Friday, June 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, June 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಅಡ್ಡ ಮತದಾನ: ಬಿಜೆಪಿ ಸತ್ಯ ಶೋಧನಾ ಸಮಿತಿ

by KM Shivaraju June 19, 2026
written by KM Shivaraju June 19, 2026 0 comments 1 minutes read
0FacebookTwitterPinterestEmail
4

ಬೆಂಗಳೂರು:ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ ಮತದಾನ ಘಟನೆಯನ್ನು ಪಕ್ಷದ ದೆಹಲಿ ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದಾರೆ.

ಅಡ್ಡ ಮತದಾನ ಕುರಿತಂತೆ ರಾಜ್ಯ ನಾಯಕರಿಂದ ವರದಿ ಕೇಳಿರುವ ವರಿಷ್ಠರು, ರಾಜ್ಯ ನಾಯಕತ್ವದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೂವರು ಸದಸ್ಯರ ಸಮಿತಿ

ಅಡ್ಡ ಮತದಾನದ ಸತ್ಯಾಸತ್ಯತೆ ಮತ್ತು ವಾಸ್ತವಿಕತೆ ತಿಳಿಯಲು, ಪಕ್ಷದ ಮಾಜಿ ಪ್ರಧಾನಕಾರ್ಯದರ್ಶಿ ಹಾಗೂ ಹಾಲಿ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಮೂವರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಲಾಗಿದೆ.

ಮಾಜಿ ಸಚಿವ ಎನ್.ಮಹೇಶ್, ವಿಧಾನಸಭಾ ಸದಸ್ಯ ಮಹೇಶ್ ಟೆಂಗಿನಕಾಯಿ ಸಮಿತಿಯ ಇತರ ಸದಸ್ಯರಾಗಿದ್ದಾರೆ.

ಘಟನೆ ಬಗ್ಗೆ ಪೂರ್ಣ ಮಾಹಿತಿ ಸಿದ್ಧಪಡಿಸಿ, ಜೂನ್ 27ರಂದು ದೆಹಲಿಗೆ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಸೂಚಿಸಿದ್ದಾರೆ.

ವರಿಷ್ಠರಿಗೆ ಅಗರ್ವಾಲ್ ವರದಿ

ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ತಮ್ಮ ಪಕ್ಷದ ಶಾಸಕರ ಅಡ್ಡ ಮತದಾನ ರಾಜ್ಯ ನಾಯಕತ್ವದ ವೈಫಲ್ಯ ಎಂದಿದ್ದಾರೆ, ಅಲ್ಲದೆ, ಈ ಕುರಿತಂತೆ ಪಕ್ಷದ ವರಿಷ್ಠರಿಗೆ ವರದಿ ನೀಡಿದ್ದಾರೆ ಎಂದು ಹೇಳಲಾಗಿದೆ.

ತಮ್ಮ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲರನ್ನೂ ಹಿಡಿದಿಟ್ಟುಕೊಳ್ಳುವಲ್ಲಿ ರಾಜ್ಯ ನಾಯಕರು ವಿಫಲರಾಗಿದ್ದಾರೆ, ಪಕ್ಷದ ಅಧ್ಯಕ್ಷರು ಮತ್ತು ವಿಧಾನಸಭೆಯ ಪ್ರತಿಪಕ್ಷ ನಾಯಕರು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುತ್ತಿಲ್ಲ.

ಶಾಸಕರು ಬಣಗಳಾಗಿ ವಿಭಜನೆಯಾಗಿದ್ದಾರೆ, ಹೀಗಾಗಿ ಪಕ್ಷದ ಶಿಸ್ತು ಇಲ್ಲಿ ಕೆಲಸ ಮಾಡುತ್ತಿಲ್ಲ, ಶಾಸಕರ ಅಡ್ಡ ಮತದಾನಕ್ಕೆ ನಾಯಕತ್ವದ ವೈಫಲ್ಯವೇ ಕಾರಣ ಎಂದು ತಮ್ಮ ವರದಿಯಲ್ಲಿ ತಿಳಿಸಿರುವುದಾಗಿ ಗೊತ್ತಾಗಿದೆ.

ನಬಿನ್‌ರಿಂದ ಪ್ರಾಥಮಿಕ ಮಾಹಿತಿ

ರಾಧಾ ಮೋಹನ್ ದಾಸ್ ಅಗರ್ವಾಲ್ ಮಾಹಿತಿ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಗುರುವಾರ ರಾತ್ರಿಯೇ ವಿಜಯೇಂದ್ರ ಅವರನ್ನು ಸಂಪರ್ಕಿಸಿ ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮಾಹಿತಿ ಪಡೆದರು.

ನಂತರ ಸತ್ಯಾಸತ್ಯತೆ ಅರಿಯಲು ಶೋಧನಾ ಸಮಿತಿ ರಚಿಸುತ್ತೇವೆ, ವರದಿ ಸಿದ್ಧಗೊಳ್ಳುತ್ತಿದ್ದಂತೆ ದೆಹಲಿಗೆ ಬನ್ನಿ ಎಂದು ಸೂಚಿಸಿದರು.

ತಿಂಗಳ 25ರೊಳಗೆ ವರದಿ

ತ್ರಿಸದಸ್ಯ ಸಮಿತಿ ಪಕ್ಷದ ಎಲ್ಲಾ ಶಾಸಕರು ಮತ್ತು ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳ ಜೊತೆ ಮಾತುಕತೆ ನಡೆಸಿ ವರದಿ ಸಿದ್ಧಪಡಿಸಬೇಕು, ಈ ಸಮಯದಲ್ಲಿ ಅಡ್ಡ ಮತದಾನಕ್ಕೆ ಕಾರಣವಾದ ಅಂಶಗಳ ಬಗ್ಗೆಯೂ ಅಧ್ಯಯನ ನಡೆಸಲು ಸೂಚನೆ ನೀಡಿದ್ದು, ಈ ತಿಂಗಳ 25ರೊಳಗೆ ವರದಿ ನೀಡಲು ಸೂಚನೆ ನೀಡಲಾಗಿದೆ.

ರಾಧಾಮೋಹನ್ ದಾಸ್ ಸಲಹೆ ಮೇರೆಗೆ ಅಶೋಕ್ ಗುರುವಾರ ರಾತ್ರಿಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ ಮೈತ್ರಿಕೂಟದ ಶಾಸಕರಿಂದ ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b y vijayendrabjp central leadersbjp fact finding committeecouncil electioncross votingr ashokradha mohan das agarval
0 FacebookTwitterPinterestEmail
KM Shivaraju

previous post
ಪರಿಷತ್: ಕಾಂಗ್ರೆಸ್, ಬಿಜೆಪಿ ಗೆಲುವು; ಜೆಡಿಎಸ್ ಸೋಲು

You may also like

ಪರಿಷತ್: ಕಾಂಗ್ರೆಸ್, ಬಿಜೆಪಿ ಗೆಲುವು; ಜೆಡಿಎಸ್ ಸೋಲು

June 18, 2026

ಎಸ್‌ಐಆರ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

June 17, 2026

ಪರಿಷತ್ ಚುನಾವಣೆ: ಕಾಂಗ್ರೆಸ್ ಸರ್ಕಾರ ರೆಸಾರ್ಟ್‌ಗೆ

June 16, 2026

ಮೇಕೆದಾಟು: ಶಿವಕುಮಾರ್-ವಿಜಯ್ ಮಹತ್ವದ ಚರ್ಚೆ

June 15, 2026

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (492)
  • ಅಂಕಣ (109)
  • ಉದ್ಯೋಗ (333)
  • ದಿನ ಭವಿಷ್ಯ (110)
  • ರಾಜಕೀಯ (1,986)
  • ರಾಜ್ಯ (2,300)
  • ರಾಷ್ಟ್ರ (2,267)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಡ್ಡ ಮತದಾನ: ಬಿಜೆಪಿ ಸತ್ಯ ಶೋಧನಾ ಸಮಿತಿ

    June 19, 2026
  • ಪರಿಷತ್: ಕಾಂಗ್ರೆಸ್, ಬಿಜೆಪಿ ಗೆಲುವು; ಜೆಡಿಎಸ್ ಸೋಲು

    June 18, 2026
  • ಎಸ್‌ಐಆರ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    June 17, 2026

KMS Special

  • ಅಡ್ಡ ಮತದಾನ: ಬಿಜೆಪಿ ಸತ್ಯ ಶೋಧನಾ ಸಮಿತಿ

    June 19, 2026
  • ಪರಿಷತ್: ಕಾಂಗ್ರೆಸ್, ಬಿಜೆಪಿ ಗೆಲುವು; ಜೆಡಿಎಸ್ ಸೋಲು

    June 18, 2026
  • ಎಸ್‌ಐಆರ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    June 17, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪರಿಷತ್: ಕಾಂಗ್ರೆಸ್, ಬಿಜೆಪಿ ಗೆಲುವು; ಜೆಡಿಎಸ್ ಸೋಲು

June 18, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ