Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಜಾತಿಗಣತಿ ಗೊಂದಲ: ಹೈಕಮಾಂಡ್ ಮಧ್ಯಪ್ರವೇಶ

by KM Shivaraju September 19, 2025
written by KM Shivaraju September 19, 2025 0 comments 2 minutes read
0FacebookTwitterPinterestEmail
138

ಬೆಂಗಳೂರು:ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿ ಕುರಿತ ಜಾತಿಗಣತಿ ಸಮೀಕ್ಷೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಭಿನ್ನಾಭಿಪ್ರಾಯ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠರು ಮಧ್ಯಪ್ರವೇಶ ಮಾಡಿದ್ದಾರೆ.

ಗುಗುವಾರ ನಡೆದ ಸಂಪುಟ ಸಭೆಯಲ್ಲಿ ಜಾತಿಗಣತಿ ವಿಷಯ ಸ್ಫೋಟಗೊಂಡ ನಂತರ ನಿನ್ನೆ ತಡರಾತ್ರಿವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರುಗಳ ಜೊತೆ ಸುದೀರ್ಘ ಚರ್ಚೆ ನಡೆಸಿದರು.

ಲೋಪ ಸರಿಪಡಿಸಲು ಸೂಚನೆ

ಮುಖ್ಯಮಂತ್ರಿ ಸಭೆಗೂ ಮುನ್ನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಾತಿಗಣತಿ ವಿರೋಧಿಸುತ್ತಿರುವ ಸಚಿವರುಗಳು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಚರ್ಚೆ ನಡೆಸಿ, ಸಮೀಕ್ಷಾ ಕಾರ್ಯದ ಸಿದ್ಧತೆಯಲ್ಲಿ ಆಗಿರುವ ಲೋಪಗಳನ್ನು ಗಮನಕ್ಕೆ ತಂದಿದ್ದಲ್ಲದೆ, ಅವುಗಳನ್ನು ಸರಿಪಡಿಸಿಕೊಂಡು ಮುಂದುವರೆಯುವಂತೆ ಸೂಚಿಸಿದ್ದರು.

ಸಿದ್ದರಾಮಯ್ಯ ಕರೆದಿದ್ದ ರಾತ್ರಿ ಮತ್ತು ಬೆಳಗಿನ ಸಭೆಯಲ್ಲಿ ಶಿವಕುಮಾರ್, ಸರ್ಕಾರ ಮತ್ತು ಪಕ್ಷಕ್ಕೆ ಮುಳುವಾಗಿರುವ ಸಮೀಕ್ಷೆಯನ್ನೇ ಸ್ಥಗಿತಗೊಳಿಸಿ ಎಂದು ಬಿಗಿ ಪಟ್ಟು ಹಿಡಿದರು.

ಶಿವಕುಮಾರ್ ಮಾತಿಗೆ ವೀರಶೈವ ಸಮುದಾಯದ ಸಚಿವರುಗಳು ರಾತ್ರಿ ನಡೆದ ಸಭೆಯಲ್ಲಿ ಧ್ವನಿಗೂಡಿಸಿದರಾದರೂ, ಬೆಳಗ್ಗೆ, ಈಗಾಗಲೇ ನಾವು ಹೇಳುವುದನ್ನು ಹೇಳಿದ್ದಾಗಿದೆ ಎನ್ನುವ ಮೂಲಕ ಸಭೆಯಿಂದ ಹೊರಗುಳಿದರು.

ಸುರ್ಜೇವಾಲ ದಿಢೀರನೆ ನಗರಕ್ಕೆ

ಜಾತಿ ಗಣತಿ ಸರ್ಕಾರಕ್ಕೆ ಕಗ್ಗಂಟ್ಟಾಗುತ್ತಿದೆ ಎಂಬುದನ್ನು ಅರಿತ ತಕ್ಷಣ ಪಕ್ಷದ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ರಾತ್ರಿಯೇ ದಿಢೀರನೆ ನಗರಕ್ಕೆ ಧಾವಿಸಿದರು.

ತಾವು ತಂಗಿದ್ದ ವೆಸ್ಟ್ ಎಂಡ್ ಹೋಟೆಲ್‌ಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಕರೆಸಿಕೊಂಡು, ಈ ವಿಷಯವಾಗಿ ಸುದೀರ್ಘ ಸಮಾಲೋಚನೆ ನಡೆಸಿದರು.

ಶಿವಕುಮಾರ್ ಸೇರಿದಂತೆ ಕೆಲವು ಸಚಿವರು, ಕೆಲವು ದೋಷಗಳಾಗಿವೆ ಎಂಬುದನ್ನು ನನ್ನ ಗಮನಕ್ಕೆ ತಂದಿದ್ದಾರೆ, ಅದನ್ನು ಸರಿಪಡಿಸಲು ಆಯೋಗಕ್ಕೆ ಸೂಚಿಸುತ್ತೇನೆ, ಆದರೆ, ಯಾವುದೇ ಕಾರಣಕ್ಕೂ ಜಾತಿ ಗಣತಿ ಸಮೀಕ್ಷೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸುರ್ಜೇವಾಲ ಅವರಿಗೆ ಮುಖ್ಯಮಂತ್ರಿ ತಿಳಿಸಿದ್ದಾರೆ.

ಜನರಿಗೆ ಸೌಕರ್ಯ ನೀಡದಿದ್ದರೆ ಅಧಿಕಾರ ಬಿಟ್ಟು ತೊಲಗಿ
ಜಾತಿ ವಿರೋಧಿ ಹಣೆಪಟ್ಟಿ

ಶಿವಕುಮಾರ್ ಸಹಾ ತಮ್ಮ ನಿಲುವಿನಿಂದ ಹಿಂದೆ ಸರಿಯದೆ, ಆಯೋಗ ನಡೆಸುತ್ತಿರುವ ಸಮೀಕ್ಷೆ ಪಕ್ಷ ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತಿದೆ, ಇವರು ಮಾಡಲು ಹೊರಟಿರುವ ಜಾತಿಗಣತಿಯಿಂದ ನಮಗೆ ಮುಂದುವರೆದ ಜಾತಿಗಳ ವಿರೋಧಿ ಎಂಬ ಹಣೆಪಟ್ಟಿ ಅಂಟಿಸಲಾಗಿದೆ.

ಕೇಂದ್ರ ಸರ್ಕಾರ ಜಾತಿಗಣತಿ ಕಾರ್ಯ ನಡೆಸುವುದಾಗಿ ಹೇಳಿದೆ ಮತ್ತು ಸಿದ್ಧತೆಯೂ ನಡೆಯುತ್ತಿದೆ, ನಾವೂ ಅದನ್ನೇ ಮಾಡುವುದರಿಂದ ಏನು ಪ್ರಯೋಜನ, ಸರ್ಕಾರದ ಹಣ ಪೋಲು ಮಾಡುವುದಾದರೂ ಏಕೆ.

ಒಂದೆಡೆ ದಸರಾ, ಮತ್ತೊಂದೆಡೆ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ, ಇಂತಹ ಸಂದರ್ಭದಲ್ಲಿ ಸಮೀಕ್ಷೆ ಪೂರ್ಣ ಪ್ರಮಾಣದಲ್ಲಿ ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಸಮೀಕ್ಷೆಗೆ ವಿರುದ್ಧವಾಗಿ ಹೇಳಿಕೆ

ಇದಕ್ಕೂ ಮಿಗಿಲಾಗಿ ಆಯೋಗ ಇಲ್ಲದ ಜಾತಿಗಳನ್ನು ಪಟ್ಟಿಗೆ ಸೇರಿಸಿ ಗೊಂದಲ ಉಂಟು ಮಾಡಿದೆ, ಈಗಾಗಲೇ ಒಕ್ಕಲಿಗ, ಲಿಂಗಾಯತ ಸಮುದಾಯಗಳು ಸಮೀಕ್ಷೆಗೆ ವಿರುದ್ಧವಾಗಿ ಹೇಳಿಕೆ ನೀಡಲು ಆರಂಭಿಸಿವೆ.

ಇಲ್ಲದ ಜಾತಿಗಳನ್ನು ಸೇರಿಸಲು ಇವರಿಗೆ ಅಧಿಕಾರ ಕೊಟ್ಟವರು ಯಾರು, ಸಮೀಕ್ಷೆಗೆ ನಮ್ಮ ಸಂಪೂರ್ಣ ವಿರೋಧವಿದೆ, ನಾವು ಇದನ್ನು ಮಂತ್ರಿಮಂಡಲ ಸಭೆ ಹಾಗೂ ಆಯೋಗದೊಂದಿಗಿನ ಸಭೆಯಲ್ಲೂ ತಿಳಿಸಿದ್ದೇವೆ.

ಸರ್ಕಾರ ಮತ್ತು ಪಕ್ಷಕ್ಕಾಗುವ ಹಿನ್ನಡೆ ತಪ್ಪಿಸಲು ನೀವೇ ತೀರ್ಮಾನ ಕೈಗೊಳ್ಳಬೇಕು ಎಂದು ಶಿವಕುಮಾರ್ ಎಐಸಿಸಿ ಅಂಗಳಕ್ಕೆ ಚೆಂಡನ್ನು ಹಾಕಿದ್ದಾರೆ.

ಪರ-ವಿರೋಧ

ಸರ್ಕಾರದ ಸೂಚನೆ ಮೇರೆಗೆ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಭೆಯಲ್ಲೂ ಪರ-ವಿರೋಧ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

ಇಷ್ಟರ ನಡುವೆಯೂ ಮುಖ್ಯಮಂತ್ರಿ, ಜಾತಿಗಣತಿ ಸಮೀಕ್ಷೆ ಮುಂದೂಡಲಾಗದುಮ ಎಂದು ಸ್ಪಷ್ಟಪಡಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc high commandcaste censuscm siddaramaiahdcm d k shivakumarranadeep singh surjeval
0 FacebookTwitterPinterestEmail
KM Shivaraju

previous post
ಜನರಿಗೆ ಸೌಕರ್ಯ ನೀಡದಿದ್ದರೆ ಅಧಿಕಾರ ಬಿಟ್ಟು ತೊಲಗಿ
next post
ವೈರತ್ವ ಬಿಟ್ಟು ವೇದಿಕೆ ಹಂಚಿಕೊಂಡ ಡಿಕೆಶಿ-ಎಚ್‌ಡಿಕೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ