Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವರಿಷ್ಠರ ಎಚ್ಚರಿಕೆ ಕಡೆಗಣಿಸಿದರೆ ಮುಳುವಾಗಬಹುದು

by cklbkrish November 4, 2023
written by cklbkrish November 4, 2023 0 comments 1 minutes read
2FacebookTwitterPinterestEmail
49

ಮಂತ್ರಿಗಳಿಗೆ ಸಿಎಂ-ಡಿಸಿಎಂ ಖಡಕ್ ಎಚ್ಚರಿಕೆ

ಬೆಂಗಳೂರು: ಹೇಳಿಕೆ ಬಿಡಿ, ಲೋಕಸಭಾ ಚುನಾವಣೆ ಕಡೆಗೆ ಗಮನ ಹರಿಸಿ. ಇಲ್ಲದಿದ್ದರೆ ನಿಮಗೆ ಕಷ್ಟವಾಗುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಸಹೋದ್ಯೋಗಿಗಳಿಗೆ ಇಂದಿಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಉಪಹಾರ ಕೂಟಕ್ಕೆ ಒಂದಷ್ಟು ಆಯ್ದ ಸಚಿವರನ್ನು ಮಾತ್ರ ಆಹ್ವಾನಿಸಿದ್ದ ಮುಖ್ಯಮಂತ್ರಿ ಅವರು, ಉಪಹಾರದ ನಂತರದ ಸಭೆಯಲ್ಲಿ ಇತ್ತೀಚಿನ ಬೆಳವಣಿಗೆಗಳನ್ನು ಮುಂದಿಟ್ಟುಕೊಂಡು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪಕ್ಷ ಮತ್ತು ಸರ್ಕಾರದ ಆಂತರಿಕ ವಿಚಾರಗಳನ್ನು ಹಾದಿಬೀದಿಯಲ್ಲಿ ಮಾತಾಡಿ ಇಕ್ಕಟ್ಟಿಗೆ ಸಿಲುಕಿಸುತ್ತಿದ್ದೀರಿ. ಇದರಿಂದ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.

ವರಿಷ್ಠರು ನೀಡುವ ಎಚ್ಚರಿಕೆಗಳನ್ನು ನಿರ್ಲಕ್ಷ್ಯ ಮಾಡುತ್ತಿದ್ದೀರಿ. ಇದು ನಿಮಗೆ ಮುಂದೆ ಮುಳುವಾಗಬಹುದು ಎಂದ ಮುಖ್ಯಮಂತ್ರಿಗಳು, ಮಾಧ್ಯಮದವರು ನನ್ನ ಹೇಳಿಕೆಯನ್ನೇ ತಿರುಚಿದ್ದಾರೆ. ಅವರ ಅನುಕೂಲಕ್ಕೆ ತಕ್ಕಂತೆ ಸುದ್ದಿ ಮಾಡಿದ್ದಾರೆ. ನೀವು ಬಹಿರಂಗವಾಗಿ ಮಾತನಾಡುವಾಗ ಅದರಿಂದಾಗುವ ಪರಿಣಾಮಗಳ ಬಗ್ಗೆ ವಿವೇಚಿಸಿ ಹೇಳಿಕೆ ನೀಡಿ ಎಂದಿದ್ದಾರೆ.

ರಾಜ್ಯದ ೨೮ರಲ್ಲಿ ೨೦ ಕ್ಷೇತ್ರಗಳನ್ನು ಗೆಲ್ಲಲ್ಲೇ ಬೇಕು ಎಂಬ ಗುರಿಯನ್ನು ವರಿಷ್ಠರು ನೀಡಿದ್ದಾರೆ. ನಿಮಗೆ ವಹಿಸಿದ್ದ ಜವಾಬ್ದಾರಿ ಇದುವರೆಗೂ ಮಾಡಿಲ್ಲ. ಕೆಲವರಂತೂ ಕ್ಷೇತ್ರ ಮತ್ತು ರಾಜಧಾನಿ ಬಿಟ್ಟು, ಉಸ್ತುವಾರಿ ಜಿಲ್ಲೆಯಲ್ಲೂ ಪ್ರವಾಸ ಮಾಡುತ್ತಿಲ್ಲ.

ಲೋಕಸಭೆ ಚುನಾವಣೆಗೆ ಸಮರ್ಥ ಅಭ್ಯರ್ಥಿಗಳ ಪಟ್ಟಿ ಮಾಡಿ

ನಿಮಗೆ ವಹಿಸಿರುವ ಮತ್ತು ನಿಮ್ಮ ಜಿಲ್ಲಾ ಉಸ್ತುವಾರಿ ವ್ಯಾಪ್ತಿಯ ಲೋಕಸಭಾ ಕ್ಷೇತ್ರಕ್ಕೆ ಮೂವರು ಸಮರ್ಥ ಅಭ್ಯರ್ಥಿಗಳ ಹೆಸರನ್ನು ಪಟ್ಟಿ ಮಾಡಿಕೊಡಿ. ತಕ್ಷಣದಿಂದಲ್ಲೇ ಈ ಕಾರ್ಯ ಆಗಬೇಕು. ಹಿಂದೆ ನಿಮಗೆ ನೀಡಿದ್ದ ಗಡುವು ಈಗಾಗಲೇ ಮುಗಿದಿದೆ.

ಅಭ್ಯರ್ಥಿ ಆಯ್ಕೆ ಮಾಡಿ ಕಣಕ್ಕಿಳಿಸಿದ ಮೇಲೆ ಅವರನ್ನು ಸಂಸತ್ತಿಗೆ ಕಳುಹಿಸುವ ಜವಾಬ್ದಾರಿ ನಿಮ್ಮದು. ಚುನಾವಣೆಯ ಖರ್ಚು-ವೆಚ್ಚವೂ ನಿಮ್ಮದೆ. ನಮ್ಮಿಂದ ಏನನ್ನೂ ನಿರೀಕ್ಷಿಸಬೇಡಿ. ಒಂದು ವೇಳೆ ಚುನಾವಣೆಯಲ್ಲಿ ವ್ಯತ್ಯಾಸವಾದರೆ, ನಿಮ್ಮ ಅಧಿಕಾರಕ್ಕೆ ಕುತ್ತು ಬರಬಹುದು.

ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿವೆಯೇ ಇಲ್ಲವೇ ಎಂಬುದನ್ನು ನೋಡಿಲ್ಲ. ಆ ಬಗ್ಗೆ ಸೂಕ್ತ ಪ್ರಚಾರವಾಗುತ್ತಿಲ್ಲ. ಮುಂದಿನ ಚುನಾವಣೆಗೆ ಪಂಚಗ್ಯಾರಂಟಿಗಳೇ ಅಸ್ತ್ರ. ಆದರೆ, ನೀವು ಸಮರ್ಥವಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ.

ಬಿಜೆಪಿಯವರು ಬರ ಅಧ್ಯಯನ ಪ್ರವಾಸ ಹೊರಟಿದ್ದಾರೆ. ನೀವು ಮಾಡಿದ್ದೀರಾ? ಸರ್ಕಾರಕ್ಕೆ ವರದಿ ಕೊಟ್ಟಿದ್ದೀರಾ? ಜನರ ಅಹವಾಲು ಸ್ವೀಕಾರ ಮಾಡಿದ್ದೀರಾ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಂದಿನ ೧೫ದಿನದಲ್ಲಿ ಇಡೀ ಜಿಲ್ಲೆ ಪ್ರವಾಸ ಮಾಡಿ ತಾಲ್ಲೂಕು ಕೇಂದ್ರಗಳಲ್ಲಿ ಸಭೆ ನಡೆಸಿ ಬರದ ಪರಿಸ್ಥಿತಿ ಮತ್ತು ಜಿಲ್ಲಾಡಳಿತ ಪರಿಹಾರ ಕಾಮಗಾರಿ ಯಾವ ರೀತಿ ಕೈಗೊಂಡಿದೆ ಎಂಬ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಬೇಕು.

ಕೇಂದ್ರ ಸ್ಥಾನದಲ್ಲಿ ಸುತ್ತುವುದನ್ನು ಬಿಡಿ. ಜನರ ಬಳಿಗೆ ಹೋಗಿ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ಮುಟ್ಟಿಸಿ, ಜನಮಾನಸಕ್ಕೆ ತಲುಪಿಸಿ ಎಂಬ ಕಿವಿ ಮಾತು ಹೇಳಿದ್ದಾರೆ.

ಯೋಜನೆಯ ಅನುಷ್ಠಾನದಲ್ಲಿ ಕೆಲವೆಡೆ ಸಮಸ್ಯೆಗಳಿವೆ. ಆ ಸಮಸ್ಯೆಗಳನ್ನು ನೀವು ಪರಿಶೀಲಿಸಿ ಪರಿಹರಿಸಬೇಕು. ಅಧಿಕಾರಿಗಳಿಗೆ ಅದರ ಅವಶ್ಯಕತೆ ಇರುವುದಿಲ್ಲ. ಆದರೆ, ನಾವು ತಳಮಟ್ಟದವರೆಗೂ ಸ್ಪಂಧಿಸಬೇಕಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurudk shivakumarkarnatakakmskmskannadanewspoliticsSiddaramaiah
2 FacebookTwitterPinterestEmail
cklbkrish

previous post
ಅನಗತ್ಯ ಹೇಳಿಕೆ ಭವಿಷ್ಯ ಹಾಳಾದೀತು: ಡಿಕೆಶಿ
next post
ಬೆಂಗಳೂರು ಕಂಬಳಕ್ಕೆ ಬರಲಿದ್ದಾರೆ  ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ