Wednesday, August 26, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, August 26, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

by KM Shivaraju July 8, 2026
written by KM Shivaraju July 8, 2026 0 comments 1 minutes read
0FacebookTwitterPinterestEmail
73

ಬೆಂಗಳೂರು:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಹೊಂದಿದವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಮಂತ್ರಿ ಆಗಲಿದ್ದಾರೆ.

ಮುಖ್ಯಮಂತ್ರಿ ಜುಲೈ 15ರ ಒಳಗೆ ತಮ್ಮ ಮಂತ್ರಿಮಂಡಲ ವಿಸ್ತರಿಸಿ 18 ಮಂದಿ ಸೇರ್ಪಡೆಗೆ ಪೂರ್ವ ಸಿದ್ಧತೆ ನಡೆಸಿದ್ದಾರೆ.

ಒಂದು ಸುತ್ತಿನ ಸಮಾಲೋಚನೆ

ವಿಸ್ತರಣೆಗೆ ಸಂಬಂಧಿಸಿದಂತೆ ಖರ್ಗೆ ಅವರನ್ನು ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆ ನಡೆಸಿರುವ ಶಿವಕುಮಾರ್, ಮಂಗಳವಾರ ತಡರಾತ್ರಿ ನಗರದ ಪಂಚತಾರಾ ಹೋಟೆಲ್ ಒಂದರಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆ ಸುದೀರ್ಘ ಸಮಾಲೋಚನೆ ನಡೆಸಿದರು.

ಸಂಪುಟ ವಿಸ್ತರಣೆ ವೇಳೆ ಮೂಲ ಕಾಂಗ್ರೆಸ್ಸಿಗರು ಹಾಗೂ ಯುವ ನಾಯಕರಿಗೆ ಹೆಚ್ಚು ಅವಕಾಶ ದೊರೆಯಲಿದೆ.

ಸಂಭವನೀಯ ಸಚಿವರ ಪಟ್ಟಿಗೆ ಸಂಬಂಧಿಸಿದಂತೆ ಖರ್ಗೆ ಜೊತೆ ಸಮಾಲೋಚನೆ ಸಂದರ್ಭದಲ್ಲಿ, ಪಕ್ಷಕ್ಕೆ ಹೆಚ್ಚು ದುಡಿದವರಿಗೆ ಅವಕಾಶ ಕಲ್ಪಿಸೋಣ ಎಂದಿದ್ದಲ್ಲದೆ, ಯಾವ ಮಾನದಂಡಗಳನ್ನು ಅನುಸರಿಬೇಕೆಂಬ ಬಗ್ಗೆಯೂ ಚರ್ಚಿಸಲಾಗಿದೆ.

ಶಾಸಕರ ಪೈಪೋಟಿ

ಸಂಪುಟ ಸೇರಲು ಒಕ್ಕಲಿಗ ಮತ್ತು ವೀರಶೈವ ಸಮುದಾಯದ ಶಾಸಕರಲ್ಲಿ ಭಾರೀ ಪೈಪೋಟಿ ಇದೆ, ಉಳಿದ ಸಮುದಾಯದವರಿಂದ ಹೆಚ್ಚು ಒತ್ತಡ ಕಂಡು ಬಂದಿಲ್ಲ.

ಆದರೆ, ಎಲ್ಲಾ ಸಮುದಾಯ ಮತ್ತು ಪ್ರಾಂತ್ಯಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ ಖರ್ಗೆ ಕಿವಿಮಾತು ಹೇಳಿದ್ದಾರೆ.

ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಸಲಹೆ ನೀಡಿ, ಹೆಚ್ಚು ಒತ್ತಡಕ್ಕೆ ಒಳಗಾಗುವುದು ಬೇಡ, ಆಡಳಿತದ ಕಡೆ ಗಮನಹರಿಸಿ, ನಿಮಗೆ ಅಗತ್ಯವಿರುವವರ ಹೆಸರು ನೀಡಿ, ಉಳಿದಿದ್ದನ್ನು ನಾವು ಮತ್ತು ಖರ್ಗೆ ನಿಭಾಯಿಸುತ್ತೇವೆ ಎಂದಿದ್ದಾರೆ.

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ
ವರಿಷ್ಠರ ತೀರ್ಮಾನ ಅಂತಿಮ

ರಾಹುಲ್ ಗಾಂಧಿ ಸಂದೇಶದ ನಂತರ ಶಿವಕುಮಾರ್ ಬಹಿರಂಗ ಹೇಳಿಕೆ ನೀಡಿ, ಮಂತ್ರಿ ಯಾರಾಗಬೇಕು ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ, ನಿಮ್ಮ ಬೇಡಿಕೆಗಳನ್ನು ನಾನು ಅವರ ಗಮನಕ್ಕೆ ತರುತ್ತೇನೆ, ಆದರೆ ಅವರ ತೀರ್ಮಾನವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ.

ಯಾರೊಬ್ಬರಿಗೂ ಮಂತ್ರಿಸ್ಥಾನದ ಸ್ಪಷ್ಟ ಭರವಸೆ ನೀಡದೆ, ಖರ್ಗೆ ಅವರನ್ನು ಭೇಟಿ ಮಾಡುವಂತೆ ಸೂಕ್ಷ್ಮವಾಗಿ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಾ ಮಂತ್ರಿಮಂಡಲ ವಿಸ್ತರಣೆ ಕುರಿತು ಹೆಚ್ಚು ಆಸಕ್ತಿ ಹೊಂದಿಲ್ಲವಾದರೂ, ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೆಸರು ಮಾತ್ರ ಶಿಫಾರಸು ಮಾಡಿದ್ದಾರೆ.

ಸಂಪುಟ ವಿಸ್ತರಣೆ ಕಸರತ್ತು

ರಾಹುಲ್ ಗಾಂಧಿ, ಗುರುವಾರ ಅಥವಾ ಶುಕ್ರವಾರ ಸ್ವದೇಶಕ್ಕೆ ಮರಳಲಿದ್ದು, ನಂತರ ಸಂಪುಟ ವಿಸ್ತರಣೆ ಕಸರತ್ತು ಇನ್ನಷ್ಟು ಚುರುಕಾಗಲಿದೆ.

ಉನ್ನತ ಮೂಲಗಳ ಪ್ರಕಾರ ಜುಲೈ 10ರಂದು ಮುಖ್ಯಮಂತ್ರಿ ಅವರನ್ನು ದೆಹಲಿಗೆ ಕರೆಸಿಕೊಂಡು ಮಂತ್ರಿಮಂಡಲ ವಿಸ್ತರಣೆಗೆ ರಾಹುಲ್ ಗಾಂಧಿ ಅನುಮತಿ ನೀಡುತ್ತಾರೆ ಎಂಬ ಮಾಹಿತಿ ಇದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc presidentcabinet expansioncm d k shivakumarkarnatakamallikarjuna khargeRahul Gandhiranadeep singh surjevala
0 FacebookTwitterPinterestEmail
KM Shivaraju

previous post
ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ
next post
ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

You may also like

ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

August 25, 2026

ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

August 24, 2026

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

August 22, 2026

’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ ವಿಸ್ತರಣೆ

August 21, 2026

ಕರ್ನಾಟಕಕ್ಕೆ ನ್ಯಾಯಯುತ ಅನುದಾನ ನೀಡಿ: ಡಿಕೆಶಿ

August 20, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ವಿಧಾನಸಭೆ ಮತ್ತೆ ಪ್ರವೇಶಿಸಲು ಜನಪ್ರಿಯತೆ ಗಳಿಸಿ

August 19, 2026

ಆಪ್ತ ಸಚಿವರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ

August 18, 2026

ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

August 17, 2026

ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

August 14, 2026

Social Networks

Facebook Twitter Instagram Linkedin Youtube Email Rss

KMS Analysis

  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026

Categories

  • Special Story (548)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,041)
  • ರಾಜ್ಯ (2,356)
  • ರಾಷ್ಟ್ರ (2,321)
  • ವಿಶ್ಲೇಷಣೆ (200)
  • ಶಿಕ್ಷಣ (405)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

    August 25, 2026
  • ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

    August 24, 2026
  • ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

    August 22, 2026

KMS Special

  • ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

    August 25, 2026
  • ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

    August 24, 2026
  • ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

    August 22, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

August 25, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ