Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಚಿನ್ನಾಭರಣ, ಆಸ್ತಿ ವಿವರಕ್ಕೆ ಶಿವಕುಮಾರ್ ನಿರಾಕರಣೆ

by admin October 4, 2025
written by admin October 4, 2025 0 comments 1 minutes read
0FacebookTwitterPinterestEmail
159

ಬೆಂಗಳೂರು:ಗಣತಿದಾರರಿಗೆ ಆಸ್ತಿ ವಿವರಗಳ ಮಾಹಿತಿ ನೀಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರಾಕರಿಸಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ಸದಾಶಿವನಗರದ ನಿವಾಸದಲ್ಲಿ ಗಣತಿದಾರರಿಗೆ ತಮ್ಮ ಕುಟುಂಬದ ವಿವರ ನೀಡುವ ಮೂಲಕ ಉದ್ಘಾಟಿಸಿದರು.

ಪತ್ನಿ ಉಷಾ ಜೊತೆಗೂಡಿ ಸಮೀಕ್ಷೆದಾರರ ಸುದೀರ್ಘ ಪ್ರಶ್ನೆಗಳಲ್ಲಿ ಕೆಲವಕ್ಕೆ ಉತ್ತರ ನೀಡಿ, ಇನ್ನು ಕೆಲವು ಪ್ರಶ್ನೆಗಳಿಗೆ ಇಲ್ಲ ಎಂಬುದಾಗಿ ತಿಳಿಸಿದರು.

ಅನಗತ್ಯ ಪ್ರಶ್ನೆಗಳು

ಹಿಂದುಳಿದ ವರ್ಗಗಳ ಆಯೋಗ ಅನಗತ್ಯವಾಗಿ ಪ್ರಶ್ನೆಗಳನ್ನು ತುಂಬಿರುವುದಕ್ಕೆ ಸಮೀಕ್ಷೆದಾರರು ಮತ್ತು ಹಿರಿಯ ಅಧಿಕಾರಿಗಳ ಮುಂದೆಯೇ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ನಾನು ಹಿಂದೂ ಒಕ್ಕಲಿಗ ಸಮುದಾಯಕ್ಕೆ ಸೇರಿದವನು, ಉಪಜಾತಿ ಬಗ್ಗೆ ಮಾಹಿತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಒಂದರ ನಂತರ ಒಂದರಂತೆ ಗಣತಿದಾರರು ಪ್ರಶ್ನೆ ಕೇಳುತ್ತಿರುವುದಕ್ಕೆ ಸ್ವಲ್ಪ ಆವೇಶಕ್ಕೂ ಒಳಗಾದರು.

ನ್ಯಾಯಾಲಯವೇ ಹೇಳಿದೆ

ಒಂದು ಹಂತದಲ್ಲಿ ನ್ಯಾಯಾಲಯವೇ ಹೇಳಿದೆ, ಅಗತ್ಯ ಮಾಹಿತಿಯನ್ನಷ್ಟೇ ನೀಡುತ್ತೇನೆ, ನಮ್ಮ ಮನೆಯಲ್ಲಿರುವ ಚಿನ್ನಾಭರಣ, ಆಸ್ತಿ ಬಗ್ಗೆ ಮಾಹಿತಿ ನೀಡುವುದಿಲ್ಲ.

ನಾನು ಇದುವರೆಗೂ ಯಾವುದೇ ಮೀಸಲಾತಿ ಸೌಲಭ್ಯ ಪಡೆದಿಲ್ಲ, ಅಷ್ಟೇ ಅಲ್ಲ ವಸತಿ ಶಾಲೆಗಳಲ್ಲಿ ಶಿಕ್ಷಣವನ್ನೂ ಪಡೆದಿಲ್ಲ, ಶಿಕ್ಷಣಕ್ಕಾಗಿ ಯಾವುದೇ ಸರ್ಕಾರಿ ಸೌಲತ್ತು ಪಡೆದಿಲ್ಲ ಎಂದು ಪ್ರಶ್ನೆಗಳಿಗೆ ಉತ್ತರಿಸಿದರು.

ಉದ್ಯೋಗ ಏನು ಎಂಬ ಪ್ರಶ್ನೆಗೆ ರಾಜಕೀಯ ಮತ್ತು ಉದ್ಯಮಿಯಾಗಿ ತೊಡಗಿಸಿಕೊಂಡಿದ್ದೇನೆ ಎಂದರು.

ಇಷ್ಟೆಲ್ಲಾ ಮಾಹಿತಿ ಅಗತ್ಯವೇ

ಅರವತ್ತು ಪ್ರಶ್ನೆಗಳ ಸರಮಾಲೆ ಆಲಿಸಿದ ನಂತರ ಅಲ್ಲಿಯೇ ಇದ್ದ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದಿನೇನಿ, ಜಿಬಿಎ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ನಗರ ಕೇಂದ್ರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಹಾಗೂ ರಾಜೇಂದ್ರನ್ ಅವರುಗಳನ್ನು ಉದ್ದೇಶಿಸಿ, ಇಷ್ಟೆಲ್ಲಾ ಮಾಹಿತಿ ಕೇಳುವ ಅಗತ್ಯವಿದೆಯೇ ಎಂದು ಸಲಹೆ ನೀಡಿದರು.

ಸಮೀಕ್ಷೆದಾರರಿಗೆ ಮಾಹಿತಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಾರ್ವಜನಿಕರು ಗಣತಿದಾರರಿಗೆ ಮಾಹಿತಿ ನೀಡಬೇಕು ಎಂದರು.

ತಾಳ್ಮೆ ಕಳೆದುಕೊಳ್ಳುವಷ್ಟು ಪ್ರಶ್ನೆ

ತಾಳ್ಮೆ ಕಳೆದುಕೊಳ್ಳುವಷ್ಟು ದೀರ್ಘ ಪ್ರಶ್ನೆಗಳನ್ನು ಕೇಳುತ್ತಾರೆ, ಇದರ ಅಗತ್ಯವಿಲ್ಲ, ಗ್ರಾಮೀಣ ಭಾಗದಲ್ಲಾದರೆ ವಿವರಣೆ ನೀಡುತ್ತಾರೆ, ನಗರ ಪ್ರದೇಶಗಳಲ್ಲಿ ಎಲ್ಲರೂ ಒತ್ತಡದಲ್ಲಿ ಇರುವುದರಿಂದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಲು ಸಾಧ್ಯವಿಲ್ಲ.

ಆದಷ್ಟು ಕಡಿಮೆ ಪ್ರಶ್ನೆಗಳನ್ನು ಕೇಳಿ ಎಂಬುದಾಗಿ ಅಧಿಕಾರಿಗಳಿಗೆ ತಿಳಿಸಿದ್ದೇನೆ, ಯಾರಿಗೂ ಬಲವಂತ ಮಾಡಿ ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆಯಬೇಡಿ ಎಂದಿದ್ದೇನೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Backward Classes Commissioncaste censusdcm d k shivakumargreater bengaluru
0 FacebookTwitterPinterestEmail
admin

previous post
ಸಿಎಂ ಕುರ್ಚಿ ಕದನ ವಿರಾಮಕ್ಕೆ ಸುರ್ಜೇವಾಲ ಯತ್ನ !
next post
ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ