Thursday, July 2, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 2, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಬಿಜೆಪಿ ಅಧಿಕಾರಕ್ಕೆ ತರಲು ಆರ್‌ಎಸ್‌ಎಸ್ ರಣತಂತ್ರ

by KM Shivaraju July 2, 2026
written by KM Shivaraju July 2, 2026 0 comments 1 minutes read
0FacebookTwitterPinterestEmail
5

ಬೆಂಗಳೂರು:ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲೇಬೇಕೆಂದು ಪಣ ತೊಟ್ಟಿರುವ ಆರ್‌ಎಸ್‌ಎಸ್ ತನ್ನ ಪ್ರಮುಖ ಸ್ವಯಂ ಸೇವಕರ ಸಭೆಯನ್ನು ಜುಲೈ 6 ರಿಂದ 10 ದಿನಗಳ ಕಾಲ ಆಯೋಜಿಸಿದೆ.

ಸರ ಸಂಘ ಸಂಚಾಲಕ ಮೋಹನ್ ಭಾಗವತ್ ಸಭೆ ನೇತೃತ್ವ ವಹಿಸಲಿದ್ದು, ಇತರ ಪ್ರಮುಖರಾದ ಸರ ಕಾರ್ಯವಾಹಕ ದತ್ತಾತ್ರೇಯ ಹೊಸಬಾಳೆ, ಸಹ ಕಾರ್ಯವಾಹಕರಾದ ಡಾ.ಕೃಷ್ಣಗೋಪಾಲ್, ಸಿ.ಆರ್.ಮುಕುಂದ್, ಅರುಣ್ ಕುಮಾರ್, ರಾಮದತ್ತ, ಅಲೋಕ್ ಕುಮಾರ್, ಅತುಲ್ ಲಿಮಯೇ ಜೊತೆಗೆ ಅಖಿಲ ಭಾರತೀಯ ಕಾರ್ಯವಿಭಾಗದ ಪ್ರಮುಖರು, ಕಾರ್ಯಕಾರಿ ಮಂಡಳಿ ಸದಸ್ಯರು, ಸ್ಥಳೀಯ ಕಾರ್ಯಕರ್ತರೊಂದಿಗೆ ನಿರಂತರ ಸಭೆಗಳನ್ನು ನಡೆಸಲಿದ್ದಾರೆ.

ನಾಯಕರಿಗೆ ಆಹ್ವಾನ ಇಲ್ಲ

ಕುಂದಾನಗರಿ ಬೆಳಗಾವಿಯಲ್ಲಿ ಸಭೆ ಆಯೋಜಿಸಿದ್ದು, ಇದರಲ್ಲಿ ಬಿಜೆಪಿ ರಾಜ್ಯ ನಾಯಕರಾರಿಗೂ ಆಹ್ವಾನ ಇಲ್ಲ.

ಕರ್ನಾಟಕ ಬಿಜೆಪಿ ನಾಯಕರ ನಡುವಿನ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಆಶಾಭಾವನೆ ಇಲ್ಲದ ಕಾರಣದಿಂದಲೇ ಕಳೆದ ಮೂರು ತಿಂಗಳಿಂದ ಆರ್‌ಎಸ್‌ಎಸ್ ನಿರಂತರ ಸಭೆಗಳನ್ನು ನಡೆಸುತ್ತದೆ.

ಈ ಮಧ್ಯೆ, ಆರ್‌ಎಸ್‌ಎಸ್ ವಿರುದ್ಧ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪ್ರತಿನಿಧಿಗಳು ನಡೆಸುತ್ತಿರುವ ವಾಗ್ದಾಳಿಗೆ ತಕ್ಕ ಉತ್ತರ ನೀಡುವುದೂ ಸಭೆಯ ಕಾರ್ಯಕ್ರಮಗಳ ಉದ್ದೇಶವಾಗಿದೆ.

ಗಂಭೀರ ಪರಿಗಣನೆ

ಬಿಹಾರ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರ್‌ಎಸ್‌ಎಸ್ ಇದೀಗ ಕರ್ನಾಟಕವನ್ನು ಗಂಭೀರವಾಗಿ ಪರಿಗಣಿಸಿದೆ.

ಜಾತ್ಯತೀತವಾಗಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಉದ್ದೇಶದಿಂದ ಮುಂದಿನ ಎರಡು ವರ್ಷ ಕರ್ನಾಟಕದಾದ್ಯಂತ ಆರ್‌ಎಸ್‌ಎಸ್ ಕಾರ್ಯಕರ್ತರು ಸಮಾಜದ ಕೆಳಹಂತದಲ್ಲಿ ಸಂಘಟನೆಗೆ ಮುಂದಾಗಲಿದ್ದಾರೆ.

ಯುವಜನರ ಪಡೆ ರಚನೆ

ತುಳಿತಕ್ಕೆ ಒಳಗಾಗಿರುವ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರಲ್ಲಿ ಯುವಜನರ ಪಡೆ ರಚಿಸುವುದು ಕಾರ್ಯಕ್ರಮಗಳಲ್ಲಿ ಒಂದಾಗಿದೆ.

ಈ ಸಿದ್ಧಾಂತದ ಆಧಾರದ ಮೇಲೆ ಕುಂದಾನಗರಿಯಲ್ಲಿ ಸಭೆಗಳು ನಡೆಯಲಿವೆ, ಸಭೆಯ ಎಲ್ಲಾ ದಿನಗಳಲ್ಲೂ ಭಾಗವತ್ ಮತ್ತು ಇತರ ಪ್ರಮುಖರು ಭಾಗವಹಿಸಿ ಮಾರ್ಗದರ್ಶನ ಮಾಡಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bring bjp to powerkarnatakamohan bhagavatrss convention
0 FacebookTwitterPinterestEmail
KM Shivaraju

previous post
ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

You may also like

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

June 30, 2026

ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ

June 29, 2026

ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

June 26, 2026

ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

June 25, 2026

ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

June 24, 2026

ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

June 24, 2026

ಸರ್ಕಾರಿ ನೌಕರರ ಶಿಸ್ತುಪಾಲನೆ ಕಳ್ಳಾಟಕ್ಕೆ ಬ್ರೇಕ್

June 23, 2026

ಸಂಪುಟ ಸೇರ್ಪಡೆಗೂ ಮ್ಯಾನೇಜ್ ಮೆಂಟ್ ಕೋಟಾ : ಹೆಚ್ ಡಿಕೆ...

June 22, 2026

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಬ್ರೇಕ್

June 22, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (504)
  • ಅಂಕಣ (109)
  • ಉದ್ಯೋಗ (336)
  • ದಿನ ಭವಿಷ್ಯ (110)
  • ರಾಜಕೀಯ (1,998)
  • ರಾಜ್ಯ (2,312)
  • ರಾಷ್ಟ್ರ (2,277)
  • ವಿಶ್ಲೇಷಣೆ (197)
  • ಶಿಕ್ಷಣ (397)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬಿಜೆಪಿ ಅಧಿಕಾರಕ್ಕೆ ತರಲು ಆರ್‌ಎಸ್‌ಎಸ್ ರಣತಂತ್ರ

    July 2, 2026
  • ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

    July 1, 2026
  • ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

    June 30, 2026

KMS Special

  • ಬಿಜೆಪಿ ಅಧಿಕಾರಕ್ಕೆ ತರಲು ಆರ್‌ಎಸ್‌ಎಸ್ ರಣತಂತ್ರ

    July 2, 2026
  • ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

    July 1, 2026
  • ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

    June 30, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ