Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

 28ಲೋಕಸಭೆ ಕ್ಷೇತ್ರ ಗೆಲ್ಲುತ್ತೇವೆ

by KM Shivaraju November 26, 2023
written by KM Shivaraju November 26, 2023 0 comments 2 minutes read
Share 2FacebookTwitterPinterestEmail
54
ಬಿಡದಿಯ ತೋಟದಲ್ಲಿ ಕುಮಾರಸ್ವಾಮಿ ಮತ್ತು ವಿಜಯೇಂದ್ರ ಹೇಳಿಕೆ

ರಾಮನಗರ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಬಿಡದಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಲೋಕಸಭೆ ಚುನಾವಣೆ, ಎರಡೂ ಪಕ್ಷಗಳ ಮೈತ್ರಿ ಹಾಗೂ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾಗಿ ಇಬ್ಬರೂ ನಾಯಕರು ಭೇಟಿಯ ಬಳಿಕ ಮಾಧ್ಯಮಗಳಿಗೆ ತಿಳಿಸಿದರು.

ದೇಶದ ಹಿತದೃಷ್ಟಿಯಿಂದ ಮುಂದಿನ ಅವಧಿಗೂ ನರೇಂದ್ರ  ‌ಮೋದಿಯವರೇ ಪ್ರಧಾನಿ ಆಗಬೇಕು ಎನ್ನುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ಕ್ಷೇತ್ರ ಹಂಚಿಕೆ ಕುರಿತು ‌ಹೈಕಮಾಂಡ್ ನಲ್ಲಿ ‌ಚರ್ಚಿಸುತ್ತಾರೆ. ರಾಜ್ಯದಲ್ಲಿ ನಮ್ಮ ಮೈತ್ರಿಕೂಟ 28ಕ್ಕೆ‌ 28 ಕ್ಷೇತ್ರದಲ್ಲಿಯೂ ಗೆಲುವು ಸಾಧಿಸಲಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

2006ರಲ್ಲಿ ಮೈತ್ರಿ ಸರಕಾರದ ಕಾಲದಲ್ಲಿ ಬಿ.ಎಸ್. ಯಡಿಯೂರಪ್ಪ ‌ಹಾಗೂ ನಾನು ಜೊತೆಯಾಗಿ ಅತ್ಯುತ್ತಮ ‌ಕೆಲಸ ನಿರ್ವಹಿಸಿದ್ದೇವೆ. ಅದು ಪುನಃ ಮರುಕಳಿಸಬೇಕು ಎಂಬುದು ರಾಜ್ಯದ ಜನರ ಆಸೆಯಾಗಿದೆ. ವಿಜಯೇಂದ್ರ‌, ‌ನಿಖಿಲ್‌ ಕುಮಾರಸ್ವಾಮಿ ಅವರುಗಳು, ‌ನಾನು‌ ಎರಡೂ ಪಕ್ಷಗಳ ಎಲ್ಲಾ ನಾಯಕರು ಜೊತೆಗೂಡಿ ‌ 2006-07ರ ಉತ್ತಮ ಸ್ಥಿತಿಯನ್ನು ಮರಳಿ ತರಲು ಶ್ರಮಿಸುತ್ತೇವೆ ಎಂದರು.

ವಿಜಯೇಂದ್ರ ಮತ್ತು ನಿಖಿಲ್ ಕುಮಾರಸ್ವಾಮಿ ಇಬ್ಬರೂ ಸಹೋದರರ ರೀತಿ ರಾಜ್ಯದಲ್ಲಿ ಓಡಾಡಲಿದ್ದಾರೆ. ಎರಡೂ ಪಕ್ಣಗಳು ಒಟ್ಟಾಗಿ ‌ಹೋರಾಟ ನಡೆಸಲಿವೆ. ಆಡಳಿತ ಪಕ್ಷದ ತಪ್ಪುಗಳನ್ನು ದಾಖಲೆ ಸಮೇತ‌ ಎತ್ತಿ ಹಿಡಿಯುತ್ತೇವೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ಸಿನ ಏಕೈಕ ಸಂಸದರೂ ಇರಬಾರದು: ವಿಜಯೇಂದ್ರ

ರಾಜ್ಯದ 28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ಒಟ್ಟಾಗಿ‌ ಹೋಗುವ ಕುರಿತು ಇಬ್ಬರು‌ ಮಾತುಕತೆ ನಡೆಸಿದ್ದೇವೆ. ದೆಹಲಿಯಲ್ಲಿ ‌ವರಿಷ್ಠರು ಸೀಟು‌ ಹಂಚಿಕೆ ‌ಬಗ್ಗೆ ಚರ್ಚಿಸುತ್ತಾರೆ ಎಂದು ವಿಜಯೇಂದ್ರ ಅವರು  ತಿಳಿಸಿದರು.

ನಾಯಕರಾದ ಮೋದಿ,‌ ನಡ್ಡಾ,‌ ಅಮಿತ್ ಶಾ, ‌ಹೆಚ್ ಡಿಕೆ ಅವರು ಈಗಾಗಲೇ ದೆಹಲಿಯಲ್ಲಿ ‌ಚರ್ಚೆ ನಡೆಸಿದ್ದಾರೆ. ಬಿಜೆಪಿ-ಜೆಡಿಎಸ್ ಒಗ್ಗಟ್ಟಾಗಲು ನಿರ್ಧರಿಸಲಾಗಿದೆ. ನಾನು ಕೂಡ ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು  ಭೇಟಿಯಾಗಿ ಚರ್ಚಿಸಿದ್ದೇನೆ. ಹಿರಿಯರಾದ‌ ಹೆಚ್.ಡಿ.ಕುಮಾರಸ್ವಾಮಿ ಅವರ‌ ಜತೆಯೂ ಚರ್ಚಿಸಿದ್ದೇನೆ. ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ, ರಾಜ್ಯದಲ್ಲಿರುವ ಕಾಂಗ್ರೆಸ್ ಪಕ್ಷದ ಏಕೈಕ ಸಂಸದ ಡಿ.ಕೆ.ಸುರೇಶ್ ಅವರನ್ನು ಎದುರಿಸುವ ಕುರಿತು ನಾಲ್ಕು ಗೋಡೆಗಳ ಮಧ್ಯೆ ಕೂತು ಕಾರ್ಯತಂತ್ರ  ಮಾಡಲಾಗುವುದು ಎಂದರು ವಿಜಯೇಂದ್ರ‌. ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಏಕೈಕ ಸಂಸದನೂ ಇರಬಾರದು. ದೇಶದ, ರಾಜ್ಯದ ಹಿತದೃಷ್ಟಿಯಿಂದ ಜೆಡಿಎಸ್ – ಬಿಜೆಪಿ ಮೈತ್ರಿಯಾಗಿದೆ ಎಂದರು.

ಸಿಎಂ ಜನತಾ‌ದರ್ಶನಕ್ಕೆ ಹೆಚ್ ಡಿಕೆ ಕೌಂಟರ್

ಸಿಎಂ ಸಿದ್ಧರಾಮಯ್ಯ ಅವರು ಜನತಾದರ್ಶನ ಮಾಡುವುದಾಗಿ ಜಾಹೀರಾತು ಕೊಟ್ಟು ಹೇಳಿದ್ದಾರೆ. ಅವರ ಜನತಾದರ್ಶನ ಜಾಹೀರಾತಿಗೆ ಸೀಮಿತವಾಗಿದೆ ಎಂದು ಟಾಂಗ್ ನೀಡಿದ ಕುಮಾರಸ್ವಾಮಿ, ಜನರ ತೆರಿಗೆ ಖರ್ಚು ಮಾಡಿ ಜಾಹೀರಾತು‌ ನೀಡ್ತಿದಾರೆ. ಪ್ರತಿ ದಿನ ಆ ಜಾಹೀರಾತುಗಳಲ್ಲಿ ಸುಳ್ಳು‌ ಹೇಳುತ್ತಿದ್ದಾರೆ ಎಂದು ಕಿಡಿ ಕಾರಿದರು.

ನಾನು, ಯಡಿಯೂರಪ್ಪ ಇದ್ದಾಗ ಹೇಗೆ ಜನತಾದರ್ಶನ ನಡೆಸಿದೆವು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಡುವು ಪಡೆಯದೇ ಅಸಂಖ್ಯಾತ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕೊಡುತ್ತಿದ್ದ ಆ ದಿನಗಳನ್ನು ಜನರು ಮರೆತಿಲ್ಲ ಎಂದರು.

ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಪಕ್ಷದ ರಾಮನಗರ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎ.ಮಂಜುನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share this:

  • WhatsApp
  • Post
  • Tweet
  • Print
  • Email
bjp-jdskmskmskannadakumaraswamymp seat discussionnikhil kumaraswamyVijayendra
Share 2 FacebookTwitterPinterestEmail
KM Shivaraju

previous post
ಸಿಎಂ ಪ್ರಥಮ ಪೂರ್ಣಾವಧಿ ಜನತಾ ದರ್ಶನ
next post
ತೆಲಂಗಾಣದ ಸಿಎಂಆರೋಪ ಚುನಾವಣಾ ಪ್ರೇರಿತ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ