Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ

by KM Shivaraju November 2, 2023
written by KM Shivaraju November 2, 2023 0 comments 2 minutes read
2FacebookTwitterPinterestEmail
83

ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳ: ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬರಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ವಿಳಂಬವೇಕೆ ತೋರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ ಮನವಿ ಸಲ್ಲಿಸಿದೆ. ರಾಜ್ಯದ ಸಚಿವರ ಭೇಟಿಗೂ ಸಮಯ ನೀಡದೇ , ಪರಿಹಾರ ಮೊತ್ತವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರಸರ್ಕಾರ ನರೇಗಾ ಯೋಜನೆಯಡಿ ದಿನಗೂಲಿ ಕಾರ್ಮಿಕರ ವೇತನ 600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ ಎಂದರು.

ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆಗೆ ಚರ್ಚೆ :
ಕೇಂದ್ರ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೆವಾಲ ಹಾಗೂ ವೇಣುಗೋಪಾಲ್ ಅವರು ರಾಜ್ಯಕ್ಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಹಾಗೂ ಶಾಸಕರನ್ನು ಕೆಲವು ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕ ಮಾಡುವ ಪ್ರಕ್ರಿಯೆಯೂ ಇದ್ದು, ಈ ಬಗ್ಗೆಯೂ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಜಿಲ್ಲೆಯ ಜನರ ಕಷ್ಟಗಳಿಗೆ ಜಿಲ್ಲಾಮಂತ್ರಿಗಳ ಸ್ಪಂದನೆ

ಬರನಿರ್ವಹಣೆಗೆ ಸಂಬಂಧಿಸಿದಂತೆ ಯಾವ ಸಚಿವರೂ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಎಲ್ಲಾ ಜಿಲ್ಲಾ ಮಂತ್ರಿಗಳು ತಮ್ಮ ಜಿಲ್ಲೆಗಳಿಗೆ ಭೇಟಿ ನೀಡಿ, ಜನರ ಅಹವಾಲುಗಳನ್ನು ಕೇಳಿ, ಅವರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ ಎಂದರು.

ರಾಜ್ಯ ಸರ್ಕಾರದಿಂದ ಕುಡಿಯುವ ನೀರಿಗೆ 900 ಕೋಟಿ ರೂ

ರಾಜ್ಯಸರ್ಕಾರ ಕುಡಿಯುವ ನೀರಿನ ಬವಣೆ ನೀಗಿಸಲು 900 ಕೋಟಿ ಬಿಡುಗಡೆ ಮಾಡಿದೆ. ಜಿಲ್ಲೆಯ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಅನುದಾನ ನೀಡಿದ್ದು, ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಸಲ್ಲಿಸಿದ್ದಲ್ಲಿ, ಸರ್ಕಾರ ತಕ್ಷಣ ಅನುದಾನ ಒದಗಿಸಲಿದೆ ಎಂದರು.

ಕೃಷಿ ಪಂಪಸೆಟ್ ಮುಂದುವರೆಸಲಾಗುವುದು

ಕೃಷಿ ಪಂಪಸೆಟ್ ಗಳಿಗೆ ಪೂರಕ ಸೌಲಭ್ಯಗಳು ರೈತರಿಗೆ ನಿಲ್ಲಿಸಲಾಗಿದೆ ಎಂಬುದಕ್ಕೆ ಉತ್ತರಿಸಿ, ಈ ವಿಚಾರ ಕೃಷಿ ಇಲಾಖೆಗೆ ಸಂಬಂಧಪಟ್ಟಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಈ ಮುಂಚೆ ನೀಡುತ್ತಿದ್ದಂತೆ ಕೃಷಿ ಪಂಪಸೆಟ್ ಗಳಿಗೆ ಪೂರಕ ಸೌಲಭ್ಯಗಳನ್ನು ರೈತರಿಗೆ ಮುಂದುವರೆಸಲಾಗುವುದು ಎಂದು ತಿಳಿಸಿದರು.

ಬಿಜೆಪಿಯವರ ಹಗಲು ಕನಸು

ತನಿಖಾ ಸಂಸ್ಥೆಗಳಿಂದ ಕಾಂಗ್ರೆಸ್ ನವರ ಭ್ರಷ್ಟಾಚಾರ ಬೆಳಕಿಗೆ ಬರುತ್ತಿರುವುದಾಗಿ ಯಡಿಯೂರಪ್ಪ ತಿಳಿಸಿರುವ ಬಗ್ಗೆ ಉತ್ತರಿಸಿ, ಇವೆಲ್ಲ ಸುಳ್ಳು ಆರೋಪಗಳು ಎಂದರು. ಬಿಜೆಪಿ ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದರೆ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದರು.

ಸಿದ್ದರಾಮಯ್ಯರವರು ಮುಂಚಿನ ಆಡಳಿತದ ವೈಖರಿ ತೋರುತ್ತಿಲ್ಲ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಉತ್ತರಿಸಿ, ಯಡಿಯೂರಪ್ಪನವರು ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಬಿಜೆಪಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತು. ವಿಧಾನಸಭೆಯಲ್ಲಿ ಅವರು ಕಣ್ಣೀರಿಟ್ಟಿದ್ದರು. ಅವರ ಪಕ್ಷದವರೇ ಅವರನ್ನು ಮನೆಗೆ ಕಳುಹಿಸಿದ್ದಾರೆ. ಅವರ ಹೇಳಿಕೆಗಳಿಗೆ ಏನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಸರ್ಕಾರದಿಂದ ಯಾರನ್ನೂ ಕಳಿಸೋಲ್ಲ

ಕಾಂಗ್ರೆಸ್ ಶಾಸಕರು ದುಬೈಗೆ ಪ್ರವಾಸ ಹೋಗುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರ ಹಣದಲ್ಲಿ ಅವರು ಹೋಗುತ್ತಿದ್ದಾರೆ. ಸರ್ಕಾರದಿಂದ ನಾವು ಯಾರನ್ನೂ ಕಳಿಸೋಲ್ಲ ಎಂದರು.

ಐದು ವರ್ಷ ಆಡಳಿತ

ಐದು ವರ್ಷಕ್ಕೊಮ್ಮೆ ಚುನಾವಣೆ ನಡೆಯುತ್ತದೆ. ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ಮಾಡುತ್ತೇವೆ. ಮತ್ತೆ ಚುನಾವಣೆಗೆ ಹೋಗುತ್ತೇವೆ. ಮತ್ತೆ ಜನ ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದರು.

ರಮೇಶ್ ಜಾರಕಿಹೊಳಿ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರು ಸೋತು ಮನೆಯಲ್ಲಿರುವವರು. ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅದಕ್ಕೆಲ್ಲಾ ಉತ್ತರಿಸಲಾಗುವುದಿಲ್ಲ ಎಂದರು.

ಬಿಜೆಪಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿ ಹೋಗಿದ್ದರೂ ಕೂಡ ಐದು ಗ್ಯಾರಂಟಿ ಅನುಷ್ಠಾನವಾಗಿದೆ
ನಾವು ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದೆವು. ಅದನ್ನು ಈಡೇರಿಸಿದ್ದೇವೆ. ಬಿಜೆಪಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿ ಹೋಗಿದ್ದರೂ ಕೂಡ ಐದು ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cmcongressindiakarnatakakmskmskannadanewspoliticsSiddaramaiahstate
2 FacebookTwitterPinterestEmail
KM Shivaraju

previous post
68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
next post
ಅವಧಿ ಪೂರ್ತಿ ನಾನೇ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ