Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಯತ್ನಾಳ್ ಉಚ್ಛಾಟನೆಯಲ್ಲಿ ಕುಟುಂಬದ ಪಾತ್ರ ಇಲ್ಲ

by admin March 29, 2025
written by admin March 29, 2025 0 comments 1 minutes read
0FacebookTwitterPinterestEmail
94

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ಪ್ರತಿಭಟಿಸಿ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲೀಂ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ಕಲ್ಪಿಸುವುದೂ ಸೇರಿದಂತೆ ಅವರ ಓಲೈಕೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.

ತುಷ್ಟೀಕರಣ ಸರ್ಕಾರ

ಬಡವರು, ರೈತರು, ಕೂಲಿಕಾರ್ಮಿಕರಿಗೆ ಕಾರ್ಯಕ್ರಮಗಳನ್ನು ಜಾರಿಗೊಳಿಸದೆ, ಕೇವಲ ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣಕ್ಕೆ ಸರ್ಕಾರ ಮುಂದಾಗಿದೆ.

ಸಿದ್ದರಾಮಯ್ಯ ಸರ್ಕಾರ ಬಂದ ದಿನದಿಂದಲೂ ಮುಸ್ಲೀಂ ಸಮುದಾಯವನ್ನು ಓಲೈಸುತ್ತಿದೆ, ಇವರಿಗೆ ಬೇರೆ ಸಮುದಾಯಗಳು ಕಾಣಿಸುತ್ತಿಲ್ಲವೆ ಎಂದು ಪ್ರಶ್ನಿಸಿದರು.

ಸರ್ಕಾರದ ಈ ನೀತಿ ವಿರೋಧಿಸಿ ಏಪ್ರಿಲ್ 2ರಿಂದ ಪಕ್ಷ ರಾಜ್ಯಾದ್ಯಂತ ಹೋರಾಟ ನಡೆಸಲಿದೆ.

ಹಿಂದೂತ್ವ ವಿರೋಧಿ ನೀತಿ

ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಹಿರಿಯ ಶಾಸಕರ ಜೊತೆಗೂಡಿ ಸರ್ಕಾರದ ಹಿಂದೂತ್ವ ವಿರೋಧಿ ನೀತಿಯನ್ನು ಜನರಿಗೆ ತಲುಪಿಸಲಾಗುವುದು.

ಪಕ್ಷದಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ವಿಷಯ ತಮಗಾಗಲಿ ಅಥವಾ ತಮ್ಮ ತಂದೆ ಯಡಿಯೂರಪ್ಪ ಅವರಿಗಾಗಲಿ ಸಂಬಂಧಿಸಿಲ್ಲ, ಇದು ವರಿಷ್ಠರ ತೀರ್ಮಾನ ಎಂದರು.

ತಾವು ರಾಜ್ಯಾಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ಯತ್ನಾಳ್ ನಮ್ಮ ಕುಟುಂಬದ ವಿರುದ್ಧ ಹಾದಿಬೀದಿಯಲ್ಲಿ ಟೀಕೆ ಮಾಡಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.

ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದ್ದೆ

ವರಿಷ್ಠರು ಮೇಲಿಂದ ಮೇಲೆ ಎಚ್ಚರಿಕೆ ನೀಡಿದರೂ ತಮ್ಮ ನಡವಳಿಕೆ ಬದಲಾಯಿಸಿಕೊಳ್ಳಲಿಲ್ಲ, ರಾಜ್ಯಾಧ್ಯಕ್ಷನಾಗಿ ನಾನೇ ಸ್ವತಃ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ವೇಳೆ ಹಾಗೂ ನಂತರ ಅವರನ್ನು ಸಂಪರ್ಕಿಸಿ, ಏನೇ ಸಮಸ್ಯೆ ಇದ್ದರೂ ಮುಖಾಮುಖಿ ಭೇಟಿ ಮಾಡಿ, ಕುಳಿತು ಬಗೆಹರಿಸಿಕೊಳ್ಳೋಣ ಎಂಬುದಾಗಿ ಮನವಿ ಮಾಡಿದ್ದೆ.

ಅಲ್ಲದೆ, ಔತಣಕೂಟಕ್ಕೂ ಅವರನ್ನು ಖುದ್ದಾಗಿ ಆಹ್ವಾನಿಸಿದ್ದೆ, ಆದರೆ, ಅವರು ಎಂದೂ ನನ್ನ ಆಹ್ವಾನಕ್ಕೆ ಮನ್ನಣೆ ನೀಡಲಿಲ್ಲ.

ಇಷ್ಟೆಲ್ಲಾ ಆದರೂ, ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ರಾಜ್ಯಾಧ್ಯಕ್ಷನಾಗಿ ವರಿಷ್ಠರಿಗೆ ದೂರು ನೀಡಲಿಲ್ಲ.

ಎರಡು ಬಾರಿ ನೋಟಿಸ್

ರಾಜ್ಯ ಬಿಜೆಪಿ ಬೆಳವಣಿಗೆಗಳನ್ನು ಗಮನಿಸಿದ ವರಿಷ್ಠರು ಅವರಿಗೆ ಎರಡು ಬಾರಿ ನೋಟಿಸ್ ನೀಡಿ ನಂತರ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ಉಚ್ಛಾಟನೆ ವಿಷಯದಲ್ಲಿ ನಮ್ಮ ಕುಟುಂಬದ ಪಾತ್ರ ಇಲ್ಲ, ಸಾರ್ವಜನಿಕವಾಗಿ ಇನ್ನು ಮುಂದಾದರೂ ಇಂತಹ ತಪ್ಪು ಅಭಿಪ್ರಾಯಗಳು ಬರಬಾರದು ಎಂದು ಮನವಿ ಮಾಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
basanagowda patil yatnalbjp noticebjp state president b y vijayendra
0 FacebookTwitterPinterestEmail
admin

previous post
ಸಿದ್ದರಾಮಯ್ಯ ನಾಯಕತ್ವ: ಹೈಕಮಾಂಡ್‌ಗೆ ಡಿಕೆಶಿ ವರದಿ
next post
ಯುಗಾದಿ ನಂತರ ಸಿದ್ದರಾಮಯ್ಯಗೆ ದೆಹಲಿ ಬುಲಾವ್

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ