Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

by admin February 24, 2026
written by admin February 24, 2026 0 comments 2 minutes read
0FacebookTwitterPinterestEmail
172

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವ ಬದಲಾವಣೆ ಕುರಿತಂತೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ವರಿಷ್ಠರಿಂದ ಸುಳಿವು ಸಿಕ್ಕಿರಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಮಹದೇವಪ್ಪ ಕೂಡ ನಮ್ಮ ಹೈಕಮಾಂಡ್ ಆಗಿರುವುದರಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ, ಮಾಹಿತಿ ಅವರಿಗೆ ತಿಳಿದಿರಬೇಕು ಆದ್ದರಿಂದ ದಲಿತ ಮುಖ್ಯಮಂತ್ರಿ ವಿಷಯ ಮಾತನಾಡುತ್ತಿದ್ದಾರೆ.

ನನಗೆ ಮಾಹಿತಿ ಇಲ್ಲ

ಮಹದೇವಪ್ಪ ಅವರ ಹೇಳಿಕೆ ನೋಡಿದೆ, ಅದರ ಹೊರತಾಗಿ ಬೇರೆ ಯಾವುದೇ ಚರ್ಚೆ ಇಲ್ಲ, ಅವರಿಗೆ ಮುಖ್ಯಮಂತ್ರಿ ಬದಲಾವಣೆ ಮಾಹಿತಿ ಇರಬಹುದು, ಆದರೆ ಆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಂತೂ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ, ನನಗೆ ಹೈಕಮಾಂಡ್‌ನಿಂದ ಯಾವುದೇ ಕರೆ ಬಂದಿಲ್ಲ, ನನ್ನನ್ನು ವರಿಷ್ಠರು ದೆಹಲಿಗೆ ಬರುವಂತೆಯೂ ಸೂಚಿಸಿಲ್ಲ, ಸದ್ಯಕ್ಕೆ ನಾನು ಇಲ್ಲಿ ಕುಮಾರಕೃಪದಲ್ಲಿ ಇದ್ದೇನೆ ಎಂದು ಸ್ಪಷ್ಟಪಡಿಸಿದರು.

ಆದರೆ, ನಾನು, ಇಲಾಖಾ ಕೆಲಸ-ಕಾರ್ಯಗಳ ಮೇಲೆ ದೆಹಲಿಗೆ ಹೋಗಬೇಕಿದೆ, ಕೇಂದ್ರ ನಗರಾಭಿವೃದ್ಧಿ ಇಲಾಖೆ ನಗರಗಳ ಅಭಿವೃದ್ಧಿಗಾಗಿ ಒಂದು ಲಕ್ಷ ಕೋಟಿ ರೂ. ನೀಡುತ್ತಿದೆ, ಇದರಲ್ಲಿ ನನ್ನ ಇಲಾಖೆ ವ್ಯಾಪ್ತಿಗೆ ಬರುವ ಬೆಂಗಳೂರು ಅಭಿವೃದ್ಧಿಗೆ ಒಂದಷ್ಟು ಹಣ ಪಡೆಯಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ತೆರಳಲಿದ್ದೇನೆ, ಉಳಿದ ವಿಚಾರ ನನಗೆ ಗೊತ್ತಿಲ್ಲ.

“ಅವರು ದೊಡ್ಡವರು”

ಡಾ.ಪರಮೇಶ್ವರ್ ಅವರಿಗೆ ಮೊದಲು ಕೂಲಿ ಕೊಡಲಿ ಎಂಬ ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ “ಅವರು ದೊಡ್ಡವರು” ಎಂದರು.

ನಾನು, ಸತೀಶ್ ಜಾರಕಿಹೊಳಿ ಸಮಾನ ಮನಸ್ಕರು, ಪಕ್ಷದ ವಿಚಾರವಾಗಿ ವಾರಕ್ಕೊಮ್ಮೆ ಚರ್ಚೆ ಮಾಡುತ್ತೇವೆ, ಅವರು ನಮ್ಮ ಹಿರಿಯ ನಾಯಕರು, ನನ್ನ ಜತೆ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಅವರಿಗೂ ಪಕ್ಷದ ಬಗ್ಗೆ ಅಪಾರವಾದ ಚಿಂತನೆ ಇದೆ, ನಮ್ಮ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ನಾವೆಲ್ಲ ಯೋಜನೆ ತಯಾರು ಮಾಡುತ್ತಿದ್ದೇವೆ.

ಸತೀಶ್ ಜಾರಕಿಹೊಳಿ ಅವರು ಗೊಂದಲ ಬಗೆಹರಿಯುವಂತೆ ಕಾಣುತ್ತಿದೆ ಎಂದಿರುವ ಬಗ್ಗೆ ನಾನು ಪತ್ರಿಕೆಯಲ್ಲಿ ನೋಡಿದೆ, ಇದರ ಹೊರತಾಗಿ ನನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು.

ಹೊಸ ಪೀಳಿಗೆ, ಹೊಸ ಆಲೋಚನೆ

ನೂತನ ಶಾಸಕರು ಕನಿಷ್ಠ 5 ಮಂತ್ರಿ ಸ್ಥಾನ ಹೊಸಬರಿಗೆ ನೀಡಬೇಕು ಎಂದು ಹೈಕಮಾಂಡ್‌ಗೆ ಬರೆದಿರುವ ಪತ್ರದ ಬಗ್ಗೆ ಪ್ರತಿಕ್ರಿಯಿಸಿ, ಹೊಸ ಪೀಳಿಗೆ, ಹೊಸ ಆಲೋಚನೆ ಬರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡಿರಲು ಸಾಧ್ಯ, ಈ ಬಗ್ಗೆ ಪತ್ರಿಕೆಗಳಲ್ಲಿ ಓದಿದ್ದೇನೆ, ನನಗೆ ಅವರ ಪತ್ರ ತಲುಪಿಲ್ಲ.

ಎಲ್ಲರಿಗೂ ಮಂತ್ರಿಯಾಗುವ ಆಸೆ ಇರುತ್ತದೆ, ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರಾಗದೇ ಮುಖ್ಯಮಂತ್ರಿ ಆಗಲಿಲ್ಲವೇ, ಶಾಸಕರು ಕೇಳುವುದರಲ್ಲಿ ತಪ್ಪೇನಿಲ್ಲ, ಮೊದಲ ಬಾರಿಗೆ ಶಾಸಕರಾದಾಗ ಮಂತ್ರಿಯಾದವರಲ್ಲಿ ನಾನೂ ಒಬ್ಬ.

ನಾನು ಸಚಿವನಾಗಿ 36 ವರ್ಷವಾಗಿದೆ, ಹೊಸಬರು ಸಂಪುಟಕ್ಕೆ ಬರಬೇಕು ಎಂದು ಬೆಂಬಲಿಸುವವರಲ್ಲಿ ನಾನೂ ಇದ್ದೇನೆ, ಹೊಸಬರನ್ನು ನಾವು ತಯಾರು ಮಾಡಬೇಕಲ್ಲ, ಈ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

ಕೆಲವರು ದೆಹಲಿಗೆ ಹೋಗುತ್ತಾರೆ

ನಾನು ಮಂತ್ರಿಮಂಡಲ ಮಾಡುತ್ತೇನೆ ಎಂದು ಹೇಳಿಲ್ಲ, ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ, ಅವರು ಸಂಚಿವ ಸಂಪುಟ ವಿಸ್ತರಣೆ ಮಾಡುವ ಕಾರಣಕ್ಕೆ ಕೆಲವರು ಪತ್ರ ಬರೆಯುತ್ತಾರೆ, ದೆಹಲಿಗೆ ಹೋಗುತ್ತಾರೆ, ಹೊರಗಡೆ ಹೋಗುತ್ತಾರೆ, ಅವರಿಗೂ ಆಸೆ ಇರುತ್ತದೆ.

ನಾಯಕತ್ವ ಬದಲಾವಣೆ ಸೇರಿದಂತೆ ಕೆಲವು ರಾಜಕೀಯ ವಿಷಯಗಳ ಬಗ್ಗೆ ಸಚಿವರುಗಳು ಪದೇ ಪದೇ ಪ್ರಸ್ತಾಪ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕ್ರಮ ಕೈಗೊಳ್ಳಬೇಕು.

ಪಕ್ಷದ ರಾಜ್ಯಾಧ್ಯಕ್ಷನಾಗಿ ವರಿಷ್ಠರಿಗೆ ಎಲ್ಲಾ ಮಾಹಿತಿಗಳನ್ನು ಕಾಲಾನುಕಾಲಕ್ಕೆ ಕೊಡುವುದಷ್ಟೇ ನನ್ನ ಕೆಲಸ, ಸಚಿವರ ಬಾಯಿಗೆ ಬೀಗ ಹಾಕಿಸುವ ಅಧಿಕಾರ ನನಗಿಲ್ಲ, ಅದು ಇರುವುದು ಮುಖ್ಯಮಂತ್ರಿ ಅವರಿಗೆ ಮಾತ್ರ.

ಮುಖ್ಯಮಂತಿಯೇ ಗಮನಹರಿಸಬೇಕು

ಯಾವ ಸಚಿವರು ಏನು ಹೇಳಿದ್ದಾರೆ ಎಂಬುದು ನನಗೆ ತಿಳಿಯದು, ಇದೆಲ್ಲದರ ಬಗ್ಗೆ ಮುಖ್ಯಮಂತಿಯೇ ಗಮನಹರಿಸಬೇಕು ಮತ್ತು ಅವರುಗಳ ಬಾಯಿ ಮುಚ್ಚಿಸುವುದು ಅವರಿಗೆ ಬಿಟ್ಟ ವಿಷಯ ಎಂದರು.

ಕೆಲವು ಶಾಸಕರು ಅಧಿಕಾರ ಹಸ್ತಾಂತರ ಆಗುತ್ತದೆ, ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ, ಅವರನ್ನು ವರಿಷ್ಠರು ದೆಹಲಿಗೆ ಕರೆದಿದ್ದಾರೆ ಎಂದೆಲ್ಲಾ ಸಾರ್ವಜನಿಕವಾಗೇ ಹೇಳಿಕೆ ನೀಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಏನನ್ನೂ ಉತ್ತರಿಸದೆ ತೆರಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres high commanddcm d k shivakumardr.h c mahadevappapower sharing
0 FacebookTwitterPinterestEmail
admin

previous post
ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ
next post
ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ