Wednesday, September 9, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, September 9, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

by admin September 9, 2026
written by admin September 9, 2026 0 comments 1 minutes read
0FacebookTwitterPinterestEmail
3

ಬೆಂಗಳೂರು:ವಿದೇಶೀ ವಿನಿಮಯ ನಿರ್ವಹಣಾ ಕಾಯಿದೆ (ಎಫ್‌ಇಎಂಎ) ಉಲ್ಲಂಘಿಸಿ ಅಕ್ರಮವಾಗಿ ಹೊರ ರಾಷ್ಟ್ರಗಳಲ್ಲಿ ವಹಿವಾಟು ನಡೆಸಿರುವ ಆರೋಪದ ಮೇಲೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ಮಾಡಿ ದಾಖಲೆಗಳನ್ನು ವಶ ಪಡಿಸಿಕೊಂಡಿದೆ.

ಸತೀಶ್ ಅಷ್ಟೇ ಅಲ್ಲದೆ, ಅವರ ಪುತ್ರಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಪುತ್ರ ರಾಹುಲ್ ಜಾರಕಿಹೊಳಿ, ಸಹೋದರಿ ಲಕ್ಷ್ಮೀ ಅವರಿಗೆ ಸೇರಿದ ಬೆಂಗಳೂರು, ಬೆಳಗಾವಿ, ಗೋವಾ, ಮಹಾರಾಷ್ಟ್ರದ 25 ಕಡೆಗಳಲ್ಲಿ ಇ.ಡಿ. ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದೆ.

ವಿದೇಶಗಳಲ್ಲಿ ಅಕ್ರಮ ಹೂಡಿಕೆ

ದಕ್ಷಿಣ ಆಫ್ರಿಕಾದ ರುವಾಂಡಾ ಸೇರಿದಂತೆ ವಿವಿಧ ದೇಶಗಳಲ್ಲಿ ಅಕ್ರಮ ಬಂಡವಾಳ ಹೂಡಿಕೆ ಮಾಡಿದ್ದಾರೆ ಎಂಬ ಮಾಹಿತಿ ಆಧರಿಸಿ ಇ.ಡಿ. ಕಾರ್ಯಾಚರಣೆ ನಡೆಸಿದೆ.

ದಕ್ಷಿಣ ಆಫ್ರಿಕಾದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ವ್ಯವಹಾರದಲ್ಲಿ ಭಾರೀ ಮೊತ್ತದ ಹಣ ಹೂಡಿಕೆ ಮಾಡಿದ್ದಾರೆ, ಇದಕ್ಕಾಗಿ ಸತೀಶ್ ತಮ್ಮ ಪುತ್ರ, ಪುತ್ರಿ ಹಾಗೂ ಸಹೋದರಿ ಅವರುಗಳನ್ನು ಕಂಪನಿಗಳ ನಿರ್ದೇಶಕರನ್ನಾಗಿ ಮಾಡಿಕೊಂಡು ಕೋಟ್ಯಂತರ ರೂ. ಹೂಡಿಕೆ ಮತ್ತು ವ್ಯವಹಾರ ನಡೆಸಿದ್ದಾರೆ ಎಂಬ ಆರೋಪವಿದೆ.

ಅಕ್ರಮ ಮಾರ್ಗಗಳ ಮೂಲಕ ವಿದೇಶಕ್ಕೆ ಹಣ ವರ್ಗಾವಣೆ ಮಾಡಿ ಕುಟುಂಬದವರ ಹೆಸರಿನಲ್ಲಿ ಆಫ್ರಿಕಾದ ವಿವಿಧ ರಾಷ್ಟ್ರಗಳಲ್ಲಿ ಕಂಪನಿಗಳನ್ನು ತೆರೆದಿದ್ದಾರೆ.

ದಾಖಲೆ ಪತ್ರಗಳ ವಶ

ಇತ್ತೀಚೆಗಷ್ಟೇ ಅವರ ಸಹೋದರಿಯ ಪತಿ ಅಬಕಾರಿ ಜಂಟಿ ಆಯುಕ್ತರಾಗಿದ್ದ ವೈ.ಮಂಜುನಾಥ್ ಅವರ ನಿವಾಸ, ಕಚೇರಿಗಳ ಮೇಲೂ ಇ.ಡಿ. ದಾಳಿ ನಡೆಸಿ ಕೋಟ್ಯಂತರ ರೂ. ನಗದು ಹಾಗೂ ದಾಖಲೆ ಪತ್ರಗಳನ್ನು ವಶ ಪಡಿಸಿಕೊಂಡಿದೆ.

ದಾಳಿಯಲ್ಲಿ ದೊರೆತ ದಾಖಲೆಗಳ ಪರಿಶೀಲನೆ ವೇಳೆ ದಕ್ಷಿಣ ಆಫ್ರಿಕಾದಲ್ಲಿ ಅಕ್ರಮವಾಗಿ ಬಂಡವಾಳ ಹೂಡಿಕೆ ಮಾಡಿರುವ ಮಾಹಿತಿ ಆಧರಿಸಿ ಸತೀಶ್ ಕುಂಟುಬದವರ ವಿರುದ್ಧ ತನಿಖೆ ಕೈಗೊಂಡಿದೆ.

ದಾಳಿ ಬಗ್ಗೆ ಇ.ಡಿ. ಯಾವುದೇ ಮಾಹಿತಿ ಹೊರಗೆಡವಿಲ್ಲ, ಫೆಮಾ ಉಲ್ಲಂಘಿಸಿ ವಿದೇಶಿ ಕರೆನ್ಸಿ ವಹಿವಾಟುಗಳು ಹಾಗೂ ದೇಶದ ಗಡಿಯಾಚೆ ಹೂಡಿಕೆ ಮಾಡಿರುವ ಆರೋಪಗಳು ಕೇಳಿಬಂದಿವೆ.

ಸಂಶಯಾಸ್ಪದ ವಹಿವಾಟು

ಸತೀಶ್ ಸಂಸ್ಥೆಗಳು ಬ್ಯಾಂಕ್‌ಗಳಲ್ಲಿ ಸಂಶಯಾಸ್ಪದ ರೀತಿಯಲ್ಲಿ ವಹಿವಾಟು ಮಾಡಿರುವುದನ್ನು ಪತ್ತೆ ಹಚ್ಚಿದ ಇ.ಡಿ. ಅಕ್ರಮ ಬಯಲು ಮಾಡಲು ದಾಳಿ ನಡೆಸಿದೆ ಎನ್ನಲಾಗಿದೆ.

ಫೆಮಾ ಉಲ್ಲಂಘನೆ ಅಥವಾ ತನಿಖಾ ಸಮಯದಲ್ಲಿ ದೊರೆತ ಹಣ ಕೇವಲ ವಿದೇಶಿ ವಿನಿಮಯ ಉಲ್ಲಂಘನೆ ಅಲ್ಲ, ಬದಲಿಗೆ ಇದು ಭ್ರಷ್ಟಾಚಾರ, ವಂಚನೆ, ಡ್ರಗ್ಸ್ ಅಥವಾ ದೇಶ ದ್ರೋಹದ ಚಟುವಟಿಕೆ ಮೂಲಕ ಕಪ್ಪು ಹಣ ವರ್ಗಾವಣೆ ನಡೆದಿದೆಯೇ ಎಂಬ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ.

ಈ ಸಂಬಂಧ ಯಾವುದೇ ಸ್ಪಷ್ಟ ಮಾಹಿತಿ ಮತ್ತು ದಾಖಲೆ ದೊರೆತರೆ, ಆರೋಪಿಗಳ ವಿರುದ್ಧ ತಕ್ಷಣವೇ ಕ್ರಿಮಿನಲ್ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯಲು ಕಾಯಿದೆಯಲ್ಲಿ ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
balagavibengaluruenforcement directorate (ED)family membersFEMAGoamaharastraminister satish jarakiholiraid on 25 places
0 FacebookTwitterPinterestEmail
admin

previous post
ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

You may also like

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (563)
  • ಅಂಕಣ (109)
  • ಉದ್ಯೋಗ (348)
  • ದಿನ ಭವಿಷ್ಯ (110)
  • ರಾಜಕೀಯ (2,056)
  • ರಾಜ್ಯ (2,371)
  • ರಾಷ್ಟ್ರ (2,335)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

    September 9, 2026
  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026

KMS Special

  • ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

    September 9, 2026
  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್...

September 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ