Friday, August 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, August 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಶಾಸಕರ ಬಂಡಾಯ ಶಮನಕ್ಕೆ ಸಂಪುಟಕ್ಕೆ ಸಣ್ಣ ಸರ್ಜರಿ !

by KM Shivaraju August 6, 2026
written by KM Shivaraju August 6, 2026 0 comments 2 minutes read
0FacebookTwitterPinterestEmail
9

ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ನಂತರ ಬುಗಿಲೆದ್ದ ಶಾಸಕರ ಬಂಡಾಯ ಶಮನಗೊಳಿಸಲು ಸಣ್ಣ ಪ್ರಮಾಣದಲ್ಲಿ ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಸ್ಟ್ 3 ರಂದು ಹೊಸದಾಗಿ 19 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳುವ ಮೂಲಕ ಒಂದು ಖಾಲಿ ಸ್ಥಾನ ಉಳಿಸಿಕೊಂಡು ಮಂತ್ರಿಮಂಡಲ ವಿಸ್ತರಿಸಿದರು.

ಮೂಲ ಕಾಂಗ್ರೆಸ್ಸಿಗರ ಸಂದೇಶ

ವಿಸ್ತರಣೆ ನಂತರ ಮೂಲ ಕಾಂಗ್ರೆಸ್‌ನ ಹಿರಿಯ ಶಾಸಕರು, ವರಿಷ್ಠರ ವಿರುದ್ಧವೇ ತಿರುಗಿ ಬಿದ್ದು, ಹಸ್ತದ ಸಹವಾಸವೇ ಬೇಡ ಎಂಬ ಸಂದೇಶವನ್ನು ದೆಹಲಿಗೆ ರವಾನಿಸಿದರು.

ಕಳೆದ ಎರಡು-ಮೂರು ದಶಕಗಳಿಂದ ನಿಷ್ಠಾವಂತ ಕಾಂಗ್ರೆಸ್ ಸದಸ್ಯರಾಗಿ ವಿಧಾನಸಭೆಯಲ್ಲಿ ಸೇವೆ ಸಲ್ಲಿಸುತ್ತಿದ್ದರೂ, ತಮ್ಮವರನ್ನು ಹೊರಗಿಟ್ಟು, ಜನತಾ ಪರಿವಾರದಿಂದ ಬಂದ 9 ಮಂದಿಗೆ ಮಂತ್ರಿಮಂಡಲದಲ್ಲಿ ಅವಕಾಶ ಮಾಡಿಕೊಟ್ಟಿದ್ದೀರಿ, ಇನ್ನು ನಮಗೆ ಎಲ್ಲಿ ನ್ಯಾಯ ಸಿಗುತ್ತದೆ ಎಂದು ಪ್ರಶ್ನೆಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಕುಟುಂಬವನ್ನು ನಿಂದಿಸುವವರಿಗೆ ಸಂಪುಟದಲ್ಲಿ ಮಣೆ ಹಾಕಿದ್ದೀರಿ, ಚೆಲುವರಾಯಸ್ವಾಮಿ, ಎಚ್.ಸಿ. ಬಾಲಕೃಷ್ಣ, ಜಮೀರ್ ಅಹಮದ್ ಖಾನ್, ಕೆ.ಎಂ.ಶಿವಲಿಂಗೇಗೌಡ ಅವರಿಗೆ ಮಂತ್ರಿ ಸ್ಥಾನ ಕಲ್ಪಿಸಿದ್ದೀರಿ.

ಜನತಾ ಪರಿವಾರಕ್ಕೇ ಆದ್ಯತೆ

ಅಲ್ಲದೆ, ಸಂತೋಷ್ ಲಾಡ್, ಮಧುಬಂಗಾರಪ್ಪ, ಲಕ್ಷ್ಮಣ್ ಸವದಿ, ಬಸವರಾಜ ರಾಯರೆಡ್ಡಿ, ಇವರೆಲ್ಲ ಜನತಾ ಪರಿವಾರದವರು.

ವಲಸೆ ಬಂದವರಿಗೆ ಮಂತ್ರಿಮಂಡಲದಲ್ಲಿ ಶೇಕಡ 50ರಷ್ಟು ಅವಕಾಶ ಮಾಡಿದರೆ, ನಾವು ಏನು ಮಾಡಬೇಕು ಎಂದು ನೇರವಾಗಿ ವರಿಷ್ಠರನ್ನು ಪ್ರಶ್ನಿಸಿದ್ದಾರೆ.

ಮೂಲ ಕಾಂಗ್ರೆಸ್‌ನವರಿಂದಲೇ ಆಂತರಿಕವಾಗಿ ಪಕ್ಷಕ್ಕೆ ಮುಜುಗರ ಉಂಟಾಗುತ್ತಿದೆ ಎಂಬ ಮಾಹಿತಿ ಅರಿಯುತ್ತಿದ್ದಂತೆ, ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕಳೆದ ಬುಧವಾರ ದಿಢೀರನೆ ನಗರಕ್ಕೆ ಧಾವಿಸಿ, ಬಿನ್ನಮತ ತಿಳಿಗೊಳಿಸಲು ಮುಂದಾದರು.

ಬಂಡಾಯಗಾರರ ಜೊತೆ ಮಾತುಕತೆ

ಈ ವೇಳೆಗೆ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಬಂಡಾಯ ಶಾಸಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದರು.

ಸುರ್ಜೇವಾಲ ನಗರಕ್ಕೆ ಧಾವಿಸುತ್ತಿದ್ದಂತೆ ಮುಖ್ಯಮಂತ್ರಿ ಜೊತೆಗೂಡಿ, ಹಿರಿಯ ಶಾಸಕ ಎಂ.ಕೃಷ್ಣಪ್ಪ ನಿವಾಸಕ್ಕೆ ತೆರಳಿ, ಸಮಾಧಾನಪಡಿಸುವ ಪ್ರಯತ್ನ ಮಾಡಿದರು.

ನಿಮಗೆ ಅವಕಾಶ ದೊರೆಯುತ್ತದೆ, ನಾನು ನಿಮಗೆ ಮಾತುಕೊಡುತ್ತೇನೆ ಎಂದು ಸುರ್ಜೇವಾಲ ಸಮಾಜಾಯಿಷಿ ನೀಡಿದರು.

ಕಾಂಗ್ರೆಸ್ ನಂಬಿ ಅಧಿಕಾರ ಇಲ್ಲವಾಗಿದೆ

ಇದಕ್ಕೆ ಕೃಷ್ಣಪ್ಪ ಪ್ರತಿಕ್ರಿಯಿಸಿ, ಮಂತ್ರಿ ಸ್ಥಾನ ಖಾಲಿ ಇಲ್ಲ, ಮಹಿಳೆಗೆ ಒಂದು ಸ್ಥಾನ ಉಳಿಸಿ, ಮಂತ್ರಿಮಂಡಲ ವಿಸ್ತರಿಸಿದ್ದೀರಿ, ಇನ್ನೆಲ್ಲಿಂದ ನಮಗೆ ಕೊಡುತ್ತೀರಿ, ನಾವು ಕಾಂಗ್ರೆಸ್ ನಂಬಿಕೊಂಡು ಕುಳಿತಿದ್ದರಿಂದ ಯಾವ ಅಧಿಕಾರವೂ ಇಲ್ಲವಾಗಿದೆ, ಮನೆಯಲ್ಲೇ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಮೂರು ವರ್ಷದ ಹಿಂದೆ ಜೆಡಿಎಸ್‌ನಿಂದ ಬಂದ ಶಿವಲಿಂಗೇಗೌಡ ಅವರನ್ನು ಮಂತ್ರಿ ಮಾಡುತ್ತೀರಿ, ನಾನು, ನನ್ನ ಮಗ ಮೂರ‍್ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಗೊಂಡಿದ್ದರೂ ನಮ್ಮನ್ನು ಕಾಂಗ್ರೆಸ್ ನಿರ್ಲಕ್ಷ್ಯ ಮಾಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಕೃಷ್ಣಪ್ಪ ಮಾತಿನಿಂದ ವಿಚಲಿತರಾದ ಸುರ್ಜೇವಾಲ ಪಕ್ಷದಿಂದ ಕೆಲವು ತಪ್ಪಾಗಿದೆ, ಅದನ್ನು ಸರಿಪಡಿಸಲು ಒಂದು ಹೊಸ ಯೋಜನೆ ಹಾಕಿದ್ದೇವೆ, ನಿಮಗೆ ಮಂತ್ರಿ ಸ್ಥಾನ ದೊರೆತೇ ದೊರೆಯುತ್ತದೆ, ಅದು ಹೇಗೆ ಎಂಬ ಪ್ರಶ್ನೆ ಬೇಡ, ನೀವು ನಮ್ಮ ಜೊತೆಯೇ ಇರಬೇಕು ಎಂದು ಮನವಿ ಮಾಡಿದರು.

ನಮ್ಮನ್ನು ಹೊರಗಿಟ್ಟಿದ್ದು ಏಕೆ

ನಂತರ ಪಕ್ಷದ ಹಿರಿಯ ಶಾಸಕರಾದ ಹೆಚ್.ಕೆ.ಪಾಟೀಲ್, ಟಿ.ಬಿ.ಜಯಚಂದ್ರ ಮನೆಗೆ ತೆರಳಿ, ಇದೇ ವಿಷಯವಾಗಿ ಸಮಾಲೋಚನೆ ನಡೆಸಿದಾಗ, ಇವರೂ ಸಹಾ ಕೃಷ್ಣಪ್ಪ ವಾದವನ್ನೇ ಮುಂದಿಟ್ಟರಲ್ಲದೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವು, ಕೆಲವು ಶಾಸಕರು ಕಣಕ್ಕಿಳಿಯುವುದಿಲ್ಲ ಎಂಬುದು ನಿಮಗೆ ತಿಳಿದಿದ್ದರೂ, ಮಂತ್ರಿಮಂಡಲದಿಂದ ನಮ್ಮನ್ನು ಹೊರಗಿಟ್ಟಿದ್ದು ಏಕೆ ಎಂದು ಪ್ರಶ್ನಿಸಿದರು.

ಕೃಷ್ಣಪ್ಪ ಮತ್ತು ಹೆಚ್.ಕೆ.ಪಾಟೀಲ್, ಪಕ್ಷದ ಕೆಲವು ನಿರ್ಧಾರಗಳು ಎಲ್ಲಿ ತಪ್ಪಿವೆ ಎಂಬುದನ್ನು ನೇರವಾಗಿ ಸುರ್ಜೇವಾಲ ಗಮನಕ್ಕೆ ತಂದು, ತಕ್ಷಣ ಸರಿಪಡಿಸದಿದ್ದರೆ, ಮುಂದೆ ಪಕ್ಷ ಇಕ್ಕಟ್ಟಿಗೆ ಸಿಲುಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಬೆಳವಣಿಗೆ ನಂತರ ಸುರ್ಜೇವಾಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಂಪರ್ಕಿಸಿ, ಒಂದಿಬ್ಬರ ರಾಜೀನಾಮೆ ಪಡೆದು, ಮೂರು ಮಂದಿಯನ್ನು ಹೊಸದಾಗಿ ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು.

ಮೂಲ ಕಾಂಗ್ರೆಸ್ಸಿಗರಿಗೆ ಧಕ್ಕಬೇಕು

ತೆರವಾದ ಸ್ಥಾನಗಳು ಮೂಲ ಕಾಂಗ್ರೆಸ್‌ನವರಿಗೆ ಧಕ್ಕಬೇಕು, ಈ ಕಾರ್ಯ ತಕ್ಷಣವೇ ಆಗಬೇಕು ಎಂದು ವರಿಷ್ಠರ ಗಮನಕ್ಕೆ ತಂದಿದ್ದಾರೆ.

ಸುರ್ಜೇವಾಲ ಅವರ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಎಐಸಿಸಿ, ಬಂಡಾಯ ಶಮನಕ್ಕೆ ಸಣ್ಣ ಪ್ರಮಾಣದಲ್ಲಿ ಸಂಪುಟ ಪುನಾರಚನೆಗೆ ಮುಂದಾಗುವ ಸಾಧ್ಯತೆಗಳು ಕಂಡುಬರುತ್ತಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm d k shivakumarcongres rebel mla'skarnataka congresmeeting rebel mla'sparty high commandranadeep singh surjevalasmall surgery to cabinet
0 FacebookTwitterPinterestEmail
KM Shivaraju

previous post
ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

You may also like

ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

August 5, 2026

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026

33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

August 3, 2026

ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

July 31, 2026

ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

July 30, 2026

ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

July 29, 2026

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026

ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

July 28, 2026

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (533)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,027)
  • ರಾಜ್ಯ (2,341)
  • ರಾಷ್ಟ್ರ (2,306)
  • ವಿಶ್ಲೇಷಣೆ (199)
  • ಶಿಕ್ಷಣ (403)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶಾಸಕರ ಬಂಡಾಯ ಶಮನಕ್ಕೆ ಸಂಪುಟಕ್ಕೆ ಸಣ್ಣ ಸರ್ಜರಿ !

    August 6, 2026
  • ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

    August 5, 2026
  • ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    August 4, 2026

KMS Special

  • ಶಾಸಕರ ಬಂಡಾಯ ಶಮನಕ್ಕೆ ಸಂಪುಟಕ್ಕೆ ಸಣ್ಣ ಸರ್ಜರಿ !

    August 6, 2026
  • ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

    August 5, 2026
  • ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    August 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

August 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ