪ ಎಸಗಿದೆ.

ದೇವರಾಜು ಸರ್ಕಾರಿ ಸೇವೆಯಲ್ಲಿ ಇರುವುದನ್ನು ಮರೆಮಾಚಿರುವುದಲ್ಲದೆ, ಡಿ-ನೋಟಿಫೈ ವೇಳೆ ತಮಗಿರುವ ಆಸ್ತಿ-ಪಾಸ್ತಿಗಳ ಬಗ್ಗೆಯೂ ವಿವರ ನೀಡಿಲ್ಲ, ಆದ್ದರಿಂದ ಪ್ರಕರಣದಲ್ಲಿ ಬೇರೆ ಯಾರ ಪಾತ್ರವೂ ಇಲ್ಲ ಎಂಬುದು ನಮ್ಮ ತನಿಖಾ ವರದಿಯಿಂದ ತಿಳಿದುಬಂದಿದೆ.

ವೇಮಗಲ್ ಬಾಟ್ಲಿಂಗ್ ಘಟಕ: 315 ಕೋಟಿ ರೂ. ಹೂಡಿಕೆ
ಅಧಿಕಾರಿಗಳ ಎಡವಟ್ಟು ಆರೋಪ

ಅಧಿಕಾರಿಗಳು ಮತ್ತು ಖಾಸಗಿ ಸಂಸ್ಥೆ ಬಹಳಷ್ಟು ಎಡವಟ್ಟು ಮಾಡಿವೆ, ಕೆಸರೆ ಗ್ರಾಮದ ಸ್ಥಳವನ್ನು ಬಡಾವಣೆ ಮಾಡಲು ವಶ ಪಡಿಸಿಕೊಳ್ಳಲಾಗಿತ್ತು, ನಂತರ ರಸ್ತೆ, ನಿವೇಶನಗಳನ್ನು ಮಾಡಲು ಹಾಗೂ ಇತರ ಮೂಲಸೌಕರ್ಯ ಕಲ್ಪಿಸಲು ಎಲ್ ಅಂಡ್ ಟಿ ಕಂಪನಿಗೆ ನೀಡಲಾಗಿತ್ತು.

ಈ ವೇಳೆ ವಿವಾದಿತ 3.18 ಎಕರೆ ಪ್ರದೇಶ ಡಿ-ನೋಟಿಫೈ ಆಗಿದೆ ಎಂಬುದಾಗಿ ನಕಾಶೆಯಲ್ಲಿ ತೋರಿಸಲಾಗಿತ್ತು, ಆದರೆ, ಎಲ್ ಅಂಡ್ ಟಿ ಅವರು ಡಿ-ನೋಟಿಫೈ ಆಗಿರುವ ಜಮೀನನ್ನೂ ಅಭಿವೃದ್ಧಿ ಮಾಡಿದ್ದಾರೆ.

ಇಂತಹ ಎಡವಟ್ಟನ್ನು ಮುಡಾ ಅಧಿಕಾರಿಗಳು ಗಮನಿಸದೆ ಭಾರೀ ಲೋಪ ಮಾಡಿದ್ದಾರೆ, ಅಷ್ಟೇ ಅಲ್ಲ, ಅಭಿವೃದ್ಧಿ ಆದ ನಂತರ ನಿವೇಶನಗಳ ಹಂಚಿಕೆಯನ್ನೂ ಮಾಡಿದ್ದಾರೆ.

ಎಲ್ ಅಂಡ್ ಟಿ, ಮುಡಾ ತಪ್ಪು

ಹೀಗಾಗಿ ಎಲ್ ಅಂಡ್ ಟಿ ಮತ್ತು ಮುಡಾ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ.

ಕೃಷಿ ಭೂಮಿ ಪರಿವರ್ತನೆ ಸಮಯದಲ್ಲೂ ಕಂದಾಯ ಅಧಿಕಾರಿಗಳು ಲೋಪ ಎಸಗಿದ್ದಾರೆ, ಜಮೀನು ಇರುವ ಸ್ಥಳಕ್ಕೆ ಹೋಗದೆ ಕಚೇರಿಯಲ್ಲೇ ಕುಳಿತು ಪರಿವರ್ತನೆ ಪ್ರಕ್ರಿಯೆ ಪೂರ್ಣಗೊಳಿಸಿ ನಿರ್ಲಕ್ಷ್ಯ ತೋರಿದ್ದಾರೆ.

ಹೈಕೋರ್ಟ್ ತೀರ್ಪನ್ನು ಆಧಾರವಾಗಿಟ್ಟುಕೊಂಡು ಮುಡಾ, ಮುಖ್ಯಮಂತ್ರಿ ಕುಟುಂಬಕ್ಕೆ 14 ನಿವೇಶನಗಳನ್ನು ಹಂಚಿಕೆ ಮಾಡಿರುವುದಷ್ಟೇ ಅಲ್ಲ, ಉಳಿದ 130 ಪ್ರಕರಣಗಳಲ್ಲೂ ಪರ್ಯಾಯ ನಿವೇಶನಗಳನ್ನು ಹಂಚಿದ್ದಾರೆ.

ಹೀಗಾಗಿ ಪರ್ಯಾಯ ಪರಿಹಾರ ಕೊಟ್ಟಿರುವ ಬಗ್ಗೆ ಸಮಗ್ರ ತನಿಖೆ ನಡೆಸಬೇಕಿದೆ, ವರದಿಯಲ್ಲಿನ ಅಧಿಕಾರಿಗಳ ತಪ್ಪಿನ ತನಿಖೆ ಬಗ್ಗೆ ಕೋರ್ಟ್ ತೀರ್ಮಾನ ಕೈಗೊಳ್ಳಬೇಕು ಎಂದು ಲೋಕಾಯುಕ್ತ ಮನವಿ ಮಾಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
clean chit to siddaramaiah and familymuda scammysuru lokayukta 'b' report
0 FacebookTwitterPinterestEmail
KM Shivaraju

previous post
ಫೆಬ್ರವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು, ಪೂರ್ವ ಮುಂಗಾರಿನಲ್ಲಿ ಅಧಿಕ ಮಳೆ ಸಾಧ್ಯತೆ
next post
ಸ್ಥಳೀಯ ಸಂಸ್ಥೆ ಚುನಾವಣೆ: ಮಹಿಳೆಗೆ ಶೇ.50 ಮೀಸಲು

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ