Wednesday, July 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, July 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

by KM Shivaraju June 6, 2026
written by KM Shivaraju June 6, 2026 0 comments 2 minutes read
0FacebookTwitterPinterestEmail
83

ಬೆಂಗಳೂರು: ತಾವು ಬಯಸಿದ ಖಾತೆ ನೀಡಲಿಲ್ಲ ಎಂದು ಅಸಮಾಧಾನಗೊಂಡು‌ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಹೈಕಮಾಂಡ್ ಸೇರಿದಂತೆ ಹಲವು ನಾಯಕರ ಸಂಧಾನಕ್ಕೆ ಮಣಿದು ತಮ್ಮ ರಾಜೀನಾಮೆ ವಾಪಸ್ ಪಡೆದಿದ್ದಾರೆ.

ಸಂಪುಟ ರಚನೆಗೂ ಮುನ್ನ ತಮಗೆ ನೀಡಿದ ಭರವಸೆಯಂತೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿ ನೀಡಲಿಲ್ಲ ಎಂದು ಬೇಸರಗೊಂಡು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಧಾನಕ್ಕೂ ಮಣಿಯದೆ‌ ತಮಿಳುನಾಡಿನ ಕೃಷ್ಣಗಿರಿಗೆ ತೆರಳಿದ್ಜ ರಾಮಲಿಂಗಾರೆಡ್ಡಿ ಬೆಳಿಗ್ಗೆ ಬೆಂಗಳೂರಿಗೆ ವಾಪಸ್ ಆದರು.

ಆನಂತರ ಹಲವು ನಾಟಕೀಯ ವಿದ್ಯಮಾನಗಳು ನಡೆದವು. ಮೊದಲಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಖಾಸಗಿ ಹೋಟೆಲ್ ನಲ್ಲಿ ರಾಮಲಿಂಗಾರೆಡ್ಡಿ ಅವರ ಜೊತೆಗೆ ಸುಧೀರ್ಘ ಮಾತುಕತೆ ನಡೆಸಿ ಮನವೊಲಿಸುವ ಪ್ರಯತ್ನ ನಡೆಸಿದರು. ಇದಾದ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಮಲಿಂಗಾರೆಡ್ಡಿ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿದರು.

ಬಳಿಕ ಶಾಸಕರ ಭವನಕ್ಕೆ ಆಗಮಿಸಿದ ರಾಮಲಿಂಗಾರೆಡ್ಡಿ ಅವರ ಜೊತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸಂಧಾನ ಮಾತುಕತೆ ನಡೆಸಿದರು. ಈ ವೇಳೆ ಸದ್ಯದಲ್ಲೇ ನಡೆಯಲಿರುವ ಸಂಪುಟ ವಿಸ್ತರಣೆ ಸಮಯದಲ್ಲಿ ತಮ್ಮ ಅನುಭವಕ್ಕೆ ಧಕ್ಕೆ ತಾರದೆ ರೀತಿಯಲ್ಲಿ ಜವಾಬ್ದಾರಿ ನೀಡಲಾಗುವುದು. ಅಷ್ಟೇ ಅಲ್ಲ, ಮುಂಬರುವ ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಹೆಚ್ಚಿನ ಮಾನ್ಯತೆ ನೀಡಲಾಗುವುದು ಎಂದು ಭರವಸೆ ನೀಡುವ ಮೂಲಕ ರಾಮಲಿಂಗಾರೆಡ್ಡಿ ಅವರ ಅಸಮಾಧಾನ ತಣಿಸುವ ಪ್ರಯತ್ನ ನಡೆಸಿದರು.

ಇದಾದ ಬಳಿಕ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಹೈಕಮಾಂಡ್ ನೀಡಿದ ಸಲಹೆಗೆ ಸಂಬಂಧಿಸಿದ ರಾಮಲಿಂಗಾರೆಡ್ಡಿ ರಾಜಿನಾಮೆಯ ತಮ್ಮ ನಿರ್ಧಾರ ವಾಪಾಸ್ ಪಡೆಯುವದಾಗಿ ತಿಳಿಸಿದರು.

ಗೊಂದಲಕ್ಕೆ ತೆರೆ :

ಇದಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಸುದ್ದಿಗಾರರ ಜೊತೆ ಮಾತನಾಡಿದ ಸುರ್ಜೇವಾಲ ರಾಜ್ಯ ಕಾಂಗ್ರೆಸ್ ನಲ್ಲಿ ಉಂಟಾಗಿದ್ದ ಗೊಂದಲ ಬಗೆಹರಿದಿದೆ. ಬಿಜೆಪಿ ನಾಯಕರು ಅನಗತ್ಯ ಕಾರಣಕ್ಕಾಗಿ ಗೊಂದಲ ಮೂಡಿಸಲು ಪ್ರಯತ್ನ ನಡೆಸಿದರು. ಆದರೆ ಕಾಂಗ್ರೆಸ್ ಒಂದು ಕುಟುಂಬದ ರೀತಿಯಲ್ಲಿ ವರ್ತಿಸುವ ಮೂಲಕ ಅವರ ಪ್ರಯತ್ನವನ್ನು ಮೂಲೆಗುಂಪು ಮಾಡಿತು ಎಂದು ಹೇಳಿದರು.

ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಜವಾಬ್ದಾರಿಯುತ ಹಿರಿಯ ನಾಯಕ. ಎಂಟು ಬಾರಿ ಶಾಸಕರಾಗಿ ಆಯ್ಕೆಯಾದವರು ಪಕ್ಷದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ವಿದ್ಯಾರ್ಥಿ ಕಾಂಗ್ರೆಸ್ ನಿಂದ ರಾಜಕಾರಣಕ್ಕೆ ಧುಮುಕಿದ ಅವರು ಇಂದಿಗೂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಪಾಲಿಗೆ ಅವರು ಅಮೂಲ್ಯವಾದ ಆಸ್ತಿ. ಹೀಗಾಗಿ ಅವರು ಹೈಕಮಾಂಡ್ ಮಾತಿಗೆ ಒಪ್ಪಿ ತಮ್ಮ ರಾಜೀನಾಮೆ ನಿರ್ಧಾರವನ್ನು ಬದಲಾಯಿಸಿದ್ದಾರೆ. ಅಲ್ಲದೆ ತಾವು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ವಾಪಸ್ ಪಡೆದಿದ್ದಾರೆ ಎಂದು ತಿಳಿಸಿದರು.

ನಾನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರೊಂದಿಗೆ ರಾಮಲಿಂಗಾರೆಡ್ಡಿ ಅವರ ಜೊತೆ ಮಾತನಾಡಿ ರಾಜೀನಾಮೆ ವಾಪಸ್ ಪಡೆಯಲು ಕೋರಿದೆವು. ಅದಕ್ಕೆ ಸಮ್ಮತಿಸಿದ ಅವರು ರಾಜೀನಾಮೆ ವಾಪಸ್ ಪಡೆದಿದ್ದಾರೆ ಎಂದರು.

ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿರುಕು ಮೂಡಿದೆ ಎಂದು ಸಂಭ್ರಮಿಸುತ್ತಿದ್ದ ಬಿಜೆಪಿಗೆ ಇದರಿಂದ ಭ್ರಮನಿರಸನ ವಾಗಿದೆ. ಎಲ್ಲಾ ಕಾಂಗ್ರೆಸ್ ನಾಯಕರು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಅಂಗೀಕಾರ ಇಲ್ಲ:

ಇದಕ್ಕೂ ಮುನ್ನ ರಾಮಲಿಂಗಾರೆಡ್ಡಿ ಅವರ ಜೊತೆ ನಡೆಸಿದ ಸಂಧಾನದ ಕುರಿತಾಗಿ ಮಾಹಿತಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯಾವುದೇ ಕಾರಣಕ್ಕೂ ತಾವು ರಾಮಲಿಂಗಾರೆಡ್ಡಿ ಅವರ ರಾಜೀನಾಮೆ‌ ಅಂಗೀಕರಿಸುವುದಿಲ್ಲ.‌ಅವರು ತಮ್ಮ ನಿರ್ಧಾರ ವಾಪಾಸ್ ಪಡೆಯಲಿದ್ದಾರೆ ಎಂದು ಹೇಳಿದರು.
ಹಿರಿಯರಾದ ರಾಮಲಿಂಗಾರೆಡ್ಡಿ ಅವರ ಜೊತೆ ಮಾತುಕತೆ ನಡೆಸಿದ್ದೇನೆ. ಈ ವೇಳೆ ಹಲವಾರು ವಿಷಯಗಳು ಚರ್ಚೆ ಮಾಡಿದ್ದಾರೆ. ಅವುಗಳನ್ನು ಈಗ ಬಹಿರಂಗವಾಗಿ ಚರ್ಚಿಸುವುದಿಲ್ಲ. ಅವರು ತಮ್ಮ ನಿರ್ಧಾರ ಬದಲಿಸಿ ಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Bangalore UrbanDepartmentDevelopmentministerramalinga reddyresignationwithdraws
0 FacebookTwitterPinterestEmail
KM Shivaraju

previous post
ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ
next post
ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

You may also like

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (520)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,014)
  • ರಾಜ್ಯ (2,328)
  • ರಾಷ್ಟ್ರ (2,293)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026

KMS Special

  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

    July 17, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ