Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

by admin September 19, 2026
written by admin September 19, 2026 0 comments 1 minutes read
0FacebookTwitterPinterestEmail
2

ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನಸ್ಸು ಮಾಡಿದರೆ ಆರ್ಥಿಕ ಇಲಾಖೆ ಸಹಕಾರ ಇಲ್ಲದೇ ರೈತರ ಕೃಷಿ ಸಾಲ ಮನ್ನಾ ಮಾಡಬಹುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರು ರಾಜ್ಯದ ಹಿರಿಯ ರಾಜಕಾರಣಿ ಅಲ್ಲದೇ, ದೊಡ್ಡ ಉದ್ಯಮಿ, ಅವರು ಮನಸ್ಸು ಮಾಡಿದರೆ, ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಮಾಡಬಹುದು ಎಂದರು.

ಕೇಂದ್ರದ ನೆರವು ಪಡೆಯಲಿಲ್ಲ

ನಾನಾಗಲೀ, ದೇವೇಗೌಡರಾಗಲೀ, ಯಡಿಯೂರಪ್ಪ ಆಗಲೀ ಮುಖ್ಯಮಂತ್ರಿ ಆಗಿದ್ದ ವೇಳೆ ಕೇಂದ್ರದ ನೆರವು ಪಡೆದು ಸಾಲ ಮನ್ನಾ ಮಾಡಲಿಲ್ಲ.

ರಾಜ್ಯದ ಸಂಪನ್ಮೂಲದಿಂದಲೇ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಆಡಳಿತದಲ್ಲಿ 25,000 ಕೋಟಿ ರೂ.ಗಳಿಗೂ ಹೆಚ್ಚು ಸಾಲ ಮನ್ನಾ ಮಾಡಿದೆ.

ಮುಂಗಾರು ವೈಫಲ್ಯದಿಂದ ಕೃಷಿಕರು ಬೀದಿಗೆ ಬಿದ್ದಿದ್ದಾರೆ, ಅವರ ನೆರವಿಗೆ ಬರಬೇಕಾದುದು ಸರ್ಕಾರದ ಕರ್ತವ್ಯ, ಮಾನ್ಯ ಮುಖ್ಯಮಂತ್ರಿ ಅವರು, ಪ್ರಧಾನಿ ನರೇಂದ್ರ ಮೋದಿ ಕಡೆ ಬೊಟ್ಟು ಮಾಡದೆ ಕೃಷಿ ಸಾಲ ಮನ್ನಾ ಮಾಡಲಿ.

20,000 ಕೋಟಿ ರೂ. ಇಲ್ಲವೇ

ಗ್ಯಾರಂಟಿ ಯೋಜನೆಗಳಿಗಾಗಿ ವಾರ್ಷಿಕ 50 ರಿಂದ 60,000 ಕೋಟಿ ರೂ. ವೆಚ್ಚ ಮಾಡುವ ನಿಮಗೆ, 15 ರಿಂದ 20,000 ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.

ರೈತರನ್ನು ಉಳಿಸಲೇಬೇಕು ಎಂಬ ಗುರಿ ಇದ್ದಲ್ಲಿ, ಸರ್ಕಾರದ ಬೊಕ್ಕಸದಿಂದ ಕೊಡಿ, ಇಲ್ಲವೇ ನಿಮ್ಮ ಬೊಕ್ಕಸದಿಂದಲೇ ಕೊಡಿ ಎಂದರು.

ಬೆಂಗಳೂರಿನ ಹೊರವಲಯದಲ್ಲಿ ನೈಸ್ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಲೂಟಿ ಮಾಡಲು ಯೋಜನೆಗಳನ್ನು ರೂಪಿಸಲಾಗಿದೆ, ಮುಖ್ಯಮಂತ್ರಿ ತಮ್ಮ ಆಡಳಿತದಲ್ಲಿ ಮಹತ್ತರ ಬದಲಾವಣೆ ತರುವುದಾಗಿ ಹೇಳಿಕೊಳ್ಳುತ್ತಿದ್ದಾರೆ, ಬದಲಾವಣೆ ಎಂದರೆ ನೈಸ್ ವ್ಯವಹಾರವೇ ಎಂದು ಪ್ರಶ್ನಿಸಿದರು.

ಈ ಹಿಂದೆ ಒತ್ತಾಯ ಮಾಡುತ್ತಿದ್ದರು

ನಾವುಗಳು ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ಕೃಷಿ ಸಾಲ ಮನ್ನಾ ಮಾಡುವಂತೆ ಇದೇ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒತ್ತಾಯ ಮಾಡುತ್ತಿದ್ದರು.

ಅಂದು ನಾವು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಲಿಲ್ಲ, ಸಹಕಾರವನ್ನೂ ಕೇಳಲಿಲ್ಲ, ನಮ್ಮ ಸಂಪನ್ಮೂಲವನ್ನೇ ಕ್ರೋಡೀಕರಿಸಿ ರೈತರ ನೆರವಿಗೆ ಬಂದಿದ್ದೆವು.

ರೈತರು ಮತ್ತು ಬರಗಾಲದ ಬಗ್ಗೆ ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆದಿದ್ದಾರೆ, 100ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಘೋಷಣೆ ಮಾಡಿದರೂ, ಇದುವರೆಗೂ ಯಾವುದೇ ಪರಿಹಾರ ನೀಡಿಲ್ಲ.

ಸುಮ್ಮನೆ ಕಾಲ ಕಳೆಯುತ್ತಿದ್ದಾರೆ

ಮಳೆ ನಂಬಿಕೊಂಡು ರೈತರು ಎರಡು-ಮೂರು ಬಾರಿ ಬಿತ್ತನೆ ಮಾಡಿದರೂ ಬೆಳೆ ಮೊಳಕೆ ಒಡೆಯಲಿಲ್ಲ, ಕೃಷಿಕರು ಸಂಕಷ್ಟ ಸ್ಥಿತಿಯಲ್ಲಿದ್ದಾರೆ, ತಕ್ಷಣ ಅವರ ನೆರವಿಗೆ ಬರುವುದು ಬಿಟ್ಟು, ವಿಧಾನಮಂಡಲದ ಅಧಿವೇಶನ, ಕೇಂದ್ರಕ್ಕೆ ನಿಯೋಗ ಎಂಬುದಾಗಿ ಹೇಳಿಕೊಂಡೇ ಕಾಲ ಕಳೆಯುತ್ತಿದ್ದಾರೆ ಎಂದರು.

ಈ ಸರ್ಕಾರ ’ಎಲ್ಲೋ ಜೋಗಪ್ಪ ನಿನ್ನರಮನೆ’ ಎಂಬ ಹಾಡಿನಂತಾಗಿದೆ ಎಂದು ಲೇವಡಿ ಮಾಡಿದರು.

ಶಿವಕುಮಾರ್ ಆಡಳಿತದಲ್ಲಿ ಏನು ನಡೆಯುತ್ತಿದೆ ಎಂಬುದು ಯಾರಿಗೂ ಅರ್ಥವಾಗುತ್ತಿಲ್ಲ, ಆದರೆ, ಅವರು ಮಾತ್ರ ಬೆಳಗಿನಿಂದ ಸಂಜೆವರೆಗೂ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assembly sessioncentral ministercrop loand-k-shivakumardon't ask central govt.H. D. Kumaraswamykarnataka droughtsevere dstate chief ministers
0 FacebookTwitterPinterestEmail
admin

previous post
3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

You may also like

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (571)
  • ಅಂಕಣ (109)
  • ಉದ್ಯೋಗ (352)
  • ದಿನ ಭವಿಷ್ಯ (110)
  • ರಾಜಕೀಯ (2,064)
  • ರಾಜ್ಯ (2,379)
  • ರಾಷ್ಟ್ರ (2,343)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026

KMS Special

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ...

September 18, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ