Thursday, May 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, May 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ರಿಯಲ್ ಎಸ್ಟೇಟ್ ದಂಧೆಗೆ ಇಳಿದ ಕಾಂಗ್ರೆಸ್ ಸರ್ಕಾರ

by admin May 14, 2026
written by admin May 14, 2026 0 comments 1 minutes read
0FacebookTwitterPinterestEmail
3

ಬೆಂಗಳೂರು:ರಾಜಧಾನಿಗೆ ಪರ್ಯಾಯವಾಗಿ ಬಿಡದಿ ಬಳಿ ನವನಗರ ನಿರ್ಮಾಣ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಿಯಲ್ ಎಸ್ಟೇಟ್ ದಂಧೆಗೆ ಇಳಿದಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಗುರುತರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿವಿಧ ಅಭಿವೃದ್ಧಿ ಹೆಸರಿನಲ್ಲಿ ರೈತರಿಂದ ಸ್ವಾಧೀನಪಡಿಸಿಕೊಂಡಿರುವ ಭೂಮಿ ಕುರಿತು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗೆ ಕಿವಿಮಾತು

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸದ ಅವರು, ಯಾವುದೋ ಒಬ್ಬ ವ್ಯಕ್ತಿಯ ದಾಕ್ಷಿಣ್ಯಕ್ಕೆ ಬಲಿಯಾಗಿ ಮುಖ್ಯಮಂತ್ರಿ ರಿಯಲ್ ಎಸ್ಟೇಟ್ ದಲ್ಲಾಳಿ ಆಗಬಾರದು ಎಂದು ಕಿವಿಮಾತು ಹೇಳಿದರು.

ಆ ವ್ಯಕ್ತಿ ಹೇಳಿದಂತೆ ಕೇಳುವ ಮೂಲಕ ಇನ್ನೆರಡು ವರ್ಷ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ.

ಕುರ್ಚಿಗಾಗಿ ಸಿದ್ದರಾಮಯ್ಯ ತಮ್ಮ ಸಹಿಯನ್ನು ಮಾರಾಟ ಮಾಡಿಕೊಳ್ಳುತ್ತಿದ್ದಾರೆ, ಅಧಿಕಾರದ ಕೊನೆಗಾಲದಲ್ಲಿ ಹೆಸರು ಕೆಡಿಸಿಕೊಳ್ಳದೆ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು ಎಂದರು.

ಟೌನ್‌ಶಿಪ್‌ಗೆ ವಿರೋಧಿಸಿತ್ತು

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಗರದ ಹೊರವಲಯದಲ್ಲಿ ಐದು ಟೌನ್‌ಶಿಪ್‌ಗಳ ನಿರ್ಮಾಣಕ್ಕೆ ಮುಂದಾಗಿದ್ದೆ, ಆಗ ನನ್ನ ಸರ್ಕಾರಕ್ಕೆ ಬೆಂಬಲ ನೀಡಿದ್ದ ಕಾಂಗ್ರೆಸ್ ವಿರೋಧಿಸಿತ್ತು.

ಆ ಸಂದರ್ಭದಲ್ಲಿ ಕಾಂಗ್ರೆಸ್‌ನ ಎಚ್.ಕೆ.ಪಾಟೀಲ್ ಅಧ್ಯಕ್ಷತೆಯಲ್ಲಿ ಸತ್ಯಶೋಧನಾ ಸಮಿತಿ ರಚಿಸಲಾಯಿತು, ಆ ವರದಿಯಲ್ಲಿ ನವನಗರಗಳ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಲಾಗಿತ್ತು.

ಬಿಡದಿ ಬಳಿ ಟೌನ್‌ಶಿಪ್ ನಿರ್ಮಾಣ ಸಂಬಂಧ ಸ್ಥಳೀಯ ರೈತರ ಜೊತೆ ಎರಡು-ಮೂರು ಸಭೆಗಳನ್ನೂ ಮಾಡಿದ್ದೆ, ವಿರೋಧ ವ್ಯಕ್ತವಾದಾಗ ಯೋಜನೆಯನ್ನು ಕೈಬಿಟ್ಟಿದ್ದೆ ಎಂದರು.

ಬಿಡದಿ ರೈತರು ಕೃಷಿಕರೇ ಅಲ್ಲ

ಆದರೆ, ಇಂದು ಉಪಮುಖ್ಯಮಂತ್ರಿ, ಬಿಡದಿ ರೈತರು ಕೃಷಿಕರೇ ಅಲ್ಲ ಎಂಬುದಾಗಿ ಒಮ್ಮೆ ಹೇಳಿದರೆ, ಮತ್ತೊಮ್ಮೆ ಶೇಕಡ 80ರಷ್ಟು ರೈತರು ನವನಗರ ನಿರ್ಮಾಣಕ್ಕೆ ಅನುಮತಿ ಕೊಟ್ಟಿದ್ದಾರೆ ಎನ್ನುತ್ತಾರೆ.

ರೈತರನ್ನು ಬೆದರಿಸಿ ಭೂಸ್ವಾಧೀನಕ್ಕೆ ಶಿವಕುಮಾರ್ ಕೈಹಾಕಿದ್ದಾರೆ, ಈ ಯೋಜನೆಯಿಂದ ಸಾವಿರಾರು ಎಕರೆ ಕಬಳಿಕೆ ಆಗುತ್ತದೆ.

ವಶಪಡಿಸಿಕೊಂಡ ಭೂಮಿಯನ್ನು ಯಾರ‍್ಯಾರಿಗೆ ಹಂಚಲು ಹೊರಟಿದ್ದಾರೋ ತಿಳಿಯದು.

ಜಮೀನು ಯಾರ ಹೆಸರಿಗೆ

ಎಂಟು ಹಳ್ಳಿಗಳ ವ್ಯಾಪ್ತಿಯಲ್ಲಿ 2,320 ಎಕರೆ ಜಮೀನಿದೆ ಎಂದು ಉಲ್ಲೇಖಿಸಲಾಗಿತ್ತು, ಆದರೆ, ಅಧಿಸೂಚನೆಯಲ್ಲಿ 750 ಎಕರೆ ಎಂದಷ್ಟೇ ತಿಳಿಸಲಾಗಿದೆ, ಉಳಿದ ಜಮೀನು ಯಾರ ಹೆಸರಿಗೆ ಹೋಯಿತು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಶಾಸಕರು, ಅಧಿಕಾರಿಗಳು ಈ ಭೂಮಿಯನ್ನು ತಮ್ಮ ಹೆಸರಿಗೆ ಮಾಡಿಕೊಂಡು ಸರ್ಕಾರಿ ಹಣ ಲೂಟಿಗೆ ಹೊರಟಿದ್ದಾರೆ ಎಂದು ಆರೋಪಿಸಿದರು.

’ಎ’ ಖಾತಾ ಮತ್ತು ’ಬಿ’ ಖಾತಾ ಹೆಸರಿನಲ್ಲಿ ಬೆಂಗಳೂರು ಉಸ್ತುವಾರಿ ಸಚಿವರು ಹಣ ಹೊಡೆಯಲು ಹೊರಟಿದ್ದಾರೆ, ಅದಕ್ಕೆ ನಾಗರಿಕರು ಬಲಿಯಾಗಬಾರದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bidadi townshipcentral minister h d kumaraswamycm siddaramaiahcongres govt. real estate business
0 FacebookTwitterPinterestEmail
admin

previous post
ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

You may also like

ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

May 13, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

May 11, 2026

ಕರ್ನಾಟಕ ಕೇಸರಿ ಪಾಳೆಯಕ್ಕೆ ಪ್ರಧಾನಿ ಮೋದಿ ಪಾಠ

May 9, 2026

ಇಂದಿರಾ ಕಿಟ್‌ಗೆ ಕಾಂಗ್ರೆಸ್ ವರಿಷ್ಠರ ತಾತ್ಕಾಲಿಕ ಬ್ರೇಕ್

May 8, 2026

ಸದ್ಯದಲ್ಲೇ ಸಿದ್ದರಾಮಯ್ಯ, ಡಿಕೆಶಿಗೆ ದೆಹಲಿ ಬುಲಾವ್

May 7, 2026

ಪಂಚರಾಜ್ಯ ಚುನಾವಣೆ ಬಳಿಕ ಆರ್ ಎಸ್ ಎಸ್ ಗೆ ಕರ್ನಾಟಕವೇ...

May 6, 2026

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ :...

May 5, 2026

ಕಾಂಗ್ರೆಸ್ ತೆಕ್ಕೆಗೆ ದಾವಣಗೆರೆ-ಬಾಗಲಕೋಟೆ ಕ್ಷೇತ್ರ

May 4, 2026

ರಾಜಕಾರಣಿಗಳ ಓಲೈಕೆ ಬಿಡಿ: ಸಿದ್ದರಾಮಯ್ಯ ತಾಕೀತು

May 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (461)
  • ಅಂಕಣ (109)
  • ಉದ್ಯೋಗ (331)
  • ದಿನ ಭವಿಷ್ಯ (110)
  • ರಾಜಕೀಯ (1,955)
  • ರಾಜ್ಯ (2,269)
  • ರಾಷ್ಟ್ರ (2,237)
  • ವಿಶ್ಲೇಷಣೆ (189)
  • ಶಿಕ್ಷಣ (394)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ರಿಯಲ್ ಎಸ್ಟೇಟ್ ದಂಧೆಗೆ ಇಳಿದ ಕಾಂಗ್ರೆಸ್ ಸರ್ಕಾರ

    May 14, 2026
  • ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

    May 13, 2026
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

    May 12, 2026

KMS Special

  • ರಿಯಲ್ ಎಸ್ಟೇಟ್ ದಂಧೆಗೆ ಇಳಿದ ಕಾಂಗ್ರೆಸ್ ಸರ್ಕಾರ

    May 14, 2026
  • ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

    May 13, 2026
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

    May 12, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

May 13, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ