Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ

by KM Shivaraju November 15, 2023
written by KM Shivaraju November 15, 2023 0 comments 2 minutes read
2FacebookTwitterPinterestEmail
102

ಆಪರೇಷನ್ ಕಮಲ ಮಾಡುವುದಿಲ್ಲ, ಆಡಳಿತ ಪಕ್ಷದ ಶಾಸಕರೇ ಪಾಠ ಕಲಿಸುತ್ತಾರೆ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ನೀಡೋಣ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.

ಪಕ್ಷದ ರಾಜ್ಯ ಕಾರ್ಯಾಲಯದಲ್ಲಿಂದು ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳಾಗಿದೆ, ಹಗಲು ದರೋಡೆ ನಡೆದಿದೆ, ಭ್ರಷ್ಟಾಚಾರ ಮಿತಿ ಮೀರಿದೆ ಎಂದರು.

ನಾವು ಆಪರೇಷನ್ ಕಮಲ ಮಾಡುವುದಿಲ್ಲ, ಆಡಳಿತ ಪಕ್ಷದ ಶಾಸಕರೇ ರಸ್ತೆಯಲ್ಲಿ ಓಡಾಡದಂತಾಗಿದೆ, ಅವರ ಕ್ಷೇತ್ರಗಳಿಗೆ ಒಂದು ರೂಪಾಯಿಯೂ ಅನುದಾನ ಸಿಗುತ್ತಿಲ್ಲ, ಭ್ರಷ್ಟ ಸರಕಾರಕ್ಕೆ ಆ ಪಕ್ಷದ ಶಾಸಕರೇ ಪಾಠ ಕಲಿಸುತ್ತಾರೆ.

ಬರ ಪರಿಸ್ಥಿತಿಯಲ್ಲೂ ಉಸ್ತುವಾರಿ ಸಚಿವರು ಪ್ರವಾಸ ಮಾಡುತ್ತಿಲ್ಲ, ರೈತರ ಸಮಸ್ಯೆಗೆ ಸ್ಪಂದಿಸುವುದನ್ನು ಮರೆತು, ಅಧಿಕಾರ ದರ್ಪ, ಉದ್ಧಟತನದಿಂದ ವರ್ತಿಸುತ್ತಿದ್ದಾರೆ.

ಎಲ್ಲಾ 28 ಕ್ಷೇತ್ರ ಗೆದ್ದು ಪ್ರಧಾನಿ ಅವರಿಗೆ ಹೆಚ್ಚು ಬಲ ನೀಡೋಣ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಕ್ಷೇತ್ರ ಗೆಲ್ಲುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಚು ಬಲ ನೀಡೋಣ.

ಜೊತೆಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ರಾಜ್ಯವನ್ನು ಬಿಜೆಪಿ ಭದ್ರಕೋಟೆಯಾಗಿ ಮಾಡಲು ಶ್ರಮಿಸುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನೂ ಗಂಭೀರವಾಗಿ ಪರಿಗಣಿಸಬೇಕು.

ರೈತರು, ಬಡವರ ಪರ ಧ್ವನಿ ಎತ್ತುವೆ

ಎಲ್ಲ ಹಿರಿಯರ ಹಾಗೂ ಸಂಘ ಪರಿವಾರದ ಮಾರ್ಗದರ್ಶನದಡಿ ಬಿಜೆಪಿಗೆ ಶಕ್ತಿ ತುಂಬುತ್ತೇನೆ. ಹಗಲು ರಾತ್ರಿ ಪ್ರವಾಸ ಮಾಡಿ, ರೈತರು, ಬಡವರ ಪರ ಧ್ವನಿ ಎತ್ತುವೆ, ರಾಜ್ಯದಲ್ಲಿನ ಭ್ರಷ್ಟ ಸರಕಾರದ ವಿರುದ್ಧ ಹೋರಾಟ ಮಾಡುತ್ತೇನೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರ ಕೃಪಾಶೀರ್ವಾದದಿಂದ ಈ ಜವಾಬ್ದಾರಿ ಸಿಕ್ಕಿದೆ, ಇದಕ್ಕಾಗಿ ಎಲ್ಲ ರಾಷ್ಟ್ರೀಯ ನಾಯಕರಿಗೆ ಕೃತಜ್ಞತೆಗಳು ಎಂದರು.

ನನ್ನ ಮೇಲೆ ಪಕ್ಷ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳುವೆ, ಶಾಸಕರಾಗಿ ನನ್ನನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳು.

ರಾಜ್ಯಾಧ್ಯಕ್ಷ ಹುದ್ದೆಗೆ ನನ್ನ ಹೆಸರು ಪ್ರಕಟಿಸಿದ ನಂತರ ಎಲ್ಲ ಹಿರಿಯ ನಾಯಕರ ಜೊತೆ ಮಾತನಾಡಿದ್ದೇನೆ, ಪಕ್ಷದ ಎಲ್ಲ ಹಿರಿಯರು ಬೆನ್ನು ತಟ್ಟಿದ್ದಾರೆ.

ಕಾರ್ಯಕರ್ತರು ತಲೆ ತಗ್ಗಿಸುವಂತಹ ಕೆಲಸ ಮಾಡುವುದಿಲ್ಲ

ಯಡಿಯೂರಪ್ಪ ಅವರ ಹೋರಾಟ, ಸಾಮಾನ್ಯ ಕಾರ್ಯಕರ್ತರಿಗೆ ಗೌರವ ಕೊಡುವ ಪ್ರವೃತ್ತಿ ತಿಳಿದಿದೆ, ಕಾರ್ಯಕರ್ತರು ತಲೆ ತಗ್ಗಿಸುವ ಸಂದರ್ಭ ಸೃಷ್ಟಿಸಲು ಅವಕಾಶ ಕೊಡುವುದಿಲ್ಲ ಎಂದರು.

ನಿರ್ಗಮಿತ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ತಮಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ, ನೂತನ ಅಧ್ಯಕ್ಷ ವಿಜಯೇಂದ್ರ ಅವರಿಗೆ ಎಲ್ಲ ರೀತಿಯ ಸಹಕಾರ ಮತ್ತು ಮಾರ್ಗದರ್ಶನ ನೀಡುವಂತೆ ವಿನಂತಿಸಿದರು.

ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ್, ಹಿರಿಯ ನಾಯಕ ರಾಮಚಂದ್ರ ಗೌಡ, ಮಾಜಿ ಸಚಿವರು, ಮಾಜಿ ಹಾಗೂ ಹಾಲಿ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರು, ಪಕ್ಷದ ರಾಜ್ಯ-ಜಿಲ್ಲಾ ಪ್ರಮುಖರು, ಪದಾಧಿಕಾರಿಗಳು ಉಪಸ್ಥಿತಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurubsydelhiindiakarnatakakmskmskannadanalinkumar katilpoliticsVijayendra
2 FacebookTwitterPinterestEmail
KM Shivaraju

previous post
ಕಂಬದಿಂದ ವಿದ್ಯುತ್ ಸಂಪರ್ಕ: ಅಚಾತುರ್ಯಕ್ಕೆ ವಿಷಾದವಿದೆ, ದಂಡ ಕಟ್ಟುವೆ ಎಂದ ಹೆಚ್.ಡಿ.ಕುಮಾರಸ್ವಾಮಿ
next post
ಜೆಡಿಎಸ್ ಕಚೇರಿ ಗೋಡೆ ಮೇಲೆ ವಿವಾದಾತ್ಮಕ ಪೋಸ್ಟರ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ