ಬೆಂಗಳೂರು:ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ,
ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಮತಗಳ್ಳತನ ಕುರಿತು ಇಡೀ ರಾಷ್ಟ್ರಾದ್ಯಂತ ಹೋರಾಟಕ್ಕೆ ಮುಂದಾಗಿರುವುದಕ್ಕೆ ರಾಜಣ್ಣ ಅಪಸ್ವರ ಎತ್ತಿದ್ದರು.
ಪಕ್ಷದ ವರಿಷ್ಠರ ಸೂಚನೆ
ಇದನ್ನು ಗಂಬೀರವಾಗಿ ಪರಿಗಣಿಸಿದ ಪಕ್ಷದ ವರಿಷ್ಠರು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಸಂಪರ್ಕಿಸಿ, ತಕ್ಷಣವೇ ಮಂತ್ರಿಮಂಡಲದಿಂದ ರಾಜಣ್ಣ ಅವರನ್ನು ವಜಾಗೊಳಿಸುವಂತೆ ಸೂಚಿಸಿದ್ದಾರೆ.
ಇದರ ಸುಳಿವರಿತ ರಾಜಣ್ಣ ಪಕ್ಷ ಕ್ರಮ ಕೈಗೊಳ್ಳುವುದಕ್ಕೂ ಮುನ್ನ ಸ್ವಪ್ರೇರಿತರಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.
ಸಿದ್ದರಾಮಯ್ಯ ಸಂಪುಟದಲ್ಲಿ ವಿವಿಧ ಕಾರಣಗಳಿಗಾಗಿ ತಲೆ ದಂಡ ತೆರುತ್ತಿರುವ ಸಚಿವರಲ್ಲಿ ರಾಜಣ್ಣ ಎರಡನೆಯವರಾಗಿದ್ದಾರೆ.