Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಾಮಾಜಿಕ, ಆರ್ಥಿಕ ಸಮೀಕ್ಷೆ ವರದಿ ಏ.17ಕ್ಕೆ ಚರ್ಚೆ

by admin April 11, 2025
written by admin April 11, 2025 0 comments 2 minutes read
0FacebookTwitterPinterestEmail
140

ಬೆಂಗಳೂರು:ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮತ್ತು ದತ್ತಾಂಶಗಳ ವರದಿಯನ್ನು ಸಚಿವ ಸಂಪುಟ ಇಂದಿಲ್ಲಿ ಅಂಗೀಕರಿಸಿದೆ.

ಅಂಗೀಕಾರಗೊಂಡ ವರದಿ ಅನುಷ್ಟಾನ ಸಂಬಂಧದ ಆಗು-ಹೋಗುಗಳ ಬಗ್ಗೆ ಚರ್ಚಿಸಲು ಏಪ್ರಿಲ್ 17ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಕಳೆದ 10 ವರ್ಷಗಳ ಹಿಂದೆ ಸಿದ್ಧಗೊಂಡು 2024ರಲ್ಲಿ ಪರಿಷ್ಕರಣೆಗೊಂಡ ವರದಿಯನ್ನು ಅಂಗೀಕರಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ರಾಜಕೀಯ ಚಾಣಕ್ಯತನ

ವರದಿಗೆ ಅಡ್ಡಿ, ಆತಂಕ, ವಿರೋಧ ಎದುರಾದರೂ ಲೆಕ್ಕಿಸದೆ, ದತ್ತಾಂಶವನ್ನು ಅಂಗೀಕರಿಸುವಲ್ಲಿ ಸಿದ್ದರಾಮಯ್ಯ ರಾಜಕೀಯ ಚಾಣಕ್ಯತನ ತೋರಿದ್ದಾರೆ.

ಸಮೀಕ್ಷಾ ವರದಿ ಲಕೋಟೆ ಬಿಚ್ಚಿದ ನಂತರ ಸಚಿವರುಗಳು ತಮ್ಮದೇ ಆದ ಅಭಿಪ್ರಾಯಗಳನ್ನು ಸಭೆಯ ಮುಂದಿಟ್ಟರು.

ಇದೆಲ್ಲವನ್ನೂ ಆಲಿಸಿದ ಮುಖ್ಯಮಂತ್ರಿ ಅವರು, ವರದಿ ಬಗ್ಗೆ ಚರ್ಚಿಸಲು ವಿಶೇಷ ಸಭೆ ಕರೆಯೋಣ, ಅಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳೋಣ, ಮಾಧ್ಯಮಗಳಲ್ಲಿ ಪ್ರಕಟಗೊಳ್ಳುತ್ತಿರುವ ಅಂಕಿ-ಅಂಶಗಳು ಅಧಿಕೃತವಲ್ಲ, ಮುಖ್ಯಕಾರ್ಯದರ್ಶಿಗಳು ನೀಡುವ ಟಿಪ್ಪಣಿ ಮತ್ತು ವರದಿಯನ್ನು ಅಧ್ಯಯನ ಮಾಡಿ ಮುಂದಿನ ಸಭೆಗೆ ಬನ್ನಿ ಎಂದಿದ್ದಾರೆ.

‘ದಲಿತರನ್ನು ಕಾಂಗ್ರೆಸ್ ತುಳಿಯುತ್ತಲೇ ಬಂದಿದೆ’
ಮುಖ್ಯಕಾರ್ಯದರ್ಶಿಗೆ ಆದೇಶ

ದತ್ತಾಂಶಗಳ ಬಗ್ಗೆ ಅಧಿಕೃತವಾಗಿ ಸರ್ಕಾರ ಮಾಹಿತಿ ನೀಡಿಲ್ಲ, ಆದರೆ, ಸಂಪುಟದ ಎಲ್ಲಾ ಸಹೋದ್ಯೋಗಿಗಳು ಹಾಗೂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ವರದಿಯ ಪ್ರತಿ ತಲುಪಿಸುವಂತೆ ಮುಖ್ಯಕಾರ್ಯದರ್ಶಿ ಅವರಿಗೆ ಸಭೆಯಲ್ಲೇ ಮುಖ್ಯಮಂತ್ರಿ ಆದೇಶ ಮಾಡಿದರು.

ಮುಂದಿನ ಗುರುವಾರ ನಡೆಯಲಿರುವ ಸಂಪುಟ ಸಭೆ ವೇಳೆಗೆ ಸಚಿವರುಗಳು ಮುಖ್ಯಕಾರ್ಯದರ್ಶಿ ನೀಡುವ ಟಿಪ್ಪಣಿ ಮತ್ತು ವರದಿಯ ಅಧ್ಯಯನ ನಡೆಸಿ ವಿಶೇಷ ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕು.

ಅಭಿಪ್ರಾಯ ವ್ಯಕ್ತವಾದ ನಂತರ ಎಲ್ಲಾ ಕೋನಗಳಿಂದ ಸಾಧಕ-ಬಾಧಕ ಚರ್ಚಿಸಿ, ವರದಿ ಅನುಷ್ಟಾನ ಮಾಡಬೇಕೆ ಅಥವಾ ಪರಿಷ್ಕರಿಸಬೇಕೆ ಎಂಬ ಬಗ್ಗೆ ಅಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದೆ.

ವರದಿ ಸಂಪುಟ ಅಂಗೀಕಾರ

ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಹಿಂದುಳಿದ ವರ್ಗಗಳ ಆಯೋಗಗಳ ಅಧ್ಯಕ್ಷರಾದ ಕಾಂತರಾಜ್ 2015ರಲ್ಲಿ, ಜಯಪ್ರಕಾಶ್ ಹೆಗಡೆ 2024ರಲ್ಲಿ ನೀಡಿದ ವರದಿಗಳನ್ನು ಸಂಪುಟ ಅಂಗೀಕರಿಸಿದೆ.

ಸಮೀಕ್ಷೆಯಡಿ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ಪ್ರಾತಿನಿಧ್ಯ ಮತ್ತು ಔದ್ಯೋಗಿಕ ಸ್ಥಿತಿಗತಿಗಳ ಬಗ್ಗೆ 54 ಮಾನದಂಡಗಳನ್ನು ಒಳಗೊಂಡ ಅನುಸೂಚಿ ೩ರಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ.

’ಸಾಕಪ್ಪಾ ಸಾಕು, ಕಾಂಗ್ರೆಸ್ ಸರ್ಕಾರ’ : ಜೆಡಿಎಸ್
1.60 ಲಕ್ಷ ಸಿಬ್ಬಂದಿ ಬಳಕೆ

ರಾಜ್ಯದಲ್ಲಿ 2015ರಲ್ಲಿ 6.35 ಕೋಟಿ ಜನಸಂಖ್ಯೆಯನ್ನು ಸರ್ವೆ ಮಾಡಲು ಅಂದಾಜಿಸಲಾಗಿತ್ತು, ಇದಕ್ಕಾಗಿ 1.60 ಲಕ್ಷ ಸಿಬ್ಬಂದಿಯನ್ನು ಬಳಕೆ ಮಾಡಲಾಗಿತ್ತು.

ಈ ಮೂಲಕ 1.35 ಕುಟುಂಬಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ, ಸಮೀಕ್ಷೆಯಲ್ಲಿ ಲಭ್ಯವಾಗಿರುವ ಅಂಕಿ-ಅಂಶಗಳನ್ನು ಬಿಇಎಲ್ ಸಂಸ್ಥೆ ಮೂಲಕ ಗಣಕೀಕರಣಗೊಳಿಸಲಾಗಿದೆ.

ಕಾಂತರಾಜ್ ನೇತೃತ್ವದ ಆಯೋಗ ನೀಡಿದ ವರದಿಯನ್ನು ಆಧಾರವಾಗಿಟ್ಟುಕೊಂಡು ಜಯಪ್ರಕಾಶ್ ಹೆಗಡೆ ಆಯೋಗ ವರದಿ ಸಿದ್ಧಪಡಿಸಿ ನೀಡಿದ ವರದಿ ಅಂಗೀಕರಿಸಲಾಗಿದೆ ಎಂದರು.

ವಿಶೇಷ ಮಂತ್ರಿಮಂಡಲ ಸಭೆ

ಮುಂದೇನು ಕ್ರಮ ಕೈಗೊಳ್ಳಬೇಕೆಂಬ ಕುರಿತು ಚರ್ಚಿಸಲು ವಿಶೇಷ ಮಂತ್ರಿಮಂಡಲ ಸಭೆ ಕರೆಯಲಾಗಿದೆ.

ವರದಿ ಅಂಗೀಕಾರ ವಿಷಯದಲ್ಲಿ ಭಿನ್ನಾಭಿಪ್ರಾಯ ಇರಲಿಲ್ಲ, ಸರ್ವಸಮ್ಮತವಾಗಿ ಸಮೀಕ್ಷಾ ವರದಿಯನ್ನು ಅಂಗೀಕರಿಸಿದೆ.

ಇದರಲ್ಲಿ ಕೆಲವು ಟಿಪ್ಪಣಿಗಳನ್ನು ಮಾಡುವಂತೆ ಮುಖ್ಯಕಾರ್ಯದರ್ಶಿಗಳಿಗೆ ಸಭೆ ಸೂಚಿಸಿದೆ, ಅಲ್ಲಿಯವರೆಗೆ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಹಿಂದುಳಿದ ಆಯೋಗಗಳ ವರದಿಯ ಲಕೋಟೆಯನ್ನು ಅಂಗೀಕರಿಸಿ ಸಭೆಯ ಮುಂದಿಡಲಾಗಿದೆ, ಆದರೆ, ವಿಶೇಷ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವವರೆಗೂ ಸರ್ಕಾರ ಈ ಬಗ್ಗೆ ಏನನ್ನೂ ಹೇಳುವುದಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cabinetcaste censuscm siddaramaiahminister h k patil
0 FacebookTwitterPinterestEmail
admin

previous post
‘ದಲಿತರನ್ನು ಕಾಂಗ್ರೆಸ್ ತುಳಿಯುತ್ತಲೇ ಬಂದಿದೆ’
next post
ಪಿಯು 2, 3ನೇ ಪರೀಕ್ಷೆ ಅಭ್ಯರ್ಥಿಗಳೂ ಸಿಇಟಿಗೆ ಅರ್ಹ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ