Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರನ್ಯಾ ರಾವ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

by admin March 11, 2025
written by admin March 11, 2025 0 comments 1 minutes read
0FacebookTwitterPinterestEmail
148

ಬೆಂಗಳೂರು:ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ರನ್ಯಾ ರಾವ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ, ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದೆ.

ದೆಹಲಿಯಿಂದ ಬಂದ ಇಬ್ಬರು ಅಧಿಕಾರಿಗಳು ರಾಜ್ಯದಲ್ಲಿನ ಸಿಬಿಐ ಕೇಂದ್ರ ಕಚೇರಿ ಸಿಬ್ಬಂದಿ ಜೊತೆಗೂಡಿ ನಿನ್ನೆ ರಾತ್ರಿ ನಗರದ ಲ್ಯಾವೆಲ್ಲಿ ರಸ್ತೆಯಲ್ಲಿನ ಅವರ ಫ್ಲ್ಯಾಟ್ ಮತ್ತು ವಿಕ್ಟೋರಿಯಾ ಲೇಔಟ್‌ನಲ್ಲಿನ ಕಚೇರಿ ಪರಿಶೀಲಿಸಿದರು.

ಎಚ್ಚೆತ್ತ ಸರ್ಕಾರ

ಪ್ರಕರಣವನ್ನು ಸಿಬಿಐ ಕೈಗೆತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸರ್ಕಾರ ರನ್ಯಾ ರಾವ್ ತಂದೆ, ಪೋಲಿಸ್ ಮಹಾನಿರ್ದೇಶಕ ರಾಮಚಂದ್ರ ರಾವ್ ಪಾತ್ರ ಕುರಿತು ತನಿಖೆಗೆ ಆದೇಶಿಸಿತು.

ಮತ್ತೊಂದೆಡೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯ ಪೋಲಿಸರ ವೈಫಲ್ಯದ ಬಗ್ಗೆಯೂ ತನಿಖೆ ನಡೆಸುವಂತೆ ಸಿಐಡಿಗೆ ಸೂಚಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ತೀವ್ರಗೊಳಿಸುತ್ತಿದ್ದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಕರೆಸಿಕೊಂಡು ಚಿನ್ನ ಕಳ್ಳಸಾಗಣೆಗೆ ಸಂಬಂಧಿಸಿದಂತೆ ವಿವರ ಪಡೆದಿದ್ದಾರೆ.

ರನ್ಯಾ ಚಿನ್ನ ಸಾಗಣೆ: ತಂದೆ ಡಿಜಿಪಿ ಪಾತ್ರ ತನಿಖೆಗೆ ಆದೇಶ
ರಹಸ್ಯ ಮಾತುಕತೆ

ವಿಧಾನಸಭೆ ಕಲಾಪದಲ್ಲಿ ಭಾಗವಹಿಸಿದ್ದ ಡಾ.ಪರಮೇಶ್ವರ್ ಅವರನ್ನು ಮೊಗಸಾಲೆಯಲ್ಲಿನ ತಮ್ಮ ಕಚೇರಿಗೆ ಕರೆಸಿಕೊಂಡ ಮುಖ್ಯಮಂತ್ರಿ ರಹಸ್ಯ ಮಾತುಕತೆ ನಡೆಸಿದರು.

ಚಿನ್ನ ಕಳ್ಳಸಾಗಣೆಯಲ್ಲಿ ಇಬ್ಬರು ಸಚಿವರ ಪಾತ್ರ ಇದೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ಹಾಗೂ ಹಿರಿಯ ಪೋಲಿಸ್ ಅಧಿಕಾರಿಗಳ ಜೊತೆಗೆ ಕೆಲವು ಉದ್ದಿಮೆದಾರರು ಕೈಜೋಡಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಜೊತೆ ಮುಖ್ಯಮಂತ್ರಿ ಚರ್ಚಿಸಿದರೆನ್ನಲಾಗಿದೆ.

ಪ್ರಕರಣದಲ್ಲಿ ಸಚಿವರ ಪಾತ್ರ ಇದೆ ಎಂಬ ಮಾಹಿತಿ ಹೊರಬೀಳುತ್ತಿದ್ದಂತೆ ಮುಖ್ಯಮಂತ್ರಿ ಅವರು ನಿನ್ನೆಯೇ ಹಿರಿಯ ಪೋಲಿಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರಾದರೂ, ಗೃಹ ಸಚಿವರ ಜೊತೆ ಸಮಾಲೋಚನೆ ನಡೆಸಿರಲಿಲ್ಲ.

ಆಪ್ತರೊಂದಿಗೆ ಸಮಾಲೋಚನೆ

ಸಿಬಿಐ ರಂಗಪ್ರವೇಶ ಮಾಡುತ್ತಿದ್ದಂತೆ ಮುಖ್ಯಮಂತ್ರಿ ಅವರು, ಗೃಹ ಸಚಿವರೊಂದಿಗೆ ಮಾಹಿತಿ ಪಡೆದಿದ್ದಲ್ಲದೆ, ತಮ್ಮ ಕೆಲವು ಆಪ್ತ ಸಚಿವರೊಂದಿಗೆ ಸಮಾಲೋಚನೆ ಮಾಡಿದ್ದಾರೆ.

ದುಬೈನಿಂದ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ವಿಐಪಿ ದ್ವಾರದ ಮೂಲಕ ಹೊರಬರುತ್ತಿದ್ದ ರನ್ಯಾ ರಾವ್ ಅವರನ್ನು ಕೇಂದ್ರ ಕಂದಾಯ ಗುಪ್ತಚರ ವಿಭಾಗ ವಶಕ್ಕೆ ಪಡೆದು ತನಿಖೆ ನಡೆಸಿತ್ತು.

ಕಪ್ಪು ಹಣವನ್ನು ಬಿಳಿಯಾಗಿ ಪರಿವರ್ತಿಸುವಲ್ಲಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆಯಲ್ಲಿ ತೊಡಗಿದ್ದ ಮಾಹಿತಿ ಕಲೆ ಹಾಕಿದ್ದಲ್ಲದೆ, ಆರೋಪಿಗೆ ಪ್ರಭಾವೀ ರಾಜಕಾರಣಿಗಳು, ಹಿರಿಯ ಅಧಿಕಾರಿಗಳು ಹಾಗೂ ಉದ್ದಮೆದಾರರ ಸಂಪರ್ಕ ಇರುವುದು ತನಿಖೆಯಿಂದ ಬೆಳಕಿಗೆ ಬಂದಿತು.

ಬೆಂಗಳೂರು ಲೂಟಿಗೆ ಒಬ್ಬ ಘಜ್ನಿ ಹುಟ್ಟಿಕೊಂಡಿದ್ದಾನೆ !
ರಾಷ್ಟ್ರವ್ಯಾಪಿ ಹಬ್ಬಿದೆ

ಚಿನ್ನ ಕಳ್ಳಸಾಗಣೆ ಕೇವಲ ಬೆಂಗಳೂರಿಗೆ ಸೀಮಿತವಾಗದೆ, ರಾಷ್ಟ್ರವ್ಯಾಪಿ ಹಬ್ಬಿದೆ, ಅಲ್ಲದೆ, ದುಬೈ ವಿಮಾನ ನಿಲ್ದಾಣದಲ್ಲೂ ಆರೋಪಿಗೆ ಸಹಾಯ ಮಾಡಿದ್ದಾರೆ ಎನ್ನುವ ಮಾಹಿತಿಯನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇ.ಡಿ.)ಕ್ಕೆ ಕಂದಾಯ ಗುಪ್ತಚರ ವಿಭಾಗ ನೀಡಿತು.

ಕರ್ನಾಟಕದಲ್ಲಿ ಸಿಬಿಐ ತನಿಖೆಗೆ ಮುಕ್ತ ಅವಕಾಶವನ್ನು ರಾಜ್ಯ ಸರ್ಕಾರ ಕೊಡುವುದಿಲ್ಲ ಎಂಬ ಹಿನ್ನೆಲೆಯಲ್ಲಿ ಗುಪ್ತಚರ ವಿಭಾಗದ ದೂರನ್ನೇ ಸಿಬಿಐ ಸ್ವಯಂ ಪ್ರೇರಿತವಾಗಿ ದೆಹಲಿಯಲ್ಲಿ ದಾಖಲೆ ಮಾಡಿಕೊಂಡು ತನಿಖೆ ಕೈಗೆತ್ತಿಕೊಂಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
actress ranya raocbi raidcm siddaramaiahgold smugglingminister dr.g.parameshwar
0 FacebookTwitterPinterestEmail
admin

previous post
ರನ್ಯಾ ಚಿನ್ನ ಸಾಗಣೆ: ತಂದೆ ಡಿಜಿಪಿ ಪಾತ್ರ ತನಿಖೆಗೆ ಆದೇಶ
next post
ಕ್ಷೇತ್ರ ಪುನರ್ ವಿಂಗಡಣೆ: ಕೇಂದ್ರದ ನಿಲುವಿಗೆ ಖಂಡನೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ