Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪೋಸ್ಟರ್ ವಾರ್‌ಗೆ ಜೆಡಿಎಸ್ ಕೆಂಡಾಮಂಡಲ

by KM Shivaraju November 21, 2023
written by KM Shivaraju November 21, 2023 0 comments 2 minutes read
2FacebookTwitterPinterestEmail
81

ಗೃಹ ಇಲಾಖೆ ತಕ್ಷಣ ಕ್ರಮಕೈಗೊಳ್ಳಬೇಕು

ಬೆಂಗಳೂರು:ಕಾಂಗ್ರೆಸ್ ಪೋಸ್ಟರ್ ಚಾಳಿ ಬಿಡದಿದ್ದರೆ ಕಾನೂನು ಸುವ್ಯವಸ್ಥೆ ಹದಗೆಟ್ಟು ರಕ್ತಪಾತವಾದರೆ ಸರ್ಕಾರವೇ ಹೊಣೆ ಎಂದು ಜೆಡಿಎಸ್ ಇಂದಿಲ್ಲಿ ಎಚ್ಚರಿಕೆ ನೀಡಿದೆ.

ಪೋಸ್ಟರ್ ಚಾಳಿಗೆ ಪೊಲೀಸರು ಕಡಿವಾಣ ಹಾಕದಿದ್ದರೆ ಹಾದಿ-ಬಿದಿಯಲ್ಲಿ ಮಾರಾಮಾರಿ ಆಗುತ್ತದೆ, ಗೃಹ ಇಲಾಖೆ ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ನಾವೂ ಪೊಸ್ಟರ್ ರಾಜಕೀಯ ಮಾಡುತ್ತೇವೆ ಎಂದಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾಜಿ ಶಾಸಕರಾದ ಎ.ಮಂಜುನಾಥ್, ಅಶ್ವಿನ್‌ಕುಮಾರ್ ಹಾಗೂ ಎಚ್.ಎಂ. ರಮೇಶ್ ಗೌಡ, ನಮ್ಮ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಪೊಲಿಟಿಕ್ಸ್ ಮಾಡಲಾಗುತ್ತಿದೆ ಎಂದರು.

ಗೃಹ ಸಚಿವರು ತಕ್ಷಣ ಮಧ್ಯೆ ಪ್ರವೇಶ ಮಾಡಿ ಇದನ್ನು ತಡೆಯಬೇಕು, ಕಾಂಗ್ರೆಸ್ ತಮ್ಮ ಪಕ್ಷದ ನಾಯಕರ ಮೇಲೆ ಬರುತ್ತಿರುವ ಆರೋಪಗಳನ್ನು ಸಹಿಸಲಾಗದೆ ಇಂತಹ ಅನಿಷ್ಟ ಪದ್ಧತಿಗೆ ಇಳಿದಿದೆ.

ಕಾಂಗ್ರೆಸ್ ಪಕ್ಷದವರು ಬಿಜೆಪಿ ಸರ್ಕಾರದ ಸಮಯದಲ್ಲಿ ಪೇ-ಸಿಎಂ ಪೋಸ್ಟರ್‌ಗಳನ್ನು ರಾತ್ರೋರಾತ್ರಿ ಅಂಟಿಸಿದರು. ಈಗ ಜನಪರ ವಿಷಯಗಳ ಬಗ್ಗೆ ಪ್ರಸ್ತಾಪ ಮಾಡುತ್ತಿರುವ ಕುಮಾರಸ್ವಾಮಿ ಅವರ ಬಗ್ಗೆ ಅಶ್ಲೀಲ, ಕೀಳು ಅಭಿರುಚಿಯ ಪೋಸ್ಟರ್ ಅಂಟಿಸಿ ಮೇಲುಗೈ ಸಾಧಿಸುತ್ತೇವೆ ಎನ್ನುವ ಭ್ರಮೆಯಲ್ಲಿದ್ದಾರೆ.

ನಾವು ಕಾಂಗ್ರೆಸ್‌ನವರ ವಿರುದ್ಧದ ಪೋಸ್ಟರ್‌ಗಳನ್ನು ಅಂಟಿಸುವುದು ದೊಡ್ಡ ವಿಚಾರವಲ್ಲ, ಅವರು ಒಂದು ಮಾಡಿದರೆ ಹತ್ತು ಮಾಡುವ ಶಕ್ತಿ ನಮಗೂ ಇದೆ, ಇದು ಯಾವುದು ರಾಜಕಾರಣದಲ್ಲಿ ಶಾಶ್ವತ ಅಲ್ಲ ಎಂದರು.

ಪೊಲೀಸ್ ಮಹಾನಿರ್ದೇಶಕರಿಗೂ ಸಹ ಮನವಿ ಮಾಡುತ್ತೇವೆ, ಇದಕ್ಕೆಲ್ಲಾ ಕಡಿವಾಣ ಹಾಕುವ ಕೆಲಸ ಮಾಡಬೇಕು, ವಿದ್ಯುತ್ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಅಂಟಿಸಿದಾಗ ಗೃಹ ಇಲಾಖೆ ಏನು ಮಾಡುತ್ತಿತ್ತು, ಮತ್ತೆ ಪೋಸ್ಟರ್ ಅಂಟಿಸಿದ್ದಾರೆ.

ಇದು ಹೀಗೇ ಮುಂದುವರೆದರೆ ಹಾದಿ-ಬೀದಿಯಲ್ಲಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆಯುವ ಪರಿಸ್ಥಿತಿ ಸೃಷ್ಟಿ ಆಗುತ್ತದೆ, ಅಂತಹ ಪರಿಸ್ಥಿತಿ ಸೃಷ್ಟಿಯಾದರೆ ಸರ್ಕಾರ ಮತ್ತು ಪೊಲೀಸ್ ಇಲಾಖೆಯೇ ಹೊಣೆ ಆಗಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅವರ ಹಿಂಬಾಲಕರು ಈ ಕೃತ್ಯದಲ್ಲಿ ತೊಡಗಿದ್ದಾರೆ, ಗೃಹ ಇಲಾಖೆ ಇದಕ್ಕೆ ಕಡಿವಾಣ ಹಾಕದಿದ್ದರೆ ಇದಕ್ಕಿಂತ ಹೆಚ್ಚಿನ ಪೋಸ್ಟರ್ ಚಳವಳಿ ನಡೆಯುತ್ತದೆ.

ರಾಜ್ಯದ ಜನತೆಗೆ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ತಿಳಿಸುವ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರು ಮಾಡಿದ್ದೆಲ್ಲಾ ಸರಿಯಾಗಿದ್ದರೆ ಈ ರೀತಿ ಪೋಸ್ಟರ್ ಅಂಟಿಸುವ ಕೆಲಸ ಮಾಡುತ್ತಿರಲಿಲ್ಲ ಎಂದು ಕಿಡಿಕಾರಿದರು. ಪೋಸ್ಟರ್ ಅಂಟಿಸಲು ನಮ್ಮಲ್ಲೂ ಕಾರ್ಯಕರ್ತರು, ಅಭಿಮಾನಿಗಳು ಇದ್ದಾರೆ, ಕಾಂಗ್ರೆಸ್ ಮಾಡಿದ್ದನ್ನೇ ನಾವು ಮಾಡುತ್ತೇವೆ.

ಡಿಸೆಂಬರ್ 4ರಿಂದ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಲಿದ್ದು ಕುಮಾರಸ್ವಾಮಿ ಅವರ ಆರೋಪಗಳಿಗೆ ಸರ್ಕಾರ ಸದನದಲ್ಲಿ ಉತ್ತರ ನೀಡಲಿ, ಜೆಡಿಎಸ್ ನಾಯಕರು ಗಾಜಿನ ಮನೆಯಲ್ಲಿಲ್ಲ ಎಂಬುದನ್ನು ಕಾಂಗ್ರೆಸ್ ಅರ್ಥ ಮಾಡಿಕೊಳ್ಳಬೇಕು ಎಂದು ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟರ್ ಅಂಟಿಸಬಾರದು ಎಂಬುದಾಗಿ ಹೈಕೋರ್ಟ್‌ನ ಸ್ಪಷ್ಟ ಆದೇಶವಿದೆ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪರವಾಗಿ ಸ್ಮಾರ್ಟ್ ಕಾರ್ಡ್‌ಗಳನ್ನು ನೀಡಿದ್ದ ಏಜೆನ್ಸಿಯೇ ಇಂದು ವಿವಾದಾತ್ಮಕ ಪೋಸ್ಟರ್‌ಗಳನ್ನು ಅಂಟಿಸುವ ಕೆಲಸ ಮಾಡುತ್ತಿದೆ.
ಕುಮಾರಸ್ವಾಮಿ ಯಾವುದೇ ಆರೋಪ ಮಾಡಿದರೂ ದಾಖಲೆ ಇಟ್ಟುಕೊಂಡು ಮಾತನಾಡುತ್ತಾರೆ. ನಮ್ಮ ನಾಯಕರ ಆರೋಪಕ್ಕೆ ಕಾಂಗ್ರೆಸ್‌ನವರು ಏಕೆ ಹೆದರುತ್ತಾರೆ.

ಪೆನ್‌ಡ್ರೈವ್ ಬಗ್ಗೆಯೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ, ’ಪೆನ್‌ಡ್ರೈವ್ ವಿಷಯ ಬೇಡ, ಸರ್ಕಾರ ಬಂದು ಸ್ವಲ್ಪ ತಿಂಗಳಾಗಿದೆ’ ಎಂದು ಕಾಂಗ್ರೆಸ್ ನಾಯಕರೇ ಕುಮಾರಸ್ವಾಮಿ ಬಳಿ ಮನವಿ ಮಾಡಿದ್ದರು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congressdemand to home ministryjdskarnatakakmsposter war
2 FacebookTwitterPinterestEmail
KM Shivaraju

previous post
ಸಿಎಂ, ಡಿಸಿಎಂ, ಇಂಧನ ಸಚಿವರ ಮೇಲೆ ಎಫ್‌ಐಆರ್ ಹಾಕಿ
next post
ರಾಜ್ಯಕ್ಕೆ ರಜನೀಶ್ ಗೋಯಲ್ ಹೊಸ ಮುಖ್ಯ ಕಾರ್ಯದರ್ಶಿ

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ