Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಮುಂದಿನ ವಿಜಯದಶಮಿಗೆ ನಾನೇ ಸಿಎಂ!

by cklbkrish October 27, 2023
written by cklbkrish October 27, 2023 0 comments 1 minutes read
ಬೆಂಗಳೂರು: ಮಹಾರಾಷ್ಟ್ರ ಮಾದರಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಹೋದರ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ. ಕರ್ನಾಟಕದ ಏಕನಾಥ್ಸಿಂಧೆ ಯಾರು ಎಂದು ಬಹಿರಂಗಪಡಿಸದಿದ್ದರೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿ ಆಗುವುದಾಗಿ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಔತಣಕೂಟದ ಸಭೆಗಳನ್ನು ನಡೆಸಿದ ಬೆನ್ನಲ್ಲೇ ರಮೇಶ್ ಇಂತಹ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ತುರ್ತು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರ ಪತನದ ಮಾಹಿತಿ ನೀಡಿದ್ದಲ್ಲದೆ, ನ್ಯಾವ್ಯಾರೂ ಈ ಸರ್ಕಾರವನ್ನು ಬೀಳಿಸುತ್ತಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಇಲ್ಲಿಯೂ ಆಗುತ್ತದೆ. ಬಿಜೆಪಿ ಆಪರೇಷನ್ ಕಮಲದಿಂದ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನವಾಗಲಿಲ್ಲ. ಶಿವಕುಮಾರ್ ಅವರ ದುರಂಹಕಾರದ ವರ್ತನೆ ಪ್ರತಿಭಟಿಸಿ ಹೊರಬಂದ ಕಾರಣ ಅಂದು ಸರ್ಕಾರ ಪತನಗೊಂಡಿತು. ಬೆಳಗಾವಿ ರಾಜಕೀಯವೇ ಸರ್ಕಾರಕ್ಕೆ ಕಂಟಕ ಬೆಳಗಾವಿ ರಾಜಕೀಯವೇ ಇಂದಿನ ಸರ್ಕಾರದ ಪತನಕ್ಕೂ ಮೂಲ ಕಾರಣವಾಗುತ್ತದೆ ಎಂದ ರಮೇಶ್, ಯಾವಾಗ, ಏನಾಗಲಿದೆ ಎಂಬುದನ್ನು ಮಾತ್ರ ಬಹಿರಂಗಪಡಿಸಲಿಲ್ಲ. ಕುಮಾರಸ್ವಾಮಿ ಅವರ ಆತ್ಮೀಯನಾಗಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ನಡೆಸುತ್ತಿದ್ದಾರೆ. ನಿತ್ಯ ಡಿಕೆಶಿ ನಾಟಕ ಮಂಡಳಿ ಆಪರೇಷನ್ ಕಮಲ ಮಾಡುತ್ತಿರುವ ಬಗ್ಗೆ ಮಾತನಾಡುತ್ತಿದೆ. ಮೈತ್ರಿ ಸರಕಾರ ಬಿದ್ದಾಗ ಬಿಜೆಪಿಯೇನೂ ನಮ್ಮನ್ನು ಆಪರೇಷನ್ ಮಾಡಿರಲಿಲ್ಲ. ನಾವೇ ಮೈತ್ರಿ ಸರಕಾರ ತೆಗೆದು ಬಿಜೆಪಿಗೆ ಸೇರಿದೆವು. ಈಗ ಬಿಜೆಪಿ ಹೆಸರು ಕೆಡಿಸಲು ಡಿಕೆಶಿ ನಾಟಕ ಮಂಡಳಿ ಹೆಣಗಾಡುತ್ತಿದೆ. ಬಿಜೆಪಿ ಹೆಸರು ಕೆಡಿಸಲು ಡಿಕೆಶಿ ನಾಟಕ ಮಂಡಳಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಅವರು ದೂರಿದರು. ಸುಳ್ಳು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಎಲ್ಲ ರಂಗದಲ್ಲೂ ಫೇಲ್ ಆಗಿದೆ. ಸರಕಾರ ಪತನ ಆಗುವುದು ಬೇಡ, ಮುಂದುವರೆಯಲಿ. ಕಾಂಗ್ರೆಸ್ ಶಾಸಕರೇ ಸರಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಡಿಕೆಶಿ ಇರುವ ಸರಕಾರ ಯಾವಾಗಲೂ ಡೇಂಜರ್. ಡಿಕೆಶಿ ಅಧಿಕಾರ ಇದ್ದಾಗ ಒಂದು ರೀತಿ ಇರುತ್ತಾರೆ, ಪ್ರತಿಪಕ್ಷದಲ್ಲಿದ್ದಾಗ ಇನ್ನೊಂದು ರೀತಿ ಇರುತ್ತಾರೆ. ಡಿಕೆಶಿಯೇ ಸಿಡಿ ಮಾಸ್ಟರ್, ಅದೇ ಅವರ ಶಕ್ತಿ. ಸಿಡಿ ಇಟ್ಟುಕೊಂಡೇ ರಾಜಕಾರಣ ಮಾಡುತ್ತಾರೆ ಎಂದು ಆರೋಪಿಸಿದರು. ಸಿಡಿ ಇಟ್ಟುಕೊಂಡು ನೆಲಮಂಗಲ ಮಾಜಿ ಶಾಸಕ ನಾಗರಾಜ್ಗೆ ಡಿಕೆಶಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.ನಿನ್ನ ಹಾಗೂ ರಮೇಶ್ ಜಾರಕಿಹೊಳಿದು ಬಹಳಷ್ಟಾಗಿದೆ. ಎಸ್ಐಟಿ ಕ್ಯಾನ್ಸಲ್ ಮಾಡಿ ಮರು ತನಿಖೆಗೆ ಆದೇಶಿಸುವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಎಷ್ಟೇ ಸಿಡಿ ಬಂದರೂ ನಾನು ಹೆದರಲ್ಲ. ಮರು ತನಿಖೆ ಆದರೆ ಸಿಬಿಐನಿಂದ ಆಗಲಿ ಎಂದು ನಾನು ಕೋರ್ಟ್ ಮೊರೆ ಹೋಗುವೆ ಎಂದು ಅವರು ಡಿಕೆಶಿ ಮೇಲೆ ವಾಗ್ದಾಳಿ ನಡೆಸಿದರು. ವಿನಾಕಾರಣ ನನ್ನ ಮೇಲೆ ಡಿಕೆಶಿ ಹಗೆತನ ಸಾಧಿಸುತ್ತಿದ್ದಾರೆ. ಹೆಚ್ಡಿಕೆ ಜತೆಗೆ ಆಪ್ತನಾಗುತ್ತಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ಮಾಡುತ್ತಿದ್ದಾರೆ. ಒಂದೇ ರಾತ್ರಿಯಲ್ಲಿ ಬೆಳವಣಿಗೆ ಆಗಿ ಸರಕಾರ ಪತನವಾಗಲಿದೆ ಎಂದರು. ರಮೇಶ್ ಜಾರಕಿಹೊಳಿ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದ ಜನ ಚುನಾವಣೆಯಲ್ಲಿ ಏನು ತೀರ್ಪು ನೀಡಬೇಕೋ ನೀಡಿದ್ದಾರೆ. ನಮಗೆ ಮಾಡಲು ಅನೇಕ ಕೆಲಸಗಳಿವೆ. ಆ ಕೆಲಸ ಮಾಡುತ್ತಿದ್ದೇವೆ ಎಂದಷ್ಟೇ ತಿಳಿಸಿದರು. ಹೆಚ್ಚಿನ ಪ್ರತಿಕ್ರಿಯೆ ನೀಡಲು ಆಸಕ್ತಿ ತೋರಲಿಲ್ಲ.
3FacebookTwitterPinterestEmail
174

ಆಪ್ತರ ವಿಶ್ ಮಾಡುತ್ತಾ ಬೀಗಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮುಂಬರುವ ವಿಜಯದಶಮಿ ವೇಳೆಗೆ ರಾಜ್ಯದಲ್ಲಿ ಸರ್ಕಾರ ಬದಲಾವಣೆಯಾಗಿ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಪ್ತ ವರ್ಗಕ್ಕೆ ಸಂದೇಶ ರವಾನಿಸಿದ್ದಾರೆ.

ಆಯ್ದ ಕೆಲವು ಮಾಧ್ಯಮ ಮಿತ್ರರು ಹಾಗೂ ಆಪ್ತ ಬಳಕ್ಕೆ ಸ್ವತಃ ತಾವೇ ದೂರವಾಣಿ ಮಾಡಿ ವಿಜಯದಶಮಿ ಹಬ್ಬದ ಶುಭಾಶಯ ಹೇಳಿದ್ದಲ್ಲದೆ, ಮುಂದಿನ ವರ್ಷ ಮುಖ್ಯಮಂತ್ರಿಯಾಗಿ ಶುಭಾಶಯ ಕೋರುವುದಾಗಿ ಆವರು ಭವಿಷ್ಯ ನುಡಿದಿದ್ದಾರೆ.

DK Shivakumar

ಶಿವಕುಮಾರ್ ರವಾನಿಸಿರುವ ಈ ಸಂದೇಶ ಎಲ್ಲರಲ್ಲೂ ಆಶ್ಚರ್ಯ ಉಂಟುಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ್ದು, ಸರ್ಕಾರ ರಚನೆ ಸಂದರ್ಭದಲ್ಲಿ ಎಐಸಿಸಿ ಮಧ್ಯೆ ಪ್ರವೇಶಿಸಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ನಾಯಕತ್ವದ ಕಗ್ಗಂಟನ್ನು ಬಿಡಿಸಿಟ್ಟಿದ್ದರು.

ದೆಹಲಿಯ ಸೂತ್ರದಂತೆ ಸಿದ್ದರಾಮಯ್ಯ ಮೊದಲ ಅವಧಿಗೆ ಅಂದರೆ ಎರಡು ವರ್ಷಕ್ಕೆ. ನಂತರ ಉಳಿದ ಮೂರು ವರ್ಷಗಳ ಅವಧಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದಾಗಿತ್ತು.

ಅಷ್ಟೇ ಅಲ್ಲ, ಅಧಿಕಾರ ಹಂಚಿಕೆ ಹಾಗೂ ಸರ್ಕಾರದ ಪಾಲುದಾರಿಕೆ ಬಗ್ಗೆಯೂ ಎಐಸಿಸಿ ಮಾಡಿದ ಸೂತ್ರಕ್ಕೆ ಉಭಯ ನಾಯಕರು ಸಮ್ಮತಿಸಿದ್ದರು.

ಮುಂದಿನ ವಿಜಯದಶಮಿ ವೇಳೆಗೆ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡು ಕೇವಲ ೧೬ ತಿಂಗಳಷ್ಟೇ ಕಳೆದಿರುತ್ತದೆ. ಸೂತ್ರದಂತೆ ನಾಯಕತ್ವ ಬದಲಾವಣೆಗೆ ಇನ್ನೂ ಸಮಯ ಇರುತ್ತದೆ.

ಆದರೂ ಶಿವಕುಮಾರ್ ಏಕೆ ಈ ಸಂದೇಶ ರವಾನಿಸಿದ್ದಾರೆ ಎಂಬುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೆಳಗಾವಿಯ ಮುಸುಕಿನ ಗುದ್ದಾಟ ಹೊರ ಬರುತ್ತಿದ್ದಂತೆ ಶಿವಕುಮಾರ್ ಆಪ್ತ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಅವರು, ನಮ್ಮ ನಾಯಕ ಡಿ.ಕೆ.ಶಿ ಅವರಿಗೆ ವಿಧಾನಸಭೆಯಲ್ಲಿ ಪಕ್ಷದ ೭೩ ಶಾಸಕರ ಬೆಂಬಲವಿದೆ ಎಂದು ಏಕಾಏಕಿ ಹೇಳಿಕೆ ನೀಡಿ ರಾಜಕೀಯವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದಾರೆ.

ಸ್ಥಳ, ಸಮಯ, ದಿನ ಫಿಕ್ಸ್‌ ಮಾಡಿ: ಡಿಸಿಎಂ ಡಿಕೆಶಿ ಬಹಿರಂಗ ಚರ್ಚೆ ಸವಾಲ್ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯ ಅವರ ಆಪ್ತರು ನಮ್ಮ ನಾಯಕರಿಗೆ ಹೆಚ್ಚು ಸದಸ್ಯರ ಬೆಂಬಲವಿದೆ. ಅವರು ಸೂಚಿಸಿದವರೇ ಅಧಿಕಾರ ಬದಲಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ಸಂದೇಶವನ್ನು ಶಿವಕುಮಾರ್ ಪಾಳಯಕ್ಕೆ ನೀಡಿದ್ದರು.

ತದ ನಂತರ ಶಿವಕುಮಾರ್ ಅವರು ಸಿಎಲ್‌ಪಿಯಲ್ಲಿ ತಮ್ಮ ಬಲ ಹೆಚ್ಚಿಸಿಕೊಳ್ಳಲು ನಿರಂತರ ಕಸರತ್ತು ನಡೆಸುತ್ತಿದ್ದಾರೆ. ಅದು ಅವರಿಗೆ ಒಂದು ಹಂತದಲ್ಲಿ ಫಲ ಕೊಟ್ಟಂತಿದೆ.

ಇದಕ್ಕೆ ಎಐಸಿಸಿಯ ಮಾಜಿ ಪ್ರಧಾನಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಕೆಲವು ಹಿರಿಯ ಸಚಿವರು ಡಿ.ಕೆ.ಶಿ. ಬೆನ್ನೆಲುಬಾಗಿ ನಿಂತಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿಯೇ ಶಿವಕುಮಾರ್ ಅವರು ಇಂತಹ ಸಂದೇಶ ನೀಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcongressdk shivakumarjdskarnatakakmskmskannadapoliticsSiddaramaiah
3 FacebookTwitterPinterestEmail
cklbkrish

previous post
ನಕಲಿ ಹುಲಿ ಉಗುರು, ನಕಲಿ ಲಾಕೆಟ್ ಧರಿಸಬೇಡಿ: ಈಶ್ವರ ಖಂಡ್ರೆ
next post
ನಮ್ಮ ಮೆಟ್ರೊಗೆ ಬಸವೇಶ್ವರರ ಹೆಸರು ನಾಮಕರಣ ಸಿಎಂ ಜತೆ ಚರ್ಚೆ: ಎಂಬಿ ಪಾಟೀಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ