Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ವಿರುದ್ಧ 500 ಕೋಟಿ ರೂ. ಕಿಕ್‌ಬ್ಯಾಕ್

by admin April 9, 2025
written by admin April 9, 2025 0 comments 2 minutes read
0FacebookTwitterPinterestEmail
188

ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ

ಬೆಂಗಳೂರು:ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 8 ಗಣಿ ಗುತ್ತಿಗೆಗಳನ್ನು ಹರಾಜು ಮಾಡುವ ಬದಲು, ಗುತ್ತಿಗೆ ನವೀಕರಿಸಿ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದು ಸರ್ಕಾರಕ್ಕೆ 5000 ಕೋಟಿ ರೂ. ನಷ್ಟ ಉಂಟು ಮಾಡಿದ್ದು ಈ ಬಗ್ಗೆ ವಿಚಾರಣೆಗೆ ಅನುಮತಿ ನೀಡುವಂತೆ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬುವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಇವರ ದೂರಿನ ಆಧಾರದ ಮೇಲೆ ರಾಜಭವನ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಮುಂದಿನ ಕ್ರಮಕ್ಕಾಗಿ ಸಾಲಿಸಿಟರ್ ಜನರಲ್ ಅವರ ಅಭಿಪ್ರಾಯ ಕೇಳಿದೆ.

ಗಣಿ ಗುತ್ತಿಗೆ ನವೀಕರಣ

ರಾಮಗಡ್, ತುಮಕೂರು ಮಿನರಲ್ಸ್, ಕರ್ನಾಟಕ ಲಿಮ್ಕೊ, ಕಾರಿಗನೂರು ಮಿನರಲ್ಸ್ ಸೇರಿದಂತೆ 8 ಕಂಪನಿಗಳಿಗೆ ಗುತ್ತಿಗೆ ನವೀಕರಿಸಿ ಸರ್ಕಾರಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಕೋಟ್ಯಂತರ ರೂ. ನಷ್ಟ ಉಂಟು ಮಾಡಿದ್ದಾರೆ.

ಈ ಕಂಪನಿಗಳ ಗುತ್ತಿಗೆ ನವೀಕರಿಸಿದ ನಂತರ ಸಿದ್ದರಾಮಯ್ಯ ಕುಟುಂಬದ ಆಸ್ತಿ ಅದರ ಹಿಂದಿನ ವರ್ಷಕ್ಕಿಂತ ಗಣನೀಯವಾಗಿ ಹೆಚ್ಚಳವಾಗಿದೆ.

ಇದರ ಮಾಹಿತಿಯನ್ನು ಮತ್ತು ದಾಖಲೆಗಳನ್ನು ರಾಜ್ಯಪಾಲರಿಗೆ ಸಲ್ಲಿಸಲು ಸಮಯಾಕಾಶ ಕೋರಿ ರಾಮಮೂರ್ತಿ ಗೌಡ ರಾಜಭವನಕ್ಕೆ ಮನವಿ ಮಾಡಿದ್ದರು.

ದಾಖಲೆಗಳ ಪರಿಶೀಲನೆ

ಇವರ ಕೋರಿಕೆ ಪರಿಗಣಿಸಿದ ರಾಜ್ಯಪಾಲರು ಏಪ್ರಿಲ್ 1 ರಂದು ದೂರುದಾರರನ್ನು ಕರೆಸಿಕೊಂಡು ಮಾಹಿತಿ ಮತ್ತು ದಾಖಲೆಗಳನ್ನು ಅಧಿಕಾರಿಗಳ ಜೊತೆಗೂಡಿ ಪರಿಶೀಲಿಸಿದರು.

ತದನಂತರ ಈ ಎಲ್ಲಾ ದಾಖಲೆಗಳನ್ನು ಕೇಂದ್ರದ ಸಾಲಿಸಿಟರ್ ಜನರಲ್ ಅವರಿಗೆ ಕಳುಹಿಸಿ ಅಭಿಪ್ರಾಯ ಕೇಳಿದ್ದಾರೆ.

ಈ ಆರೋಪಕ್ಕೆ ಸಂಬಂಧಿಸಿದಂತೆ ರಾಜಭವನ ಸರ್ಕಾರಕ್ಕೆ ಪತ್ರವೂ ಬರೆದಿಲ್ಲ, ಮಾಹಿತಿಯನ್ನೂ ಕೋರಿಲ್ಲ.

ಪತ್ರ ಬರೆದು ವಿವರಣೆ

ಈ ಹಿಂದೆಲ್ಲಾ ದೂರುಗಳು ಬಂದಾಗ ಸರ್ಕಾರದ ಮುಖ್ಯಕಾರ್ಯದರ್ಶಿ ಅಥವಾ ಇಲಾಖಾ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ವಿವರಣೆ ಕೋರುತ್ತಿದ್ದರು.

ರಾಜಭವನದಿಂದ ಬರುವ ಇಂತಹ ಪತ್ರಗಳಿಗೆ ಅಧಿಕಾರಿಗಳು ಉತ್ತರ ನೀಡಬಾರದೆಂದು, ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡ ಸಿದ್ದರಾಮಯ್ಯ ಸರ್ಕಾರ, ಆ ಪತ್ರಗಳಿಗೆ ಸಂಪುಟವೇ ಉತ್ತರಿಸಬೇಕು ಎಂದಿತ್ತು.

ಬೆಳವಣಿಗೆ ನಂತರ ರಾಜ್ಯಪಾಲರು ರೀ-ಡೂ ಸೇರಿದಂತೆ 26 ಆರೋಪಗಳಿಗೆ ಸಂಬಂಧಿಸಿದಂತೆ ವಿವರಣೆ ಕೋರಿ ಸರ್ಕಾರದಿಂದ ಉತ್ತರ ಬಾರದ ಕಾರಣ ಈ ಬಾರಿ ನೇರವಾಗಿ ಸಾಲಿಸಿಟರ್ ಅಭಿಪ್ರಾಯಕ್ಕೆ ಮುಂದಾಗಿದ್ದಾರೆ.

ಪ್ರಾಸಿಕ್ಯೂಷನ್‌ಗೆ ಅನುಮತಿ

ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ವಿಧಿ 7, 9, 11, 12 ಮತ್ತು 15ರಡಿ ಪ್ರಾಸಿಕ್ಯೂಷನ್‌ಗೆ ಅನುಮತಿಗೆ ಕೋರಲಾಗಿದೆ.

ಅಲ್ಲದೆ, ಭಾರತೀಯ ನ್ಯಾಯ ಸಂಹಿತೆ ವಿಧಿ 59, 61, 42, 201, 227, 228, 229, 239, 314, 316 (5) 318 (1), 319, 322, 324 (2), 324 (3), 335, 336, 338, 340ರ ಅನ್ವಯ ಪೂರ್ವಾನುಮತಿ ನೀಡುವಂತೆಯೂ ಕೋರಿದ್ದಾರೆ.

ಗಣಿ ಗುತ್ತಿಗೆ ನವೀಕರಣಕ್ಕೂ ಮುನ್ನ ಸಿದ್ದರಾಮಯ್ಯ ಆದಾಯದಲ್ಲಿ ಏರಿಕೆ ಆಗಿರಲಿಲ್ಲ, ನಂತರದ ವರ್ಷಗಳಲ್ಲಿ ಅವರ ಆದಾಯದಲ್ಲಿ ಗಣನೀಯ ಏರಿಕೆ ಆಗಿದೆ, ಅವರೂ ಮತ್ತು ಅವರ ಕುಟುಂಬ ಸದಸ್ಯರ ಸ್ಥಿರ ಮತ್ತು ಚರಾಸ್ತಿಗಳಲ್ಲೂ ಏರಿಕೆಯಾಗಿವೆ, ಇವುಗಳ ಮೊತ್ತ ಹಲವು ಕೋಟಿ ರೂ.ಗಳಾಗಿವೆ ಎಂದು ದಾಖಲೆಗಳನ್ನು ನೀಡಿದ್ದಾರೆ.

ಹರಾಜು ಪ್ರಕ್ರಿಯೆ

ಹರಾಜು ಪ್ರಕ್ರಿಯೆ ಮುಂದುವರೆಸಿದ್ದರೆ ಪ್ರತಿ ಗಣಿ ಗುತ್ತಿಗೆಯಿಂದ 500 ಕೋಟಿ ರೂ. ಆದಾಯ ಸರ್ಕಾರಕ್ಕೆ ಬರುತ್ತಿತ್ತು.

ಸುಮಾರು 4,000 ಕೋಟಿ ರೂ. ನೇರವಾಗಿ ಆದಾಯ ತಪ್ಪಿರುವುದಲ್ಲದೆ, ವಿವಿಧ ತೆರಿಗೆಗಳಿಂದ ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ ಎಂದು ದೂರಿದ್ದಾರೆ.

ಎಂಟು ಗಣಿ ಕಂಪನಿಗಳ ಗುತ್ತಿಗೆ ನವೀಕರಣ ಅರ್ಜಿಗಳು 10 ವರ್ಷದಿಂದಲೂ ಸಂಬಂಧಪಟ್ಟ ಪ್ರಾಧಿಕಾರದ ಮುಂದೆಯೇ ಇದ್ದವು, ಅಕ್ರಮ ಗಣಿಗಾರಿಕೆ ನಡೆಸಿದ್ದ ಕಾರಣಕ್ಕೆ ಗಣಿ ಗುತ್ತಿಗೆ ನವೀಕರಣದ ಅರ್ಜಿಗಳನ್ನು ಸಂಬಂಧಪಟ್ಟ ಪ್ರಾಧಿಕಾರಗಳು ಇತ್ಯರ್ಥ ಮಾಡದೆ ಬಾಕಿ ಉಳಿಸಿಕೊಂಡಿದ್ದವು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahmines licencers.500 crore kick back
0 FacebookTwitterPinterestEmail
admin

previous post
ಖನಿಜಯುಕ್ತ ಬಾಟಲ್ ನೀರು ಆರೋಗ್ಯಕ್ಕೆ ಮಾರಕ
next post
ಮತ್ತೆ ಕಾಡಲಿದೆ ಸಾಮಾಜಿಕ-ಶೈಕ್ಷಣಿಕ ವರದಿ ಭಯ !

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ