Tuesday, May 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಮುಂಗಾರು ಮಳೆ ಕೊರತೆ ಸಂಭವ; ಆಹಾರ ಉತ್ಪಾದನೆ ಶೇ.30 ಕುಂಠಿತ

by KM Shivaraju May 18, 2026
written by KM Shivaraju May 18, 2026 0 comments 1 minutes read
0FacebookTwitterPinterestEmail
9

ಬೆಂಗಳೂರು: ಮಧ್ಯಪ್ರಾಚ್ಯದ ಬಿಕ್ಕಟ್ಟು ಹಾಗೂ ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಶೇ.30 ರಷ್ಟು ಆಹಾರ ಉತ್ಪಾದನೆ ಕುಂಠಿತಗೊಳ್ಳಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಇಂದಿಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.


ಬೆಂಗಳೂರು ಪ್ರೆಸ್‌ಕ್ಲಬ್ ಏರ್ಪಡಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹವಮಾನ ತಜ್ಞರು ಮತ್ತು ಕೃಷಿ ವಿಜ್ಞಾನಿಗಳು ನೀಡಿರುವ ಮಾಹಿತಿಯಂತೆ ಈ ಬಾರಿ ನಮಗೆ ಪೂರ್ಣ ಪ್ರಮಾದಲ್ಲಿ ಮಳೆಯಾಗುವುದಿಲ್ಲ ಎಂದರು.
ತಜ್ಞರ ವರದಿ ಆಧಾರದ ಮೇಲೆ ಜಲಾನಯನ ಪ್ರದೇಶದ ರೈತರು ಕಬ್ಬು ಮತ್ತು ಭತ್ತದ ಬದಲು ಅಲ್ಪಾವದಿ ರಾಗಿ, ಬೇಳೆಕಾಳುಗಳಂತಹ ಬೆಳೆಗಳನ್ನು ಮಾತ್ರ ಬೆಳೆಯುವಂತೆ ಈಗಾಗಲೇ ಮನವಿ ಮಾಡಿಕೊಂಡಿದ್ದೇವೆ.


ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಪಂಚಾಯಿತಿಗಳಿಗೆ ಮಾಹಿತಿ ನೀಡಿ, ರೈತರಿಗೆ ಮಳೆ ಹಾಗೂ ರಸಗೊಬ್ಬರದ ಕೊರತೆ ಬಗ್ಗೆ ಮಾಹಿತಿ ನೀಡಿ, ಅಲ್ಪಾವಧಿ ಬೆಳೆ ಬೆಳೆಯಲು ಸಲಹೆ ಮಾಡಲಾಗುತ್ತಿದೆ ಎಂದು ಹೇಳಿದರು.
ಪ್ರಸಕ್ತ ವರ್ಷ 160 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಗುರಿಯಾಗಿತ್ತು. ಆದರೆ ಮಧ್ಯಪ್ರಾಚ್ಯದ ರಾಷ್ಟ್ರಗಳಲ್ಲಿ ಉಂಟಾಗಿರುವ ಬಿಕ್ಕಟ್ಟು, ಮಳೆ ಕೊರತೆಯಿಂದಾಗಿರುವ ನಮಗೆ ಶೇ. 30 ರಿಂದ 35 ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಕುಂಠಿತಗೊಳ್ಳಲಿದೆ.
ಬೋರ್‌ವೆಲ್ ಇಲ್ಲವೆ ನೀರಾವರಿ ಪ್ರದೇಶದಲ್ಲಿ ಕಬ್ಬು, ಭತ್ತ ಬೆಳೆಯಲು ರೈತರು ಮುಂದಾದರೂ ಅವರಿಗೆ ರಾಸಾಯನಿಕ ಗೊಬ್ಬರಗಳನ್ನು ಪೂರ್ಣ ಪ್ರಮಾಣದಲ್ಲಿ ಸರಬರಾಜು ಮಾಡಲು ಸಾಧ್ಯವಿಲ್ಲ.


ಮಳೆ ಕೊರತೆ ಜೊತೆಗೆ ರಸಗೊಬ್ಬರದ ಕೊರತೆಯಿಂದ ನಮಗೆ ಆಹಾರ ಉತ್ಪಾದನೆ ದೊಡ್ಡ ಪ್ರಮಾಣದಲ್ಲಿ ಕಡಿತವಾಗುತ್ತದೆ.
ಒಂದು ವೇಳೆ ರಾಜ್ಯದಲ್ಲಿ ಉತ್ತಮ ಮಳೆಯಾಗಿ ನಮ್ಮ ಜಲಾಶಯಗಳಿಗೆ ನೀರು ಹರಿದು ಬಂದರೆ ಮುಂದಿನ ಹಂಗಾಮಿಗೆ ರೈತರ ಭೂಮಿಗೆ ನೀರು ಹರಿಸಿ, ಅವರು ಭತ್ತ, ಕಬ್ಬು ಸೇರಿದಂತೆ ಯಾವುದೇ ಬೆಳೆ ಬೆಳೆಯಲು ಅವಕಾಶ ಮಾಡಿಕೊಡುವ ಭರವಸೆ ನೀಡಿದರು.
ಜಾಗತಿಕ ಮಟ್ಟದಲ್ಲಿ ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದ ರಸಗೊಬ್ಬರ ಉತ್ಪಾದನೆಗೆ ಬೇಕಾದ ಕಚ್ಚಾವಸ್ತುಗಳು ದೊರೆಯದ ಕಾರಣ ರಾಷ್ಟ್ರದಲ್ಲಿ ರಸಗೊಬ್ಬರ ಉತ್ಪಾದನೆಗೂ ತೊಡಕಾಗಿದೆ. ಅಷ್ಟೇ ಅಲ್ಲ ರಸಗೊಬ್ಬರ ಆಮದಿನಲ್ಲಿ ಅಸ್ಥಿರತೆ ಉಂಟಾಗುತ್ತಿದ್ದು, ಇದರಿಂದ ನಮಗೆ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆ ಮೇಲೆ ಭಾರಿ ಪರಿಣಾಮ ಬೀರದಲಿದೆ.
ರಸಗೊಬ್ಬರಗಳಿಗೆ ಪರ್ಯಾಯವಾಗಿ ರೈತರು ಜೈವಿಕ, ಸಾವಯವ ರಸಗೊಬ್ಬರ, ಹಸಿರೆಲೆಗೊಬ್ಬರದ ಕಡೆ ಹೆಚ್ಚು ಒತ್ತುಕೊಡಬೇಕು ಎಂದು ಮನವಿ ಮಾಡಿದರು.


ಕೇಂದ್ರ ಸರ್ಕಾರ ನಮಗೆ ಬೇಕಾಗಿರುವ ಬೇಡಿಕೆಯಲ್ಲಿ ಶೇ. 50 ರಷ್ಟನ್ನು ಮಾತ್ರ ಪೂರೈಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡೇ ಸರ್ಕಾರ ರಸಗೊಬ್ಬರಗಳ ಸಮರ್ಪಕ ನಿರ್ವಹಣೆಗೆ ಬಿಗಿ ಕ್ರಮಗಳನ್ನು ಕೈಗೊಂಡಿದೆ ಎಂದರು.
ಹಂಗಾಮಿನ ತೀವ್ರ ಬೇಡಿಕೆ ಸಂದರ್ಭದಲ್ಲಿ ಜಿಲ್ಲೆಯಿಂದ ಜಿಲ್ಲೆಗೆ ರಸಗೊಬ್ಬರ ಸಾಗಾಣಿಕೆ ನಿಷೇಧಿಸಲಾಗಿದೆ. ಅಕ್ರಮವಾಗಿ ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Agriculture Ministerchaluvarayaswamydeficientfall 30%FoodLack of fertilizerMonsoonproductionrains
0 FacebookTwitterPinterestEmail
KM Shivaraju

previous post
ಬಡ ರೈತರ ಭೂಮಿ ಲಪಟಾಯಿಸಲು ಬಿಡುವುದಿಲ್ಲ

You may also like

ಬಡ ರೈತರ ಭೂಮಿ ಲಪಟಾಯಿಸಲು ಬಿಡುವುದಿಲ್ಲ

May 16, 2026

ಪ್ರತ್ಯೇಕ ಎಸ್‌ಐಆರ್‌ಗೆ ಸಿದ್ದರಾಮಯ್ಯ ಚಿಂತನೆ

May 15, 2026

ಸಿದ್ದರಾಮಯ್ಯ ರಾಜ್ಯಸಭೆಗೆ

May 14, 2026

ರಿಯಲ್ ಎಸ್ಟೇಟ್ ದಂಧೆಗೆ ಇಳಿದ ಕಾಂಗ್ರೆಸ್ ಸರ್ಕಾರ

May 14, 2026

ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

May 13, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

May 11, 2026

ಕರ್ನಾಟಕ ಕೇಸರಿ ಪಾಳೆಯಕ್ಕೆ ಪ್ರಧಾನಿ ಮೋದಿ ಪಾಠ

May 9, 2026

ಇಂದಿರಾ ಕಿಟ್‌ಗೆ ಕಾಂಗ್ರೆಸ್ ವರಿಷ್ಠರ ತಾತ್ಕಾಲಿಕ ಬ್ರೇಕ್

May 8, 2026

ಸದ್ಯದಲ್ಲೇ ಸಿದ್ದರಾಮಯ್ಯ, ಡಿಕೆಶಿಗೆ ದೆಹಲಿ ಬುಲಾವ್

May 7, 2026

Social Networks

Facebook Twitter Instagram Linkedin Youtube Email Rss

KMS Analysis

  • ಮುಂಗಾರು ಮಳೆ ಕೊರತೆ ಸಂಭವ; ಆಹಾರ ಉತ್ಪಾದನೆ ಶೇ.30 ಕುಂಠಿತ

    May 18, 2026
  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025

Categories

  • Special Story (465)
  • ಅಂಕಣ (109)
  • ಉದ್ಯೋಗ (331)
  • ದಿನ ಭವಿಷ್ಯ (110)
  • ರಾಜಕೀಯ (1,959)
  • ರಾಜ್ಯ (2,273)
  • ರಾಷ್ಟ್ರ (2,241)
  • ವಿಶ್ಲೇಷಣೆ (190)
  • ಶಿಕ್ಷಣ (394)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಂಗಾರು ಮಳೆ ಕೊರತೆ ಸಂಭವ; ಆಹಾರ ಉತ್ಪಾದನೆ ಶೇ.30 ಕುಂಠಿತ

    May 18, 2026
  • ಬಡ ರೈತರ ಭೂಮಿ ಲಪಟಾಯಿಸಲು ಬಿಡುವುದಿಲ್ಲ

    May 16, 2026
  • ಪ್ರತ್ಯೇಕ ಎಸ್‌ಐಆರ್‌ಗೆ ಸಿದ್ದರಾಮಯ್ಯ ಚಿಂತನೆ

    May 15, 2026

KMS Special

  • ಮುಂಗಾರು ಮಳೆ ಕೊರತೆ ಸಂಭವ; ಆಹಾರ ಉತ್ಪಾದನೆ ಶೇ.30 ಕುಂಠಿತ

    May 18, 2026
  • ಬಡ ರೈತರ ಭೂಮಿ ಲಪಟಾಯಿಸಲು ಬಿಡುವುದಿಲ್ಲ

    May 16, 2026
  • ಪ್ರತ್ಯೇಕ ಎಸ್‌ಐಆರ್‌ಗೆ ಸಿದ್ದರಾಮಯ್ಯ ಚಿಂತನೆ

    May 15, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬಡ ರೈತರ ಭೂಮಿ ಲಪಟಾಯಿಸಲು ಬಿಡುವುದಿಲ್ಲ

May 16, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ