Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವರದಿ ಯಥಾವತ್ ಜಾರಿಗೊಳಿಸಿ

by KM Shivaraju November 25, 2023
written by KM Shivaraju November 25, 2023 0 comments 1 minutes read
2FacebookTwitterPinterestEmail
79
ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್ ಒತ್ತಾಯ

ಬೆಂಗಳೂರು:ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸ್ವೀಕರಿಸಿ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್ ಇಂದಿಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸರ್ಕಾರದ ಆದೇಶದಂತೆ ನೇಮಕಗೊಂಡಿದ್ದ ನನ್ನ ನೇತೃತ್ವದ ಅಂದಿನ ಸಮಿತಿ, ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಿತ್ತು. ಇದುವರೆಗೂ ಸಮೀಕ್ಷೆಗೆ ಸಂಬಂಧಪಟ್ಟ ವರದಿಯನ್ನ ಆಯೋಗದಿಂದ ರಾಜ್ಯ ಸರ್ಕಾರ ಪಡೆದುಕೊಳ್ಳಲಿಲ್ಲ.

ಸಾಮಾಜಿಕ ಮತ್ತು ಶೈಕ್ಷಿಣಿಕ ಸಮೀಕ್ಷೆ ತಯಾರಿಸಿದ ಮೇಲೆ ಹೆಸರಿಸಲಾದ ಎಲ್ಲಾ ವರದಿಗಳನ್ನು ಸರ್ಕಾರ ಸ್ವೀಕರಿಸಿ ಜಾರಿಗೊಳಿಸಬೇಕೆಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ವರದಿ ಮೂಲ ಪ್ರತಿ ಕಳೆದು ಹೋಗಿಲ್ಲ

ಆಯೋಗದ ಅಂದಿನ ಸದಸ್ಯರ ಜೊತೆಗೂಡಿ ಮಾತನಾಡಿದ ಅವರು, ವರದಿ ಕಳೆದು ಹೋಗಿಲ್ಲ, ಮೂಲ ಪ್ರತಿಯನ್ನು ಆಯೋಗದ ಕಚೇರಿಯ ಪೆಟ್ಟಿಗೆಯಲ್ಲಿ ಸೀಲ್ ಮಾಡಿ ಇಡಲಾಗಿತ್ತು.

ವರದಿ ಸಿದ್ಧಪಡಿಸುವಾಗ ನಡೆದ ಎಲ್ಲ ಸಭೆಗಳಲ್ಲೂ ತೆಗೆದುಕೊಂಡ ನಿರ್ಧಾರಗಳಿಗೆ ಒಮ್ಮತದಿಂದ ಸದಸ್ಯರೂ ಮತ್ತು ಕಾರ್ಯದರ್ಶಿಗಳು ಸಹಿ ಮಾಡಿದ್ದಾರೆ.

ಸಭೆ ತೀರ್ಮಾನಗಳೇ ಅಂತಿಮ

ಮುದ್ರಿತಗೊಂಡ ಅಂತಿಮ ಪ್ರತಿಗೆ ಕಾರ್ಯದರ್ಶಿಗಳು ಸಹಿ ಮಾಡಿಲ್ಲ, ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳೇ ಅಂತಿಮ ಮುದ್ರಿತ ಪ್ರತಿಯಲ್ಲ ಎಂದು ಕಾರ್ಯದರ್ಶಿ ಸಹಿ ಇಲ್ಲದಿರುವುದನ್ನು ಸಮರ್ಥಿಸಿಕೊಂಡರು.

ಮೂಲ ಪ್ರತಿ ಕಳೆದು ಹೋಗಿದೆ ಎಂಬುದಕ್ಕೂ ನಮಗೂ ಸಂಬಂಧವಿಲ್ಲ, ಅದು ಆಯೋಗಕ್ಕೆ ಬಿಟ್ಟ ವಿಚಾರ, ನಾವು ಏನು ಸಿದ್ಧಪಡಿಸಿದ್ದೆವೋ ಅದರಲ್ಲಿ ಯಾವುದೇ ಬದಲಾವಣೆ ಮಾಡಲು ಹಾಲಿ ಅಧ್ಯಕ್ಷರಿಗೆ ಅಧಿಕಾರವಿಲ್ಲ.

ನಮ್ಮ ವರದಿಯನ್ನು ಯಥಾವತ್ತಾಗಿ ಸ್ವೀಕರಿಸಿ ಸಾರ್ವಜನಿಕರ ಮುಂದಿಡಬೇಕು, ನಂತರ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಬೇಕು.
ಹಾಲಿ ಅಧ್ಯಕ್ಷರು ಪ್ರತ್ಯೇಕವಾಗಿ ವರದಿ ನೀಡಲು ಅಧಿಕಾರವಿದೆ, ನಮ್ಮ ಮೂಲ ವರದಿಗೆ ಅವರು ಧಕ್ಕೆ ತರುವಂತಿಲ್ಲ.

ಹಾಲಿ ಅಧ್ಯಕ್ಷರು ಗೊಂದಲಕ್ಕೆ ಸಿಲುಕಿದ್ದಾರೆ

ಹಾಲಿ ಅಧ್ಯಕ್ಷರು ಗೊಂದಲಕ್ಕೆ ಸಿಲುಕಿದ್ದಾರೆ, ಅವರ ಮೇಲೆ ಯಾವ ಒತ್ತಡ ಬಂದಿದೆಯೋ ತಿಳಿಯದು, ಅವರ ಅಭಿಪ್ರಾಯ ಹೇಳಲು ಅವರಿಗೆ ಅಧಿಕಾರವಿದೆ ಎಂದರು.

ಅಂದಿನ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಮಾಡಲು ಆದೇಶ ನೀಡಿತ್ತು. ಅದರಂತೆ ನಾವು ಇಡೀ ರಾಜ್ಯದಲ್ಲಿ ಸಮೀಕ್ಷೆ ನಡೆಸಿ ವೈಜ್ಞಾನಿಕ ವರದಿ ಸಿದ್ಧಪಡಿಸಿದ್ದೇವೆ.

ಸಮೀಕ್ಷೆ ಕಾರ್ಯ ಮುಗಿಸುವುದಕ್ಕೂ ಮೊದಲು ರಾಜ್ಯದುದ್ದಕ್ಕೂ ಮನೆ-ಮನೆ ಗಣತಿ ಮಾಡಿ, ಜಾತಿ ಗಣತಿ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಉದ್ಯೋಗ, ಕೌಟುಂಬಿಕ, ಚಿರಾಸ್ತಿ ಇತ್ಯಾದಿಗಳಿಗೆ ಸಂಬಂಧಪಟ್ಟಂತೆ ಒಟ್ಟು 55 ಅಂಶಗಳ ಮಾಹಿತಿಯನ್ನು ಗಣತಿಯಲ್ಲಿ ಆಯೋಗವು ಪಡೆದಿರುತ್ತದೆ.

jayaprakash_hegde_letter
ರಾಜ್ಯಮಟದಲ್ಲಿ ವಿಶಾಲವಾದ ಸಮೀಕ್ಷೆ

ಇದು ಬರೀ ಜಾತಿಯನ್ನಷ್ಟೇ ಗುರುತಿಸುವ ಸಮೀಕ್ಷೆಯಲ್ಲ, 1931ರಲ್ಲಿ ನಡೆದ ಜಾತಿ ಗಣತಿಯ ನಂತರ ಇಂತಹ ವಿಶಾಲವಾದ ಸಮೀಕ್ಷೆ ರಾಜ್ಯಮಟದಲ್ಲಿ ಇದೇ ಮೊದಲಾಗಿದೆ ಎಂದು ಸಮರ್ಥಿಸಿಕೊಂಡರು.

ವರದಿ ಸಿದ್ಧಗೊಂಡ ನಂತರ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಆ ನಂತರ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲಿಸಲು ಪತ್ರ ಬರೆದು ಕೇಳಿದೆವಾದರೂ ನಮಗೆ ಸಮಯಾವಕಾಶ ನೀಡಲಿಲ್ಲ.

ಇದೇ ಕಾಲದಲ್ಲಿ ಮುಖ್ಯಕಾರ್ಯದರ್ಶಿ ಅವರಿಗೂ ಪತ್ರ ಬರೆದೆವು. ಅಲ್ಲಿಂದಲೂ ಸ್ಪಂದನೆ ದೊರೆಯಲಿಲ್ಲ. ನಮ್ಮ ಅವಧಿ ಪೂರ್ಣಗೊಂಡ ನಂತರ ಸರ್ಕಾರ ನಮ್ಮನ್ನು ಕರ್ತವ್ಯದಿಂದ ಮುಕ್ತಗೊಳಿಸಿತು, ಆ ಸಂದರ್ಭದಲ್ಲಿ ನಾವು ವರದಿಯನ್ನು ಪೆಟ್ಟಿಗೆಯಲ್ಲಿಟ್ಟು ಮೊಹರು ಮಾಡಿ ಬಂದೆವು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2 FacebookTwitterPinterestEmail
KM Shivaraju

previous post
ಜಗತ್ತಿನಲ್ಲಿ ಯಾರಿಗಿಂತಲೂ ಕಡಿಮೆ ಇಲ್ಲ
next post
ರಾಜ್ಯ ಬಿಜೆಪಿ ಭಿನ್ನರಿಗೆ ವರಿಷ್ಠರ ಬುಲಾವ್

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ