Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಆಪರೇಷನ್ ಕಮಲದ ಅಗತ್ಯವಿಲ್ಲ

by cklbkrish November 15, 2023
written by cklbkrish November 15, 2023 0 comments 2 minutes read
2FacebookTwitterPinterestEmail
129
ಸರ್ಕಾರಕ್ಕೆ ಆಡಳಿತ ಪಕ್ಷದ ಶಾಸಕರೇ ತಕ್ಕ ಪಾಠ ಕಲಿಸುವರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಆಪರೇಷನ್ ಕಮಲದ ಅಗತ್ಯವಿಲ್ಲ, ಈ ದುಷ್ಟ ಸರ್ಕಾರಕ್ಕೆ ಆ ಪಕ್ಷದ ಶಾಸಕರೇ ಪಾಠ ಕಲಿಸುವ ಸಮಯ ದೂರ ಉಳಿದಿಲ್ಲ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಪಕ್ಷದ ಬಾವುಟ ಸ್ವೀಕರಿಸುವ ಮೂಲಕ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಆಡಳಿತ ಪಕ್ಷದ ಶಾಸಕರೇ ಅವರ ಕ್ಷೇತ್ರಗಳಲ್ಲಿ ಓಡಾಡದಂತಾಗಿದೆ. ಸರ್ಕಾರದಿಂದ ಒಂದು ರೂ.ಅನುದಾನ ಸಿಗುತ್ತಿಲ್ಲ. ಈ ದುಷ್ಟ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕರೇ ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿ ಸಾರಥ್ಯ ವಹಿಸಿಕೊಂಡ ವಿಜಯೇಂದ್ರ

ಹಿಂದಿನ ನಮ್ಮ ಸರ್ಕಾರವನ್ನು ಶೇ.40ರಷ್ಟು ಸರ್ಕಾರವೆಂದು ಟೀಕಿಸಿದ್ದರು. ಮತದಾರರು ಅದನ್ನು ನಂಬಿದರು. ಕಾಂಗ್ರೆಸ್ ಸರ್ಕಾರ ಬಂದು 6 ತಿಂಗಳಾಗಿದೆ. ಹಗಲು ದರೋಡೆ, ಭ್ರಷ್ಟಾಚಾರ ಮೇರೆ ಮೀರಿದೆ. ಶೇ.40ರಷ್ಟು ಕಮಿಷನ್, ಭ್ರಷ್ಟಾಚಾರದ ಅನುಷ್ಠಾನ ಈ ಸರ್ಕಾರದಿಂದ ಅವ್ಯಾಹತವಾಗಿ ನಡೆಯುತ್ತಿದೆ.

ಇವರ ದುರಾಡಳಿತವನ್ನೇ ಜನರ ಮುಂದಿಟ್ಟು ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನಗಳನ್ನು ಗೆದ್ದು, ಕಾಂಗ್ರೆಸ್ ಸರ್ಕಾರಕ್ಕೆ ಉತ್ತರ ಕೊಡೋಣ, ಬರಗಾಲದ ಪರಿಸ್ಥಿತಿಯಲ್ಲೂ ಉಸ್ತುವಾರಿ ಸಚಿವರು, ಪ್ರವಾಸ ಮಾಡುತ್ತಿಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸುವುದನ್ನು ಮರೆತು ಅಧಿಕಾರ ದರ್ಪ ಮತ್ತು ಉದ್ಧಟತನದಿಂದ ವರ್ತಿಸುತ್ತಿದ್ದಾರೆ.

ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆ ಗಂಭೀರವಾಗಿ ಪರಿಗಣಿಸಿ

ನಮಗೆ ತಕ್ಷಣಕ್ಕೆ ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆ ಎದುರಾಗಬಹುದು. ಅದನ್ನು ಗಂಭೀರವಾಗಿ ಪರಿಗಣಿಸೋಣ. ನಾನು ಯಾವುದೇ ಸಮುದಾಯಕ್ಕೆ ಸೇರಿದವನಲ್ಲ. ಎಲ್ಲರ ವಿಶ್ವಾಸಗಳಿಸಿ ಪಕ್ಷವನ್ನು ಸಂಘಟಿಸಿ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ 28 ರಲ್ಲೂ ಗೆಲುವು ಸಾಧಿಸಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತಂದು ಕಮಲದ ಬಾವುಟ ಹಾರಿಸೋಣ ಎಂದರು.

ರಾಜ್ಯದಲ್ಲಿ ಸಾಕಷ್ಟು ಹಿರಿಯರು ಪಕ್ಷದಲ್ಲಿದ್ದಾರೆ. ಅವರನ್ನು ಬಿಟ್ಟು ನನಗೆ ಅವಕಾಶ ಕೊಟ್ಟಿದ್ದಾರೆ ಎಂದರೆ, ಆ ಸ್ಥಾನದ ಮಹತ್ವದ ಅರಿವು ನನಗಿದೆ. ಈ ವೇದಿಕೆಯ ಮೂಲಕ ಭರವಸೆ ನೀಡುತ್ತೇನೆ. ಹಿರಿಯ ನಾಯಕರು ಮತ್ತು ಕಾರ್ಯಕರ್ತರು ತಲೆ ತಗ್ಗಿಸುವ ರೀತಿ ನಡೆದುಕೊಳ್ಳುವುದಿಲ್ಲ. ಅವರಿಗೆ ಎಲ್ಲಾ ಪರಿಸ್ಥಿತಿಯಲ್ಲೂ ಬೆಂಬಲವಾಗಿ ನಿಂತು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಹೋಮ, ಹವನ

ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಪಕ್ಷದ ಕಚೇರಿಯಲ್ಲಿ ಹೋಮ, ಹವನ ನಡೆಯಿತು. ಬಹುದಿನಗಳ ನಂತರ ಕಚೇರಿಯನ್ನು ಮೈಸೂರಿನ ಅರಮನೆ ರೀತಿ ದೀಪಾಲಂಕಾರಗಳಿಂದ ಶೃಂಗರಿಸಲಾಗಿತ್ತು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮದ ಆರಂಭದಿಂದ ಕೊನೆಯವರೆಗೂ ಸ್ಥಳದಲ್ಲಿದ್ದು, ಪುತ್ರನಿಗೆ ಮಾರ್ಗದರ್ಶನ ಮಾಡಿದರು.

ಅಧಿಕಾರ ಸ್ವಿಕಾರ ಕಾರ್ಯಕ್ರಮದತ್ತ ಸುಳಿಯದ ಸಂತೋಷ್ ಬಣದವರು

ಅಧಿಕಾರ ಪದಗ್ರಹಣ ಅದ್ದೂರಿಯಾಗಿ ನಡೆಯಿತಾದರೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಣದ ಯಾವೊಬ್ಬ ನಾಯಕ, ಮುಖಂಡರು ಸುಳಿಯಲಿಲ್ಲ.

ಅಧಿಕಾರ ವಹಿಸಿಕೊಂಡು ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ಸಂದರ್ಭದಲ್ಲಿ ವಿಜಯೇಂದ್ರ ಅವರು, ಪದೇ ಪದೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಗುಣಗಾನ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಷಾ, ಬಿ.ಎಲ್.ಸಂತೋಷ್ ಅವರ ಕೃಪಾಶೀರ್ವಾದದಿಂದ ಈ ಜವಾಬ್ದಾರಿ ಸಿಕ್ಕಿದೆ. ಇದಕ್ಕಾಗಿ ಎಲ್ಲಾ ರಾಷ್ಟ್ರೀಯ ನಾಯಕರಿಗೂ ಕೃತಜ್ಞತೆ ಸಲ್ಲಿಸಿದರು.

ನಡ್ಡಾಜಿ ಅವರು, ನನ್ನ ಹೆಸರು ಪ್ರಕಟಿಸಿದ ಬಳಿಕ ಎಲ್ಲಾ ಹಿರಿಯ ನಾಯಕರ ಜತೆ ಮಾತನಾಡಿದ್ದು, ಅವರು ನನ್ನ ಬೆನ್ನು ತಟ್ಟಿದ್ದಾರೆ. ರಾಜ್ಯದ 28ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ದೇಶದ ನಿಸ್ವಾರ್ಥ ಸೇವೆ ಮಾಡುವುದಾಗಿ ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurubjpbjp officekarnatakakmskmskannadano operationspoliticsVijayendraVijayendra Yediyurappa
2 FacebookTwitterPinterestEmail
cklbkrish

previous post
ಪಾರಂಪರಿಕ ಕಟ್ಟಡ ಸಂರಕ್ಷಣೆಗೆ ಪ್ರವಾಸೋದ್ಯಮ ನೀತಿಯಲ್ಲಿ ಮಾರ್ಪಾಡು
next post
‘2023ರ ವಿಶ್ವಕಪ್ ಕ್ರಿಕೆಟ್ ಟ್ರೋಫಿ ನಮ್ಮದೇ’

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ