Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಅಬಕಾರಿ ಇಲಾಖೆ ಆದಾಯಕ್ಕೆ ಕಾಣದ ಕೈಗಳಿಂದ ಕನ್ನ !

by KM Shivaraju February 3, 2026
written by KM Shivaraju February 3, 2026 0 comments 2 minutes read
0FacebookTwitterPinterestEmail
157

ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ವಜಾಕ್ಕೆ ಪ್ರತಿಪಕ್ಷಗಳ ಆಗ್ರಹ

ಬೆಂಗಳೂರು:ರಾಜ್ಯ ಬೊಕ್ಕಸಕ್ಕೆ ಕನ್ನ ಹಾಕಿರುವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ವಿರುದ್ಧ ಉನ್ನತಮಟ್ಟದ ತನಿಖೆಗೆ ಆದೇಶಿಸಿ, ತಕ್ಷಣದಿಂದ ಸಂಪುಟದಿಂದ ವಜಾ ಮಾಡುವಂತೆ ಪ್ರತಿಪಕ್ಷಗಳು ವಿಧಾನಸಭೆಯಲ್ಲಿಂದು ಒತ್ತಾಯಿಸಿದವು.

ಪ್ರತಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸದಸ್ಯ ಮಂಜುನಾಥ್ ಸೇರಿದಂತೆ ಹಲವು ಸದಸ್ಯರು ನಿಯಮ 69ರಡಿ ವಿಷಯ ಪ್ರಸ್ತಾಪಿಸಿ, ವಾರ್ಷಿಕವಾಗಿ 6,000 ಕೋಟಿ ರೂ. ಲಂಚ ರೂಪದಲ್ಲಿ ಪಡೆದು ಖಜಾನೆಗೆ ದೊಡ್ಡ ಪ್ರಮಾಣದಲ್ಲಿ ಹಾನಿ ಮಾಡಿದ್ದಾರೆ.

ಕಾಣದ ಕೈ ಸೇರಿಕೊಂಡಿದೆ

ಇಷ್ಟು ದೊಡ್ಡ ಪ್ರಮಾಣದ ಹಾನಿಯಲ್ಲಿ ಇಲಾಖೆ ಅಧಿಕಾರಿಗಳು ಹಾಗೂ ಕಾಣದ ಕೈ ಸೇರಿಕೊಂಡಿದೆ ಎಂದು ಆರೋಪಿಸಿದರು.

ಕಲಾಪ ಆರಂಭದಲ್ಲೇ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ, ಇತ್ತೀಚಿನ ದಿನಗಳಲ್ಲಿ ಜಿಲ್ಲಾ ಅಬಕಾರಿ ಅಧಿಕಾರಿಗಳು ಸೇರಿದಂತೆ ಕೆಳಹಂತದ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇದರಲ್ಲಿ ಮಧ್ಯವರ್ತಿಗಳು ಪಾಲುದಾರರಾಗಿದ್ದು, ಕೆಲವರು ಲೋಕಾಯುಕ್ತರ ಮುಂದೆ ಸಚಿವರ ವಿರುದ್ಧವೇ ದಾಖಲೆ ಸಮೇತ ಹೇಳಿಕೆ ನೀಡಿದ್ದಾರೆ.

ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ಸ್ ದೂರು

ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದಲ್ಲಿ ಅಧಿಕಾರಿಗಳು ಮತ್ತು ಸಚಿವರ ವಿರುದ್ಧವೇ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ಸ್ ಕರ್ನಾಟಕ ದೂರು ಸಲ್ಲಿಸಿ ಆರೋಪಿಸಿದೆ.

ಸರ್ಕಾರದ ಬೊಕ್ಕಸಕ್ಕೆ 40,000 ಕೋಟಿ ರೂ.ಗಳಿಗೂ ಹೆಚ್ಚು ಆದಾಯ ತಂದು ಕೊಡುವ ಸಂಘದ ಸದಸ್ಯರೇ ಗುರುತರ ಆರೋಪ ಮಾಡಿದ್ದರೂ ಆ ಸಚಿವರನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರಲ್ಲಿ ಅರ್ಥವೇನು ಎಂದು ಪ್ರಶ್ನಿಸಿದರು.

ಹೊಸದಾಗಿ ಪರವಾನಗಿ ಪಡೆಯಲು, ಇಲ್ಲವೇ ನವೀಕರಿಸಲು ಭಾರೀ ಪ್ರಮಾಣದಲ್ಲಿ ಲಂಚ ಪಡೆಯಲಾಗುತ್ತಿದೆ, ಅಲ್ಲದೇ ಜಾತಿ ರಾಜಕೀಯವೂ ನಡೆಯುತ್ತಿದೆ ಎಂಬುದಕ್ಕೆ ಮಂಡ್ಯ ಜಿಲ್ಲಾ ಅಬಕಾರಿ ಅಧಿಕಾರಿಯ ಆಡಿಯೊ ಸಾಕ್ಷಿ ಎಂದು ಸದನದ ಮುಂದಿಟ್ಟರು.

ಜಾತಿ ಆಧರಿಸಿ ಪರವಾನಗಿ

ಪರವಾನಗಿ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದರೂ, ಈ ಅಧಿಕಾರಿ, ನೀನು ಯಾವ ಪಕ್ಷಕ್ಕೆ ಸೇರಿದವನು, ಯಾವ ಜಾತಿ ಎಂದೆಲ್ಲಾ ಕೇಳುತ್ತಾರೆ.

ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ ಎಂದ ನಂತರವೂ, ಹಾಗಿದ್ದರೆ, ನೀನು ಒಕ್ಕಲಿಗನಾಗಿದ್ದರೆ ನಿಮ್ಮ ಸಮುದಾಯದ ಮುಖಂಡರನ್ನು ಕರೆದುಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರನ್ನು ಭೇಟಿ ಮಾಡು, ಕುರುಬನಾದರೆ ಆ ಸಮುದಾಯದ ಮುಖಂಡರನ್ನು ಕರೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರನ್ನು ಭೇಟಿ ಮಾಡು ಎಂಬುದಾಗಿ ಅಧಿಕಾರಿಯೇ ಸೂಚಿಸುತ್ತಾರೆ.

ಈ ಅಧಿಕಾರಿಯ ಸಂಭಾಷಣೆಯಲ್ಲಿ ಇನ್ನೂ ಬಹಳಷ್ಟಿದೆ, ಇಷ್ಟನ್ನು ಸದನದ ಗಮನಕ್ಕೆ ತರುತ್ತಿದ್ದೇನೆ, ಸಚಿವರ ವಿರುದ್ಧ ನಾಲ್ಕು ದಾಖಲೆಗಳನ್ನು ಇಟ್ಟಿದ್ದೇನೆ, ಅವರನ್ನು ತಕ್ಷಣ ಸಂಪುಟದಿಂದ ವಜಾ ಮಾಡಿ.

ಕಾಣದ ಕೈಯಿಂದ ಜಿಲ್ಲೆಗಳ ವ್ಯವಹಾರ

ಸಚಿವರ ಆಪ್ತರ ಪ್ರಕಾರ, ಅವರಿಗೆ ಮೂರು ಜಿಲ್ಲೆಗಳ ಉಸ್ತುವಾರಿ ಅಷ್ಟೇ ನೀಡಲಾಗಿದೆ, ಉಳಿದ ಜಿಲ್ಲೆಗಳ ವ್ಯವಹಾರವನ್ನು ಕಾಣದ ಕೈಯೊಂದು ನೋಡಿಕೊಳ್ಳುತ್ತಿದೆ, ಈ ಬಗ್ಗೆ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು.

ಭ್ರಷ್ಟಾಚಾರ ನಡೆದಿದೆ ಎಂಬುದನ್ನು ಸಾಬೀತುಪಡಿಸಲು ದಾಖಲೆಗಳನ್ನು ಇಟ್ಟಿದ್ದೇವೆ, ಇನ್ನೂ ಏಕೆ ಮಂತ್ರಿಯನ್ನಾಗಿ ಮುಂದುವರೆಸಿದ್ದೀರಿ, ತಕ್ಷಣ ವಜಾ ಮಾಡಿ ಎಂದು ಒತ್ತಾಯಿಸಿದರು.

ಪ್ರತಿಪಕ್ಷ ನಾಯಕರ ಆರೋಪ ವೇಳೆ, ಆಡಳಿತ ಸದಸ್ಯರು ಮೌನವಾಗಿ ಆಲಿಸುತ್ತಿದ್ದರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸದನ ಪ್ರವೇಶಿಸುತ್ತಿದ್ದಂತೆ, ಕೆಲವು ಸಚಿವರು ಮತ್ತು ಶಾಸಕರು ವಿರೋಧಿ ಸದಸ್ಯರ ಮೇಲೆ ಹರಿಹಾಯಲು ಶುರು ಮಾಡಿದರು.

ಈ ಹಂತದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಏರಿದ ಧ್ವನಿಯಲ್ಲಿ ಮಾತಿನ ಚಕಮಕಿ ನಡೆದು ಸದನ ಗದ್ದಲದಲ್ಲಿ ಮುಳುಗಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assembly sessionbjp-jdscm siddaramaiahcongresexcise incomer.ashokspeaker u t khadar
0 FacebookTwitterPinterestEmail
KM Shivaraju

previous post
ಏಪ್ರಿಲ್‌ನಿಂದ ಮುಲಾಜಿಲ್ಲದೆ ಒತ್ತುವರಿ ಭೂಮಿ ತೆರವು
next post
ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಕಡಿವಾಣ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ