Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಮತ್ತೆ ಜಾತಿಗಣತಿ ಸಮೀಕ್ಷೆ: ಡಿಸೆಂಬರ್ ಒಳಗೆ ವರದಿ

by admin September 12, 2025
written by admin September 12, 2025 0 comments 1 minutes read
0FacebookTwitterPinterestEmail
102

ಬೆಂಗಳೂರು:ಈ ಬಾರಿಯ ಸಾಮಾಜಿಕ, ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಡಿಸೆಂಬರ್ ಒಳಗೆ ವರದಿ ಸರ್ಕಾರದ ಕೈಸೇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧುಸೂದನ್ ನಾಯಕ್ ನೇತೃತ್ವದ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ವರದಿ ನೀಡಲಿದೆ ಎಂದರು.

ಸಾಮಾಜಿಕ ನ್ಯಾಯ

ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮ ರೂಪಿಸಲು ಸಾಧ್ಯ, ಅಮೆರಿಕದಲ್ಲೂ ಕರಿಯರಿಗೆ ಅವಕಾಶಗಳನ್ನು ನೀಡುವ ದೃಢವಾದ ಕ್ರಮಗಳಿವೆ, ನಮ್ಮಲ್ಲಿ ಮೀಸಲಾತಿ ಇದೆ.

ಬಡತನ, ನಿರುದ್ಯೋಗ, ಅನಕ್ಷರತೆ ಹೋಗಲಾಡಿದಲು ಸಂವಿಧಾನದ ಕಲಂ 15, 16(5)ರಡಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ.

ರಾಜ್ಯದ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅರಿಯಲು ಹೊಸದಾಗಿ, ಆದಷ್ಟೂ ಜಾಗ್ರತೆಯಿಂದ ಸಮೀಕ್ಷೆ ನಡೆಸಿ ವರದಿ ಕೊಡಲು ಸೂಚಿಸಲಾಗಿದೆ.

ಸಮೀಕ್ಷೆ 22 ರಿಂದ ಅಕ್ಟೋಬರ್ 7ರವರೆಗೆ

ಈ ತಿಂಗಳ 22 ರಿಂದ ಅಕ್ಟೋಬರ್ 7 ರೊಳಗೆ ಸಮೀಕ್ಷೆ ಮುಗಿಸಲಾಗುವುದು, ಇದಕ್ಕಾಗಿ 1,75,000 ಸರ್ಕಾರಿ ಶಾಲಾ ಶಿಕ್ಷಕರನ್ನು ವಿಶೇಷ ಭತ್ಯೆ ನೀಡಿ ಸಮೀಕ್ಷೆಗೆ ತೊಡಗಿಸಿಕೊಳ್ಳಲಾಗುತ್ತಿದೆ.

ಸಮೀಕ್ಷೆಗೆ 425 ಕೋಟಿ ರೂ. ಅಂದಾಜು ವೆಚ್ಚವಾಗಲಿದ್ದು, ಇದರಲ್ಲಿ ಸಮೀಕ್ಷೆ ನಡೆಸುವವರಿಗೆ ನೀಡುವ ವಿಶೇಷ ಭತ್ಯೆ 325 ಕೋಟಿ ರೂ. ಆಗಲಿದ್ದು, ಅಗತ್ಯಬಿದ್ದರೆ ಹೆಚ್ಚಿನ ಹಣ ನೀಡಲಾಗುವುದು.

ಪ್ರತಿ ಮನೆಗೂ ವಿದ್ಯುತ್ ಸಂಪರ್ಕವಿದೆ, ಮೀಟರ್ ರೀಡರ್‌ಗಳು ಜಿಯೋ ಟ್ಯಾಗ್ ಮಾಡುವ ಜೊತೆಗೆ, 2 ಕೋಟಿ ಮನೆಗಳಿಗೆ ಪ್ರತ್ಯೇಕ ಗುರುತಿನ ನಂಬರ್ ನೀಡಿ ಸ್ಟಿಕ್ಕರ್ ಅಂಟಿಸುತ್ತಾರೆ.

60 ಪ್ರಶ್ನೆಗಳಿಗೆ ಉತ್ತರ

ಆಶಾ ಕಾರ್ಯಕರ್ತೆಯರು ನಾಳೆಯಿಂದಲೇ ಮನೆ ಮನೆಗೆ ಹೋಗಿ 60 ಪ್ರಶ್ನೆಗಳ ನಮೂನೆ ಪ್ರತಿ ತಲುಪಿಸಲಿದ್ದು, ನಂತರ ಸಮೀಕ್ಷಕರು ತೆರಳಿ, ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಮೊಬೈಲ್‌ಗೆ ಲಿಂಕ್ ಮಾಡುವುದರ ಜೊತೆಗೆ, ವಿದ್ಯುತ್ ಸಂಪರ್ಕ ಇಲ್ಲದ ಹಾಗೂ ಮೊಬೈಲ್ ಇಲ್ಲದವರ ಮನೆಗಳಿಗೂ ಹೋಗಿ ಒಟ್ಟು 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿದ್ದಾರೆ.

ರಾಜ್ಯದ ಜನತೆ ಯಾರೊಬ್ಬರೂ ತಪ್ಪಿಸಿಕೊಳ್ಳದೆ ಕಡ್ಡಾಯವಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು, ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿ ಪಡೆಯಬಹುದಾಗಿದ್ದು, ಆನ್‌ಲೈನ್ ಮೂಲಕವೂ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಜಾತಿ ಹೇಳಿಕೊಳ್ಳಲು ಕಷ್ಟ ಆಗುವವರು ಸಹಾಯವಾಣಿಗೆ ಕರೆ ಮಾಡಿ ಜಾತಿ ಹೇಳಬಹುದು, ಮತಾಂತರಗೊಂಡವರು ಅಥವಾ ಜಾತಿ ಗೊಂದಲ ಇದ್ದಲ್ಲಿ ಆಯೋಗದ ತಜ್ಞರ ತಂಡ ವಿಶ್ಲೇಷಣೆ ಮಾಡಿ ತೀರ್ಮಾನಿಸುತ್ತದೆ.

ಜಾತಿಗಳಲ್ಲಿ ವೈರುಧ್ಯತೆ

ಸಮಾಜದಲ್ಲಿ ಅನೇಕ ಜಾತಿಗಳಿದ್ದು, ಹಲವು ಜಾತಿಗಳು ವೈರುಧ್ಯತೆಯಿಂದ ಕೂಡಿವೆ, ಅಸಮಾನತೆ ಈಗಲೂ ಇದೆ, ಪ್ರಜಾಪ್ರಭುತ್ವ ಉಳಿಯಬೇಕಾದರೆ ಅಸಮಾನತೆ ತೊಲಗಿಸಲೇ ಬೇಕಿದೆ ಎಂದರು.

ಗ್ಯಾರಂಟಿ ಯೋಜನೆಗಳ ಮೂಲಕ ಅಸಮಾನತೆ ಸ್ವಲ್ಪಮಟ್ಟಿಗೆ ಕಡಿಮೆ ಮಾಡಲು ಪ್ರಯತ್ನ ಮಾಡಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
again caste censuscm siddaramaiahfrom september 22nd to october 7threprot by december 2025
0 FacebookTwitterPinterestEmail
admin

previous post
ಬಿಜೆಪಿಗೆ ವಿಧಾನಸಭೆ ಮಧ್ಯಂತರ ಚುನಾವಣೆ ಕನಸು !
next post
ಜಾತಿಗಣತಿಯಲ್ಲಿ ಮತಾಂತರಗೊಂಡವರೂ ಪರಿಗಣನೆಗೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ