Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಯತ್ನಾಳ್ ಸವಾಲಿಗೆ ಶಿವಾನಂದ ಪಾಟೀಲ್ ರಾಜೀನಾಮೆ

by admin May 2, 2025
written by admin May 2, 2025 0 comments 1 minutes read
0FacebookTwitterPinterestEmail
507

ಬೆಂಗಳೂರು:ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಇಂದು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.

ಅಂಗೀಕಾರಕ್ಕೆ ಷರತ್ತು

ರಾಜೀನಾಮೆ ಅಂಗೀಕಾರಕ್ಕೆ ಮುನ್ನ ಕೆಲವು ಷರತ್ತುಗಳನ್ನು ಸಭಾಧ್ಯಕ್ಷರ ಮುಂದಿಟ್ಟಿದ್ದಾರೆ.

ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕ ಸ್ಥಾನಕ್ಕೆ ನೀಡುವ ರಾಜೀನಾಮೆ ಅಂಗೀಕಾರದ ನಂತರ ತಮ್ಮ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ.

ಸಭಾಧ್ಯಕ್ಷರಿಗೆ ರಾಜೀನಾಮೆ ಪತ್ರ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಾನಂದ ಪಾಟೀಲ್, ನನಗೆ ಯತ್ನಾಳ್ ಹಾಕಿರುವ ಸವಾಲು ಸ್ವೀಕರಿಸಿ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ.

ಪಕ್ಷಕ್ಕೆ ಸಂಬಂಧವಿಲ್ಲ

ಪಕ್ಷ ಮತ್ತು ಸರ್ಕಾರಕ್ಕೂ ನನ್ನ ರಾಜೀನಾಮೆಗೂ ಸಂಬಂಧವಿಲ್ಲ, ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆ ಅಂಗೀಕಾರದಿಂದ ಮಂತ್ರಿ ಸ್ಥಾನವೂ ಹೋಗುತ್ತದೆ.

ನಾನು ತೆಗೆದುಕೊಂಡ ತೀರ್ಮಾನವನ್ನು, ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಗಮನಕ್ಕೂ ತಂದಿಲ್ಲ, ಇದು ನನ್ನ ವೈಯಕ್ತಿಕ ವಿಚಾರ.

ವಿಜಯಪುರದಲ್ಲಿ ಮುಸ್ಲೀಮರು ಯತ್ನಾಳ್ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ನಾನು ಭಾಗಿಯಾಗಿದ್ದು ನಿಜ, ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಈ ಸಮುದಾಯವನ್ನು ಅವರು ಮೇಲಿಂದ ಮೇಲೆ ಟೀಕಿಸುತ್ತಿದ್ದಾರೆ.

ಯತ್ನಾಳ್ ಮಾತಿಗೆ ಖಂಡನೆ

ಇತ್ತೀಚೆಗೆ ಮೊಹಮ್ಮದ್ ಪೈಗಂಬರ್ ಕುರಿತು ಯತ್ನಾಳ್ ಮಾತನಾಡಿದ್ದನ್ನು ಬಹಳಷ್ಟು ಮಂದಿ ಖಂಡಿಸಿದ್ದರು.

ಇದುವರೆಗೂ ಅವರು ಮಾಡಿರುವ ಟೀಕೆಗಳನ್ನು ಸಹಿಸಿಕೊಂಡಿದ್ದೇವೆ, ಆದರೆ, ಇನ್ನು ಸಹಿಸುವುದಿಲ್ಲ ಎಂದು ಮುಸ್ಲೀಮರು ಪ್ರತಿಭಟನೆ ಹಮ್ಮಿಕೊಂಡಿದ್ದರು, ಆ ಕಾರ್ಯಕ್ರಮದಲ್ಲಿ ನಾನೂ ಪಾಲ್ಗೊಂಡಿದ್ದೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರಿಗೂ ಆಹ್ವಾನವಿತ್ತು, ಆದರೆ, ಅವರು ಪಾಲ್ಗೊಂಡಿರಲಿಲ್ಲ, ನಾನು ಸಭೆಯಲ್ಲಿ ಭಾಗವಹಿಸಿದ್ದಕ್ಕೆ ಯತ್ನಾಳ್, ವೈಯ್ತಕಿಕವಾಗಿ ಅಲ್ಲದೆ, ನನ್ನ ಕುಟುಂಬವನ್ನೂ ಟೀಕಿಸಿದ್ದಾರೆ.

ಸವಾಲು ಸೀಕರಿಸಿದ್ದೇನೆ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷೇತರರಾಗಿ ಚುನಾವಣೆಯಲ್ಲಿ ನಿಂತು ಗೆಲ್ಲಲಿ ಎಂಬ ಸವಾಲು ಹಾಕಿದ್ದರು, ಅದನ್ನು ನಾನು ಸೀಕರಿಸಿದ್ದೇನೆ.

ಅವರು ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿ, ನಮ್ಮಿಬ್ಬರಿಂದ ತೆರವಾಗುವ ಕ್ಷೇತ್ರಗಳ ಪೈಕಿ ಅವರು ಯಾವ ಕ್ಷೇತ್ರದಿಂದ ಬಯಸುತ್ತಾರೋ ಅಲ್ಲಿಂದ ಕಣಕ್ಕಿಳಿಯಲು ನಾನು ಸಿದ್ಧ ಎಂದು ಸವಾಲು ಹಾಕಿದರು.

ನಾನು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಲ್ಲದೆ, ಪಕ್ಷೇತರನಾಗಿಯೂ ಚುನಾವಣೆ ಗೆದ್ದಿದ್ದೇನೆ, ನನಗೇನೂ ಭಯವಿಲ್ಲ, ನಾನು ಬಿಜೆಪಿಯಿಂದ ಸ್ಪರ್ಧಿಸಿದ್ದಾಗ ಯತ್ನಾಳ್ ಅವರನ್ನು ಸಂಸದರಾಗಿ ಆಯ್ಕೆಯಾಗಲು ನೆರವಾಗಿದ್ದೆ ಎಂದರು.

ಶಾಸಕರ ವೈಯಕ್ತಿಕ ಸವಾಲು

ಈ ಮಧ್ಯೆ ಸಭಾಧ್ಯಕ್ಷ ಯು.ಟಿ.ಖಾದರ್ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ, ಅವರಿಗೆ ಇನ್ನೊಬ್ಬ ಶಾಸಕರು ವೈಯಕ್ತಿಕ ಸವಾಲು ಹಾಕಿದ್ದಾರೆ.

ಸವಾಲು ಸ್ವೀಕಾರ ಮಾಡಿ ರಾಜೀನಾಮೆ ನೀಡಿದ್ದಾರೆ, ಸವಾಲು ಹಾಕಿದವರು ರಾಜೀನಾಮೆ ನೀಡಿದ ಬಳಿಕ ನನ್ನ ರಾಜೀನಾಮೆ ಅಂಗೀಕರಿಸಿ ಎಂದಿದ್ದಾರೆ.

ಅವರ ಆತ್ಮಗೌರವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ, ಸಂವಿಧಾನ ನಿಯಮಾವಳಿ ಪರಿಶೀಲಿಸಿ ಕ್ರಮ ಕೈಗೊಳ್ಳುವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
challenge to basana gowda patil yatnalcontest electionminister shivananda patil resignationspeaker u t khadar
0 FacebookTwitterPinterestEmail
admin

previous post
ಸಿದ್ದರಾಮಯ್ಯ ಉಚ್ಛಾಟನೆಗೆ ಧಮ್ ಇದೆಯಾ !
next post
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ