Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಮ್ಮ ಮೆಟ್ರೊಗೆ ಬಸವೇಶ್ವರರ ಹೆಸರು ನಾಮಕರಣ ಸಿಎಂ ಜತೆ ಚರ್ಚೆ: ಎಂಬಿ ಪಾಟೀಲ

by cklbkrish October 27, 2023
written by cklbkrish October 27, 2023 0 comments 2 minutes read
2FacebookTwitterPinterestEmail
113

ಬಸವೇಶ್ವರರು ನಾಡಿನ ಸಂಸ್ಕೃತಿಯ ಪ್ರತೀಕ

ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೊ’ಗೆ ನಾಮಕರಣ ಮಾಡುವ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ಮೆಟ್ರೊಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ‌ಕೇವಲ ಯಾವುದೊ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು‌ ಇಡೀ ಮೆಟ್ರೊ ವ್ಯವಸ್ಥೆಗೇ ಬಸವೇಶ್ವರರ ಹೆಸರು ಇಡುವುದು ಸೂಕ್ತ. ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಟ್ಟ ಹಾಗೆ ಮೆಟ್ರೊಗೊ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಅಂತಿಮ ಮಾಡಲಾಗುವುದು ಎಂದರು.

ಅಂತೆಯೇ, ಬಿಜಾಪುರ ಹೋಗಿ ವಿಜಯಪುರ ಆಗಿರುವ ಜಿಲ್ಲೆಗೆ “ಬಸವೇಶ್ವರ ಜಿಲ್ಲೆ” ಎಂದು ನಾಮಕರಣ ಮಾಡಬೇಕೆಂಬ ಧ್ವನಿಯೂ ಕೇಳಿಬಂದಿದೆ. ಯಾವುದಕ್ಕೇ ಆಗಲಿ ಬಸವೇಶ್ವರರ ಹೆಸರನ್ನು ಇಡುವುದಕ್ಕೆ ನಮ್ಮ ಯಾರ ವಿರೋಧವೂ ಇಲ್ಲ. ವೈಯಕ್ತಿಕವಾಗಿ ನಾನಂತೂ ಬಸವಣ್ಣನವರ ಅಪ್ಪಟ ಅನುಯಾಯಿ. ಆದರೆ, ಹೆಸರು ಬದಲಾವಣೆ ಮಾಡುವುದಕ್ಕೆ ಮುಂಚೆ ಇತರ ಹತ್ತು ಹಲವು ಸಾಧಕ ಬಾಧಕಗಳ ಬಗ್ಗೆ ಆಲೋಚಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯದ ಹೆಸರನ್ನು “ಬಸವೇಶ್ವರ ನಾಡು” ಎಂದು ಬದಲಾಯಿಸುವ ಪ್ರಸ್ತಾವ ಇದೆಯೇ ಎಂದು ಸುದ್ದಿಗಾರರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಅಂತಹ ಪ್ರಸ್ತಾಪದ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ. ಆದರೆ, ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಅವರನ್ನು ಆ ರಾಜ್ಯದ ಸಾಂಸ್ಕೃತಿಕ ಪ್ರತೀಕ ಎಂದು ಪರಿಗಣಿಸಿರುವ ರೀತಿಯಲ್ಲೇ ನಮ್ಮ ರಾಜ್ಯದಲ್ಲಿ ಬಸವೇಶ್ವರ ಅವರನ್ನು ಸಾಂಸ್ಕೃತಿಕ ಪ್ರತೀಕವಾಗಿ ಪರಿಗಣಿಸಬೇಕು ಎಂಬ ಬೇಡಿಕೆಗಳು ಇವೆ.

ಎಂ.ಬಿ.ಪಾಟೀಲ

ಒಂದು ಹೆಸರನ್ನು ಬದಲಾಯಿಸಿದರೆ ಅದು ಸ್ಥಳೀಯ ಮಟ್ಟದಿಂದ ಹಿಡಿದು ಅಂತರರಾಷ್ಟ್ರೀಯ ಮಟ್ಟದವರೆಗೆ ಬದಲಾವಣೆ ಆಗಬೇಕಾಗುತ್ತದೆ. ಹೀಗಾದಾಗ ಕೆಲವು ತೊಡಕುಗಳು ಕೂಡ ಉಂಟಾಗುತ್ತವೆ. ಬಿಜಾಪುರ ಎಂಬ ಹೆಸರನ್ನು ವಿಜಯಪುರ ಎಂದು ಬದಲಾಯಿಸಿದಾಗ ಕೂಡ ಸಾಕಷ್ಟು ಅಡಚಣೆಗಳು ಎದುರಾಗಿದ್ದವು. ಈಗಷ್ಟೇ ಅವೆಲ್ಲಾ ಒಂದು ಹಂತಕ್ಕೆ ಬಂದಿವೆ. ಅಲ್ಪಾವಧಿಯಲ್ಲಿ ಒಂದು ಸ್ಥಳದ ಹೆಸರನ್ನು ಎರಡನೇ ಸಲ ಬದಲಾಯಿಸುವ ಬಗ್ಗೆ ಸಾಕಷ್ಟು ಚರ್ಚೆ ನಡೆಸಬೇಕಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಬಸವೇಶ್ವರ ನಾಡು ಪ್ರಸ್ತಾಪದ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ.

ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೊ’ಗೆ ನಾಮಕರಣ ಮಾಡುವ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ಮೆಟ್ರೊಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ‌ಕೇವಲ ಯಾವುದೊ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು‌ ಇಡೀ ಮೆಟ್ರೊ ವ್ಯವಸ್ಥೆಗೇ ಬಸವೇಶ್ವರರ ಹೆಸರು ಇಡುವುದು ಸೂಕ್ತ. ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಟ್ಟ ಹಾಗೆ ಮೆಟ್ರೊಗೊ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಅಂತಿಮ ಮಾಡಲಾಗುವುದು ಎಂದರು.

ಅಂತೆಯೇ, ಬಿಜಾಪುರ ಹೋಗಿ ವಿಜಯಪುರ ಆಗಿರುವ ಜಿಲ್ಲೆಗೆ “ಬಸವೇಶ್ವರ ಜಿಲ್ಲೆ” ಎಂದು ನಾಮಕರಣ ಮಾಡಬೇಕೆಂಬ ಧ್ವನಿಯೂ ಕೇಳಿಬಂದಿದೆ. ಯಾವುದಕ್ಕೇ ಆಗಲಿ ಬಸವೇಶ್ವರರ ಹೆಸರನ್ನು ಇಡುವುದಕ್ಕೆ ನಮ್ಮ ಯಾರ ವಿರೋಧವೂ ಇಲ್ಲ. ವೈಯಕ್ತಿಕವಾಗಿ ನಾನಂತೂ ಬಸವಣ್ಣನವರ ಅಪ್ಪಟ ಅನುಯಾಯಿ. ಆದರೆ, ಹೆಸರು ಬದಲಾವಣೆ ಮಾಡುವುದಕ್ಕೆ ಮುಂಚೆ ಇತರ ಹತ್ತು ಹಲವು ಸಾಧಕ ಬಾಧಕಗಳ ಬಗ್ಗೆ ಆಲೋಚಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯದ ಹೆಸರನ್ನು “ಬಸವೇಶ್ವರ ನಾಡು” ಎಂದು ಬದಲಾಯಿಸುವ ಪ್ರಸ್ತಾವ ಇದೆಯೇ ಎಂದು ಸುದ್ದಿಗಾರರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಅಂತಹ ಪ್ರಸ್ತಾಪದ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ. ಆದರೆ, ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಅವರನ್ನು ಆ ರಾಜ್ಯದ ಸಾಂಸ್ಕೃತಿಕ ಪ್ರತೀಕ ಎಂದು ಪರಿಗಣಿಸಿರುವ ರೀತಿಯಲ್ಲೇ ನಮ್ಮ ರಾಜ್ಯದಲ್ಲಿ ಬಸವೇಶ್ವರ ಅವರನ್ನು ಸಾಂಸ್ಕೃತಿಕ ಪ್ರತೀಕವಾಗಿ ಪರಿಗಣಿಸಬೇಕು ಎಂಬ ಬೇಡಿಕೆಗಳು ಇವೆ” ಎಂದರು.

ಒಂದು ಹೆಸರನ್ನು ಬದಲಾಯಿಸಿದರೆ ಅದು ಸ್ಥಳೀಯ ಮಟ್ಟದಿಂದ ಹಿಡಿದು ಅಂತರರಾಷ್ಟ್ರೀಯ ಮಟ್ಟದವರೆಗೆ ಬದಲಾವಣೆ ಆಗಬೇಕಾಗುತ್ತದೆ. ಹೀಗಾದಾಗ ಕೆಲವು ತೊಡಕುಗಳು ಕೂಡ ಉಂಟಾಗುತ್ತವೆ. ಬಿಜಾಪುರ ಎಂಬ ಹೆಸರನ್ನು ವಿಜಯಪುರ ಎಂದು ಬದಲಾಯಿಸಿದಾಗ ಕೂಡ ಸಾಕಷ್ಟು ಅಡಚಣೆಗಳು ಎದುರಾಗಿದ್ದವು. ಈಗಷ್ಟೇ ಅವೆಲ್ಲಾ ಒಂದು ಹಂತಕ್ಕೆ ಬಂದಿವೆ. ಅಲ್ಪಾವಧಿಯಲ್ಲಿ ಒಂದು ಸ್ಥಳದ ಹೆಸರನ್ನು ಎರಡನೇ ಸಲ ಬದಲಾಯಿಸುವ ಬಗ್ಗೆ ಸಾಕಷ್ಟು ಚರ್ಚೆ ನಡೆಸಬೇಕಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
basavannakarnatakakmskmskannadamb patilminister
2 FacebookTwitterPinterestEmail
cklbkrish

previous post
ಮುಂದಿನ ವಿಜಯದಶಮಿಗೆ ನಾನೇ ಸಿಎಂ!
next post
ಡಿ.ಕೆ.ಶಿವಕುಮಾರ್‌ಗೆ ಸಿಎಂ ಪಟ್ಟ ತಪ್ಪಿಸಲು ಷಡ್ಯಂತರ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ