Saturday, August 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, August 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣ

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

by KM Shivaraju August 28, 2026
written by KM Shivaraju August 28, 2026 0 comments 2 minutes read
0FacebookTwitterPinterestEmail
10

ಬೆಂಗಳೂರು : ಸಚಿವ ಬಿ. ನಾಗೇಂದ್ರ ಅವರಷ್ಟೇ ಅಲ್ಲದೆ, ವಸತಿ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಗಣಿಧಣಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ಧನರೆಡ್ಡಿ ಅವರ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಲ್ಹೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ರಾಜ್ಯಪಾಲದ ಪತ್ರ ಸರ್ಕಾರಕ್ಕೆ ತಲುಪುತ್ತಿದ್ದಂತೆ ವರಿಷ್ಠರ ಸೂಚನೆ ಮೇರೆಗೆ ಮುಖ್ಯಮಂತ್ರಿಯವರಿಗೆ ನಾಗೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಆದರೆ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮೇಲೆ ಅಪಾಯದ ತೂಗುಗತ್ತಿ ನೇತಾಡ ತೊಡಗಿದೆ.

ರಾಜ್ಯಪಾಲರ ಪತ್ರ ಸರ್ಕಾರಕ್ಕೆ ತಲುಪುತ್ತಿದ್ದಂತೆ ಇಬ್ಬರು ಸಚಿವರ ವಿರುದ್ಧ ಯಾವ ತೀರ್ಮಾನ ಕೈಗೊಳ್ಳಬೇಕೆಂಬ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಳೆದ ಗುರುವಾರ ದೆಹಲಿಗೆ ತೆರಳಿ ಪಕ್ಷದ ಅಧಿನಾಯಕ ರಾಹುಲ್‌ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರನ್ನು ಭೇಟಿ ಮಾಡಿ ಸಲಹೆ ಪಡೆದಿದ್ದಾರೆ.

ವರಿಷ್ಠರನ್ನು ಭೇಟಿ ಮಾಡಿ ಮುಖ್ಯ ಮಂತ್ರಿ ಹಿಂತಿರುಗುತ್ತಿದ್ದಂತೆ ದೆಹಲಿಯಲ್ಲಿ ಬಿಡಾರ ಹೂಡಿದ್ದ ನಾಗೇಂದ್ರ ನಗರಕ್ಕೆ ಹಿಂತಿರುಗುತ್ತಿದ್ದಂತೆ ಮುಖ್ಯಮಂತ್ರಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ವಸತಿ ಸಚಿವ ಜಮೀರ್ ಅಹ್ಮದ್‌ಖಾನ್ ವಿಚಾರದಲ್ಲಿ ವರಿಷ್ಠರು ಯಾವ ತೀರ್ಮಾನ ಕೈಗೊಂಡಿದ್ದಾರೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ ಮುಖ್ಯಮಂತ್ರಿಯವರು ಸಣ್ಣಪ್ರಮಾಣದಲ್ಲಿ ಸಂಪುಟ ಪುನಾರಚನೆ ಮಾಡುವ ಸಂದರ್ಭದಲ್ಲಿ ಇವರನ್ನು ಕೈಬಿಡಲಿದ್ದಾರೆ ಎಂಬ ವದಂತಿ ದಟ್ಟವಾಗಿದೆ.

ಭ್ರಷ್ಟಾಚಾರ, ಆದಾಯಕ್ಕಿಂತ ಹೆಚ್ಚು ಆಸ್ತಿಪಾಸ್ತಿ ಹೊಂದಿರುವುದು ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಡಿ ಮತ್ತು ಸಿಬಿಐ ಈಗಾಗಲೇ ಇವರ ಮೂವರ ವಿರುದ್ಧ ತನಿಖೆ ನಡೆಸಿದೆ.

ಸಿಬಿಐ, ಜಾರಿ ನಿರ್ದೇಶನಾಲಯ (ಇಡಿ) ನಾಗೇಂದ್ರ, ಜಮೀರ್ ಹಾಗೂ ಜನಾರ್ದನ್ ರೆಡ್ಡಿ ವಿರುದ್ಧ ವಿಚಾರಣೆಗಾಗಿ ಅನುಮತಿ ಕೋರಿದೆ.

ತನಿಖಾ ಸಂಸ್ಥೆಗಳು ಇವರ ವಿರುದ್ಧ ತನಿಖೆ ನಡೆಸಲು ಅವಕಾಶ ಮಾಡಿಕೊಡುವಂತೆ ರಾಜ್ಯಪಾಲರು ಆಗಸ್ಟ್ 24 ರಂದು ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ.

ರಾಜ್ಯಪಾಲರು ಪತ್ರ ಬರೆದ ನಂತರ ಸರ್ಕಾರ ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮತ್ತು ಸಂಪುಟದ ಮುಂದೆಯೂ ಈ ವಿಚಾರ ಮಂಡಿಸಿಲ್ಲ.

ಸರ್ಕಾರ ತೀರ್ಮಾನ ಕೈಗೊಳ್ಳುವುದಕ್ಕೂ ಮುನ್ನ ವರಿಷ್ಠರ ಅಭಿಪ್ರಾಯ ಪಡೆಯುವ ಉದ್ದೇಶದಿಂದಲೇ ಮುಖ್ಯಮಂತ್ರಿಯವರು ಆಗಸ್ಟ್ 27 ರಂದು ದೆಹಲಿ ಪ್ರವಾಸ ಕೈಗೊಂಡು ಹಿಂತಿರುಗಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಾಂತರ ರೂ. ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ನಾಗೇಂದ್ರ ವಿರುದ್ಧ, ಇನ್ನು ಜಮೀರ್ ಅಹ್ಮದ್ ಖಾನ್ ವಿರುದ್ಧ ಅಕ್ರಮವಾಗಿ ಹಣ ವರ್ಗಾವಣೆ, ಆದಾಯಕ್ಕಿಂತ ಹೆಚ್ಚು ಸಂಪಾದನೆ ಮತ್ತು ಅವರು ನಡೆಸುವ ಸಂಸ್ಥೆಗಳು ವಾಣಿಜ್ಯ ಇಲಾಖೆಗೆ ಕೋಟ್ಯಾಂತರ ರೂ. ದೋಖಾ ಹಾಕಿವೆ ಎಂಬ ಆರೋಪಗಳ ಬಗ್ಗೆ ಇಡಿ ತನಿಖೆ ನಡೆಸಿದೆ.

ಇನ್ನು ಜನಾರ್ದನ ರೆಡ್ಡಿ ವಿರುದ್ಧ ಹತ್ತು ಹಲವಷ್ಟು ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆ ನಡೆಯುತ್ತಿದೆ. ಇನ್ನೂ ಕೆಲವು ಪ್ರಕರಣದ ಬಗ್ಗೆ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರೀಯ ತನಿಖಾ ಸಂಸ್ಥೆಗಳು ರಾಜ್ಯಪಾಲರ ಮೋರೆ ಹೋಗಿರುವೆ.

ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎರಡು ತಿಂಗಳ ಅವಧಿಯಲ್ಲೇ ತಮ್ಮ ಸಂಪುಟದ ಸಹೋದ್ಯೋಗಿಗಳ ಮೇಲೆ ಬಂದಿರುವ ಆರೋಪಗಳು ಅವರನ್ನು ಮುಜುಗರಕ್ಕೆ ಸಿಲುಕಿಸಿವೆ.

ಪಕ್ಷ ಮತ್ತು ಸರ್ಕಾರಕ್ಕಾಗುವ ಮುಜುಗರ ತಪ್ಪಿಸಲು ನಾಗೇಂದ್ರ ಅವರ ರಾಜೀನಾಮೆ ಪಡೆದಿದ್ದಾರೆ. ಇನ್ನು ಜಮೀರ್ ಅವರ ವಿಷಯದಲ್ಲಿ ಸ್ಪಷ್ಟ ತೀರ್ಮಾನ ತೆಗೆದುಕೊಂಡಿಲ್ಲ.

ಜನಾರ್ದನ ರೆಡ್ಡಿ ಬಿಜೆಪಿ ಬೆಂಬಲಿತ ಪಕ್ಷೇತರ ಶಾಸಕ. ಅವರು ವಿಷಯದಲ್ಲಿ ಮುಕ್ತವಾಗಿ ಅನುಮತಿ ನೀಡಬಹುದು. ಆದರೆ ಇವರಿಬ್ಬರನ್ನು ಬಿಟ್ಟು ಅವರೊಬ್ಬರ ವಿಷಯದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
againstchief secretaryGovernmentgovernorInvestigationjameerjanardhana reddyletterNagendrapermission
0 FacebookTwitterPinterestEmail
KM Shivaraju

previous post
ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

You may also like

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

August 25, 2026

ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

August 24, 2026

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

August 22, 2026

’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ ವಿಸ್ತರಣೆ

August 21, 2026

ಕರ್ನಾಟಕಕ್ಕೆ ನ್ಯಾಯಯುತ ಅನುದಾನ ನೀಡಿ: ಡಿಕೆಶಿ

August 20, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ವಿಧಾನಸಭೆ ಮತ್ತೆ ಪ್ರವೇಶಿಸಲು ಜನಪ್ರಿಯತೆ ಗಳಿಸಿ

August 19, 2026

ಆಪ್ತ ಸಚಿವರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ

August 18, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (551)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,044)
  • ರಾಜ್ಯ (2,359)
  • ರಾಷ್ಟ್ರ (2,324)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

    August 26, 2026

KMS Special

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

    August 26, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ