Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಸಿದ್ದರಾಮಯ್ಯ ಬಜೆಟ್‌ಗೆ ಪಾನಪ್ರಿಯರು ಖುಷ್ !

by admin March 7, 2025
written by admin March 7, 2025 0 comments 2 minutes read
0FacebookTwitterPinterestEmail
192

ಬೆಂಗಳೂರು:ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ ಸಂದರ್ಭಗಳಲ್ಲಿ ಸಂಪನ್ಮೂಲ ಕ್ರೋಡೀಕರಣಕ್ಕೆ ಅಬಕಾರಿ ಇಲಾಖೆಯನ್ನೇ ಗುರಿಯಾಗಿಟ್ಟುಕೊಳ್ಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿ ಪಾನಪ್ರಿಯರಿಗೆ ಖುಷಿ ನೀಡಿದ್ದಾರೆ.

ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಪ್ರೀಮಿಯಂ ಮದ್ಯಗಳ ಬೆಲೆಗಳನ್ನೇ ರಾಜ್ಯದಲ್ಲೂ ಪರಿಷ್ಕರಿಸುವುದಾಗಿ ತಮ್ಮ ಮುಂಗಡಪತ್ರದಲ್ಲಿ ಪ್ರಕಟಿಸಿದ್ದಾರೆ.

ಶೇ.30 ರಿಂದ 40ರಷ್ಟು ದರ ಕಡಿತ

ಕರ್ನಾಟಕಕ್ಕಿಂತ ಈ ರಾಜ್ಯಗಳಲ್ಲಿ ಮದ್ಯಗಳ ಬೆಲೆ ಶೇಕಡ 30ರಿಂದ 40ರಷ್ಟು ಕಡಿಮೆ ಇದೆ.

ಆ ರಾಜ್ಯಗಳಲ್ಲಿನ ದರಗಳನ್ನೇ ಇಲ್ಲಿಯೂ ನೀಡುವುದರಿಂದ ಈ ಮಾದರಿಯ ಪಾನೀಯಗಳು ಮಾರಾಟವಾಗಿ ರಾಜ್ಯ ಬೊಕ್ಕಸಕ್ಕೆ ಹೆಚ್ಚು ಸಂಪನ್ಮೂಲ ಕ್ರೋಡೀಕರಣವಾಗುತ್ತದೆ ಎಂಬ ಲೆಕ್ಕಾಚಾರ.

ಅಲ್ಲದೆ, ಹೊಸ ಬಾರ್ ಮತ್ತು ವೈನ್ ಶಾಪ್‌ಗಳನ್ನು ತೆರೆಯುವ ಪ್ರಸ್ತಾವವನ್ನೂ ಇಟ್ಟಿದ್ದಾರೆ.

ಸಂಪನ್ಮೂಲ ಕ್ರೋಡೀಕರಣಕ್ಕಾಗಿ ಖಾಲಿ ಅಥವಾ ಲಭ್ಯವಿರುವ ಮದ್ಯದ ಪರವಾನಗಿಗಳನ್ನು ಪಾರದರ್ಶಕ ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಹಂಚಿಕೆ ಮಾಡುವುದಾಗಿ ತಿಳಿಸಿದ್ದಾರೆ.

ಮಾಸಿಕ ಗೌರವಧನ ಹೆಚ್ಚಳ

ಒಂದೆಡೆ ಪಾನಪ್ರಿಯರಿಗೆ ಬಂಪರ್ ಕೊಡುಗೆ ನೀಡುವುದಾಗಿ ಪ್ರಸ್ತಾಪ ಮಾಡಿರುವ ಮುಖ್ಯಮಂತ್ರಿ ಅವರು, ಅಸಂಘಟಿತ ಕಾರ್ಮಿಕ ವರ್ಗಕ್ಕೂ ಒಂದಲ್ಲಾ ಒಂದು ರೀತಿ ಮಾಸಿಕ ಗೌರವಧನ ಹೆಚ್ಚಳ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಅನುದಾನ ಮುಂದುವರಿಸಿರುವುದರ ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಮುಜರಾಯಿ ದೇವಾಲಯ ಅರ್ಚಕರು, ಕ್ರೀಡಾಪಟುಗಳು ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಮಾಸಾಶನ ಹೆಚ್ಚಳ ಮಾಡಿದ್ದಾರೆ.

ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿನ ಪ್ರವೇಶ ದರವನ್ನು 200 ರೂ.ಗಳಿಗೆ ಸೀಮಿತಗೊಳಿಸಿ ಸಿನೆಮಾ ಪ್ರಿಯರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.

ದೇವಾಲಯಗಳ ಅರ್ಚಕರಿಗೂ ಖುಷಿ

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ಅರ್ಚಕರಿಗೆ ನೀಡುತ್ತಿರುವ ಗೌರವಧನವನ್ನು ವಾರ್ಷಿಕ 60,000 ದಿಂದ 72,000 ರೂ.ಗೆ ಏರಿಸಿದ್ದಾರೆ.

ನಿವೃತ್ತಿ ಹೊಂದಿದ ಅಂತರರಾಷ್ಟ್ರೀಯ ಕುಸ್ತಿ ಪಟುಗಳ ಮಾಸಾಶನವನ್ನು 6,000 ರೂ.ಗೆ, ರಾಷ್ಟ್ರಮಟ್ಟದ ಕುಸ್ತಿ ಪಟುಗಳಿಗೆ 5,000 ಹಾಗೂ ರಾಜ್ಯಮಟ್ಟದ ಕುಸ್ತಿ ಪಟುಗಳಿಗೆ 4,500 ರೂ.ಗೆ ಹೆಚ್ಚಳ ಮಾಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನವನ್ನು ಅನುಕ್ರಮವಾಗಿ 1,000 ಹಾಗೂ 750 ರೂ. ಹೆಚ್ಚಿಸಿದ್ದಾರೆ.

ಮಕ್ಕಳ ಪೌಷ್ಠಿಕ ಆಹಾರ

ಎಚ್‌ಐವಿ ಸೋಂಕಿತ ಮತ್ತು ಬಾಧಿತ ಮಕ್ಕಳ ಪೌಷ್ಠಿಕ ಆಹಾರ ಮತ್ತು ಶಿಕ್ಷಣ ಪ್ರೋತ್ಸಾಹಿಸಲು ಪ್ರಸ್ತುತ ನೀಡುತ್ತಿರುವ ಮಾಸಿಕ ಸಹಾಯಧನವನ್ನು1,000 ದಿಂದ 2,000 ರೂ.ಗೆ ಹೆಚ್ಚಳ ಮಾಡಿದ್ದಾರೆ.

ಜಾನುವಾರುಗಳ ಆಕಸ್ಮಿಕ ಸಾವಿನ ಪರಿಹಾರವಾಗಿ ಹಸು-ಕರುಗಳ ಸಾವಿಗೆ ಪರಿಹಾರಧನವನ್ನು 15,000 ರೂ.ಗೆ, ಅದೇ ರೀತಿ ಕುರಿ ಮೇಕೆಗೆ 7,500 ರೂ.ಗೆ ಏರಿಕೆ ಮಾಡಲಾಗಿದೆ.

ಶಾಲಾ ಮಕ್ಕಳ ಅಪೌಷ್ಠಿಕತೆ ನಿವಾರಿಸುವಲ್ಲಿ ವಾರದಲ್ಲಿ ಎರಡು ದಿನ ವಿತರಿಸಲಾಗುವ ಮೊಟ್ಟೆ ಮತ್ತು ಬಾಳೆ ಹಣ್ಣನ್ನು ವಾರದ ಆರು ದಿನಗಳೂ ನೀಡುವುದಾಗಿ ಪ್ರಕಟಿಸಿದ್ದಾರೆ.

ಅತಿಥಿ ಶಿಕ್ಷಕರ ಮಾಸಿಕ ಗೌರವಧನ

ಸರ್ಕಾರಿ ಪ್ರಾಥಮಿಕ ಮತ್ತು ಪೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸಲಾಗಿದೆ.

ಅದೇ ರೀತಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೂ 1,000 ರೂ.ಗಳ ಹೆಚ್ಚಳ ಮಾಡಲಾಗಿದೆ.

ಜನಪ್ರತಿನಿಧಿಗಳ ಕೂಗಿಗೂ ತಮ್ಮ ಮುಂಗಡಪತ್ರದಲ್ಲಿ ಮನ್ನಣೆ ನೀಡಿರುವ ಮುಖ್ಯಮಂತ್ರಿ ಅವರು, ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ ರೂ. ತೆಗೆದಿರಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ಮಾತೃ ಭಾಷೆ ಜೊತೆಗೆ ಆಂಗ್ಲ ಭಾಷೆ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗ ಆರಂಭಿಸುವುದಾಗಿ ಹೇಳಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahkarnataka state budget 2025-26liquor prices slashed
0 FacebookTwitterPinterestEmail
admin

previous post
ಡಿ.ಕೆ.ಶಿವಕುಮಾರ್-ಕೆ.ಎನ್.ರಾಜಣ್ಣ ಬಹಿರಂಗ ಕಾದಾಟ
next post
ಕರ್ನಾಟಕ ಬಜೆಟ್ ಬೇರೆ ರಾಜ್ಯಗಳಿಗೆ ಮಾದರಿ

You may also like

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (562)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,055)
  • ರಾಜ್ಯ (2,370)
  • ರಾಷ್ಟ್ರ (2,334)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026

KMS Special

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್...

September 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ