Saturday, August 1, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, August 1, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

by KM Shivaraju July 31, 2026
written by KM Shivaraju July 31, 2026 0 comments 1 minutes read
0FacebookTwitterPinterestEmail
6

ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಮಂತ್ರಿಮಂಡಲವನ್ನು ಸೋಮವಾರ ಸಂಜೆ ವಿಸ್ತರಿಸಿ ಖಾಲಿ ಸ್ಥಾನಗಳನ್ನು ಭರ್ತಿ ಮಾಡಲಿದ್ದಾರೆ.

ಲೋಕಭವನದ ಗಾಜಿನಮನೆಯಲ್ಲಿ ಅಂದು ಸಂಜೆ 5 ಗಂಟೆಗೆ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಸಿದ್ಧತೆ

ಪ್ರಮಾಣವಚನ ಕಾರ್ಯಕ್ರಮಕ್ಕೆ ಡಿಪಿಆರ್ ಎಲ್ಲಾ ಸಿದ್ಧತೆ ನಡೆಸಿರುವುದಲ್ಲದೆ, ಸರ್ಕಾರ ಬಯಸುವವರಿಗೆ ಆಹ್ವಾನಪತ್ರ ಕಳುಹಿಸಲು ತಯಾರಿ ಮಾಡಿದೆ.

ರಾಜ್ಯದಲ್ಲಿ ತಲೆದೋರಿರುವ ಬರ ಹಾಗೂ ಕಾವೇರಿ ಜಲ ವಿವಾದ ಹಿನ್ನೆಲೆಯಲ್ಲಿ ಸಮಾರಂಭವನ್ನು ಆದಷ್ಟು ಸರಳವಾಗಿ ಹಾಗೂ ಹೆಚ್ಚು ಜನ ಜಮಾಯಿಸದಂತೆ ನೋಡಿಕೊಳ್ಳಿ ಎಂದು ಡಿಪಿಆರ್ ಮತ್ತು ಗೃಹ ಇಲಾಖೆಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಮಂತ್ರಿ ಆಗುವವರ ಬೆಂಬಲಿಗರು ಲೋಕಭವನದ ಹೊರಗೆ ಹಾಗೂ ಆಸುಪಾಸಿನಲ್ಲಿ ಸಂಭ್ರಮಾಚರಣೆ ಮಾಡದಂತೆ, ಪಟಾಕಿ ಸಿಡಿಸದಂತೆ ಕಟ್ಟಾದೇಶ ಮಾಡಲಾಗಿದೆ.

ಪಟ್ಟಿ ಮುಖ್ಯಮಂತ್ರಿ ಕೈಸೇರಿಲ್ಲ

ಸಂಭಾವ್ಯ ಸಚಿವರ ಪಟ್ಟಿ ಇನ್ನೂ ಮುಖ್ಯಮಂತ್ರಿ ಕೈಸೇರಿಲ್ಲ, ಆದರೆ, ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುಜೇವಾಲ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಂದ ಒಪ್ಪಿಗೆ ಪಡೆದ ಪಟ್ಟಿಯನ್ನು ರಾಜ್ಯಕ್ಕೆ ಖುದ್ದು ತರಲಿದ್ದಾರೆ.

ನಗರಕ್ಕೆ ಧಾವಿಸುತ್ತಿದ್ದಂತೆ ತಾವು ತಂಗಲಿರುವ ಹೋಟೆಲ್‌ಗೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರನ್ನು ಕರೆಸಿಕೊಂಡು ವರಿಷ್ಠರ ಸಂದೇಶ ನೀಡಲಿದ್ದಾರೆ.

ಸರ್ಕಾರ ಮತ್ತು ಪಕ್ಷ ಸಂಘಟನೆ ಗಮನದಲ್ಲಿ ಇಟ್ಟುಕೊಂಡು ರಾಹುಲ್ ಗಾಂಧಿ ಮತ್ತು ಖರ್ಗೆ, ಮುಖ್ಯಮಂತ್ರಿ ಶಿವಕುಮಾರ್ ತಂಡಕ್ಕೆ ಸಮರ್ಥರನ್ನು ಆಯ್ಕೆ ಮಾಡಿದ್ದಾರೆ.

ಪರಸ್ಪರ ಸಹಕರಿಸಲು ಸೂಚನೆ

ಸಚಿವಾಕಾಂಕ್ಷಿಗಳು ಬಹಳಷ್ಟು ಮಂದಿ ಇದ್ದಾರೆ, ಎಲ್ಲರಿಗೂ ಅವಕಾಶ ದೊರಕಿಸಲು ಸಾಧ್ಯವಿಲ್ಲ, ಪಕ್ಷದಲ್ಲಿ ಎದುರಾಗಬಹುದಾದ ಸಮಸ್ಯೆ ನಿಭಾಯಿಸುವಲ್ಲಿ ಪರಸ್ಪರ ಸಹಕರಿಸುವಂತೆ ಸೂಚಿಸಲಿದ್ದಾರೆ.

ಇದರೊಂದಿಗೆ ಕಳೆದ ಒಂದುವರೆ ತಿಂಗಳಿಂದ ನನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ನಿಗದಿಪಡಿಸಲಾಗಿದೆ.

ಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿರುವ ಹಿರಿಯ ನಾಯಕ ಯಲಬುರಗಿ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ವಿಧಾನಸಭಾಧ್ಯಕ್ಷ ಸ್ಥಾನದಲ್ಲಿ ಕೂರಿಸಲು ವರಿಷ್ಠರು ಒಲವು ತೋರಿದ್ದಾರೆ ಎನ್ನಲಾಗಿದೆ.

ರಾಯರೆಡ್ಡಿಗೆ ನೂತನ ಜವಾಬ್ದಾರಿ

ರಾಯರೆಡ್ಡಿ ಅವರಿಗೆ ಈ ವಿಚಾರ ತಿಳಿಸಿ, ನೂತನ ಜವಾಬ್ದಾರಿ ವಹಿಸಿಕೊಳ್ಳುವಂತೆ ಹೇಳಬೇಕು ಎಂಬ ಸಲಹೆ ಮಾಡಲಾಗಿದೆ.

ಮಂತ್ರಿಮಂಡಲಕ್ಕೆ 14 ಮಂದಿ ಯುವಪಡೆ ಸೇರ್ಪಡೆಯಾಗಲಿದ್ದು, ಇವರೊಂದಿಗೆ 6 ಮಂದಿ ಹಿರಿಯರು ಮತ್ತು ಅನುಭವಿಗಳಿಗೆ ಅವಕಾಶ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ.

ಸಿ.ಎಸ್.ನಾಡಗೌಡ, ತನ್ವೀರ್ ಸೇಠ್, ಲಕ್ಷ್ಮಣ ಸವದಿ, ಲಕ್ಷ್ಮಿ ಹೆಬ್ಬಾಳ್ಕರ್, ಪುಟ್ಟರಂಗಶೆಟ್ಟಿ, ಎಚ್.ಆರ್.ಗವಿಯಪ್ಪ, ಯಶವಂತರಾಯಗೌಡ ಪಾಟೀಲ್, ಎಚ್.ಸಿ.ಬಾಲಕೃಷ್ಣ, ಶರತ್ ಬಚ್ಚೇಗೌಡ, ರಘುಮೂರ್ತಿ, ಶಿವಲಿಂಗೇಗೌಡ, ಪ್ರಸಾದ್ ಅಬ್ಬಯ್ಯ, ಅಥವಾ ನರೇಂದ್ರ ಸ್ವಾಮಿ ಅವರಿಗೆ ಮಂತ್ರಿ ಸ್ಥಾನ ಸಿಗಲಿದೆ ಎಂದು ಹೇಳಲಾಗುತ್ತಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucabinet expansionChief Ministercongres high command will send listd k shivakumarmonday evening 5 pmnew delhion monday expansion
0 FacebookTwitterPinterestEmail
KM Shivaraju

previous post
ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

You may also like

ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

July 30, 2026

ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

July 29, 2026

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026

ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

July 28, 2026

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (529)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,023)
  • ರಾಜ್ಯ (2,337)
  • ರಾಷ್ಟ್ರ (2,302)
  • ವಿಶ್ಲೇಷಣೆ (199)
  • ಶಿಕ್ಷಣ (403)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

    July 31, 2026
  • ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

    July 30, 2026
  • ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

    July 29, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

    July 31, 2026
  • ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

    July 30, 2026
  • ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

    July 29, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

July 30, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ