Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮೈತ್ರಿಯಿಂದ ಜೆಡಿಎಸ್ ಪಕ್ಷದ ಯಾರೊಬ್ಬರ ರಾಜಕೀಯ ಭವಿಷ್ಯಕ್ಕೆ ಧಕ್ಕೆ ಇಲ್ಲಎಂದ ಹೆಚ್.ಡಿ.ಕುಮಾರಸ್ವಾಮಿ

by admin October 8, 2023
written by admin October 8, 2023 0 comments 2 minutes read
2FacebookTwitterPinterestEmail
145

ಬೆಂಗಳೂರು/ ರಾಮನಗರ: ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಈ ಮೈತ್ರಿ ಪರಿಹಾರವಾಗಿದೆ. ಮುಂದಿನ ಐದು ವರ್ಷಗಳಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಪಡೆಯದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಬಿಡದಿಯ ಕೇತಿಗಾನಹಳ್ಳಿಯ ತೋಟದಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ಜತೆಗಿನ ಮೈತ್ರಿ ನನ್ನ ಸ್ವಾರ್ಥಕ್ಕೆ ಅಲ್ಲ. ನಾಡಿನ ಹಿತಕ್ಕಾಗಿ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಆಗದಂತೆ ಕಾನೂನಿನ ವ್ಯಾಪ್ತಿಯೊಳಗೇ ಈ ಸಮಸ್ಯೆ ಪರಿಹಾರ ಪಡೆಯುವ ಕೆಲಸ ಮಾಡುತ್ತೇನೆ ಎಂದು ಅವರು ಒತ್ತಿ ಹೇಳಿದರು.

ಈ ಮೈತ್ರಿಯಿಂದ ರಾಜ್ಯಕ್ಕೆ ಒಳ್ಳೆಯದು ಆಗುತ್ತದೆ. ನಮ್ಮ ನೀರು ಉಳಿಸೋದಕ್ಕೆ ಏನು ಮಾಡಬೇಕು, ಅದನ್ನು ಮಾಡುತ್ತೇನೆ. ಕಾಂಗ್ರೆಸ್ ನವರ ರೀತಿಯಲ್ಲಿ ನಾನು ಸುಳ್ಳು ಹೇಳುವುದಿಲ್ಲ. ದೇವೇಗೌಡರ ಮಾರ್ಗದರ್ಶನದಲ್ಲಿ ಈ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ಸ್ಪಷ್ಪ ಮಾತುಗಳಲ್ಲಿ ಹೇಳಿದರು.

ಹಿಂದೆ ನಾನು ರೂಪಿಸಿದ್ದ ಜಲಧಾರೆಯಲ್ಲೂ ಅತುತ್ತಮ ಪರಿಹಾರ ಇತ್ತು. ಜನರು ಅವಕಾಶ ಕೊಡಲಿಲ್ಲ ಜನರು. ಕಾಂಗ್ರೆಸ್ ಪಕ್ಷವನ್ನು ನಂಬಿ ಮತ ಹಾಕಿದರು. ಆದರೆ, ರಾಜ್ಯದ ಜನರ ಕಣ್ಣೀರು ಹಾಕಿಸುತ್ತಿದ್ದಾರೆ. ಹೀಗಾಗಿ ನಾನು ಕೆಲವು ದೃಢ ನಿರ್ಧಾರಗಳನ್ನು ಕೈಗೊಳ್ಳಬೇಕಾಯಿತು. ಈ ಮೈತ್ರಿಯಿಂದ ಅಧಿಕಾರಕ್ಕೆ ಬರುವುದು ನನ್ನ ಉದ್ದೇಶ ಅಲ್ಲ. ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ನನ್ನ ಗುರಿ.

ಕೇಂದ್ರ ಸರ್ಕಾರದ ನೆರವಿನಿಂದ ಎಲ್ಲ ಸಮಸ್ಯೆ, ಯೋಜನೆಗಳಿಗೆ ಪರಿಹಾರ ಮಾಡಿಸುತ್ತೇನೆ. ಒಂದು ವೇಳೆ ಮಾಡಿಸದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇನ್ನೈದು ವರ್ಷಗಳಲ್ಲಿ ಅದೆಲ್ಲ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ನುಡಿದರು.

ನಮ್ಮ ಪಕ್ಷ ಬಲವಾಗಿದೆ, ಒಗ್ಗಟ್ಟಾಗಿದೆ ಎನ್ನುವುದಕ್ಕೆ ಈ ಸಭೆ ಸಾಕ್ಷಿ. ಗೆದ್ದವರು, ಸೋತವರು ಸಂಕಟದಲ್ಲಿ ಇದ್ದೀರಿ, ಅದನ್ನು ಸರಿ ಮಾಡುತ್ತೇನೆ ಎಂದ ಅವರು; ಈ ರಾಮನಗರದ ಮಣ್ಣಲ್ಲಿಯೇ ನಾನು ಮಣ್ಣಗೋದು. ಈ ಮಣ್ಣಿನ ಸಾಕ್ಷಿಯಾಗಿ ಹೇಳುತ್ತಿದ್ದೇನೆ. ಈ ನಾಡಿನ ಋಣ ತೀರಿಸುತ್ತೇನೆ ಎಂದು ಅವರು ಭಾವುಕರಾಗಿ ಹೇಳಿದರು.

ದೇವೇಗೌಡರ 91ನೇ ವಯಸ್ಸಿನಲ್ಲಿ ಪಕ್ಷಕ್ಕೆ ಏನು ಆಘಾತ ಆಗಿದೆ, ಅದನ್ನು ಅವರು ಯೋಚನೆ ಮಾಡುತ್ತಿದ್ದಾರೆ. ಅವರಿಗೆ ಯಾರೂ ನೋವು ಕೊಡುವುದು ಬೇಡ ಎಂದು ಅವರು ವಿನಂತಿ ಮಾಡಿದರು.

ಜಾತ್ಯತೀತ ಅನ್ನುತ್ತೇವೆ. ಆದರೆ, ಜಾತಿ ಹೆಸರಿನಲ್ಲಿಯೇ ಟಿಕೆಟ್ ಕೊಡುತ್ತೇವೆ. ಇದು ಯಾಕೆ? ಕಾಂಗ್ರೆಸ್ ಎಲ್ಲ ಪಕ್ಷಗಳಿಗೂ ಮೀರಿ ಈ ಕೆಲಸ ಹೆಚ್ಚು ಮಾಡುತ್ತಿದೆ. ಕೇವಲ ತಾನು ಮಾತ್ರ ಜಾತ್ಯತೀತ ಪಕ್ಷ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದೆ ಎಂದು ಕೈ ಪಕ್ಷವನ್ನು ಛೇಡಿಸಿದರು ಮಾಜಿ ಮುಖ್ಯಮಂತ್ರಿಗಳು.

ಮೈತ್ರಿಯಿಂದ ಪಕ್ಷಕ್ಕೆ ಒಳ್ಳೆಯದೇ ಆಗುತ್ತದೆ. ಮುಂದೆ ಟಿಕೆಟ್ ಕೊಡುವ ಸಮಸ್ಯೆ ಆಗಲ್ಲ, ಬಿಜೆಪಿ ಮೈತ್ರಿಯಿಂದ ನಮಗೆ ಯಾವ ಇಕ್ಕಟ್ಟು ಆಗುವುದಿಲ್ಲ. ಮೈತ್ರಿ ಪಕ್ಷದ ಜತೆ ಮುಕ್ತವಾಗಿ ಮಾತನಾಡೋಣ. ಮೈತ್ರಿ ಧರ್ಮವನ್ನು ನಾವು ಗೌರವಿಸೋಣ. ನಮ್ಮ ಹಿತದ ಬಗ್ಗೆಯೂ ಮುಕ್ತವಾಗಿ ಚರ್ಚೆ ಮಾಡೋಣ ಎಂದರು ಅವರು.

ಪಕ್ಷದ ಯಾವ ಮುಖಂಡನ ರಾಜಕೀಯ ಭವಿಷ್ಯ ಮಸಕು ಮಾಡುವ ಪ್ರಶ್ನೆಯೇ ಇಲ್ಲ. ಎಲ್ಲರ ಹಿತ ಕಾಯುವುದು ನಮ್ಮ ಬದ್ಧತೆ. ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ನಾನು ಪ್ರಾಮಾಣಿಕವಾಗಿ ಈ ಮಾತನ್ನು ಹೇಳುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

ಇನ್ನು ಮೇಲೆ ಮಾತನ್ನು ಕಡಿಮೆ ಮಾಡಿ, ಹೆಚ್ಚು ಕೆಲಸ ಮಾಡುತ್ತೇನೆ. ಮಾಧ್ಯಮಗಳಿಗೆ ನನ್ನ ಮನವಿ ಇಷ್ಟೇ. ಮಾಧ್ಯಮಗಳು ಅನ್ಯತಾ ಭಾವಿಸಬಾರದು. ಇನ್ನು ಮುಂದೆ ಬೆಳಗ್ಗೆ ಆರು ಗಂಟೆಗೆಲ್ಲಾ ನನ್ನ ಮನೆ ಹತ್ರ ಬರೋದು ಬೇಡ, ವಿಷಯ ಇದ್ದರೆ ನಾನು ನಿಮ್ಮನ್ನು ಕರೆದು ಮಾತನಾಡುತ್ತೇನೆ ಎಂದು ಅವರು ವಿನಂತಿ ಮಾಡಿಕೊಂಡರು.

ಮತಕ್ಕಾಗಿ ಓಲೈಕೆ ಮಾಡಲ್ಲ:

ಮತಕ್ಕಾಗಿ ಯಾವುದೇ ಒಂದು ಸಮುದಾಯವನ್ನು ಓಲೈಕೆ ಮಾಡಲಾರೆ, ಮುಸ್ಲೀಮರಿಗೆ ನಾನು ಅನ್ಯಾಯ ಮಾಡಿಲ್ಲ.. ಯಾವ ಸಮುದಾಯವನ್ನು ನಾನು ರಾಜಕೀಯ ಸರ್ಥಕ್ಕೆ ಬಳಕೆ ಮಾಡಿಕೊಂಡಿಲ್ಲ. ಈ ಮಾತನ್ನು ಸ್ಪಃಸ್ತವಾಗಿ ಹೇಳುತ್ತೇನೆ. ನಮ್ಮ ಬದ್ಧತೆ ನಿಮಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷದ ರೀತಿ ನಾನು ಪೊಳ್ಳು ಭರವಸೆ ನೀಡಲಾರೆ ಎಂದು ಅವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
hd kumaraswamyjdskmskmskannadanews
2 FacebookTwitterPinterestEmail
admin

previous post
ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸೂಚನೆ : ಮಧು ಎಸ್.ಬಂಗಾರಪ್ಪ
next post
ಮೇಕೆದಾಟು ಯೋಜನೆಗೆ ಆಗ್ರಹಿಸಿ ಪತ್ರ ಚಳುವಳಿ ಆರಂಭಿಸಿದ ಎಎಪಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ