Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹದಿನೈದು ದಿನದಲ್ಲಿ ಬಗರ್ ಹುಕುಂ ಸಮಿತಿ ರಚನೆ

by cklbkrish November 10, 2023
written by cklbkrish November 10, 2023 0 comments 2 minutes read
2FacebookTwitterPinterestEmail
160
ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚನೆಗೆ ಡಿಸಿಗಳಿಗೆ ಸುತ್ತೋಲೆ

ಬೆಂಗಳೂರು:ಇನ್ನು ಹದಿನೈದು ದಿನದಲ್ಲಿ 100 ತಾಲ್ಲೂಕುಗಳಲ್ಲಿ ಬಗರ್ ಹುಕುಂ ಮಂಜೂರಾತಿ ಸಮಿತಿಗಳನ್ನು ರಚಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಇಲಾಖಾ ಅಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 15ರೊಳಗೆ ಉಳಿದ ತಾಲ್ಲೂಕುಗಳಲ್ಲೂ ಈ ಸಮಿತಿಗಳನ್ನು ರಚಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ರೈತರು ಸಲ್ಲಿಸಿರುವ ಅರ್ಜಿಗಳ ವಿಲೇವಾರಿಗೆ 8ತಿಂಗಳ ಸಮಯ ನೀಡಲಾಗಿದೆ. ಅರ್ಹರಲ್ಲದವರಿಗೆ ಜಮೀನು ಮಂಜೂರಾಗುವುದನ್ನು ತಪ್ಪಿಸಲು 15 ವರ್ಷಗಳ ಭೌಗೋಳಿಕ ಮ್ಯಾಪಿಂಗ್ ವ್ಯವಸ್ಥೆ ಅಳವಡಿಸಲಾಗಿದೆ.

ಅರ್ಹರಾದವರಿಗೆ ಡಿಜಿಟಲ್ ಸಾಗುವಳಿ ಚೀಟಿ ನೀಡಿ, ಕ್ರಯಪತ್ರ ನೋಂದಣಿ ಮಾಡಿಕೊಡುವುದಲ್ಲದೆ, ಪೋಡಿ ಮಾಡಿ ಸ್ಕೆಚ್ ನೀಡಲಾಗುವುದು. ಜೊತೆಗೆ ಜಮೀನಿಗೆ ಹೋಗಲು ರಸ್ತೆಗೆ ಜಾಗವನ್ನು ಬಿಡುತ್ತೇವೆ ಎಂದು ಹೇಳಿದರು.

ಬಗರ್ ಹುಕುಂನಡಿ 9.90 ಲಕ್ಷ ಅರ್ಜಿಗಳು ಸಲ್ಲಿಕೆ

ಒಬ್ಬರ ಹೆಸರಿನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿರುವುದು, ಸಾಗುವಳಿ ಮಾಡದವರೂ ಅರ್ಜಿ ಹಾಕಿರುವುದೂ ಕಂಡು ಬಂದಿದೆ, 9.90 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಹತ್ತಾರು ವರ್ಷದಿಂದಲೂ ಬಗರ್ ಹುಕುಂ ಅರ್ಜಿಗಳು ವಿಲೇವಾರಿಯಾಗದೆ, ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಮೇಲಿನಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ರೈತರು ತಮ್ಮ ಎಲ್ಲಾ ಸರ್ವೆ ನಂಬರ್‌ಗಳ ಜಮೀನಿನ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನವೆಂಬರ್ ಅಂತ್ಯದೊಳಗೆ ದಾಖಲಿಸಬೇಕು.  ಒಂದೆರಡು ಸರ್ವೆ ನಂಬರ್‌ಗಳ ಮಾಹಿತಿಯನ್ನು ದಾಖಲಿಸಿದರೆ ಅಷ್ಟೆ ಮಾತ್ರ ಬೆಳೆ ಪರಿಹಾರ ಸಿಗುತ್ತದೆ.

ಬರ ಪರಿಹಾರ ನೀಡುವಂತೆ ಸಲ್ಲಿಸಿರುವ ಮನವಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡ ನಂತರ ರಾಜ್ಯ ಸರ್ಕಾರ ಬೆಳೆ ಪರಿಹಾರ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದರು.

24 ಗಂಟೆಯೊಳಗೆ ಟ್ಯಾಂಕರ್ ಮೂಲಕ ನೀರು

ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಖಾಸಗಿ ಬೋರ್ ವೆಲ್‌ಗಳನ್ನು ಬಾಡಿಗೆ ಪಡೆಯಲು ಸೂಚಿಸಿದ್ದು, ಸಮಸ್ಯೆ ಉಂಟಾದ 24 ಗಂಟೆಯೊಳಗೆ ಟ್ಯಾಂಕರ್ ಮೂಲಕ ನೀರು ಒದಗಿಸಲು ನಿದೇರ್ಶನ ನೀಡಲಾಗಿದೆ.

ಡಿಸೆಂಬರ್‌ನಿಂದ ಜಾನುವಾರುಗಳ ಮೇವಿಗೆ ಅಭಾವ ಉಂಟಾಗುವ ಸಂಭವವಿದ್ದು, ಮೇವು ಖರೀದಿಸಿ ಗೋಶಾಲೆ ಮೂಲಕ ವಿತರಿಸಲು ಸೂಚಿಸಲಾಗಿದೆ.

ಈಗಾಗಲೇ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲು ಜಿಲ್ಲಧಿಕಾರಿಗಳಿಗೆ ನಿದೇರ್ಶನ ನೀಡಿದ್ದು, ನರೇಗ ಯೋಜನೆಯಡಿ ಹೆಚ್ಚು ಉದ್ಯೋಗ ನೀಡುವಂತೆಯೂ ತಿಳಿಸಲಾಗಿದೆ.

ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ತಹಶೀಲ್ದಾರ್ ನ್ಯಾಯಾಲಯದಲ್ಲಿ ಬಾಕಿ ಇದ್ದ 2215 ಪ್ರಕರಣಗಳನ್ನು 750ಕ್ಕೆ ಇಳಿಸಲಾಗಿದೆ. ಜನವರಿ ವೇಳೆಗೆ 90 ದಿನಕ್ಕೂ ಹೆಚ್ಚು ಅವಧಿಯ ಪ್ರರಣಗಳು ಇರಬಾರದು, ಈಗ ಬಾಕಿ ಇರುವ ಪ್ರಕರಣಗಳನ್ನು ಡಿಸೆಂಬರ್ ಅಂತ್ಯದೊಳಗೆ ವಿಲೇವಾರಿ ಮಾಡಲು ಕಟ್ಟಾದೇಶ ಮಾಡಲಾಗಿದೆ. ಪ್ರಕರಣಗಳ ಸರಾಸರಿ ವಿಲೇವಾರಿ ಅವಧಿಯನ್ನು 212 ದಿನಗಳಿಂದ 130 ದಿನಕ್ಕೆ ಇಳಿಸಲಾಗಿದೆ.

ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಒಂದು ವರ್ಷ ಮೇಲ್ಪಟ್ಟ 59336 ಪ್ರಕರಣಗಳು ಬಾಕಿ ಇದ್ದವು ಈಗ ಅವು 30000ಕ್ಕೆ ಇಳಿಕೆಯಾಗಿವೆ. ಮಾರ್ಚ್ ವೇಳೆಗೆ 6ತಿಂಗಳಿಗಿಂತ ಹೆಚ್ಚು ಅವಧಿಯ ಪ್ರಕರಣ ಇರದಂತೆ ಇತ್ಯರ್ಥಪಡಿಸಬೇಕು, ಇದಕ್ಕಾಗಿ ಎಸಿಗೆ ತತ್ಸಮನಾದ ಅಧಿಕಾರಿಯನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.

ಡಿಸೆಂಬರ್ 1ರಿಂದ ಹೊಸ ಇ-ಕಡತ ಆರಂಭಿಸಲು ನಿರ್ದೇಶನ

ತಾಂಡ ಸೇರಿದಂತೆ 1800 ಜನ ವಸತಿ ಪ್ರದೇಶಗಳು ಕಂದಾಯ ಗ್ರಾಮಗಳಾಗಿ ಮಾರ್ಪಾಡು ಮಾಡಿಲ್ಲ, ಜನವರಿ ಅಂತ್ಯಕ್ಕೆ 1500 ಜನ ವಸತಿಗಳನ್ನು ಕಂದಾಯ ಗ್ರಾಮ ಇಲ್ಲವೇ ಉಪಗ್ರಾಮವಾಗಿ ಘೋಷಿಸಲು ಸೂಚಿಸಲಾಗಿದೆ.

ಇ-ಕಚೇರಿ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಪ್ರಾಂಭವಾಗಿದ್ದು ಡಿಸೆಂಬರ್ 1ರಿಂದ ಹೊಸ ಇ-ಕಡತ ಆರಂಭಿಸಲು ನಿರ್ದೇಶನ ನೀಡಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurudrinking waterformerkarnatakakmskmskannadakrishnabyregowdalandsrevenue
2 FacebookTwitterPinterestEmail
cklbkrish

previous post
545 ಪಿಎಸ್ ಐ ನೇಮಕಾತಿಗೆ ಮರು ಪರೀಕ್ಷೆ
next post
ಮಲೆ ಮಹದೇಶ್ವರ ಬೆಟ್ಟಕ್ಕೆ ಬೈಕ್, ಆಟೋ ನಿಷೇಧ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ